ತೆಂಗಿನ ಎಣ್ಣೆ ಯಾವತ್ತೂ ವಿಷವಲ್ಲ: ಡಾ| ವ್ಯಾಸರಾವ್‌ ನಿಂಜೂರು


Team Udayavani, Sep 28, 2018, 4:47 PM IST

4-aa.jpg

ಮುಂಬಯಿ: ಜ್ಞಾನಿಗಳ ಮಾತೇ ಸರ್ವಶ್ರೇಷ್ಠವಲ್ಲ. ಅವರಿಗಿಂತ ನಮ್ಮ ಮನೆಯ ಅಜ್ಜಿಯಂದಿರೇ ಶ್ರೇಷ್ಠ. ಜಾಗತೀಕರಣದ ಹಿನ್ನೆಲೆಯಲ್ಲಿ ಅಮೆರಿಕ ಹಾಗೂ ಮುಂದುವರಿದ ರಾಷ್ಟ್ರಗಳು ತಮ್ಮ ಉತ್ಪನ್ನಗಳನ್ನು ಮಾರಾಟಮಾಡುವ ಹುನ್ನಾರದಿಂದ ಇತರ ಉತ್ಪನ್ನಗಾರರು ನಮ್ಮ ತೆಂಗಿನಎಣ್ಣೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಭಾರತದಲ್ಲಿ ಸೋಯಾಬೀನ್‌ ಎಣ್ಣೆಯನ್ನು ಮಾರಾಟ ಮಾಡುವುದಕ್ಕಾಗಿ ತೆಂಗಿನ ಎಣ್ಣೆಯಲ್ಲಿ ಇರುವ ಸಂತೃಪ್ತ ಕೊಬ್ಬಿನಾಮ್ಲಗಳನ್ನು ಹೃದಯದ ಸ್ವಾಸ್ಥ್ಯಕ್ಕೆ ಮಹಾಮಾರಿ ಎಂದು ಜರೆಯಲಾಯಿತು. ಆದರೆ ನಿಜವಾಗಿ ನೋಡಿದರೆ ತೆಂಗಿನ ಎಣ್ಣೆ ವಿಷವಲ್ಲ. ಹಾಗೆನ್ನುವುದು ಧಿಮಾಕಿನ ಮಾತು. ನಮ್ಮ ದೇಹಕ್ಕೆ ತೆಂಗಿನ ಎಣ್ಣೆಯಿಂದ ಯಾವ ತೊಂದರೆಯೂ ಇಲ್ಲ. ತೆಂಗಿನೆಣ್ಣೆಯಿಂದ ಅನೇಕ ಪ್ರಯೋಜನಗಳಿವೆ. ದೇಹದಲ್ಲಿ ಎಣ್ಣೆ ಪಸೆ ಇದ್ದರೆ ಯಾವ ಕ್ರಿಮಿ ಕೀಟಾಣುಗಳ ಸೋಂಕೂ ಆಗುವುದಿಲ್ಲ. 

ಪೂರ್ವ ರಾಷ್ಟ್ರಗಳು ತಾಳೆ ಎಣ್ಣೆಗೆ ಪ್ರೋತ್ಸಾಹ  ನೀಡಿದರು. ತೆಂಗಿನೆಣ್ಣೆಯಲ್ಲಿ ಸಂತೃಪ್ತ ಕೊಬ್ಬಿನಾಮ್ಲ ಹೆಚ್ಚಿದೆ. ಆಗ್ಯಾìನಿಕ್‌ ಆ್ಯಸಿಡ್‌ ಕೂಡಾ ಇರುವುದರಿಂದ ಅದು ಒಳ್ಳೆಯದಲ್ಲ ಎಂದು ಭಾವಿಸಲಾಗುತ್ತಿತ್ತು.  ನಾವು ಕರಾವಳಿಯವರು, ಕೇರಳದವರು ಅನಾದಿ ಕಾಲದಿಂದಲೂ ತೆಂಗಿನ ಎಣ್ಣೆಯನ್ನು ಉಪಯೋಗಿಸುತ್ತಿದ್ದು ಆರೋಗ್ಯ ವಂತರಾಗಿದ್ದರು ಎಂದು ಖ್ಯಾತ 

ವಿಜ್ಞಾನಿ, ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ ಡಾ| ವ್ಯಾಸರಾವ್‌ ನಿಂಜೂರು ಅವರು ಅಭಿಪ್ರಾಯಿಸಿದರು.

ಅವರು ಸೆ. 25 ರಂದು ಮುಂಬಯಿ ವಿಶ್ವವಿದ್ಯಾ ಲಯ, ಕನ್ನಡ ವಿಭಾಗದಲ್ಲಿ ಪ್ರಗತಿ ಪರಿಶೀಲನೆ ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿ, ನಮ್ಮ ದೇಶದಲ್ಲಿ ಉಪ್ಪಿನಕಾಯಿಯನ್ನು ಮಾಡುವ ಕಲೆ ಅದಾಗಲೇ ತೀರ ಮುಂದುವರಿದ ಹಂತ ಮುಟ್ಟಿತ್ತು. ನಾವು ಶಾಸ್ತ್ರೀಯವಾಗಿ ಹೆಸರು ನೀಡಿರುವ ಬುರುಗು ಪದ್ಧತಿಯನ್ನು ಉಪ್ಪಿನಕಾಯಿಯಲ್ಲಿ ಹ್ಯಾಲೋ´ೋಬಿಕ್‌ (ಲವಣದ್ವೇ) ಬ್ಯಾಕ್ಟೀರಿಯಾ ತಡೆಗಟ್ಟಿ ನಿರ್ವಾತದಲ್ಲಿ ಕಾಪಿಡುವ ತಂತ್ರಜ್ಞಾನ ಬಳಸಲಾಗುತ್ತದೆ. ವಿಜ್ಞಾನವನ್ನು ಆನ್ವಯಿಕ ಶಾಸ್ತ್ರವಾಗಿ ಬಳಸಿ ಜನ ಜೀವನವನ್ನು ಸುಗಮಗೊಳಿಸುವ ಕಾಯಕ ನಮ್ಮ ಆಹಾರ ಪದ್ಧತಿಯಲ್ಲಿ ವಿಕಸನಗೊಂಡಷ್ಟು ಪ್ರಮಾಣದಲ್ಲಿ  ವಿಸ್ತೃತವಾಗಿ  ಬೇರೆ ಅಂಗಗಳಲ್ಲಿ ನಡೆದಿಲ್ಲ ಎನ್ನುವುದು ವಾಸ್ತವ. ಆದರೂ ಮೂಲಭೂತ ವಿಜ್ಞಾನದ ಕವಲುಗಳಾದ ಗಣಿತ, ಖಗೋಳ ಶಾಸ್ತ್ರ, ವೈದ್ಯಕೀಯ, ಲೋಹ ಶಾಸ್ತ್ರ, ಸಸ್ಯ ಶಾಸ್ತ್ರ, ಸಂಖ್ಯಾ ಶಾಸ್ತ್ರ- ಇತ್ಯಾದಿಗಳಲ್ಲಿ ಭಾರತವು ಗೈದ ಸಾಧನೆ ತುಂಬ ಮಹತ್ವದ್ದು ಎಂದು ನುಡಿದರು.

ಸೋಮಯ್ನಾ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ| ಎಸ್‌. ಕೆ. ಭವಾನಿ ಅವರು ಮಾತನಾಡಿ. ಕನ್ನಡ ವಿಭಾಗ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಉನ್ನತ ಅಧ್ಯಯನದ ಜೊತೆಗೆ ಕನ್ನಡೇತರರಿಗೆ, ಕನ್ನಡ ಬಾರದವರಿಗೆ ಕನ್ನಡ ಕಲಿಕಾ ಕೇಂದ್ರಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಕನ್ನಡ ವಿಭಾಗದ ಪ್ರಕಟಣೆಗಳು ಜನಪ್ರಿಯವಾಗಿವೆ. ಇದು ವಿಭಾಗದ ವಿದ್ಯಾರ್ಥಿಗಳ ಸಾಧನೆಗೆ ಹಿಡಿದ ಕನ್ನಡಿ. ಕನ್ನಡ ವಿಭಾಗದಲ್ಲಿ ಅಧ್ಯಾಪಕರ ಕೊರತೆ ಎದ್ದುಕಾಣುತ್ತಿದ್ದು ಅದನ್ನು ಖಾಲಿ ಇರುವ ಹುದ್ದೆಯನ್ನು ಆದಷ್ಟು ಬೇಗ ಭರ್ತಿ ಮಾಡಬೇಕು. ಕನ್ನಡ ವಿಭಾಗಕ್ಕೆ ಇನ್ನಷ್ಟು ಸ್ಥಳಾವಕಾಶವನ್ನು ಕಲ್ಪಿಸಿಕೊಡಬೇಕು ಎಂದು ನುಡಿದ ಅವರ,  ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯವನ್ನು ಒತ್ತಾಯಿಸಿ ತಮ್ಮ ಅಭಿಪ್ರಾಯಗಳನ್ನು ವಿಶ್ವವಿದ್ಯಾಲಯಕ್ಕೆ ಲಿಖೀತವಾಗಿ ಬರೆದು ಹಸ್ತಾಂತರಿಸಿದರು.

ಖ್ಯಾತ ವಿಜ್ಞಾನಿ, ವಿಶ್ರಾಂತ ಪ್ರಾಧ್ಯಾಪಕ ಡಾ| ವ್ಯಾಸರಾವ್‌ ನಿಂಜೂರು ಹಾಗೂ ಸೋಮಯ್ನಾ ಕಾಲೇಜಿನ ನಿವೃತ್ತ ಪ್ರಾಚಾರ್ಯ, ಹಿರಿಯ ಶಿಕ್ಷಣ ತಜ್ಞರಾದ ಡಾ| ಎಸ್‌. ಕೆ. ಭವಾನಿ ಅವರು ಈ ಉಪಕ್ರಮವನ್ನು ನಡೆಸಿಕೊಟ್ಟರು.  ವಿಭಾಗದ ಸಂದರ್ಶಕ ಉಪನ್ಯಾಸಕರ ಪರವಾಗಿ ಡಾ| ವಿಶ್ವನಾಥ ಕಾರ್ನಾಡ್‌ ಅವರು ಈ ಸಂದರ್ಭದಲ್ಲಿ ಹಾಜರಿದ್ದು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿಭಾಗದ ಸಹ ಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿ  ವಂದಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಗತಿ ಪರಿಶೀಲನೆ ಹಂತದಲ್ಲಿ ಸಂಶೋಧನ ವಿದ್ಯಾರ್ಥಿಗಳಾದ ವೈ. ವಿ. ಮಧುಸೂದನ್‌ ರಾವ್‌, ಕುಮುದಾ ಆಳ್ವ, ಸುರೇಖಾ ಸುಂದರೇಶ್‌, ಶಿವರಾಜ್‌ ಎಂ. ಜಿ, ಜಯ ಪೂಜಾರಿ, ಅನಿತಾ ಪೂಜಾರಿ, ತಾಕೋಡೆ, ಲಕ್ಷಿ¾à ಪೂಜಾರಿ, ಸೋಮಶೇಖರ ಮಸಳಿ, ಜಮೀಲಾ ವಿಪ್ಪರಗಿ, ಪಾರ್ವತಿ  ಪೂಜಾರಿ  ಅವರು ತಮ್ಮ ತಮ್ಮ ಶೈಕ್ಷಣಿಕ ಸಾಧನೆಗಳನ್ನು ತೆರಿದಿಟ್ಟರು.

ಮುಂಬಯಿ ವಿವಿ ಕುಲಪತಿಗಳ ನಿರ್ದೇಶದ ಮೇರೆಗೆ ಎಲ್ಲ ವಿಭಾಗಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಪ್ರಗತಿ ಪರಿಶೀಲನ ಸಮಿತಿಯನ್ನು ರಚಿಸಿ ಮೌಲ್ಯ ಮಾಪನ ಕಾರ್ಯವನ್ನು ನಡೆಸಲು ಕನ್ನಡ ವಿಭಾಗದ ಪ್ರಗತಿ ಪರಿಶೀಲನ ತಂಡದ ವಿಷಯ ತಜ್ಞರಾಗಿ ಖ್ಯಾತ ವಿಜ್ಞಾನಿ, ವಿಶ್ರಾಂತ ಪ್ರಾಧ್ಯಾಪಕ ಡಾ| ವ್ಯಾಸರಾವ್‌ ನಿಂಜೂರು ಹಾಗೂ ಸೋಮಯ್ನಾ ಕಾಲೇಜಿನ ನಿವೃತ್ತ ಪ್ರಾಚಾರ್ಯ, ಹಿರಿಯ ಶಿಕ್ಷಣ ತಜ್ಞರಾದ ಡಾ| ಎಸ್‌. ಕೆ. ಭವಾನಿ ಅವರು ಆಯ್ಕೆಯಾಗಿದ್ದಾರೆ. ಕನ್ನಡ ವಿಭಾಗ ಕಳೆದ ಐದು ವರ್ಷಗಳಲ್ಲಿ ಅನೇಕ ನೆಲೆಗಳಲ್ಲಿ ಮಹತ್ವದ ಸಾಧನೆಗೈದಿದೆ. ವಿಭಾಗದ ಪ್ರಕಟಣೆಗಳ ಸಂಖ್ಯೆ ಈಗ ಎಪ್ಪತ್ತಕ್ಕೆ ಏರಿದೆ. ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಎಂ.ಫಿಲ್‌, ಪಿ.ಎಚ್‌.ಡಿ ಅಧ್ಯಯನದಲ್ಲಿ ನಿರತರಾಗಿದ್ದು ಹೆಚ್ಚಿನ ಶೋಧ ಪ್ರಬಂಧಗಳು ಕೃತಿ ರೂಪದಲ್ಲಿ ಪ್ರಕಟವಾಗಿವೆ. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ಆಶಾದಾಯಕ ಸಂಗತಿ. 
-ಡಾ| ಜಿ. ಎನ್‌. ಉಪಾಧ್ಯ, ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿವಿ

ಟಾಪ್ ನ್ಯೂಸ್

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.