ಗುರುರಾಜ ಅವರಿಗೆ “ಸೌರಭ ರತ್ನ’ ರಾಜ್ಯ ಪ್ರಶಸ್ತಿ
Team Udayavani, Nov 10, 2018, 4:10 PM IST
ಮುಂಬಯಿ: ಮಾಟುಂಗ ಪೂರ್ವದ ಮುಂಬಯಿ ಕನ್ನಡ ಸಂಘ ಇದರ ಅಧ್ಯಕ್ಷ ಗುರುರಾಜ ಎಸ್. ನಾಯಕ್ ಅವರು ಮಂಗಳೂರಿನ ಕಥಾ ಬಿಂದು ಸಾಂಸ್ಕೃತಿಕ ವೇದಿಕೆಯ ವಾರ್ಷಿಕ “ಸೌರಭ ರತ್ನ’ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮುಂಬಯಿ ಕನ್ನಡ ಸಂಘದಲ್ಲಿ ಕಳೆದ 43 ವರ್ಷಗಳಿಂದ ವಿವಿಧ ಪದಾಧಿಕಾರಿಯಾಗಿ, ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಗರದಲ್ಲಿ ನಾಡು-ನುಡಿಯ ಸೇವೆಗಾಗಿ ಅವರು ಮಾಡುತ್ತಿರುವ ಗಣನೀಯ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡೊಂಬಿವಲಿಯ ಅಲ್ಲಿನ ಶಿವರಂಜನಿ ಸಂಗೀತ ಸಭಾದ ಅಧ್ಯಕ್ಷರಾಗಿ, ಡೊಂಬಿವಲಿಯ ಮಲ್ಲಾರಿ ಕೃಪಾ ಕೊ. ಆಪರೇಟಿವ್ ಹೌಸಿಂಗ್ ಸೊಸೈಟಿ ಅಸೋ ಶಿಯೇಶನ್ನ ಇದರ ಗೌರವ ಕೋಶಾಧಿಕಾರಿ ಆಗಿ, ಮೈಸೂರು ಸಂಗೀತ ವಿದ್ಯಾಲಯ ಡೊಂಬಿವಲಿ ಇದರ ಸಲಹಾ ಸಮಿತಿಯ ಸದಸ್ಯರಾಗಿ, ಶ್ರೀ ಸುಕ್ರಕೇಂದ್ರ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿ ಪ್ರಭಾದೇವಿ ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹಲವಾರು ಪ್ರಶಸ್ತಿ ಹಾಗೂ ಕನ್ನಡ ಸಂಘ ಸಂಸ್ಥೆಗಳಿಂದ, ಜಿಎಸ್.ಬಿ ಸಮಾಜದ ಸಂಸ್ಥೆಗಳಿಂದ ಸಮ್ಮಾನಗಳು ಇವರಿಗೆ ಲಭಿಸಿದೆ. “ಸೌರಭ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭವು ನ. 15 ರಂದು ಮಂಗ ಳೂರು ಮಂಗಳಾ ದೇವಿ ದೇವಸ್ಥಾನದ ಕಲಾ ಮಂದಿರದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ