ಅಭಿನಯ ಮಂಟಪ ಮುಂಬಯಿ ವಾರ್ಷಿಕೋತ್ಸವ ಸಂಭ್ರಮ, ಸಮ್ಮಾನ ಸಮಾರಂಭ


Team Udayavani, Nov 22, 2018, 4:19 PM IST

5.jpg

ಮುಂಬಯಿ: ನಗರದ ಉದ್ಯಮಿ ದಿವಾಕರ ಶೆಟ್ಟಿ ಅಡ್ಯಾರ್‌ ಅವರ ಮುಂದಾಳತ್ವದ ಸಾಯಿಸಂಧ್ಯಾ ನಾಟಕ ಸಂಸ್ಥೆಯ ಮೂಲಕ ನಾನು ಮುಂಬಯಿಯಲ್ಲಿ ಮೊಟ್ಟಮೊದಲ ಬಾರಿಗೆ ರಂಗಪ್ರವೇಶಿಸಿದ್ದೆ. ಈ ಪ್ರದರ್ಶನದ ಅನಂತರ ನನಗೆ ಮಹಾನಗರದಲ್ಲಿ ವೇದಿಕೆಯನ್ನು ಕಲ್ಪಿಸಿ, ನನ್ನನ್ನು ನುರಿತ ಕಲಾವಿದನ ಸಾಲಿನಲ್ಲಿ ಗುರುತಿಸಿಕೊಟ್ಟ ಸಂಸ್ಥೆ ಎಂದರೆ ಅದು ಅಭಿನಯ ಮಂಟಪ. ಈ ಸಂಸ್ಥೆಯ ಮುಖಾಂತರ ನಾನು ಬಹಳಷ್ಟನ್ನು ಕಲಿತುಕೊಂಡಿದ್ದೇನೆ. ನನ್ನನ್ನು ನಾನು ತಿದ್ದಿಕೊಂಡು ಓರ್ವ ಪರಿಪೂರ್ಣ ಕಲಾವಿದನನ್ನಾಗಿ ರೂಪಿಸಿದ ಹಿರಿಮೆ ಈ ಕಲಾ ಸಂಸ್ಥೆಯ ಲೇಖಕ, ನಿರ್ದೇಶಕ ನನ್ನ ಪಾಲಿನ ಗುರುವಿನ ಸ್ಥಾನದಲ್ಲಿರುವ ಕರುಣಾಕರ ಕೆ. ಕಾಪು ಮತ್ತು ನನ್ನ ಜೊತೆ ಅಭಿನಯಿಸಿದ ಬಳಗದ ಸದಸ್ಯರಿಗೆ ಸಲ್ಲಬೇಕು. ಅಭಿನಯ ಮಂಟಪ ನನ್ನ ಕಲಾಜೀವನದ ಎರಡನೇ ಪಾಠಶಾಲೆಯಾಗಿದೆ. ನಾನು ಇಂದು ಕಲಾಬದುಕಿನಲ್ಲಿ ಏನಾದರೂ ಸಾಧಿಸಿದ್ದರೆ ಅದರ ಸಂಪೂರ್ಣ ಶ್ರೇಯಸ್ಸು  ಈ ಕಲಾಬಳಗಕ್ಕೆ ಸಲ್ಲುತ್ತದೆ ಎಂದು ಪ್ರಸಿದ್ಧ ಕಲಾವಿದ, ತುಳು-ಕನ್ನಡ ಚಿತ್ರನಟ ಚೇತನ್‌ ರೈ ಮಾಣಿ ಅವರು ನುಡಿದರು.

ನ.18 ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ನಡೆದ ಅಭಿನಯ ಮಂಟಪ ಮುಂಬಯಿ ಇದರ 36 ನೇ ವಾರ್ಷಿಕೋತ್ಸವ ಸಂಭ್ರಮದಲ್ಲಿ ಸಂಸ್ಥೆಯ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅಭಿನಯ ಮಂಟಪ ನನ್ನ ಕಲಾಬದುಕಿಗೆ ಭದ್ರ ತಳಪಾಯವನ್ನು ಹಾಕಿಕೊಟ್ಟಿದೆ. ಕಲೆಯನ್ನು ಕರಗತವಾಗಿಸಿಕೊಂಡು, ಅನೇಕ ನಾಮಾಂಕಿತ ರಂಗಕರ್ಮಿಗಳ ಗರಡಿಯಲ್ಲಿ ಪಳಗಿ, ಮುಂದೆ ನನ್ನ ತವರೂರನ್ನು ತೊರೆದು ಬದುಕಿನ ಹಾದಿಯನ್ನು ಹುಡುಕಿಕೊಂಡು ಹಿಂದೊಮ್ಮೆ ಈ ಮಾಯಾನಗರಿಯತ್ತ ಪಯಣ ಬೆಳೆಸಿದ್ದೆ ಎಂದು ಮನದಾಳದ ಮಾತುಗಳನ್ನು ತಿಳಿಸಿದರು.

ಅಭಿನಯ ಮಂಟಪ ಮುಂಬಯಿ ಇದರ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೂಡಬಿದ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕೋತ್ಸವದ ಸಮಾರಂಭದಲ್ಲಿ ಚೇತನ್‌ ರೈ ಮಾಣಿ ಅವರನ್ನು ಅತಿಥಿ-ಗಣ್ಯರು ಪೇಟ ತೊಡಿಸಿ, ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಿ ಗೌರವಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ಅವರು ಮಾತನಾಡಿ, ಅಭಿನಯ ಮಂಟಪ ಮುಂಬಯಿ ರಂಗಕಂಡ ಶ್ರೇಷ್ಠ ಕಲಾ ಸಂಸ್ಥೆಗಳಲ್ಲೊಂದಾಗಿದೆ. 36 ವರ್ಷಗಳಿಂದ ನಿರಂತರ ಕಲಾಸೇವೆಯಲ್ಲಿ ಸಕ್ರಿಯವಾಗಿರುವ ಈ ಕಲಾ ಸಂಸ್ಥೆಯಿಂದ ಇನ್ನಷ್ಟು ಹೆಚ್ಚಿನ ಕಲಾಸೇವೆ ನಡೆಯಲಿ ಎಂದು ಹಾರೈಸಿದರು.

ಪತ್ರಕರ್ತ, ರಂಗ ಸುದರ್ಶನ ಸಸಿಹಿತ್ಲು ತಂಡದ ನಿರ್ದೇಶಕ ಪರಮಾನಂದ ವಿ. ಸಾಲ್ಯಾನ್‌ ಅವರು ಮಾತನಾಡಿ, ಮುಂಬಯಿಯ ಕಲಾವಿದರಲ್ಲಿ ಕಲೆಯ ಮತ್ತು ಕಲಾವಿದರ ಮೇಲಿರುವ ಪ್ರೀತಿ, ಗೌರವ, ನಿಜವಾಗಿಯೂ ಮೆಚ್ಚು ವಂಥದ್ದು. ವಿವಿಧ ಉದ್ಯೋಗ ಉದ್ಯಮದ ಜತೆಗೆ ಕಲಾವಿದರು ತಮ್ಮಲ್ಲಿ ಬೇರೂರಿಕೊಂಡಿರುವ ಕಲಾಪ್ರತಿಮೆಯನ್ನು ಪ್ರದರ್ಶಿಸಲು ಇಲ್ಲಿಯ ಕಲಾವಿದರು ಪಡುವ ಶ್ರಮ ಅವಿಸ್ಮರಣೀಯವಾಗಿದೆ ಎಂದು ನುಡಿದರು.

ಅತಿಥಿಗಳಾಗಿ ಪಾಲ್ಗೊಂಡ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ, ಬಿಲ್ಲವರ ಅಸೋಸಿಯೇಶನ್‌ ಕಲ್ವಾ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಸುವರ್ಣ, ಸೈಂಟ್‌ ಆ್ಯಗ್ನೇಸ್‌ ಹೈಸ್ಕೂಲ್‌ ಭಾಯಂದರ್‌ ಸ್ಥಾಪಕ ಅರುಣೋದಯ ಎಸ್‌. ರೈ ಬೆಳಿಯೂರುಗುತ್ತು,  ನೆರೂಲ್‌ ಶ್ರೀ ಗಣಪತಿ, ಅಯ್ಯಪ್ಪ, ದುರ್ಗಾದೇವಿ ಮಂದಿರದ ಅಧ್ಯಕ್ಷ ಸಂಜೀವ ಎನ್‌. ಶೆಟ್ಟಿ, ರಂಗಭೂಮಿ ಹಾಗೂ ಕಂಠದಾನ ಕಲಾವಿದ ಸುರೇಂದ್ರ ಕುಮಾರ್‌ ಮಾರ್ನಾಡ್‌ ಅವರು ಮಾತನಾಡಿ ಶುಭಹಾರೈಸಿದರು. ಅತಿಥಿಗಳಾಗಿ ಬಂಟರ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವಿಭಾಗದ  ಉಪಾಧ್ಯಕ್ಷ ದಿವಾಕರ ಶೆಟ್ಟಿ ಅಡ್ಯಾರು, ಕರ್ನಾಟಕ ಸಂಘ ಅಂಧೇರಿ ಇದರ ಸಂಸ್ಥಾಪಕ ಅಧ್ಯಕ್ಷ ಕೃಷ್ಣ ಬಿ. ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಭಿನಯ ಮಂಟಪದ ಸದಸ್ಯ ರೋಹಿತಾಶ್ವ ಅಂಚನ್‌ ಪ್ರಾರ್ಥನೆಗೈದರು. ಅಭಿನಯ ಮಂಟಪ ಮುಂಬಯಿ ಉಪ ಕಾರ್ಯಾಧ್ಯಕ್ಷ ಅನಿಲ್‌ ಕುಮಾರ್‌ ಸಸಿಹಿತ್ಲು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಂಸ್ಥೆಯ ಪದಾಧಿಕಾರಿಗಳಾದ ಅಶೋಕ್‌ ಕುಮಾರ್‌ ಕೊಡ್ಯಡ್ಕ, ಕರುಣಾಕರ ಕೆ. ಕಾಪು, ಜಗದೀಶ್‌ ರೈ, ಭರತ್‌ ಶೆಟ್ಟಿ ಅತ್ತೂರು, ರೋಹಿತ್‌ ಶೆಟ್ಟಿ ಧರ್ಮಸ್ಥಳ, ರಾಮಚಂದ್ರ ಕೋಟ್ಯಾನ್‌, ಪ್ರಸಾದ್‌ ಶೆಟ್ಟಿ ಅಜೆಕಾರು, ರೋಹಿತಾಶ್ವ, ಪುರಂದರ ಸಾಲ್ಯಾನ್‌ ಮೊದಲಾದವರು ಅತಿಥಿಗಳನ್ನು ಗೌರವಿಸಿದರು.

ಸಂಸ್ಥೆಯ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡ್ಯಡ್ಕ ಅವರು ಸಮ್ಮಾನ ಪತ್ರ ವಾಚಿಸಿದರು. ಸಮಾರಂಭದಲ್ಲಿ ಎಸ್‌ಎಸ್‌ಸಿ ಮತ್ತು ಎಚ್‌ಎಸ್‌ಸಿ, ಪದವಿ ತರಗತಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಸದಸ್ಯರ ಮಕ್ಕಳನ್ನು ವಿದ್ಯಾರ್ಥಿ ವೇತನವನ್ನಿತ್ತು ಗೌರವಿಸಲಾಯಿತು. ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ ಕೆ. ಕಾಪು ಅವರು ವಂದಿಸಿದರು. ರಂಗನಟ ಅಶೋಕ್‌ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳನ್ನು, ದಾನಿಗಳನ್ನು ಗೌರವಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಭಿನಯ ಮಂಟಪದ ಸದಸ್ಯರು, ಬಿಲ್ಲವರ ಅಸೋಸಿಯೇಶನ್‌ ವಸಾಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಸದಸ್ಯೆಯರು, ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ ಮತ್ತು ಚಲನಚಿತ್ರ ನಟಿ ಕಾಜಲ್‌ ಕುಂದರ್‌ ಮತ್ತು ಬಳಗ, ದೀಕ್ಷಾ ಎಲ್‌. ದೇವಾಡಿಗ ಮತ್ತು ಬಳಗ, ಸೌಜನ್ಯಾ ಬಿಲ್ಲವ ಮತ್ತು ಅಂಕಿತಾ ನಾೖಕ್‌ ಬಳಗ, ಕೀರ್ತಿ ಮೂಲ್ಯ ಇವರಿಂದ ನೃತ್ಯ ವೈಭವ ನಡೆಯಿತು. ಅಲ್ಲದೆ  ಪತ್ರಕರ್ತ ಪರಮಾನಂದ ಸಾಲ್ಯಾನ್‌ ಸಸಿಹಿತ್ಲು ರಚಿಸಿ, ಕರುಣಾಕರ ಕೆ. ಕಾಪು ನಿರ್ದೇಶನದಲ್ಲಿ ಅಭಿನಯ ಮಂಟಪ ಮುಂಬಯಿ ಕಲಾವಿದರುಗಳಿಂದ ಮಾನಿ ಬಾಲೆ ತುಳು ಜಾನಪದ ನಾಟಕ ಪ್ರದರ್ಶನಗೊಂಡಿತು. ಕಲಾಭಿಮಾನಿಗಳು ಉಪಸ್ಥಿತರಿದ್ದರು. 

ಚಿತ್ರ-ವರದಿ : ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.