ಪುಣೆ ಬಂಟರ ಸಂಘದ ವಿಶೇಷ  ಸಭೆ


Team Udayavani, Nov 16, 2018, 4:34 PM IST

1511mum08.jpg

ಪುಣೆ: ಪುಣೆ ಬಂಟರ  ಸಂಘದ ಕಾರ್ಯಕಾರಿ ಸಮಿತಿಯ  ಸಭೆಯೊಂದು ಸಂಘದ ಓಣಿ ಮಜಲು ಜಗನ್ನಾಥ ಶೆಟ್ಟಿ ಬಂಟರ ಭವನದ ಮೀಟಿಂಗ್‌ ಹಾಲ್‌ನಲ್ಲಿ ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ ಬೆಟ್ಟು ಸಂತೋಷ್‌ ಶೆಟ್ಟಿಯವರ ಅಧ್ಯಕ್ಷತೆ ಯಲ್ಲಿ ಜರಗಿತು.

ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆಯವರು ಕಳೆದ ಸಭೆಯ ವರದಿಯನ್ನು ಸಭೆಯ ಮುಂದಿಟ್ಟರು. ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ್‌ ಶೆಟ್ಟಿ  ಆರ್ಥಿಕ ವ್ಯವಹಾರಗಳ ಮಾಹಿತಿಯನ್ನು ನೀಡಿದರು. ಭವನದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು ಮಾತನಾಡಿ,  ಕಳೆದ ನಾಲ್ಕು ವರ್ಷಗಳ ನನ್ನ ಅಧ್ಯಕ್ಷತೆಯ ಕಾಲಾವಧಿಯಲ್ಲಿ  ಪುಣೆ ಬಂಟರ ಸಂಘವು ಐತಿಹಾಸಿಕವಾದ ಕೆಲಸ ಗಳನ್ನು ಸಾಧಿಸಿದೆ ಎಂಬ ಅಭಿಮಾನ ನಮ್ಮದಾಗಿದೆ. ನೂತನ ಭವನ ನಿರ್ಮಾಣ ಸಂಘದ ಯಶಸ್ಸಿನ ಮೈಲುಗÇÉಾಗಿದ್ದು ಎಲ್ಲಕ್ಕಿಂತ ಮುಖ್ಯವಾಗಿ ಈ ಭವನ ನಿರ್ಮಿಸಲು ಕಾರಣೀಭೂತರಾದ ಸರ್ವ ದಾನಿಗಳನ್ನು ನಾವು ಭವಿಷ್ಯದಲ್ಲಿ ಯಾವತ್ತೂ ಮರೆಯದೆ ಗೌರವಗಳನ್ನು ಸಲ್ಲಿಸುತ್ತಿರಬೇಕಾಗಿದೆ. ಮುಂದೆ ಬರುವಂತಹ ಹೊಸ ಕಾರ್ಯಕಾರಿ ಸಮಿತಿಯಿರಲಿ, ಅಧ್ಯಕ್ಷರು ಯಾರೇ ಆಗಲಿ ಆದರೆ  ಭವನದ ದಾನಿಗಳ ಕೊಡುಗೆಯನ್ನು ನೆನಪಿಡುವ  ಕಾರ್ಯ ಆಗಬೇಕಾಗಿದೆ.  ಅದೇ ರೀತಿ ಸಮಾಜದ ಅಭ್ಯುದಯದ ಕನಸಿ ನೊಂದಿಗೆ ಆರಂಭಿಸಿದ ಮಹತ್ವಾಕಾಂಕ್ಷೆಯ ಕಲ್ಪವೃಕ್ಷ ಯೋಜನೆ ಸಮಾಜದ ಎಲ್ಲ ಸ್ಥರದ ಜನರಿಗೆ, ಮುಖ್ಯವಾಗಿ ಅಗತ್ಯವಿರುವ  ಜನರಿಗೆ ಆಶಾದಾಯಕವಾಗಿ ಕಾರ್ಯಾ ಚರಿಸಬೇಕಾಗಿದೆ. ಸುಮಾರು 5 ಕೋಟಿ ರೂಪಾಯಿಗಳ  ಆರಂಭಿಕ ಯೋಜನೆ ಇದಾಗಿದ್ದು ಈಗಾಗಲೇ ಎರಡು ಕೋಟಿ ರೂಪಾಯಿಗಳ ನೆರವು ಲಭಿಸಿದ್ದು  ಭವಿಷ್ಯದಲ್ಲಿ  ಸಮಾಜಮುಖೀ ಕಾರ್ಯಗಳಿಗೆ  ದಾನಿಗಳ ನೆರವಿನೊಂದಿಗೆ  ಸಮಾಜಕ್ಕೆ ಹಿತಕಾರಿಯಾಗಿ ಉತ್ತಮ ಯೋಜನೆಯಾಗಿ ಮೂಡಿಬರಲಿ ಎಂಬ ಆಶಯ ನಮ್ಮದಾಗಿದೆ. ಕೇವಲ ಭವನ ನಿರ್ಮಿಸಿ ನಾವು ವಿರಮಿಸುವಂತಾಗಬಾರದು. ಈ ಭವನವನ್ನು ಸುವ್ಯವಸ್ಥಿತ ರೀತಿಯಲ್ಲಿ ಮುನ್ನಡೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.  ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳನ್ನು ಬೆಳೆಸಿಕೊಳ್ಳದೆ ಒಗ್ಗಟಿನ ಮಂತ್ರ ನಮ್ಮದಾಗಬೇಕು. ಕಳೆದ ನಾಲ್ಕು ವರ್ಷಗಳಿಂದ ಸಂಘದ ಕಾರ್ಯ ದೇವರ ಕಾರ್ಯವೆಂದು ಭಾವಿಸಿ ಸಂಘದ ಸರ್ವ ಕಾರ್ಯಗಳಲ್ಲಿ ಹೆಗಲಿಗೆ ಹೆಗಲು ನೀಡಿ ಸಹಕಾರ ನೀಡಿದ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಉತ್ತರ ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು.  ಸಂಘದೊಂದಿಗೆ, ಸಮಾಜದೊಂದಿಗೆ ನಮ್ಮ ನಿರಂತರ ಸಂಪರ್ಕ, ಸದ್ಭಾವನೆ, ಸೌಹಾರ್ದತೆ   ಮುಂದುವರಿಯಲಿ ಎಂದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಮಾಧವ ಆರ್‌. ಶೆಟ್ಟಿ, ಪದಾಧಿಕಾರಿಗ ಳಾದ ಚಂದ್ರಶೇಖರ ಶೆಟ್ಟಿ ನಿಟ್ಟೆ, ವಿವೇಕಾನಂದ್‌ ಶೆಟ್ಟಿ ಆವರ್ಸೆ, ಶಶೀಂದ್ರ  ಶೆಟ್ಟಿ, ಪ್ರವೀಣ್‌ ಶೆಟ್ಟಿ ಪುತ್ತೂರು, ಪ್ರಶಾಂತ್‌ ಶೆಟ್ಟಿ ಹೆರ್ಡೆಬೀಡು, ಸತೀಶ್‌ ಶೆಟ್ಟಿ, ಗಣೇಶ್‌ ಶೆಟ್ಟಿ, ಶ್ರೀನಿವಾಸ ಶೆಟ್ಟಿ, ವಿಶ್ವನಾಥ ಶೆಟ್ಟಿ, ರಂಜಿತ್‌ ಶೆಟ್ಟಿ, ಪ್ರಶಾಂತ್‌ ಎ. ಶೆಟ್ಟಿ, ಸುಜಿತ್‌ ಶೆಟ್ಟಿ ಮಹಿಳಾ ವಿಭಾಗದ  ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಕಾರ್ಯದರ್ಶಿ ಸುಲತಾ ಎಸ್‌. ಶೆಟ್ಟಿ, ಕೋಶಾಧಿಕಾರಿ ಸುಚಿತ್ರಾ ಎಸ್‌. ಶೆಟ್ಟಿ, ಸಂಘದ ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ  ದಿನೇಶ್‌ ಶೆಟ್ಟಿ ಕಳತ್ತೂರು, ಕಾರ್ಯದರ್ಶಿ ಗಣೇಶ್‌ ಪೂಂಜಾ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್‌ ಶೆಟ್ಟಿ ಬೈಲೂರು, ಕಾರ್ಯದರ್ಶಿ ಶೇಖರ್‌ ಸಿ. ಶೆಟ್ಟಿ ಉಪಸ್ಥಿತರಿದ್ದರು. 

ಚಿತ್ರ-ವರದಿ: ಕಿರಣ್‌ ಬಿ.ರೈ ಕರ್ನೂರು

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.