21ನೇ ಅಖಿಲ ಭಾರತ ಕುವೆಂಪು ಸ್ಮಾರಕ ಏಕಾಂಕ ನಾಟಕ ಸ್ಪರ್ಧೆ ಸಮಾರೋಪ


Team Udayavani, Sep 12, 2018, 4:16 PM IST

1109mum02.jpg

ಮುಂಬಯಿ: ಕಳೆದ ಇಪ್ಪತ್ತು ವರ್ಷಗಳಿಂದ ಕುವೆಂಪು ಸ್ಮಾರಕ ಸ್ಪರ್ಧೆ ಆಯೋಜಿಸುವ ಮೂಲಕ ಕರ್ನಾಟಕ ಸಂಘ ಮುಂಬಯಿ ನೂರಾರು ರಂಗ ತಂಡಗಳಿಗೆ ಆತಿಥ್ಯವನ್ನು ನೀಡಿದೆ. ಸಂಘದ ಈ ಆತಿಥ್ಯಕ್ಕೆ ಪ್ರತಿ ಆತಿಥ್ಯ ಎಂಬಂತೆ ನೂತನ ಕಟ್ಟಡ ನಿರ್ಮಾಣ ಯೋಜನೆಯಲ್ಲಿ ಸಂಘಕ್ಕೆ ಸಹಾಯ ಮಾಡಲು ಈ ಎಲ್ಲ ರಂಗ ತಂಡಗಳು ಮುಂದೆ ಬರಬೇಕು. ರಂಗ ಕಲಾವಿದರು ಈ ನೂತನ ಕಟ್ಟಡ ನಿರ್ಮಾಣದಲ್ಲಿ ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂಬ ಬಗ್ಗೆ ಯೋಚಿಸುವಂತಾಗ ಬೇಕು. ಹಂಸಕ್ಷೀರ ನ್ಯಾಯದಂತೆ ಅತ್ಯಂತ ಪಾರದರ್ಶಕವಾದ ತೀರ್ಪು ನೀಡ ಲಾಗುವ ಈ ಕುವೆಂಪು ಸ್ಮಾರಕ ನಾಟಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ರಂಗ ಕಲಾವಿದರಿಗೆ ಅಭಿಮಾನದ ಸಂಗತಿ ಎಂದು ರಂಗನಟ, ರಂಗ ಸಂಘಟಕ,  ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಹಾಯಕ ಅಭಿಯಂತ ಆರ್‌. ನರೇಂದ್ರ ಬಾಬು ಹೇಳಿದರು.

ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಸಂಘ ಮುಂಬಯಿ ಆಯೋಜಿಸಿರುವ 21ನೇ ಅಖೀಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಸ್ಪರ್ಧೆಯು ಮೈಸೂರು ಅಸೋಸಿ ಯೇಶನ್‌ ಸಭಾಗೃಹದಲ್ಲಿ ಎರಡು ದಿನಗಳ ಕಾಲ ಜರಗಿದ್ದು ಸೆ. 9 ರಂದು ಸಂಜೆ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ  ಭಾಗವಹಿಸಿ ಬಹುಮಾನ ವಿತರಿಸಿ ಮಾತನಾಡಿದ ಅವರು, ರಂಗನಟನಾಗಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಇದೇ ಕುವೆಂಪು ಸ್ಮಾರಕ ನಾಟಕ ಸ್ಪರ್ಧೆಯಲ್ಲಿ ಹಲವು ಸಲ ಬಹುಮಾನ ಪಡೆದಿರುವ  ತನ್ನನ್ನು ಇಂದು ಈ ತೂಕದ  ವೇದಿಕೆಯಲ್ಲಿ ಕುಳ್ಳಿರಿಸಿ ಗೌರವಿಸಿ ರಂಗ ವಿನಯವನ್ನು ಸಂಘವು ಗುರುತಿಸಿರುವುದು ಸಂತೋಷವಾಗಿದೆ.  ರಂಗ ಭೂಮಿ ಸಂಸ್ಕೃತಿ ಇಂತಹ ಸ್ಪರ್ಧೆಗಳ ಕಾರಣ  ಎಂದಿಗೂ ಸಾಯೋದಿಲ್ಲ ಎಂದು ಅವರು ಅಭಿಮಾನದಿಂದ ನುಡಿದರು.
ಮುಖ್ಯ ಅತಿಥಿ ಖ್ಯಾತ ಹಾಸ್ಯ ಕಲಾವಿದ ರಂಗನಟ ವೈ. ವಿ. ಗುಂಡೂರಾವ್‌ ಮಾತನಾಡಿ,  ನಾಟಕ ಎನ್ನುವುದು ಪ್ರದರ್ಶನವಲ್ಲ, ಅದು ಪ್ರಯೋಗ  ಟಿವಿ,  ಸಿನಿಮಾಗಳಲ್ಲಿ ಮನುಷ್ಯ ಚಿಕ್ಕದಾಗಿ – ದೊಡ್ಡದಾಗಿ ಕಾಣಿಸಿದರೆ ನಾಟಕದಲ್ಲಿ ಮಾತ್ರ ಇದ್ದಂತೆಯೇ ಕಾಣಿಸುತ್ತಾನೆ. ಅಲ್ಲಿ ಸಮಸ್ಯೆಗಳಿಗೆ ಪರಿಹಾರ ಇರುವುದು. ಅದು ಯಾವುದು ಎನ್ನುವುದನ್ನು ಪ್ರೇಕ್ಷಕರು ಹುಡುಕಿಕೊಳ್ಳಿ ಎಂದರು.
ಇನ್ನೋರ್ವ ಮುಖ್ಯ ಅತಿಥಿ ಪದ್ಮಶ್ರೀ ದೊಡ್ಡರಂಗೇಗೌಡ ತಮ್ಮ ರಂಗ ಅನುಭವಗಳನ್ನು ಹಂಚಿಕೊಂಡರು.  ಅಧ್ಯಕ್ಷತೆಯನ್ನು ವಹಿಸಿದ ಸಂಘದ ಉಪಾಧ್ಯಕ್ಷ, ಅಕ್ಷಯ ಸಂಪಾದಕ ಡಾ|  ಈಶ್ವರ ಅಲೆವೂರು ಮಾತನಾಡಿ,  ಕುವೆಂಪು ಸ್ಮಾರಕ ನಾಟಕ ಸ್ಪರ್ಧೆಯ ಮೂಲಕ ಇಷ್ಟೊಂದು ರಂಗ ಕಲಾವಿದರು, ನಿರ್ದೇಶಕರು, ಸಾಹಿತಿಗಳನ್ನು ಒಂದೆಡೆ ಕಾಣುವುದೇ ಸೌಭಾಗ್ಯ. ಇದೇ ಉತ್ಸುಕತೆ ಮುಂದಿನ ದಿನಗಳಲ್ಲೂ ಮುಂದುವರಿಯಲಿ ಎಂದು ಆಶಿಸಿದರು. 

ತೀರ್ಪುಗಾರರಾಗಿ ಪಾಲ್ಗೊಂಡ  ರಂಗಕರ್ಮಿ ವಸಂತ ಬನ್ನಾಡಿ  ಮಾತನಾಡಿ,  ಇಂತಹ ಸ್ಪರ್ಧೆಯಲ್ಲಿ ವಿಶೇಷ ಶಕ್ತಿ ಇದೆ. ಹವ್ಯಾಸಿ ತಂಡಗಳಿಗೆ ನಾಟಕ ಸ್ಪರ್ಧೆಯೇ ಸ್ಫೂರ್ತಿ. ರಂಗಭೂಮಿಗೆ ಇಂದು ಸುವರ್ಣಕಾಲ. ದೊಡ್ಡ ದೊಡ್ಡ ನಾಟಕಗಳು ಹಣಕ್ಕಾಗಿ ಪ್ರದರ್ಶನ ನೀಡುವುದೂ ಇದೆ. ಹಲವು ತಟಸ್ತ ಗೊಂಡಿರುವುದು. ಆದರೆ ಮುಂಬಯಿಯಲ್ಲಿ ಕರ್ನಾಟಕ ಸಂಘವು ಎನರ್ಜಿ ರೀತಿಯಲ್ಲಿ ಕೆಲಸ ಮಾಡಿಕೊಂಡು ಬರುತ್ತಿದೆ ಎಂದು ನುಡಿದರು.

ಇನ್ನೋರ್ವ ತೀರ್ಪುಗಾರರಾದ ಪ್ರಸಿದ್ಧ ರಂಗಕರ್ಮಿ ಸತೀಶ ಸಾಸ್ವೆಹಳ್ಳಿಯವರು ಮಾತನಾಡಿ, ನಾಟಕ ಎನ್ನುವುದು ನಟರ ಮಾಧ್ಯಮ. ಆದರೆ ಇಂದು ತಾಂತ್ರಿಕತೆ ಬಹಳಷ್ಟು ಮುಂದೆ ಬರುತ್ತಿರುವ ದೃಶ್ಯವಿದೆ ಎಂದರು.

ತೀರ್ಪುಗಾರರಾದ ಪ್ರಸಿದ್ಧ ರಂಗಕರ್ಮಿ ವಿದ್ದು ಉಚ್ಚಿಲ್‌ ಮಾತನಾಡಿ,  ಸ್ಪರ್ಧೆ ನೆಪದಲ್ಲಿ ರಂಗಭೂಮಿಯವರು ಒಟ್ಟು ಸೇರುವುದೇ ಸಂತೋಷ. ಇದು ರಂಗಭೂಮಿಯವರಿಗೆ ಜಾತ್ರೆ. ರಂಗಭೂಮಿಯ ಕಟ್ಟುವಿಕೆ ಇಂತಹ ಸ್ಪರ್ಧೆಗಳ ಮೂಲಕ ಗಟ್ಟಿಗೊಳ್ಳುತ್ತದೆ. ರಂಗ ಭೂಮಿಯು ಶ್ರಮವನ್ನು ಬೇಡುವ ಮಾಧ್ಯಮ ಎಂದರು. ಕತೆಗಾರ ಸಂಘಟಕ ಓಂದಾಸ್‌ ಕಣ್ಣಂಗಾರ್‌ ಸ್ವಾಗತಿಸಿ ಕುವೆಂಪು ಸ್ಮಾರಕ ನಾಟಕ ಸ್ಪರ್ಧೆ ಬೆಳೆದು ಬಂದ ಬಗೆಯನ್ನು ವಿವರಿಸಿದರು. ಅಮರೀಶ್‌ ಪಾಟೀಲ್‌, ಸುರೇಂದ್ರ ಮಾರ್ನಾಡ್‌, ಅನಿತ ಪೂಜಾರಿ, ಮಲ್ಲಿಕಾರ್ಜುನ ಬಡಿಗೇರ, ದುರ್ಗಪ್ಪ ಕೊಟಿಯವರ್‌, ಸುಶೀಲಾ ದೇವಾಡಿಗ ವೇದಿಕೆಯ ಗಣ್ಯರನ್ನು  ಪರಿಚಯಿಸಿದರು.
ಸಂಘದ ಗೌರವ  ಕೋಶಾಧಿಕಾರಿ ಎಂ. ಡಿ. ರಾವ್‌, ಉಪಾಧ್ಯಕ್ಷ ಡಾ| ಈಶ್ವರ ಅಲೆವೂರು , ಗೌ|  ಕಾರ್ಯದರ್ಶಿ ಡಾ|  ಭರತ್‌ ಕುಮಾರ್‌ ಪೊಲಿಪು ಗಣ್ಯರನ್ನು ಗೌರವಿಸಿದರು. ಕತೆಗಾರ ರಾಜೀವ ನಾರಾಯಣ ನಾಯಕ ಸಭಾ ಕಾರ್ಯಕ್ರಮ ನಿರೂಪಿಸಿದರು. ಓಂದಾಸ್‌ ಕಣ್ಣಂಗಾರ್‌ ವಂದಿಸಿದರು.  ಗೌ. ಕಾರ್ಯದರ್ಶಿ ಡಾ| ಭರತ್‌ ಕುಮಾರ್‌ ಪೊಲಿಪು ಬಹುಮಾನಿತರ  ಯಾದಿ ಓದಿ ಹೇಳಿದರು.  ವೇದಿಕೆಯ ಗಣ್ಯರು ವಿಜೇತರಿಗೆ ಬಹುಮಾನ ಪ್ರದಾನಿಸಿದರು.

ಬಾಲಕೃಷ್ಣನ ಪಾತ್ರದ ಮೂಲಕ ಬಣ್ಣ ಹಚ್ಚಿಕೊಂಡು ರಂಗಭೂಮಿಗಿಳಿದೆ. ಅನೇಕ ಸ್ತ್ರೀ ಪಾತ್ರಗಳನ್ನೂ ಮಾಡಿದ್ದೆ. ಇನ್ಫೋಸಿಸ್‌ನ ನಾರಾಯಣ ಮೂರ್ತಿಯವರು ಕ್ಲಾಸ್‌ ಮೇಟ್‌ ಆಗಿದ್ದು ಅವರ ಜೊತೆಗೂ ನಾಟಕದಲ್ಲಿ ಅಭಿನಯಿಸಿದ್ದೆ. ಕಲಾವಿದರು ಶಕ್ತಿಯನ್ನು ಆಹ್ವಾನ ಮಾಡಬೇಕಾಗುತ್ತದೆ. ರಂಗ ಭೂಮಿಯವರಿಗೆ  ಶಿಸ್ತು ಬೇಕು. ಚಿತ್ರ ಗೀತೆಗಳನ್ನು ಬರೆಯುವ ಸಮಯ ನನಗೆ ರಂಗಭೂಮಿಯ ಅನುಭವಗಳಿಂದ ಲಾಭವಾಗಿದೆ. ಭಾರತದ ಸಮಕಾಲೀನ ರೋಗಗ್ರಸ್ತ 
ಸಮಾಜಕ್ಕೆ ಕಾಯಕಲ್ಪ ಮಾಡುವಂತಹ ಸಮಾಜ ಮುಖೀ ನಾಟಕಗಳು ಮೂಡಿ ಬರಲಿ.
 ಪದ್ಮಶ್ರೀ ದೊಡ್ಡರಂಗೇಗೌಡ , ಹಿರಿಯ ರಂಗಕರ್ಮಿ, ಸಾಹಿತಿ

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.