ಐರೋಡಿ ಗೋವಿಂದಪ್ಪ ಅವರಿಗೆ ಯಕ್ಷಗಾನ ಕಲಾ ಪ್ರಶಸ್ತಿ ಪ್ರದಾನ 


Team Udayavani, Sep 12, 2018, 3:33 PM IST

1009mum01.jpg

ಮುಂಬಯಿ: ಪಟ್ಟ ಭದ್ರ ಹಿತಾಸಕ್ತಿ ವರ್ಗದ ಲೆಕ್ಕಾಚಾರದಿಂದ ಕಲಾವಿದರ ಬದುಕು ದುಸ್ತರವಾಗಿದೆ. ಕಲೆ, ಸಾಹಿತ್ಯ, ಸಂಗೀತ ಇತ್ಯಾದಿಗಳಿಗೆ ಜಾತಿ, ಪಂಗಡಗಳ ಬಂಧನ ಬೇಡ. ಪ್ರತಿಭೆಯನ್ನು ಮಾನದಂಡವಾಗಿಸಿ ಕಲಾವಿದರನ್ನು ಗುರುತಿಸಿ ಗೌರವಿಸಬೇಕು. ದೂರಗಾಮಿ ಚಿಂತನೆಯ ಸಮಾಜ ಸೇವಕ ಜಯ ಸಿ. ಸುವರ್ಣ ಅವರು ಮಾತೃಶ್ರೀಯವರ ನೆನಪಿನಲ್ಲಿ ಯಕ್ಷಗಾನ ಕಲಾ ಪ್ರಶಸ್ತಿ ಪ್ರದಾನಿಸಿ ತಾಯಿಯ ಪ್ರೀತಿಯೊಂದಿಗೆ ಕಲಾಮಾತೆಯ ಆರಾಧಕರಾಗಿ ಮುನ್ನಡೆಯುತ್ತಿದ್ದಾರೆ ಎಂದು ಹಿರಿಯ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಅಭಿಪ್ರಾಯಪಟ್ಟರು.

ಸೆ. 9ರಂದು ಅಪರಾಹ್ನ  ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಅಧ್ಯಕ್ಷ ಜಯ ಸಿ. ಸುವರ್ಣ ಅವರ ಮಾತೋಶ್ರೀ ದಿವಂಗತ ಅಚ್ಚು ಚಂದು ಸುವರ್ಣ ಅವರ ಸ್ಮರಣಾರ್ಥವಾಗಿ ಸ್ಥಾಪಿಸಿದ ಶಾಶ್ವತ ನಿಧಿಯಿಂದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಕೊಡ ಮಾಡುವ 14ನೇ ಯಕ್ಷಗಾನ ಕಲಾ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಜಾಗತೀಕರಣದ ಭರಾಟೆಯಲ್ಲಿ ಕುಟುಂಬ ಸದಸ್ಯರ ಅಂತರ ಹೆಚ್ಚಾಗಿ ಪ್ರೀತಿ ವಾತ್ಸಲ್ಯ ವ್ಯವಹಾರಿಕವಾಗಿದೆ. ಪ್ರಶಸ್ತಿಗಳು ಮಾನವೀಯ ಮೌಲ್ಯಗಳ ಪ್ರತಿಬಿಂಬಗಳಾಗಿವೆ. ವಿವಿಧ ಕಲಾಪ್ರಕಾರಗಳಿಗೆ ವೇದಿಕೆ ಕಲ್ಪಿಸಿ ಉದಯೋನ್ಮುಖ ಕಲಾವಿದರಿಗೆ ಆಧಾರ ಸ್ತಂಭವಾಗಿರುವ ಮುಂಬಯಿ ಬಿಲ್ಲವರ ಅಸೋಸಿಯೇಶನ್‌ ಒಂದು ಮಾದರಿ ಸಂಸ್ಥೆಯಾಗಿದೆ. ತಮ್ಮ ಕಲಾ ಸೇವೆ ಶಾಶ್ವತವಾಗಿರಲಿ ಎಂದು ಹಾರೈಸಿ, ಯೋಗ್ಯತೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.  ಪ್ರಶಸ್ತಿಯು ನಗದು, ಸ್ಮರಣಿಕೆ, ಸಮ್ಮಾನ ಪತ್ರ, ಶಾಲು ಮತ್ತು ಫಲಪುಷ್ಪಗಳನ್ನು ಒಳಗೊಂಡಿತ್ತು.

ನ್ಯಾಯವೂ ದೊರಕಿತು 
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಲ್ಲವ ಮಹಾ ಮಂಡಲ ಮೂಲ್ಕಿ ಇದರ ಅಧ್ಯಕ್ಷ ಜಯ ಸಿ. ಸುವರ್ಣ ಅವರು, ಕೆಲವು ಮೇಳಗಳಲ್ಲಿ ಬಿಲ್ಲವ ಕಲಾವಿದರಿಗೆ ಪ್ರವೇಶ ನಿಷೇಧಿಸಲಾಗಿತ್ತು. ಇಂತಹ ಸಮಯದಲ್ಲಿ ಸಂಘಟನೆಯ ಪ್ರತಿಭಟನೆ ಅನಿರ್ವಾಯವಾಯಿತು ಮತ್ತು ಅದಕ್ಕೆ ಶಾಶ್ವತ ನ್ಯಾಯವೂ ದೊರಕಿತು. ಹೆಚ್ಚಿನ ಅಧ್ಯಯನ ಅನುಭವದೊಂದಿಗೆ ಯಕ್ಷಗಾನ ಬಯಲಾಟದಲ್ಲಿ ಮಿಂಚಿದಾಗ ಸಮ್ಮಾನ, ಪ್ರಶಸ್ತಿಗಳು ಹುಡುಕಿ ಕೊಂಡು ಬರುತ್ತವೆ ಎಂದು ಹೇಳಿ ಶುಭ ಹಾರೈಸಿದರು.

ಅಡ್ಡಗೋಡೆ ಸಲ್ಲದು 
ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಲ್ಲವರ ಅಸೋಸಿಯೇಶನ್‌ನ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ಮಾತನಾಡಿ, ಯಕ್ಷಗಾನದ ತಾರಾ ಮೌಲ್ಯವನ್ನು ಹೆಚ್ಚಿಸಿದ ಐರೋಡಿ ಗೋವಿಂದಪ್ಪ ಅವರು ತೆಂಕು ಮತ್ತು ಬಡಗು ತಿಟ್ಟುಗಳಲ್ಲೂ ಪರಂಪರೆಯ ಕಲಾವಿದರಾಗಿ ಗುರುತಿಸಿಕೊಂಡವರು ಹಾಗೂ ಕಲಾವಿದರಿಗೆ ಜಾತಿ, ಸಮುದಾಯ, ಪಂಗಡಳ ಅಡ್ಡಗೋಡೆ ಸಲ್ಲದು ಎಂದು ಪ್ರತಿಪಾದಿಸಿದವರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಸಮ್ಮಾನಗಳ ಬಿರುದುಗಳನ್ನು ಪಡೆದಿರುವ ಇವರು ಇತಿಹಾಸ ಕಂಡ ಪ್ರತಿಭಾನ್ವಿತ ಕಲಾವಿದ ಎಂದರು.

ಯಕ್ಷಗಾನ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಪ್ರಶಸ್ತಿ ಪ್ರದಾನಿಸಿ ಶುಭ ಹಾರೈಸಿದರು. ಹಿರಿಯ ಯಕ್ಷಗಾನ ಸಂಘಟಕ ಎಚ್‌.ಬಿ.ಎಲ್‌. ರಾವ್‌ ಅಭಿನಂದನಾ ಭಾಷಣ ಗೈದರು. ಬಿಎಎಸ್‌ಎಫ್‌ ಇಂಡಿಯಾ ಲಿಮಿಟೆಡ್‌ನ‌ ನಿರ್ದೇಶಕ ಪ್ರದೀಪ್‌ ಎಂ. ಚಂದನ್‌ ಶುಭ ಕೋರಿ ಮಾತನಾಡಿದರು. ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಅಸೋಸಿಯೇಶನ್‌ ಉಪ ಕಾರ್ಯಾ ಧ್ಯಕ್ಷ ಹರೀಶ್‌ ಜಿ. ಅಮೀನ್‌,  ಉದ್ಯಮಿ ಕೃಷ್ಣ ವಿ. ಆಚಾರ್ಯ, ಭಾರತ್‌ ಬ್ಯಾಂಕ್‌ನ ಮಾಜಿ ಕಾರ್ಯಾಧ್ಯಕ್ಷ ವಾಸುದೇವ ಆರ್‌. ಕೋಟ್ಯಾನ್‌, ಬಿಲ್ಲವ ಚೇಂಬರ್ಸ್‌ನ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ಉಪಾಧ್ಯಕ್ಷರುಗಳಾದ ಶಂಕರ ಡಿ. ಪೂಜಾರಿ, ಶ್ರೀನಿವಾಸ ಕರ್ಕೇರ, ಕೋಶಾಧಿಕಾರಿ ರಾಜೇಶ್‌ ಬಂಗೇರ, ಸಾಂಸ್ಕೃತಿಕ ಉಪಸಮಿತಿಯ ಕಾರ್ಯಾಧ್ಯಕ್ಷ ದಯಾನಂದ ಆರ್‌. ಪೂಜಾರಿ, ಕಾರ್ಯದರ್ಶಿ ಅಶೋಕ್‌ ಕೆ. ಕುಕ್ಯಾನ್‌ ಸಸಿಹಿತ್ಲು  ಉಪಸ್ಥಿತರಿದ್ದರು. ಅಕ್ಷಯ ಸಹ ಸಂಪಾದಕ ಹರೀಶ್‌ ಹೆಜ್ಮಾಡಿ  ನಿರೂಪಿಸಿ ವಂದಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗ ವಾಗಿ  ಈಶ್ವರ ಹೆಜ್ಮಾಡಿ ಸ್ಮರಣಾರ್ಥ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಕಲಾವಿದರಿಂದ ಪಾಂಡವಾಶ್ವಮೇಧ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. 

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.