ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ: ಪುಣೆ ಶಾಖೆ ಆರಂಭ


Team Udayavani, Dec 4, 2018, 4:27 PM IST

1sadsa.jpg

ಪುಣೆ: ಕುಲಾಲ ಸಂಘ ಮುಂಬಯಿ ಪ್ರಾಯೋಜಿತ  ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಲಿಮಿಟೆಡ್‌ ಮುಂಬಯಿ ಇದರ   6 ನೇ ನೂತನ ಶಾಖೆಯು  ಕಾತ್ರಜ್‌ನ  ದತ್ತನಗರ -ಅಂಬೆಗೌಂವ್‌ ಬುದ್ರುಕ್‌ ನಲ್ಲಿಯ ಥಾಟೆ ಕಾಂಪ್ಲೆಕ್ಸ್‌ನ ಶಾಪ್‌ ನಂಬರ್‌ 8/9, ಮೊದಲ ಮಹಡಿಯಲ್ಲಿ ಡಿ. 2 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಚಾಲನೆಗೊಂಡಿತು.

ಬೆಳಗ್ಗೆ  8 ರಿಂದ ಕಾತ್ರಜ್‌ ಶ್ರೀ  ಅಯ್ಯಪ್ಪ ದೇವಸ್ಥಾನದ ಪ್ರಧಾನ ಅರ್ಚಕರಾದ ಹರೀಶ್‌ ಭಟ್‌ ಅವರ ಪೌರೋಹಿತ್ಯದಲ್ಲಿ ಗಣಹೋಮ ಹಾಗು ಶ್ರೀ ಸತ್ಯನಾರಾಯಣ ಮಹಾಪೂಜೆ ನೆರವೇರಿತು. ಆನಂತರ ಸೊಸೈಟಿಯ ಎÇÉಾ ವ್ಯವಹಾರ ವಿಭಾಗಗಳ ಕೌಂಟರ್‌ಗಳ  ಪೂಜೆಯನ್ನು ನೆರವೇರಿಸಿದರು. ಪುಣೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಹರೀಶ್‌ ಕುಲಾಲ್‌ ದಂಪತಿ ಪೂಜಾ ಕಾರ್ಯಕ್ರಮದ ಯಜಮಾನತ್ವ ವಹಿಸಿ ಸಹಕರಿಸಿದರು.

ಧಾರ್ಮಿಕ ಪೂಜಾ  ಕಾರ್ಯಕ್ರಮದ ನಂತರ ಶಾಖೆಯ ಕಚೇರಿ, ಕಂಪ್ಯೂಟರ್‌ ವಿಭಾಗ  ಮತ್ತು ನಗದು  ಸೇಫ್‌ ಲಾಕರ್‌  ವಿಭಾಗಗಳಿಗೆ  ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಲಿಮಿಟೆಡ್‌ ಮುಂಬಯಿ ಇದರ ಕಾರ್ಯಾಧ್ಯಕ್ಷ ಗಿರೀಶ್‌ ಸಾಲ್ಯಾನ್‌, ಕುಲಾಲ ಸಂಘ ಮುಂಬಯಿ ಅಧ್ಯಕ್ಷ, ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಗೌರವ ಕಾರ್ಯದರ್ಶಿ ಪಿ. ದೇವದಾಸ್‌ ಎಲ್‌. ಕುಲಾಲ…, ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಮಾಜಿ ಕಾರ್ಯಾಧ್ಯಕ್ಷ ಎನ್‌. ಜಿ. ಮೂಲ್ಯ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಪಾಲ್ಗೊಂಡ  ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನಕುರ್ಕಿಲ್‌ ಬೆಟ್ಟು, ಪುಣೆ ರೆಸ್ಟೋರೆಂಟ್‌ ಆ್ಯಂಡ್‌ ಹೋಟೆಲಿಯರ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷ ವಿಶ್ವನಾಥ್‌ ಪೂಜಾರಿ ಕಡ್ತಲ, ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ವಸಂತ್‌ ಶೆಟ್ಟಿ ಅವರು ಕ್ರಮವಾಗಿ  ರಿಬ್ಬನ್‌ ಕತ್ತರಿಸಿ ಚಾಲನೆ ನೀಡಿದರು.

ಗಿರೀಶ್‌ ಸಾಲ್ಯಾನ್‌ ಅವರ  ಅಧ್ಯಕ್ಷತೆಯಲ್ಲಿ  ನಡೆದ   ಸಭಾ ಕಾರ್ಯಕ್ರಮದಲ್ಲಿ   ಮುಖ್ಯ ಅಥಿತಿಗಳಾಗಿ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು, ಮುಂಬಯಿ ಕುಲಾಲ ಸಂಘದ ಅಧ್ಯಕ್ಷ ದೇವದಾಸ್‌  ಕುಲಾಲ್‌, ಪುಣೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಹರೀಶ್‌ ಕುಲಾಲ್‌ ಮುಂಡ್ಕೂರು, ಪುಣೆ ಶ್ರೀ ಗುರುದೇವ ಸೇವಾ ಬಳಗದ ಕಾರ್ಯದರ್ಶಿ ನಗ್ರಿಗುತ್ತು ರೋಹಿತ್‌ ಡಿ. ಶೆಟ್ಟಿ,  ಪುಣೆ ಬಿಲ್ಲವ ಸಮಾಜ ಸೇವಾ  ಸಂಘದ ಅಧ್ಯಕ್ಷ ಶೇಖರ್‌ ಪೂಜಾರಿ, ಪುಣೆ ರೆಸ್ಟೋರೆಂಟ್‌ ಆ್ಯಂಡ್‌ ಹೋಟೆಲಿಯರ್ಸ್‌ ಅಸೋಸಿಯೇಶನ್‌ನ ಉಪಾಧ್ಯಕ್ಷ ವಿಶ್ವನಾಥ್‌ ಪೂಜಾರಿ ಕಡ್ತಲ, ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ವಸಂತ್‌ ಶೆಟ್ಟಿ, ಪುಣೆ ಕುಲಾಲ ಸಂಘದ ಗೌರವಾಧ್ಯಕ್ಷ ವಿಶ್ವನಾಥ್‌ ಉಡುಪಿ, ಪಿಂಪ್ರಿ-ಚಿಂಚಾÌಡ್‌ ಕುಲಾಲ ಸಂಘದ ಅಧ್ಯಕ್ಷ ಅಪ್ಪು ಮೂಲ್ಯ, ಜ್ಯೋತಿ ಕೋ. ಆಪರೇಟಿವ್‌ ಸೊಸೈಟಿಯ ಉಪ ಕಾರ್ಯಾಧ್ಯಕ್ಷ ಶೇಖರ್‌ ಮೂಲ್ಯ, ಪುಣೆ ದೇವಾಡಿಗ ಸಂಘದ  ಅಧ್ಯಕ್ಷ ನಾರಾಯಣ  ದೇವಾಡಿಗ, ಮುಂಬಯಿ ಕುಲಾಲ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಮಮತಾ ಗುಜರನ್‌, ಮುಂಬಯಿ ಕುಲಾಲ ಸಂಘದ ಉಪಾಧ್ಯಕ್ಷ ರಘು ಮೂಲ್ಯ, ಅಮೂಲ್ಯ ಮಾಸಿಕದ ಸಂಪಾದಕ ಶಂಕರ್‌ ಮೂಲ್ಯ ಅವರು  ಉಪಸ್ಥಿತರಿದ್ದರು.

ಪುಣೆಯಲ್ಲಿ ಕಾರ್ಯಾರಂಭ ಪ್ರಾರಂಭಿಸಿರುವ   ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಲಿ. ಈ ಧಾರ್ಮಿಕ ಮತ್ತು ಸಭಾ ಕಾರ್ಯಕ್ರಮಕ್ಕೆ ಪುಣೆ  ಮುಂಬಯಿಯ ಕುಲಾಲ ಸಮಾಜದ  ಭಾಂದವರು, ಮತ್ತಿತರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನೂತನ ಶಾಖೆಗೆ ಶುಭಕೋರಿದರು. ನೂರಾರು ಮಂದಿ ಪಾಲ್ಗೊಂಡು ಸೊಸೈಟಿಯ ಸದಸ್ಯರಾಗಿ ಹೆಸರು  ನೋಂದಾಯಿಸಿಕೊಂಡರು. ದೇವದಾಸ್‌ ಕುಲಾಲ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು. 

ಚಿತ್ರ-ವರದಿ: ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.