21ನೇ ಅಖಿಲ ಭಾರತ ಕುವೆಂಪು ಸ್ಮಾರಕ ಏಕಾಂಕ ನಾಟಕ ಸ್ಪರ್ಧೆ ಸಮಾರೋಪ


Team Udayavani, Sep 12, 2018, 4:16 PM IST

1109mum02.jpg

ಮುಂಬಯಿ: ಕಳೆದ ಇಪ್ಪತ್ತು ವರ್ಷಗಳಿಂದ ಕುವೆಂಪು ಸ್ಮಾರಕ ಸ್ಪರ್ಧೆ ಆಯೋಜಿಸುವ ಮೂಲಕ ಕರ್ನಾಟಕ ಸಂಘ ಮುಂಬಯಿ ನೂರಾರು ರಂಗ ತಂಡಗಳಿಗೆ ಆತಿಥ್ಯವನ್ನು ನೀಡಿದೆ. ಸಂಘದ ಈ ಆತಿಥ್ಯಕ್ಕೆ ಪ್ರತಿ ಆತಿಥ್ಯ ಎಂಬಂತೆ ನೂತನ ಕಟ್ಟಡ ನಿರ್ಮಾಣ ಯೋಜನೆಯಲ್ಲಿ ಸಂಘಕ್ಕೆ ಸಹಾಯ ಮಾಡಲು ಈ ಎಲ್ಲ ರಂಗ ತಂಡಗಳು ಮುಂದೆ ಬರಬೇಕು. ರಂಗ ಕಲಾವಿದರು ಈ ನೂತನ ಕಟ್ಟಡ ನಿರ್ಮಾಣದಲ್ಲಿ ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂಬ ಬಗ್ಗೆ ಯೋಚಿಸುವಂತಾಗ ಬೇಕು. ಹಂಸಕ್ಷೀರ ನ್ಯಾಯದಂತೆ ಅತ್ಯಂತ ಪಾರದರ್ಶಕವಾದ ತೀರ್ಪು ನೀಡ ಲಾಗುವ ಈ ಕುವೆಂಪು ಸ್ಮಾರಕ ನಾಟಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ರಂಗ ಕಲಾವಿದರಿಗೆ ಅಭಿಮಾನದ ಸಂಗತಿ ಎಂದು ರಂಗನಟ, ರಂಗ ಸಂಘಟಕ,  ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಹಾಯಕ ಅಭಿಯಂತ ಆರ್‌. ನರೇಂದ್ರ ಬಾಬು ಹೇಳಿದರು.

ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಸಂಘ ಮುಂಬಯಿ ಆಯೋಜಿಸಿರುವ 21ನೇ ಅಖೀಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಸ್ಪರ್ಧೆಯು ಮೈಸೂರು ಅಸೋಸಿ ಯೇಶನ್‌ ಸಭಾಗೃಹದಲ್ಲಿ ಎರಡು ದಿನಗಳ ಕಾಲ ಜರಗಿದ್ದು ಸೆ. 9 ರಂದು ಸಂಜೆ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ  ಭಾಗವಹಿಸಿ ಬಹುಮಾನ ವಿತರಿಸಿ ಮಾತನಾಡಿದ ಅವರು, ರಂಗನಟನಾಗಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಇದೇ ಕುವೆಂಪು ಸ್ಮಾರಕ ನಾಟಕ ಸ್ಪರ್ಧೆಯಲ್ಲಿ ಹಲವು ಸಲ ಬಹುಮಾನ ಪಡೆದಿರುವ  ತನ್ನನ್ನು ಇಂದು ಈ ತೂಕದ  ವೇದಿಕೆಯಲ್ಲಿ ಕುಳ್ಳಿರಿಸಿ ಗೌರವಿಸಿ ರಂಗ ವಿನಯವನ್ನು ಸಂಘವು ಗುರುತಿಸಿರುವುದು ಸಂತೋಷವಾಗಿದೆ.  ರಂಗ ಭೂಮಿ ಸಂಸ್ಕೃತಿ ಇಂತಹ ಸ್ಪರ್ಧೆಗಳ ಕಾರಣ  ಎಂದಿಗೂ ಸಾಯೋದಿಲ್ಲ ಎಂದು ಅವರು ಅಭಿಮಾನದಿಂದ ನುಡಿದರು.
ಮುಖ್ಯ ಅತಿಥಿ ಖ್ಯಾತ ಹಾಸ್ಯ ಕಲಾವಿದ ರಂಗನಟ ವೈ. ವಿ. ಗುಂಡೂರಾವ್‌ ಮಾತನಾಡಿ,  ನಾಟಕ ಎನ್ನುವುದು ಪ್ರದರ್ಶನವಲ್ಲ, ಅದು ಪ್ರಯೋಗ  ಟಿವಿ,  ಸಿನಿಮಾಗಳಲ್ಲಿ ಮನುಷ್ಯ ಚಿಕ್ಕದಾಗಿ – ದೊಡ್ಡದಾಗಿ ಕಾಣಿಸಿದರೆ ನಾಟಕದಲ್ಲಿ ಮಾತ್ರ ಇದ್ದಂತೆಯೇ ಕಾಣಿಸುತ್ತಾನೆ. ಅಲ್ಲಿ ಸಮಸ್ಯೆಗಳಿಗೆ ಪರಿಹಾರ ಇರುವುದು. ಅದು ಯಾವುದು ಎನ್ನುವುದನ್ನು ಪ್ರೇಕ್ಷಕರು ಹುಡುಕಿಕೊಳ್ಳಿ ಎಂದರು.
ಇನ್ನೋರ್ವ ಮುಖ್ಯ ಅತಿಥಿ ಪದ್ಮಶ್ರೀ ದೊಡ್ಡರಂಗೇಗೌಡ ತಮ್ಮ ರಂಗ ಅನುಭವಗಳನ್ನು ಹಂಚಿಕೊಂಡರು.  ಅಧ್ಯಕ್ಷತೆಯನ್ನು ವಹಿಸಿದ ಸಂಘದ ಉಪಾಧ್ಯಕ್ಷ, ಅಕ್ಷಯ ಸಂಪಾದಕ ಡಾ|  ಈಶ್ವರ ಅಲೆವೂರು ಮಾತನಾಡಿ,  ಕುವೆಂಪು ಸ್ಮಾರಕ ನಾಟಕ ಸ್ಪರ್ಧೆಯ ಮೂಲಕ ಇಷ್ಟೊಂದು ರಂಗ ಕಲಾವಿದರು, ನಿರ್ದೇಶಕರು, ಸಾಹಿತಿಗಳನ್ನು ಒಂದೆಡೆ ಕಾಣುವುದೇ ಸೌಭಾಗ್ಯ. ಇದೇ ಉತ್ಸುಕತೆ ಮುಂದಿನ ದಿನಗಳಲ್ಲೂ ಮುಂದುವರಿಯಲಿ ಎಂದು ಆಶಿಸಿದರು. 

ತೀರ್ಪುಗಾರರಾಗಿ ಪಾಲ್ಗೊಂಡ  ರಂಗಕರ್ಮಿ ವಸಂತ ಬನ್ನಾಡಿ  ಮಾತನಾಡಿ,  ಇಂತಹ ಸ್ಪರ್ಧೆಯಲ್ಲಿ ವಿಶೇಷ ಶಕ್ತಿ ಇದೆ. ಹವ್ಯಾಸಿ ತಂಡಗಳಿಗೆ ನಾಟಕ ಸ್ಪರ್ಧೆಯೇ ಸ್ಫೂರ್ತಿ. ರಂಗಭೂಮಿಗೆ ಇಂದು ಸುವರ್ಣಕಾಲ. ದೊಡ್ಡ ದೊಡ್ಡ ನಾಟಕಗಳು ಹಣಕ್ಕಾಗಿ ಪ್ರದರ್ಶನ ನೀಡುವುದೂ ಇದೆ. ಹಲವು ತಟಸ್ತ ಗೊಂಡಿರುವುದು. ಆದರೆ ಮುಂಬಯಿಯಲ್ಲಿ ಕರ್ನಾಟಕ ಸಂಘವು ಎನರ್ಜಿ ರೀತಿಯಲ್ಲಿ ಕೆಲಸ ಮಾಡಿಕೊಂಡು ಬರುತ್ತಿದೆ ಎಂದು ನುಡಿದರು.

ಇನ್ನೋರ್ವ ತೀರ್ಪುಗಾರರಾದ ಪ್ರಸಿದ್ಧ ರಂಗಕರ್ಮಿ ಸತೀಶ ಸಾಸ್ವೆಹಳ್ಳಿಯವರು ಮಾತನಾಡಿ, ನಾಟಕ ಎನ್ನುವುದು ನಟರ ಮಾಧ್ಯಮ. ಆದರೆ ಇಂದು ತಾಂತ್ರಿಕತೆ ಬಹಳಷ್ಟು ಮುಂದೆ ಬರುತ್ತಿರುವ ದೃಶ್ಯವಿದೆ ಎಂದರು.

ತೀರ್ಪುಗಾರರಾದ ಪ್ರಸಿದ್ಧ ರಂಗಕರ್ಮಿ ವಿದ್ದು ಉಚ್ಚಿಲ್‌ ಮಾತನಾಡಿ,  ಸ್ಪರ್ಧೆ ನೆಪದಲ್ಲಿ ರಂಗಭೂಮಿಯವರು ಒಟ್ಟು ಸೇರುವುದೇ ಸಂತೋಷ. ಇದು ರಂಗಭೂಮಿಯವರಿಗೆ ಜಾತ್ರೆ. ರಂಗಭೂಮಿಯ ಕಟ್ಟುವಿಕೆ ಇಂತಹ ಸ್ಪರ್ಧೆಗಳ ಮೂಲಕ ಗಟ್ಟಿಗೊಳ್ಳುತ್ತದೆ. ರಂಗ ಭೂಮಿಯು ಶ್ರಮವನ್ನು ಬೇಡುವ ಮಾಧ್ಯಮ ಎಂದರು. ಕತೆಗಾರ ಸಂಘಟಕ ಓಂದಾಸ್‌ ಕಣ್ಣಂಗಾರ್‌ ಸ್ವಾಗತಿಸಿ ಕುವೆಂಪು ಸ್ಮಾರಕ ನಾಟಕ ಸ್ಪರ್ಧೆ ಬೆಳೆದು ಬಂದ ಬಗೆಯನ್ನು ವಿವರಿಸಿದರು. ಅಮರೀಶ್‌ ಪಾಟೀಲ್‌, ಸುರೇಂದ್ರ ಮಾರ್ನಾಡ್‌, ಅನಿತ ಪೂಜಾರಿ, ಮಲ್ಲಿಕಾರ್ಜುನ ಬಡಿಗೇರ, ದುರ್ಗಪ್ಪ ಕೊಟಿಯವರ್‌, ಸುಶೀಲಾ ದೇವಾಡಿಗ ವೇದಿಕೆಯ ಗಣ್ಯರನ್ನು  ಪರಿಚಯಿಸಿದರು.
ಸಂಘದ ಗೌರವ  ಕೋಶಾಧಿಕಾರಿ ಎಂ. ಡಿ. ರಾವ್‌, ಉಪಾಧ್ಯಕ್ಷ ಡಾ| ಈಶ್ವರ ಅಲೆವೂರು , ಗೌ|  ಕಾರ್ಯದರ್ಶಿ ಡಾ|  ಭರತ್‌ ಕುಮಾರ್‌ ಪೊಲಿಪು ಗಣ್ಯರನ್ನು ಗೌರವಿಸಿದರು. ಕತೆಗಾರ ರಾಜೀವ ನಾರಾಯಣ ನಾಯಕ ಸಭಾ ಕಾರ್ಯಕ್ರಮ ನಿರೂಪಿಸಿದರು. ಓಂದಾಸ್‌ ಕಣ್ಣಂಗಾರ್‌ ವಂದಿಸಿದರು.  ಗೌ. ಕಾರ್ಯದರ್ಶಿ ಡಾ| ಭರತ್‌ ಕುಮಾರ್‌ ಪೊಲಿಪು ಬಹುಮಾನಿತರ  ಯಾದಿ ಓದಿ ಹೇಳಿದರು.  ವೇದಿಕೆಯ ಗಣ್ಯರು ವಿಜೇತರಿಗೆ ಬಹುಮಾನ ಪ್ರದಾನಿಸಿದರು.

ಬಾಲಕೃಷ್ಣನ ಪಾತ್ರದ ಮೂಲಕ ಬಣ್ಣ ಹಚ್ಚಿಕೊಂಡು ರಂಗಭೂಮಿಗಿಳಿದೆ. ಅನೇಕ ಸ್ತ್ರೀ ಪಾತ್ರಗಳನ್ನೂ ಮಾಡಿದ್ದೆ. ಇನ್ಫೋಸಿಸ್‌ನ ನಾರಾಯಣ ಮೂರ್ತಿಯವರು ಕ್ಲಾಸ್‌ ಮೇಟ್‌ ಆಗಿದ್ದು ಅವರ ಜೊತೆಗೂ ನಾಟಕದಲ್ಲಿ ಅಭಿನಯಿಸಿದ್ದೆ. ಕಲಾವಿದರು ಶಕ್ತಿಯನ್ನು ಆಹ್ವಾನ ಮಾಡಬೇಕಾಗುತ್ತದೆ. ರಂಗ ಭೂಮಿಯವರಿಗೆ  ಶಿಸ್ತು ಬೇಕು. ಚಿತ್ರ ಗೀತೆಗಳನ್ನು ಬರೆಯುವ ಸಮಯ ನನಗೆ ರಂಗಭೂಮಿಯ ಅನುಭವಗಳಿಂದ ಲಾಭವಾಗಿದೆ. ಭಾರತದ ಸಮಕಾಲೀನ ರೋಗಗ್ರಸ್ತ 
ಸಮಾಜಕ್ಕೆ ಕಾಯಕಲ್ಪ ಮಾಡುವಂತಹ ಸಮಾಜ ಮುಖೀ ನಾಟಕಗಳು ಮೂಡಿ ಬರಲಿ.
 ಪದ್ಮಶ್ರೀ ದೊಡ್ಡರಂಗೇಗೌಡ , ಹಿರಿಯ ರಂಗಕರ್ಮಿ, ಸಾಹಿತಿ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.