ಜಿಎಸ್‌ಬಿ ಸಭಾ ಕುರ್ಲಾ ಬಾಲಾಜಿ ಮಂದಿರದಲ್ಲಿ ಗಣೇಶೋತ್ಸವ ಸಂಭ್ರಮ


Team Udayavani, Sep 7, 2018, 3:47 PM IST

1-aa.jpg

ಮುಂಬಯಿ: ಸುವರ್ಣ ಗಣೇಶೋತ್ಸವ ಸಂಭ್ರಮದಲ್ಲಿರುವ ಜಿಎಸ್‌ಬಿ ಸಭಾ ಕೆಸಿಜಿ ಕುರ್ಲಾ ಇದರ ಬಾಲಾಜಿ ಮಂದಿರದಲ್ಲಿ ಗಣೇಶೋತ್ಸವ ಸಂಭ್ರಮವು ಸೆ. 13 ರಿಂದ ಸೆ. 17 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಕಳೆದ ಒಂದು ವರ್ಷದಿಂದ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷಪೂರ್ತಿ ಭಜನೆ, ಹರಿಕಥೆ, ನಾಟಕ, ಯಕ್ಷಗಾನ, ಭಕ್ತಿ ಸಂಗೀತ ವೈಭವ, ಶಾಸ್ತಿÅàಯ ಸಂಗೀತ ಮತ್ತು ನೃತ್ಯ, ವಿವಿಧ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಬಾಲಾಜಿ ಮಂದಿರದಲ್ಲಿ ಆಯೋಜಿಸಿ ಸುವರ್ಣ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲಾಗಿದ್ದು ಇದರ ಸಮಾರೋಪವಾಗಿ ಗಣೇಶೋತ್ಸವವು ನೆರವೇರಲಿದೆ. ಬಾಲಾಜಿ ಮಂದಿರದ ಕಾರ್ಯಾಧ್ಯಕ್ಷ ಗಣೇಶ್‌ ಕಾಮತ್‌, ಸುವರ್ಣ ಗಣೇಶೋತ್ಸವ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿವೇಕ್‌ ಭಂಡಾರಿ, ಜನಾರ್ದನ ಭಟ್‌, ಭಗೀರಥ ಶಾನ್‌ಭಾಗ್‌, ವಿನಾಯಕ ಬಾಳಿಗಾ, ಗಣೇಶ್‌ ಮಲ್ಯ, ಗಣೇಶ್‌ ಪೈ, ಆರ್‌. ಎಂ. ಬಾಳಿಗ, ಪಿ. ಆರ್‌. ಕಾಮತ್‌, ಗಜಾನನ, ವೇದಮೂರ್ತಿ ತ್ರಿವಿಕ್ರಮ ಆಚಾರ್ಯ ಹಾಗೂ ಇನ್ನಿತರ ಸಮಿತಿಯ ಸದಸ್ಯರ ನೆರವಿನಿಂದ ಸುವರ್ಣ ಮಹೋತ್ಸವ ಗಣೇಶೋತ್ಸವಕ್ಕೆ ಪೂರ್ವಸಿದ್ಧತಾ ಕ್ರಮಗಳು ಭರದಿಂದ ನಡೆಯುತ್ತಿದೆ.

ವರ್ಷದುದ್ದಕ್ಕೂ ಸಾರಸ್ವತ ಸಮಾಜದ ನೆಲೆಬೀಡಾದ ಗೋವಾ ಪ್ರವಾಸ, ವೈದ್ಯಕೀಯ ಶಿಬಿರ, ಸಂಧ್ಯಾವಂದನೆ ಶಿಬಿರ, ಪ್ರತಿಭಾ ಪುರಸ್ಕಾರ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಿಎಸ್‌ಬಿ ಸಮಾಜದ ಗುರುವರ್ಯರಾದ ಸಂಸ್ಥಾನ ಕವಳೆ ಗೋಕರ್ಣ ಪರ್ಥಗಾಳಿ ಹಾಗೂ ಕಾಶೀ ಮಠಾಧೀಶರ ದಿವ್ಯ ಅನುಗ್ರಹದೊಂದಿಗೆ ಪ್ರಸ್ತುತ ಐದು ದಿನಗಳ ಗಣೇಶೋತ್ಸವವನ್ನು ಆಚರಿಸಲು ಮುಂದಾಗಲಾಗಿದೆ. ಉತ್ಸವಕ್ಕೆ ಪೂರವಾಗಿ ಬಾಲಾಜಿ ಮಂದಿರ ಕುರ್ಲಾ ಹಾಗೂ ಪರಿಸರದ ವಾಸ್ತುವನ್ನು ನವೀಕರಿಸಲಾಗಿದ್ದು, ವಿದ್ಯುತ್‌ ದೀಪಾಲಂಕಾರದಿಂದ ಶೃಂಗರಿಸಲಾಗಿದೆ.

ಮಹಾಗಣಪತಿಯ ಉತ್ಸವಕ್ಕೆ ಸುವರ್ಣ ಮಹೋತ್ಸವದ ನೆನಪಿಗಾಗಿ ನೂತನ ಚಿನ್ನಾಭರಣ ಗಳ ಶೃಂಖಲೆ ಯನ್ನು ಸಜ್ಜುಗೊಳಿಸಲಾಗು ತ್ತಿದೆ. ಈ ನಿಟ್ಟಿನಲ್ಲಿ ಸುವರ್ಣ ಕವಚ, ಮಂಗಳ ಸೂತ್ರ, ಧಾರೀಮಣಿಯನ್ನು ಈಗಾಗಲೇ ಸಂಸ್ಥಾನ ಗುರುವರ್ಯ ಮಠಾಧೀಶ ಹಾಗೂ ಕಾಶೀ ಮಠಾಧೀಶರ ಹಸ್ತದಿಂದ ಬಾಲಾಜಿ ದೇವರ ಸನ್ನಿಧಿಯಲ್ಲಿರುವ ಶ್ರೀದೇವಿ- ಭೂದೇವಿಗೆ ಸಮರ್ಪಿಸಲಾಗಿದೆ.

ಐದು ದಿನಗಳ ಕಾಲ ನಡೆಯಲಿರುವ ಸುವರ್ಣ ಮಹೋತ್ಸವ ಗಣೇಶೋತ್ಸವ ದಲ್ಲಿ ದಿನಂಪ್ರತಿ ವಿಶೇಷ ಸೇವೆ, ಗಣಹೋಮ, ಮೂಢ ಗಣಪತಿ ಯಾಗ, ವಿಶೇಷ ಪೂಜಾ ಸೇವೆ, ಮಹಾಮೂಢಗಣಪತಿ, ದುರ್ವಾ ರ್ಚನೆ ಸೇವೆ ಇನ್ನಿತರ ಸೇವೆಗಳನ್ನು ಆಯೋಜಿಸಲಾಗಿದೆ. ಅಲ್ಲದೆ ಭಕ್ತಾದಿಗಳಿಗೆ ತುಲಾಭಾರ ಸೇವೆ, ಮಧ್ಯಾಹ್ನ ಪೂಜೆ, ಮಹಾಮಂಗಳಾರತಿ ನಡೆಯಲಿದೆ, ಸೆ. 17 ರಂದು ಸಂಜೆ ವಿಸರ್ಜನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಭಕ್ತರು ಪಾಲ್ಗೊಂಡು  ಉತ್ಸವದ ಯಶಸ್ಸಿಗೆ ಸಹಕರಿಸುವಂತೆ ಪ್ರಕಟನೆ ತಿಳಿಸಿದೆ.
 

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.