ಡೊಂಬಿವಲಿ ಪಶ್ಚಿಮ ಸಾರ್ವಜನಿಕ ಮಂಡಳಿ:ನವರಾತ್ರ್ಯುತ್ಸವ ಪ್ರಾರಂಭ


Team Udayavani, Oct 12, 2018, 11:45 AM IST

1010mum19.jpg

ಮುಂಬಯಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರುéತ್ಸವ ಮಂಡಳಿ ಡೊಂಬಿವಲಿ ಇದರ 54 ನೇ ವಾರ್ಷಿಕ ನವರಾತ್ರ್ಯುತ್ಸವ  ಸಂಭ್ರಮವು ಅ. 10 ರಿಂದ ಪ್ರಾರಂಭಗೊಂಡಿದ್ದು, ಅ. 18 ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಡೊಂಬಿವಲಿ ಪ. ರೈಲ್ವೇ ನಿಲ್ದಾಣ ಸಮೀಪದ, ಮಹಾತ್ಮಾ ಗಾಂಧಿ ರೋಡ್‌, ರೇತಿ ಭವನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಉತ್ಸವವು ನಡೆಯುತ್ತಿದೆ.

ಪ್ರತೀ ದಿನ ಮಧ್ಯಾಹ್ನ 12.30 ಕ್ಕೆ ಮತ್ತು ರಾತ್ರಿ 8.30 ಕ್ಕೆ ಶ್ರೀ ದೇವಿಯ ಪೂಜಾ ವಿಧಿ-ವಿಧಾನಗಳು ಜರಗಿ, ಮಂಗಳಾರತಿಯ ಆನಂತರ ಪ್ರಸಾದ ವಿತರಿಸಲಾಗುತ್ತಿದೆ. ಪೂಜೆ ನೀಡಲಿಚ್ಛಿಸುವ ಭಕ್ತರು ಪೂಜಾ ರಶೀದಿ ಮಾಡಿಸಿ ರಶೀದಿ ಕೊಟ್ಟು, ಪ್ರಸಾದವನ್ನು ಪಡೆಯತಕ್ಕದ್ದು. ಹೂವಿನ ಪೂಜೆ ನೀಡುವ ಭಕ್ತರು ಬೆಳಗ್ಗೆ 8.30 ರಿಂದ ರಾತ್ರಿ 11.30 ರ ಕಾಲಾವಧಿಯಲ್ಲಿ ರಶೀದಿಯನ್ನು ತೋರಿಸಿ ಪ್ರಸಾದವನ್ನು ಸ್ವೀಕರಿಸಬಹುದು. ಅ. 16 ರಂದು ಅಪರಾಹ್ನ 3 ರಿಂದ ಅರಸಿನ ಕುಂಕುಮ ಕಾರ್ಯಕ್ರಮ ನಡೆಯಲಿದೆ. ಅ. 14 ಮತ್ತು ಅ. 15 ರಂದು ಸಂಜೆ 7.30 ರಿಂದ ರಂಗಪೂಜೆ ನಡೆಯಲಿದೆ.

ಅ. 11 ರಂದು ಸಂಜೆ 5.30 ರಿಂದ ನಾಗರಾಜ ಶಾನಭಾಗ್‌ ಮತ್ತು ಬಳಗದವರಿಂದ ಭಕ್ತಿ ಭಜನಾಮೃತ, ಅ. 12 ರಂದು ಸಂಜೆ 5.30 ರಿಂದ ಸುರೇಶ್‌ ಶೆಟ್ಟಿ ಶಿಬರೂರು ಮತ್ತು ಬಳಗದಿಂದ ಭಜನಾ ಕಾರ್ಯಕ್ರಮ, ಅ. 13 ರಂದು ಸಂಜೆ 5.30 ರಿಂದ ಸತೀಶ್‌ ಇರ್ವತ್ತೂರು ಮತ್ತು ಬಳಗದಿಂದ ಭಜನ ಕಾರ್ಯಕ್ರಮ, ಅ. 16 ರಂದು ಸಂಜೆ 5.30 ರಿಂದ ಪುತ್ತೂರು ಚಂದ್ರಹಾಸ ರೈ ಮತ್ತು ಬಳಗ, ಶ್ರೀ ಅಯ್ಯಪ್ಪ ಭಜನಾ ಮಂಡಳಿ ಆಜೆªಪಾಡಾದವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಅ. 13 ರಂದು ವಿಶೇಷ ಪೂಜೆ ಹಾಗೂ ಶೃಂಗಾರದ ಸೇವೆಯನ್ನು ಮುಲುಂಡ್‌ನ‌ ಉದ್ಯಮಿ ಗಂಗಾಧರ ಸೇಸು ಪೂಜಾರಿ ದಂಪತಿ ನೀಡಲಿದ್ದಾರೆ. ಅ. 17 ರಂದು ಡೊಂಬಿವಲಿ ಉದ್ಯಮಿ ವಿಜೀತ್‌ ಶೆಟ್ಟಿ ಅವರ ಸೇವಾರ್ಥಕವಾಗಿ ಪುಣೆಯ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಮತ್ತು ಊರಿನ ಪ್ರಸಿದ್ಧ ಕಲಾವಿದರುಗಳಿಂದ ಶ್ರೀ ದೇವಿ ಮಹಾತೆ¾ ಯಕ್ಷಗಾನವು ಸಂಜೆ 6 ರಿಂದ ಪ್ರದರ್ಶನಗೊಳ್ಳಲಿದೆ.

ಇದೇ ಸಂದರ್ಭದಲ್ಲಿ ಇನ್ನ ಕುರ್ಕಿಲ್‌ಬೆಟ್ಟು ಬಾಳಿಕೆ ದಿ| ದಾಸು ಬಾಬು ಶೆಟ್ಟಿ ಅವರ ಸಂಸ್ಮರಣಾರ್ಥಕವಾಗಿ ಮಂಡಳಿಯ ವಾರ್ಷಿಕ ಪ್ರಶಸ್ತಿಯನ್ನು ನಗರದ ಹಿರಿಯ ಯಕ್ಷಗಾನ ಹಿಮ್ಮೇಳ ಕಲಾವಿದ ಆನಂದ ಎಂ. ಶೆಟ್ಟಿ ಇನ್ನ ಇವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಿ ಗೌರವಿಸಲಾಗುವುದು. ನವರಾತ್ರೋತ್ಸವದಲ್ಲಿ ಶ್ರೀದೇವಿಗೆ ಪ್ರತಿ ದಿನ ಭಜನಾ ಸೇವೆ ನಡೆಯಲಿದ್ದು, ಆಸಕ್ತ ಭಜನಾ ಮಂಡಳಿಗಳು ಮುಂಚಿತವಾಗಿ ತಿಳಿಸಿದರೆ ಭಜನೆಗೆ ಬೇಕಾಗುವ ವ್ಯವಸ್ಥೆಯನ್ನು ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸುನೀತಾ ಶಿವರಾಮ ಶೆಟ್ಟಿ (9867158897), ಸವಿತಾ ವಿಶ್ವನಾಥ ಶೆಟ್ಟಿಗಾರ (9819867741) ಇವರನ್ನು ಸಂಪರ್ಕಿಸಬಹುದು.

ಪ್ರತೀ ದಿನ ಬೆಳಗ್ಗೆ ಶ್ರೀ ಸನ್ನಿಧಿಯಲ್ಲಿ ಬೆಳಗ್ಗೆ 8 ರಿಂದ ಬೆಳಗ್ಗೆ 10 ರವರೆಗೆ ಹಾಗೂ ಸಂಜೆ 5 ರಿಂದ ರಾತ್ರಿ 7ರವರೆಗೆ ತುಲಾಭಾರ ಸೇವೆ ನಡೆಯಲಿದೆ. ತುಲಾಭಾರ ಸೇವೆ ಮಾಡಲಿಚ್ಚಿಸುವ ಭಕ್ತರು ಮುಂಚಿತವಾಗಿ ತಿಳಿಸಿದರೆ ಅದಕ್ಕೆ ಬೇಕಾಗುವ ವ್ಯವಸ್ಥೆಯನ್ನು ಮಾಡಲಾಗುವುದು. ಅನ್ನಸಂತರ್ಪಣೆಗೆ ಹಸಿರು-ಹೊರೆ ಕಾಣಿಕೆಯನ್ನು ಭಕ್ತಿಪೂರ್ವಕವಾಗಿ ಸ್ವೀಕರಿಸಲಾಗುವುದು. ಅ. 18 ರಂದು ಸಂಜೆ 4 ರಿಂದ ವಿಸರ್ಜನಾ ಮೆರವಣಿಗೆಯು ವಿವಿಧ ವೇಷಭೂಷಣ, ಬಿರುದಾವಳಿಗಳಿಂದ ನಡೆಯಲಿದೆ.

ಪ್ರತೀ ದಿನ ಮಧ್ಯಾಹ್ನ 1 ರಿಂದ ಮತ್ತು ರಾತ್ರಿ 9 ರಿಂದ ವಿವಿಧ ದಾನಿಗಳ ಸೇವಾರ್ಥಕವಾಗಿ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿದೆ. ಹೊಟೇಲ್‌ ಉದ್ಯಮಿ ಶೇಖರ್‌ ಎನ್‌. ಶೆಟ್ಟಿ ಅವರು ಮೂರ್ತಿ ಸೇವಾರ್ಥಿಯಾಗಿ ಸಹಕರಿಸಿದ್ದಾರೆ. ಮಂಡಳಿಯ ಈ ನವರಾತ್ರೊÂàತ್ಸವ ಸಂಭ್ರಮದಲ್ಲಿ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೊÂàತ್ಸವ ಮಂಡಳಿ ಡೊಂಬಿವಲಿ ಪಶ್ಚಿಮದ ಇದರ ಅಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸದಸ್ಯರು, ಧರ್ಮದರ್ಶಿಗಳ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.