ವಡಾಲ ಶ್ರೀ ರಾಮ ಮಂದಿರ ಜಿಎಸ್‌ಬಿ ಗಣೇಶೋತ್ಸವ 


Team Udayavani, Sep 20, 2018, 5:28 PM IST

mumk-w.jpg

ಮುಂಬಯಿ: ವಡಾಲ ಶ್ರೀ ರಾಮ ಮಂದಿರದ ದ್ವಾರಕನಾಥ ಭವನದ 64ನೇ  ವಾರ್ಷಿಕ ಶ್ರೀ ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸ ವವು ಸೆ. 13ರಂದು  ಪ್ರಾರಂಭಗೊಂಡಿದ್ದು,  ಸೆ. 23ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಸೇವಾ ಕಾರ್ಯಕ್ರಮಗಳೊಂದಿಗೆ  ನಡೆಯಲಿದೆ. ದಿನಂಪ್ರತಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ಗಣೇಶನ ದರ್ಶನ ಪಡೆದು ಅನ್ನದಾನ ಸ್ವೀಕರಿಸುತ್ತಿದ್ದಾರೆ.

ಸೆ. 14ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸ್ವರ ಸಂಗೀತ ಕಾರ್ಯಕ್ರಮವು ಉಡುಪಿಯ ಪದ್ಮನಾಭ ಪೈ ಮತ್ತು ಭಜನ ಸಾಮ್ರಾಟ್‌ ಖ್ಯಾತಿಯ ಕಿರಣ್‌ ಕಾಮತ್‌ ಅವರಿಂದ  ನಡೆಯಿತು. ವಿಶ್ವವಿಖ್ಯಾತ ಗಣಪತಿ ಎಂಬ ವಿಶೇಷತೆ  ಪಡೆದಿರುವ ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವಡಾಲದ ಗಣಪತಿ ಸಾರಸ್ವತ ಸಮಾಜದ ನಾಲ್ಕೂ ಗುರು ವರ್ಯರಾದ ಕವಳೆ, ಗೋಕರ್ಣ ಪರ್ತ ಗಾಳಿ, ಕಾಶೀ ಹಾಗೂ ಚಿತ್ರಾಪುರ ಮಠಾಧೀಶದಿಂದ ಹಾಗೂ ಪರ್ತಗಾಳಿ ಮಠದ ಶಿಷ್ಯ ಸ್ವಾಮೀಜಿ ಅವರ ಆಶೀರ್ವಾದಗಳೊಂದಿಗೆ ನಡೆಯುತ್ತಿದೆ.
ಉತ್ಸವದುದ್ದಕ್ಕೂ ಮಹಾ ಅನ್ನದಾನ ಸೇವೆ, ಮೂಡ ಗಣಪತಿ ಪೂಜೆ, ಗಣಹೋಮ, ಸರ್ವಾಲಂಕಾರ ಸೇವೆ, ಸಾಮೂಹಿಕ ಮೂಡಗಣಪತಿ ಪೂಜೆ, ಮಹಾಪೂಜೆ, ಮೋದಕ ನೈವೇದ್ಯ, ಗಣಹೋಮ, ರಂಗಪೂಜೆ, ಪುಷ್ಪ ಪೂಜೆ, ರಾತ್ರಿಪೂಜೆ, ದೀಪಾರಾಧನೆ, ಪಂಚಖಾದ್ಯ ನೈವೇದ್ಯ, ತುಲಾಭಾರ ಸೇವೆ, ಧೂರ್ವರ್ಪಣೆ ಸೇವೆ, ಕರ್ಪೂರ ಆರತಿ, ಪ್ರಸಾದ ಸೇವೆ ಇನ್ನಿತರ ಸೇವೆಗಳು ನಡೆಯುತ್ತಿದ್ದು, ದಿನಂಪ್ರತಿ ನಗರ, ಉಪನಗರಗಳಿಂದ ಸಾವಿರಾರು ಭಕ್ತಾದಿಗಳು ಜಾತಿ, ಮತ, ಧರ್ಮವನ್ನು ಮರೆತು ಆಗಮಿಸಿ ಪ್ರಸಾದ ಸ್ವೀಕರಿಸುತ್ತಿದ್ದಾರೆ.

ಉತ್ಸವದುದ್ದಕ್ಕೂ ದಿನಂಪ್ರತಿ ಸಂಜೆ ಭಜನೆ, ಸಂಗೀತ, ನಾಟಕ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಂಸ್ಥೆಯ ಟ್ರಸ್ಟಿ, ಕಾರ್ಯಾಧ್ಯಕ್ಷ ರಾಜನ್‌ ಸಿ. ಭಟ್‌, ಟ್ರಸ್ಟಿ ಕಾರ್ಯದರ್ಶಿ ಮುಕುಂದ್‌ ವೈ. ಕಾಮತ್‌, ಟ್ರಸ್ಟಿ ಕೋಶಾಧಿಕಾರಿ ರಾಜೀವ್‌ ಡಿ. ಶೇಣಿÌ, ಗಿರೀಶ್‌ ಎಸ್‌. ಪಿಕಾಲೆ, ಉಮೇಶ್‌ ಎ. ಪೈ, ಶಾಂತಾರಾಮ್‌ ಎ. ಭಟ್‌, ಪ್ರಮೋದ್‌ ಎಚ್‌. ಪೈ ಹಾಗೂ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗದ, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಅರ್ಚಕ ವೃಂದದವರ ನೇತೃತ್ವದಲ್ಲಿ ಉತ್ಸವವು ಜರಗುತ್ತಿದೆ.

ಸೆ. 20ರಂದು ಸಂಜೆ 6.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಚ್‌ಡಿಎಫ್‌ಸಿ ಬ್ಯಾಂಕಿನ ಡೆಪ್ಯುಟಿ ಆಡಳಿತ ನಿರ್ದೇಶಕ ಪರೇಶ್‌ ಸುಖ್ತಂಕರ್‌ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಗೌರವ ಅತಿಥಿಯಾಗಿ ಉದ್ಯಮಿ ಶಶಿಕಾಂತ್‌ ಶ್ಯಾನುಭಾಗ್‌ ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾ ಗುವುದು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಮಹಿಷಾಸುರ ಮರ್ದಿನಿ ಯಕ್ಷ ಗಾನ ಪ್ರದರ್ಶನಗೊಳ್ಳಲಿದೆ ಎಂದು ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವಕ್ತಾರ ಕಮಲಾಕ್ಷ ಸರಾಫ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.