ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಮಹಾಪೂಜೆ


Team Udayavani, Dec 6, 2018, 4:56 PM IST

0412mum12.jpg

ಮುಂಬಯಿ: ವಸಾಯಿ ಪರಿಸರದ ಧಾರ್ಮಿಕ ಚಿಂತಕರಿಂದ ಸ್ಥಾಪಿಸಲ್ಪಟ್ಟ ಶ್ರೀ ಮಣಿಕಂಠ ಸೇವಾ ಸಮಿತಿಯ 17 ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ. 2ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಸಾಯಿ ಪಶ್ಚಿಮದ ಸಾಯಿನಗರದ ಸಾಯಿನಗರ ರಂಗಮಂಚದಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಮುಂಜಾನೆ 6.30ರಿಂದ ಮೂಡುಬಿದಿರೆಯ ಶಿವಾನಂದ ಗುರುಸ್ವಾಮಿ ಅವರ ನೇತೃತ್ವದಲ್ಲಿ ಅಯ್ಯಪ್ಪ ವ್ರತ ಧಾರಿಗಳ ಉಪಸ್ಥಿತಿಯಲ್ಲಿ ಪ್ರತಿಷ್ಠಾಪನೆ, ಪಡಿಪೂಜೆ, ಶರಣು ಘೋಷ, ಮಧ್ಯಾಹ್ನ 12.30ರಿಂದ ಅಯ್ಯಪ್ಪ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಜರಗಿತು.

ಪುಷ್ಪಾಲಂಕೃತಗೊಂಡ ಬೃಹತ್‌ ರಂಗಮಂಟಪದಲ್ಲಿ ನಿರ್ಮಿಸಲಾಗಿರುವ ಅಯ್ಯಪ್ಪ ಸ್ವಾಮಿಯ ಪ್ರತಿ ಬಿಂಬಕ್ಕೆ ವಿವಿಧ ಪೂಜೆಗಳನ್ನು ನೆರವೇರಿಸಿದ ರಮೇಶ್‌ ಗುರುಸ್ವಾಮಿ ಅವರು ಗಣಪತಿ  ಹಾಗೂ ಅಲಂಕೃತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ವಿಶೇಷ ಮಂಗಳಾರತಿಗೈದರು. ಬೆಳಗ್ಗೆ 9.30ರಿಂದ ಮಹಾಮಂಗಳಾರತಿಯವರೆಗೆ ಗಾಯಕ ಪನ್ವೇಲ್‌ ಶಿಬರೂರು ಸುರೇಶ್‌ ಶೆಟ್ಟಿ ಮತ್ತು ಬಳಗದವರಿಂದ ನಿರಂತರ ಭಕ್ತಿಗಾಯನ ಕಾರ್ಯಕ್ರಮವು ನೆರೆದ ಭಕ್ತಾದಿಗಳನ್ನು ರಂಜಿಸಿತು.

ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಮುಗಿದ ಬಳಿಕ ಉತ್ತರ ಪೂಜೆಯನ್ನು ನಡೆಸಲಾಯಿತು. ಇದೇ ಸಂದರ್ಭದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ರಮೇಶ್‌ ಗುರುಸ್ವಾಮಿ ಅವರು, ಕಲಿಯುಗದಲ್ಲಿ ಅಯ್ಯಪ್ಪನನ್ನು ಪೂಜಿಸುವ ಮೂಲಕ ಜೀವನ-ಸಮಸ್ಯೆಗಳು ದೂರವಾಗುತ್ತವೆ. ಪಂಪಾತೀರ ಪುಣ್ಯಭೂಮಿ ವ್ರತಧಾರಿಗಳಿಗೆ ಪರಮಪಾವನವಾಗಿದೆ. ಅಂತಹ ಕ್ಷೇತ್ರವಿಂದು ವಿವಾದಕ್ಕೀಡಾದರೂ ನಮ್ಮ ಭಕ್ತಿ, ಶ್ರದ್ಧೆಯಲ್ಲಿ ಯಾವತ್ತೂ ಬದಲಾವಣೆಯನ್ನು ತರದೆ, ಶುದ್ಧ ಮನಸ್ಸಿನಿಂದ ಹರಿಹರ ಸುತನನ್ನು ಪ್ರಾರ್ಥಿಸುವ ದೃಢ ಸಂಕಲ್ಪ ಎಲ್ಲ ವ್ರತಧಾರಿಗಳಲ್ಲಿ ಇರಬೇಕು. ಭಕ್ತಿಯ ಮೋಕ್ಷದಲ್ಲಿ ಮಾತ್ರ ದೇವರನ್ನು ಕಾಣಲು ಸಾಧ್ಯ. ಕಠಿನ ಶ್ರದ್ಧೆ, ಭಕ್ತಿಯಲ್ಲಿ ತೊಡಗಿರುವ ಗುರುಸ್ವಾಮಿಗಳಿಂದ ಧಾರ್ಮಿಕ ಚಿಂತನೆ ಮುಂದಿನ ಪೀಳಿಗೆಗೂ ಮುಡಿಪಾಗಿರಲಿ ಎಂದು ಹೇಳಿ ಆಶೀರ್ವದಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ದಾನಿಗಳು, ಸಮಾಜ ಸೇವಕರು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು. ಗೌರವಾಧ್ಯಕ್ಷ ಕರ್ನೂರು ಶಂಕರ ಆಳ್ವ, ಅಧ್ಯಕ್ಷ ಯಶೋಧರ ವಿ. ಕೋಟ್ಯಾನ್‌, ಉಪಾಧ್ಯಕ್ಷರಾದ ದಿನೇಶ್‌ ಹೆಗ್ಡೆ ಎಕ್ಕಾರು, ಗೌರವ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ಹೇಮಂತ ಪಾರೇಖ್‌, ಜತೆ ಕೋಶಾಧಿಕಾರಿ ಸುಧೀರ್‌ ಸಾಲ್ಯಾನ್‌, ಪೂಜಾ ಸಮಿತಿಯ ಸಲಹೆಗಾರರುಗಳಾದ ಭೋಜ ಸಾಲ್ಯಾನ್‌ ಅವರು ದಿನಪೂರ್ತಿ ನಡೆದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸ್ಥಳೀಯ ಅತಿಥಿ-ಗಣ್ಯರನ್ನು ಪ್ರಸಾದವನ್ನಿತ್ತು ಗೌರವಿಸಲಾಯಿತು. ಮಧ್ಯಾಹ್ನ 1ರಿಂದ ನಡೆದ ಅನ್ನಸಂತರ್ಪಣೆಯು ಅಪರಾಹ್ನ 4ರವರೆಗೆ ಮುಂದುವರಿದಿದ್ದು, ಸಾವಿರಾರು ಭಕ್ತಾದಿಗಳು, ತುಳು- ಕನ್ನಡಿಗರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಗುರುಸ್ವಾಮಿ ಉಮೇಶ್‌ ಕಾಂತಾವರ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.