ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿ: ನೂತನ ಯುವ ವಿಭಾಗಕ್ಕೆ ಚಾಲನೆ


Team Udayavani, Nov 28, 2018, 3:27 PM IST

2611mum11a.jpg

ಮುಂಬಯಿ: ಕನ್ನಡ ವೆಲ್ಫೇರ್‌ ಸೊಸೈಟಿ ಸುವರ್ಣ ಮಹೋ  ತ್ಸವ ಸಂಭ್ರಮದಲ್ಲಿರುವುದು ನಮ ಗೆಲ್ಲರಿಗೂ ಹೆಮ್ಮೆಯ ವಿಷಯ. ಅದರ ಜತೆಗೆ ಪ್ರಸ್ತುತ ಯುವ ವಿಭಾಗವನ್ನು ಸ್ಥಾಪಿಸಿ ಚಾಲನೆ ನೀಡಿರುವುದು ಸಂಸ್ಥೆಗೆ  ಮತ್ತಷ್ಟು ಬಲ ನೀಡಿದಂತಾಗಿದೆ. ಇಂದು ಹುಟ್ಟಿಕೊಂಡ ಯುವ ವಿಭಾಗವು ಉತ್ತರೋತ್ತರ ಅಭಿವೃದ್ಧಿಯನ್ನು ಕಾಣುವಂತಾಗಲಿ. ಯುವ ಪೀಳಿಗೆ ಸಂಸ್ಥೆಯ ಚುಕ್ಕಾಣಿಯನ್ನು ಹಿಡಿದು ಮುಂದುವರಿಯುವತ್ತ ಮನಸ್ಸು ಮಾಡಬೇಕು. ಯುವ ವರ್ಗವು ಸಂಸ್ಥೆಯ ಬೆನ್ನೆಲುಬಾಗಿ ಕಾರ್ಯ ನಿರ್ವ ಹಿಸಬೇಕು ಎಂದು ಯುವ ರಂಗನಟಿ, ಪತ್ತನಾಜೆ ತುಳು ಚಿತ್ರದ ನಾಯಕಿ ರೇಷ್ಮಾ ಶೆಟ್ಟಿ ಅವರು ನುಡಿದರು.

ನ. 18ರಂದು ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಮಹೇಶ್‌ ಶೆಟ್ಟಿ ಬಾಬಾಗ್ರಪ್‌ ಸಭಾ ಗೃಹದಲ್ಲಿ ನಡೆದ ಕನ್ನಡ ವೆಲ್ಫೆàರ್‌ ಸೊಸೈಟಿ ಇದರ ನೂತನ ಯುವ ವಿಭಾಗದವನ್ನು ಉದ್ಘಾಟಿಸಿ ಮಾತ ನಾಡಿದ ಅವರು, ಇದೊಂದು ಅರ್ಥ ಪೂರ್ಣ ಕಾರ್ಯಕ್ರಮವಾಗಿದೆ. ಸಂಘದ ಸಿದ್ಧಿ-ಸಾಧನೆಗಳನ್ನು ಕಂಡಾಗ ಬಹಳಷ್ಟು ಹೆಮ್ಮೆಯಾಗುತ್ತಿದೆ. ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಯುವ ವಿಭಾಗ ಸ್ಥಾಪನೆಗೊಂಡಿರು ವುದು ಮತ್ತಷ್ಟು ಬಲ ಬಂದಂತಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ ಅವರು ಮಾತನಾಡಿ, ಸಂಸ್ಥೆಯು ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವಾಗ ಯುವ ವರ್ಗದ ರಚನೆಯಾಗಿದೆ. ನಿಜವಾಗಿಯೂ ಸಂಸ್ಥೆಗೆ ಇದರ ಅಗತ್ಯವಿತ್ತು. ನೇಮಕಗೊಂಡ ಎಲ್ಲ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ತಮ್ಮ ಪಾಲಿಗೆ ದಕ್ಕಿದ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿಭಾಯಿಸಬೇಕು. ನೂತನ ಸಮಿತಿಯ ಎಲ್ಲಾ ಸದಸ್ಯರಿಗೂ ಶುಭಹಾರೈಸಿ, ಸದಸ್ಯರೆಲ್ಲರೂ ಶಿಸ್ತು ಮತ್ತು ಸಂಯಮವನ್ನು ಪಾಲಿಸಿಕೊಂಡು ಸಂಘದ ಧ್ಯೇಯೋದ್ದೇಶಗಳಿಗೆ ಬದ್ಧ ರಾಗಿರಬೇಕು. ಯುವ ವಿಭಾಗದ ಮುಂದಿನ ಕಾರ್ಯಕ್ರಮಗಳಿಗೆ ಸಂಘದ ಸಹಕಾರ ಸದಾಯಿದೆ ಎಂದು ನುಡಿದರು.

ನೂತನ ಕಾರ್ಯಾಧ್ಯಕ್ಷೆಯಾಗಿ ಆಯ್ಕೆ ಗೊಂಡ ಪ್ರಿಯಾ ಶೆಟ್ಟಿ ಅವರು ಮಾತನಾಡಿ, ನನಗೆ ಈ ರೀತಿಯ ಒಂದು ಅವಕಾಶ ದೊರೆತಿರುವುದು ಸಂತೋಷವಾಗುತ್ತಿದೆ. ಸುಮಾರು 25 ಯುವಕ-ಯುವತಿಯನ್ನು ನಾನು ಈಗಾಗಲೇ ಒಗ್ಗೂಡಿಸಿದ್ದೇನೆ ಎನ್ನಲು ಹೆಮ್ಮೆಯಾಗುತ್ತಿದೆ. ಹಾಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸದಸ್ಯರನ್ನು ವಿಭಾಗಕ್ಕೆ ಸೇರಿಸಿ ಕೊಳ್ಳಲು ಶ್ರಮಿಸುತ್ತೇನೆ. ನಮ್ಮ ಎಲ್ಲ ಕಾರ್ಯಕ್ರಮಗಳಲ್ಲೂ ಎಲ್ಲರ ಒಮ್ಮತದ ಸಹಕಾರವಿರಲಿ. ಸಂಘದ ಪದಾ ಧಿಕಾರಿಗಳ ಮಾರ್ಗದರ್ಶನ ನಮಗೆ ಸದಾಯಿರಲಿ ಎಂದು ನುಡಿದರು.
ಯುವ ವಿಭಾಗದ ಸಂಯೋಜಕಿ ಡಾ| ಪಲ್ಲವಿ ಶೆಟ್ಟಿ ಅವರು ಮಾತನಾಡಿ, ಯುವ ವಿಭಾಗದಿಂದ ಮುಂದಿನ ದಿನಗಳಲ್ಲಿ ಉತ್ತಮ ಸಮಾಜಪರ ಸೇವಾ ಕಾರ್ಯಗಳು ನಡೆದು ಎಲ್ಲರ ಮನಸ್ಸನ್ನು ಗೆಲ್ಲುವಂತಾಗಬೇಕು. ಸಂಸ್ಥೆಯ ಹೆಸರನ್ನು ಇನ್ನಷ್ಟು ಎತ್ತರಕ್ಕೇರಿಸುವಲ್ಲಿ ಯುವ ವಿಭಾಗದ ಯೋಗದಾನ ಸ್ಮರಣೀಯವಾಗುವಂತಾಗಲಿ ಎಂದು ನುಡಿದು ಸಂಸ್ಥೆಗೆ ಶುಭಹಾರೈಸಿದರು.

ವೀಣಾ ಎಂ. ಶೆಟ್ಟಿ ಅವರು ಪ್ರಾರ್ಥನೆಗೈದರು. ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರಂಭದ ವೇದಿಕೆ ಯಲ್ಲಿ ರೇಷ್ಮಾ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ಪ್ರಿಯಾ ಶೆಟ್ಟಿ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸುಧಾಕರ ಎಲ್ಲೂರು, ಕೋಶಾಧಿಕಾರಿ ಹರೀಶ್‌ ಎಂ. ಶೆಟ್ಟಿ, ಯುವ ವಿಭಾಗದ ಸಂಚಾಲಕಿ ಡಾ| ಪಲ್ಲವಿ ಶೆಟ್ಟಿ ಉಪಸ್ಥಿತರಿದ್ದರು.

ಸಭೆಯಲ್ಲಿ ಸದಸ್ಯರುಗಳಾದ ಎಸ್‌. ಕೆ. ಸೊರಪ, ಪೆರಿಯಣ್ಣ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ರಘುನಾಥ್‌ ಶೆಟ್ಟಿ, ಶಾಂತಾ ಎನ್‌. ಶೆಟ್ಟಿ, ಜಯಂತಿ ಆರ್‌. ಮೊಲಿ, ಮನೋಹರ್‌ ಶೆಟ್ಟಿ, ಶ್ರೀಕಾಂತ್‌ ಶೆಟ್ಟಿ, ಪ್ರವೀಣಾ ಆರ್‌. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ ನಂದಳಿಕೆ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.