ಶ್ರೀ ರಾಮಚಂದ್ರಾಪುರ ಮಠ ಪುಣೆ ಘಟಕದ ವಿಶೇಷ ಸಭೆ
Team Udayavani, Nov 1, 2018, 4:29 PM IST
ಪುಣೆ: ಶ್ರೀ ರಾಮಚಂದ್ರಾಪುರ ಮಠ ಹಾಗೂ ಪೂಜ್ಯ ಗುರುವರ್ಯರ ಬಗ್ಗೆ ಅಪಾರವಾದ ಗೌರವ ಹೊಂದಿರುವ ನಾವುಗಳು ಮಠದ ಧಾರ್ಮಿಕ ಪರಂಪರೆಯನ್ನು ನಂಬಿಕೊಂಡು ಬಂದಿದ್ದೇವೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಮಠದ ಹಾಗೂ ಗುರುಗಳ ಬಗ್ಗೆ ವ್ಯವಸ್ಥಿತವಾಗಿ ಷಡ್ಯಂತ್ರಗಳು ಅವಿರತವಾಗಿ ನಡೆಯುತ್ತಾ ಇದೆ. ಇತ್ತೀಚೆಗೆ ಷಡ್ಯಂತ್ರಿಗಳು ಕೊಡುವ ತೊಂದರೆಗಳು ತಾರಕಕ್ಕೇರಿದ ಕಾರಣ ಸುಮ್ಮನೆ ಕೂರದೆ ನಾವೆಲ್ಲ ಒಂದಾಗಿ ವಿರೋಧಿಸಬೇಕಾಗಿದೆ. ಗುರುಗಳಿಗೆ ಹಾಗೂ ಮಠಕ್ಕೆ ನ್ಯಾಯ ಒದಗಿಸಿಕೊಡುವಲ್ಲಿ ಪುಣೆಯಲ್ಲಿರುವ ಶ್ರೀ ಮಠದ ಶಿಷ್ಯವರ್ಗವೆಲ್ಲ ಸೇರಿ ನ್ಯಾಯಕ್ಕಾಗಿ ಒಂದಾಗಿ ಧ್ವನಿಯಾಗಬೇಕಾಗಿದೆ ಎಂದು ರಾಮಚಂದ್ರಾಮಠದ ಪುಣೆ ಘಟಕದ ಅಧ್ಯಕ್ಷ ಮದಂಗಲ್ಲು ಆನಂದ ಭಟ್ ನುಡಿದರು.
ನಿವೃತ್ತ ಸೈನಿಕ ಶಾಮ್ ರಾಜ್ ಎಡನೀರು ಅವರ ನೇತೃತ್ವದಲ್ಲಿ ನಡೆದ ರಾಮಚಂದ್ರಾಪುರ ಮಠದ ಪುಣೆ ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುಣೆಯಲ್ಲಿರುವ ಶ್ರೀ ಮಠದ ಶಿಷ್ಯವೃಂದದ ಎಲ್ಲರನ್ನೂ ಸಂಪರ್ಕಿಸಿ ಸಮಾಜಹಿತದ ದೃಷ್ಟಿ ಯಿಂದ ಅನ್ಯಾಯದ ವಿರುದ್ಧ ಹೋರಾಡಬೇಕಿದೆ ಎಂದು ಅವರು ನುಡಿದರು.
ನಿವೃತ್ತ ಸೈನಿಕ ಶಾಮ್ರಾಜ್ ಎಡನೀರು, ಪುಣೆ ಘಟಕದ ಉಪಾಧ್ಯಕ್ಷರಾದ ಉದಯ ಕುಮಾರ್ ಕೊಡಕ್ಕಲು, ಮದಂಗಲ್ಲು ಅಶೋಕ್ ಭಟ್, ಕಾರ್ಯದರ್ಶಿ ಶ್ಯಾಮ್ ಸುಂದರ್ ವಳಕ್ಕುಂಜ, ಕೋಶಾಧಿಕಾರಿ ಗಣೇಶ್ ಪ್ರಸಾದ್ ಕೊಣಿಲ, ಮಹಿಳಾ ಕಾರ್ಯಾಧ್ಯಕ್ಷೆ ಮಲ್ಲಿಕಾ ಶ್ಯಾಮ್ ಸುಂದರ್ ವಳಕ್ಕುಂಜ, ಹೇಮಾ ಆನಂದ ಭಟ್ ಉಪಸ್ಥಿತರಿದ್ದರು. ಪುಣೆಯ ಹವ್ಯಕ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ