ಬಂಟರ ಸಂಘ ಸಾಹಿತ್ಯ, ಸಾಂಸ್ಕೃತಿಕ ಸಮಿತಿಯಿಂದ ಯಕ್ಷಗಾನ ಪ್ರದರ್ಶನ


Team Udayavani, Nov 13, 2018, 3:35 PM IST

1111mum04.jpg

ಮುಂಬಯಿ: ಕರಾವಳಿ ಕರ್ನಾಟಕದ ವಿಶಿಷ್ಟ ಕಲೆ ಯಕ್ಷಗಾನವನ್ನು ಉಳಿಸಿ-ಬೆಳೆಸುವ ಸರ್ವ ಪ್ರಯತ್ನಗಳು ನಡೆಯುತ್ತಿವೆಯಾದರೂ ಇಂದಿನ ಪೀಳಿಗೆಗೆ ಈ ಬಗ್ಗೆ ಆಸಕ್ತಿ ಇದ್ದಂತೆ ತೋರುತ್ತಿಲ್ಲ. ನಮ್ಮ ಕಲೆ, ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳ ಬಗ್ಗೆ ಮಕ್ಕಳಿಗೆ ಕಲಿಸುವ ಜವಾಬ್ದಾರಿ ಪಾಲಕರದ್ದಾಗಿದೆ ಎಂದು ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ನುಡಿದರು.

ನ. 10ರಂದು ಅಪರಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಶ್ರೀ ಮಹಾವಿಷ್ಣು ಕೃಪಾ ಬಂಟ ಯಕ್ಷಕಲಾ ವೇದಿಕೆ ಹಾಗೂ ಸಂಘದ ಸದಸ್ಯ ಕಲಾವಿದರ ಕೂಡುವಿಕೆಯಿಂದ ನಡೆದ ಗೆಜ್ಜೆದ ಪೂಜೆ ಯಕ್ಷಗಾನ ಕಾರ್ಯಕ್ರಮವನ್ನು  ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಯಕ್ಷಗಾನ ಕಲೆಗೆ ಇಂದು ಮಹಿಳೆಯರೂ ಪ್ರವೇಶಿಸಿ ಉತ್ತಮ ಕೊಡುಗೆ ಸಲ್ಲಿಸುತ್ತಿದ್ದಾರೆ. ಕಲೆ ಎಂಬುವುದು ಯಾವುದೇ ಭಾಷೆ, ಲಿಂಗ, ಜಾತಿ, ಧರ್ಮವನ್ನು ಮೀರಿ ನಿಂತ ಸಂಪತ್ತಾಗಿದೆ. ಅದನ್ನು ಜೀವಂತವಾಗಿರಿಸುವ ಕಾರ್ಯದಲ್ಲಿ ನಾವೆಲ್ಲರೂ ತೊಡಗಬೇಕು. ಬಂಟರ ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಅವರು ನಿರಂತರ ಯಕ್ಷಗಾನ ಕಾರ್ಯಕ್ರಮ ಆಯೋಜಿಸಿಸುತ್ತಿದ್ದಾರೆ. ಈ ಹಿಂದೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಆನಂದ ಪಿ. ಶೆಟ್ಟಿ ಹಾಗೂ ಅಧ್ಯಕ್ಷರಾಗಿದ್ದ ಸುಧಾಕರ ಎಸ್‌. ಹೆಗ್ಡೆ ಅವರ ಸಹಕಾರದೊಂದಿಗೆ ಆರಂಭಗೊಂಡ ಸಂಘದ ಮಹಾವಿಷ್ಣು ಕೃಪಾ ಬಂಟ ಯಕ್ಷಕಲಾ ವೇದಿಕೆ ತನ್ನದೇ ಆದ ಸ್ವಂತ ಯಕ್ಷಪರಿಕರಗಳನ್ನು ಹೊಂದಿರುವುದರ ಜತೆಗೆ ಸಂಘದ ಸದಸ್ಯರನ್ನು ಕಲಾವಿದರನ್ನಾಗಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿರುವುದು ಅಭಿನಂದನೀಯ ಎಂದರು.

ಬಂಟರ ಸಂಘದ ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಪಶ್ಚಿಮ ಪ್ರಾದೇಶಿಕ ಸಮಿತಿಯ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಬೋಳ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಸ್ವಾಗತಿಸಿದರು. ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಯಕ್ಷಗಾನ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಿದ ಬಂಟರ ಸಂಘ ಮಹಿಳಾ ವಿಭಾಗದ ಡಾ| ಸುನೀತಾ ಎಂ. ಶೆಟ್ಟಿ, ಮನೋರಮಾ ಎನ್‌. ಬಿ. ಶೆಟ್ಟಿ, ಆಶಾ ವಿಟuಲ್‌ ರೈ, ಲತಾ ಪಿ. ಶೆಟ್ಟಿ, ಜಯಂತ್‌ ಪಕ್ಕಳ, ರಮೇಶ್‌ ಶೆಟ್ಟಿ ಕಾಪು, ಕೆ.ಕೆ. ಶೆಟ್ಟಿ, ಕೃಷ್ಣ ವಿ. ಶೆಟ್ಟಿ, ರಾಘು ಪಿ. ಶೆಟ್ಟಿ, ಶಿವರಾಮ ಶೆಟ್ಟಿ, ಜಯಪ್ರಕಾಶ್‌ ಶೆಟ್ಟಿ, ವಿಟuಲ್‌ ರೈ ಅವರನ್ನು ಪುಷ್ಪಗುತ್ಛವನ್ನಿತ್ತು ಗೌರವಿಸಲಾಯಿತು.

ಬಳಿಕ ಶ್ರೀ ಮಹಾವಿಷ್ಣು ಕೃಪಾಪೋಷಿತ ಬಂಟ ಯಕ್ಷಕಲಾ ವೇದಿಕೆಯ ಕಲಾವಿದರು ಮತ್ತು ಸಂಘದ ಸದಸ್ಯರ ಕೂಡುವಿಕೆಯಿಂದ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರ ನಿರ್ದೇಶನದಲ್ಲಿ ಗೆಜ್ಜೆದ ಪೂಜೆ ಯಕ್ಷಗಾನ ಪ್ರದರ್ಶನಗೊಂಡಿತು. 

ಕಲಾವಿದರು ಕಲಾವಿದರಾಗಿ ಭಾಗವತರಾಗಿ ಪೊಲ್ಯ ಲಕ್ಷ್ಮೀ ನಾರಾಯಣ ಶೆಟ್ಟಿ, ಜಯಪ್ರಕಾಶ್‌ ನಿಡ್ವಣ್ಣಾಯ, ಹರೀಶ್‌ ಶೆಟ್ಟಿ ಕಟೀಲು, ಚೆಂಡೆ-ಮದ್ದಳೆಯಲ್ಲಿ ಗಣೇಶ್‌ ಮಯ್ಯ, ಮಧು, ಪ್ರವೀಣ್‌ ಶೆಟ್ಟಿ, ಚಕ್ರತಾಳದಲ್ಲಿ ಶ್ಯಾಮ್‌ ಶೆಟ್ಟಿ ಅವರು ಭಾಗವಹಿಸಿದ್ದರು. ಕಲಾವಿದರಾಗಿ ಟಿ. ಆರ್‌. ಶೆಟ್ಟಿ. ರಂಜಿತ್‌ ಶೆಟ್ಟಿ, ಅಶೋಕ್‌ ಶೆಟ್ಟಿ ಕಾಪು, ನಲ್ಯಗುತ್ತು ಪ್ರಕಾಶ್‌ ಶೆಟ್ಟಿ, ಸುರೇಶ್‌ ಶೆಟ್ಟಿ ತಿಲಕ್‌ನಗರ, ಸಚಿನ್‌, ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ, ದೆಪ್ಪುಣಿಗುತ್ತು ಚಂದ್ರಹಾಸ್‌ ಶೆಟ್ಟಿ, ಪ್ರಶಾಂತ್‌ ಶೆಟ್ಟಿ, ರಾಮಚಂದ್ರ, ಸಂತೋಷ್‌ ಕುಮಾರ್‌, ಸದಾನಂದ ಶೆಟ್ಟಿ ಮಾನಾಡಿ, ತುಂಬೆ ರಾಜ, ಕು| ಶ್ರಾವ್ಯಾ, ಮಾಸ್ಟರ್‌ ಶ್ರೇಯಸ್‌, ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ, ನವೀನ್‌ ಶೆಟ್ಟಿ ಇನ್ನಬಾಳಿಕೆ, ಕೋಲ್ಯಾರು ರಾಜು ಶೆಟ್ಟಿ, ಗಣೇಶ್‌ ಕೆ. ಶೆಟ್ಟಿ ಕಟೀಲು, ಸಚಿನ್‌ ಕುಮಾರ್‌, ಅಶೋಕ್‌ ಪಕ್ಕಳ, ರಂಜಿತ್‌ ಕುಮಾರ್‌, ಕರ್ನೂರು ಮೋಹನ್‌ ರೈ, ಪ್ರಶಾಂತ್‌ ಶೆಟ್ಟಿ, ಸಚಿನ್‌ ಅವರು ಪಾಲ್ಗೊಂಡಿದ್ದರು. ವಾಸುದೇವ ಶೆಟ್ಟಿ ಮಾರ್ನಾಡ್‌, ಬಾಲಕೃಷ್ಣ ಶೆಟ್ಟಿ ಅಜೆಕಾರು ಅವರು ಸಹಕರಿಸಿದರು.

ಬಂಟರ ಸಂಘ ಮತ್ತು ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಒಂದೇ ನಾಣ್ಯದ ಎರಡು ಮುಖಗಳಂತಿದ್ದು, ಸಹೋದರ ಬಾಂಧವ್ಯ ಉಳಿಸಿ ಸಮಾಜ ಸೇವೆಗೈಯುತ್ತಿರುವ ಜತೆಗೆ ಕಲೆ, ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸುತ್ತಿದೆ. ಕಲೆಯ ಉಳಿವಿಗೆ ತುಳು ಕನ್ನಡಿಗರ ಪ್ರೋತ್ಸಾಹ ಶ್ಲಾಘನೀಯ.
-ಸಿಎ ಸುರೇಂದ್ರ ಶೆಟ್ಟಿ, 
ಬೋಂಬೆ ಬಂಟ್ಸ್‌ ಅಸೋ.ಗೌ.ಪ್ರ. ಕಾರ್ಯದರ್ಶಿ 

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.