ಗುಜರಾತ್‌ ಬಿಲ್ಲವ ಸಂಘದಿಂದ ವಾರ್ಷಿಕ ಗುರು ಜಯಂತಿ ಆಚರಣೆ


Team Udayavani, Sep 12, 2018, 3:52 PM IST

1109mum07a.jpg

ಬರೋಡಾ: ಹೊರ ರಾಜ್ಯಗಳಲ್ಲಿರುವವರ ಪ್ರೀತಿ ಮಧುರ. ಅದರಲ್ಲೂ ಇಲ್ಲಿನವರ ಅತಿಥಿ ಗೌರವ, ಸುಮಧುರವಾದುದು. ಅದನ್ನು ಇಂದು ಪ್ರತ್ಯಕ್ಷವಾಗಿ ಅನುಭವಿಸಿದೆ. ನಾಡಿನ, ದೇಶದ, ವಿದೇಶಗಳ ಹತ್ತು ಹಲವು ತುಳು-ಕನ್ನಡಿಗರ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದವನು. ಆದರೆ ಇಲ್ಲಿನ ಶ್ರೀ ಗುರುಜಯಂತಿ ಮತ್ತು ಮಾತೃ ಸಂಘದ ಕಾರ್ಯಕ್ರಮಗಳನ್ನು ಕಂಡು ಅಕ್ಷರಶಃ ಭಾವುಕನಾದೆ. ಇಲ್ಲಿನ ಕಾರ್ಯಕ್ರಮಗಳನ್ನು ಕಂಡು ಸಂಸ್ಕೃತಿಯನ್ನು ಕಟ್ಟುವ ವಿಧಾನವನ್ನು ಇಲ್ಲಿಯವರಿಂದ ಕಲಿಯಬೇಕು ಎಂದು ಮನಸಿನಲ್ಲೇ ಅಂದುಕೊಂಡೆ ಎಂದು ಡಾ| ರಾಜಶೇಖರ್‌ ಕೋಟ್ಯಾನ್‌ ಅವರು ನುಡಿದರು.

ಸೆ. 9ರಂದು ಸ್ಥಳೀಯ ಬೈದಶ್ರೀ ಸಭಾಗೃಹದಲ್ಲಿ ನಡೆದ ಶ್ರೀ ನಾರಾಯಣ ಗುರುಗಳ ಜಯಂತಿ ಮತ್ತು ಮಾತೃ ಸಂಘದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಸಡಗರ, ಸಂಭ್ರಮದೊಂದಿಗೆ ನಡೆದ ಸಮಾರಂಭವನ್ನು ಕಾಣಲು ಎರಡು ಕಣ್ಣುಗಳು ಸಾಲುತ್ತಿಲ್ಲ. ನಿಮ್ಮೆಲ್ಲರ ಸಂಸ್ಕೃತಿ, ಸಂಸ್ಕಾರ, ನಾಡು-ನುಡಿಯ ಸೇವೆ, ಅಭಿಮಾನ ಮೆಚ್ಚುವಂಥದ್ದಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಬಿಲ್ಲವರ  ಸಂಘ ಗುಜರಾತ್‌ ಅಧ್ಯಕ್ಷ ಮನೋಜ್‌ ಸಿ. ಪೂಜಾರಿ ವಹಿಸಿ ಅತಿಥಿಗಳನ್ನು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ತುಳು ಸಂಘ ಬರೋಡಾದ ಅಧ್ಯಕ್ಷ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ ಅವರು ಮಾತನಾಡಿ, ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ನನಗೆ ಸಂತಸ ನೀಡಿದೆ. ನಾರಾಯಣ ಗುರುಗಳು ಸಾಮಾನ್ಯರಾಗಿ ಜನಿಸಿ ದೇಶಕಂಡ ಶ್ರೇಷ್ಠ ದಾರ್ಶನಿಕರು. ಖಾದೀ ತೊಟ್ಟ ಬೂಟಾಟಿಕೆಯ ಸಂತೆಯಲ್ಲಿ ದೀನ, ದಲಿತರ ಉದ್ಧಾರದ ಹೆಸರಿನಲ್ಲಿ ಬಹಳಷ್ಟು ಸಂತರು ಸಂಘಟನೆಯನ್ನು ಕೈಗೊಂಡು, ಕೊನೆಯಲ್ಲಿ ಹೆಸರಿನ ಸ್ವಪಂಥವನ್ನು ಕಟ್ಟಿಕೊಂಡು ದೇಶವನ್ನು ಛಿದ್ರ ಛಿದ್ರಗೊಳಿಸಿದ ನಿದರ್ಶನಗಳು ಬಹಳಷ್ಟಿವೆ. ನಾರಾಯಣ ಗುರುಗಳು ದೀನ ದಲಿತರಿಗೆ ಸ್ವಾಭಿಮಾನದ ಬದುಕನ್ನು ಕಟ್ಟಿಕೊಟ್ಟು ಮಹಾನ್‌ ಪುರುಷರಾಗಿದ್ದಾರೆ ಎಂದರು.

ಮತ್ತೋರ್ವ ಅತಿಥಿ ಉದ್ಯಮಿ ಸೂರತ್‌ ಕನ್ನಡ ಸಮಾಜದ ಗೌರವಾಧ್ಯಕ್ಷ ರಾಮಚಂದ್ರ ಶೆಟ್ಟಿ ಅವರು ಮಾತನಾಡಿ, ಶ್ರೀ ಗುರುಜಯಂತಿ ವಿಶೇಷ ಕಾರ್ಯಕ್ರಮವು ನನ್ನಲ್ಲಿ ಬಹಳಷ್ಟು ಪರಿಣಾಮ ಬೀರಿತು. ಇದೊಂದು ಪರಿಣಾಮಕಾರಿ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ. ನನ್ನ ವತಿಯಿಂದ ಸಂಸ್ಥೆಯ 50 ಸಾವಿರ ರೂ.ಗಳನ್ನು ದೇಣಿಗೆಯನ್ನು ನೀಡುತ್ತಿದ್ದೇನೆ ಎಂದರು.

ಅಹ್ಮದಾಬಾದ್‌ನ ಹೈಕೋರ್ಟ್‌ ನ್ಯಾಯವಾದಿ ಲಕ್ಷ್ಮಣ್‌ ಪೂಜಾರಿ ಇವರು ಮಾತನಾಡಿ, ಗುರುವಿನ ಮಹತ್ವದ ಬಗ್ಗೆ ಅರ್ಥಪೂರ್ಣವಾಗಿ ವಿವರಿಸಿದರು. ಮುಂಬಯಿ ಸಮಾಜ ಸೇವಕ ಸತೀಶ್‌ ಬಂಗೇರ ಅವರನ್ನು ಗೌರವಿಸಲಾಯಿತು. ಸಂಘದ ಗೌರವಾಧ್ಯಕ್ಷ ದಯಾನಂದ ಬೋಂಟ್ರಾ ಅವರು ಅತಿಥಿಗಳನ್ನು ಪರಿಚಯಿಸಿದರು. ಆರಂಭದಲ್ಲಿ ಗುರು ಪಾದುಕಾ ಪೂಜೆ ನಡೆಯಿತು. ವಿಶ್ವಗಾಯತ್ರಿ ಪರಿವಾರದವರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ವಿ. ವಿ. ಸುವರ್ಣ, ಎಸ್‌. ಜಯರಾಮ್‌ ಶೆಟ್ಟಿ, ವಾಸು ಪೂಜಾರಿ, ಸದಾಶಿವ ಪೂಜಾರಿ, ಹರೀಶ್‌ ಅಂಕಲೇಶ್ವರ್‌, ವಿ. ಡಿ. ಅಮೀನ್‌, ವಿಶ್ವನಾಥ್‌ ಪೂಜಾರಿ, ಶಶಿಧರ್‌ ಬಿ. ಶೆಟ್ಟಿ, ರಾಮಚಂದ್ರ ಶೆಟ್ಟಿ, ಮನೋಜ್‌ ಸಿ. ಪೂಜಾರಿ, ದಯಾನಂದ ಬೋಂಟ್ರಾ, ಯಶೋದಾ ಎಲ್‌. ಪೂಜಾರಿ ಅಹ್ಮದಾಬಾದ್‌, ಕುಸುಮಾ ಪೂಜಾರಿ, ಯಶೋದಾ ಕೆ. ಪೂಜಾರಿ ಬರೋಡಾ, ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು. ಸಂಸ್ಥೆಯ ವಿವಿಧ ಶಾಖೆಗಳ  ಸದಸ್ಯ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿ. ವಿ. ಸುವರ್ಣ ಮತ್ತು ಜಿನ್‌ರಾಜ್‌ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಚಂದ್ರಶೇಖರ್‌ ಸುವರ್ಣ ವಂದಿಸಿದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.