ದಹಿಸರ್‌ ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ:ಮಹಾಪೂಜೆ,ಧಾರ್ಮಿಕ ಸಭೆ


Team Udayavani, Dec 6, 2018, 5:00 PM IST

0412mum02.jpg

ಮುಂಬಯಿ: ಧರ್ಮದಲ್ಲಿ ರಾಜಕೀಯ ಬೇಡ. ಹಿರಿಯರ ಸಂಪ್ರದಾಯದೊಂದಿಗೆ ನಮ್ಮ ಭಕ್ತಿ ಮುಂದುವರಿಯಬೇಕು. ಕಠಿನ ಪರಿಶ್ರಮದ ಮೂಲಕ ಒಂದು ಮಂಡಲದ ವ್ರತ ಕೈಗೊಳ್ಳುವ ಅಯ್ಯಪ್ಪ ವ್ರತಧಾರಿಗಳಿಂದ ಸುಸಂಸ್ಕೃತ ಸಮಾಜ ನಿರ್ಮಾಣವಾಗಲಿ. ಇಂತಹ ಕಾರ್ಯಕ್ರಮಗಳಿಗೆ ನನ್ನ ಸಂಪೂರ್ಣ ಸಹಕಾರವಿದೆ  ಎಂದು ಮಹಾರಾಷ್ಟ್ರ ಮಾನವ ಸೇವಾ ಸಂಘದ ಅಧ್ಯಕ್ಷ ಡಾ| ಹರೀಶ್‌ ವಿ. ಶೆಟ್ಟಿ ಅವರು ನುಡಿದರು.

ಡಿ. 1ರಂದು ದಹಿಸರ್‌ ಪೂರ್ವದ ಭರೂಚ ರೋಡ್‌ ಭಾಟ್ಲಾದೇವಿ ಮಂದಿರದ ಆವರಣದಲ್ಲಿ ನಡೆದ ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ದಹಿಸರ್‌ ಇದರ 29ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನೆರವೇರಿದ್ದು, ಸಂಜೆ ನಡೆದ ಧಾರ್ಮಿಕ, ಸಮ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ   ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು,  ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ದಹಿಸರ್‌ ಸಂಸ್ಥೆಯು ಕಳೆದ 29 ವರ್ಷಗಳಿಂದ ಧಾರ್ಮಿಕ ಸೇವೆಗೈಯುತ್ತಿರುವುದನ್ನು ಕಂಡಾಗ ಸಂತೋಷವಾಗುತ್ತಿದೆ. ಇಂತಹ ಸಂಸ್ಥೆಗಳಿಂದ ಧರ್ಮ, ಧಾರ್ಮಿಕತೆ ಉಳಿಯಲು ಸಾಧ್ಯವಿದೆ ಎಂದು ನುಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದದ ಅಧ್ಯಕ್ಷ ಮನ್ಮಥ ಆರ್‌. ಹೆಗ್ಡೆ ಅವರು ಮಾತನಾಡಿ, ದಾನಿಗಳ ನೆರವಿನಿಂದ, ಅಯ್ಯಪ್ಪ ವ್ರತಧಾರಿಗಳ ಸಹಕಾರ, ಕಾರ್ಯಕಾರಿ ಸಮಿತಿ, ಮಹಿಳಾ ಸದಸ್ಯೆಯರು, ಪರಿಸರದ ವಿವಿಧ ಸಂಘ-ಸಂಸ್ಥೆಗಳ ಪ್ರೋತ್ಸಾಹದಿಂದ ಶ್ರೀ ಅಯ್ಯಪ್ಪ ಮಹಾಪೂಜೆಯು ಯಶಸ್ವಿಯಾಗಿದೆ ಎಂದು ಹೇಳಿ ಕೃತಜ್ಞತೆ ಸಲ್ಲಿಸಿದರು.

ಗಣ್ಯರ ಸಮ್ಮುಖದಲ್ಲಿ ಉದ್ಯಮಿ ಶ್ರೀಧರ ಪೂಜಾರಿ ದಂಪತಿಯನ್ನು ಸಮ್ಮಾನಿಸಲಾಯಿತು. ಭಾರತ್‌ ಬ್ಯಾಂಕಿನ ನಿರ್ದೇಶಕ ದಾಮೋದರ ಸಿ. ಕುಂದರ್‌, ಶಿಕ್ಷಣಪ್ರೇಮಿ ಆರ್‌. ಕೆ. ಮೂಲ್ಕಿ ಅವರು ಶುಭಹಾರೈಸಿದರು. ವೇದಿಕೆಯಲ್ಲಿ ಡಾ| ಸತೀಶ್‌ ಶೆಟ್ಟಿ, ರಾಮಚಂದ್ರ ಶೆಟ್ಟಿ, ಕೈಲಾಸ್‌ ರಾವ್‌ ದೇಶು¾ಖ್‌, ವಿ. ಪಿ. ಮುಲ್ಲಾ, ಶ್ರೀ ಅಯ್ಯಪ್ಪ ಭಕ್ತವೃಂದದ ಕೋಶಾಧಿಕಾರಿ ಕೃಷ್ಣ ಎಂ. ಶೆಟ್ಟಿ, ಗೌರವಾಧ್ಯಕ್ಷ ಮರ್ದ ಕೆ. ಶೆಟ್ಟಿ, ಗೌರವ ಕಾರ್ಯದರ್ಶಿ ಟಿ. ಕೆ. ಕೋಟ್ಯಾನ್‌, ಮಹಿಳಾ ವಿಭಾಗದ ಅಧ್ಯಕ್ಷೆ ಸುನಂದಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ವಿಷ್ಣುಮೂರ್ತಿ ಭಟ್‌ ಅವರ ಪೌರೋಹಿತ್ಯದಲ್ಲಿ ರತ್ನಾ ಕರುಣಾಕರ ಶೆಟ್ಟಿ ದಂಪತಿಯ ಸಂಕಲ್ಪದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಸುರೇಂದ್ರ ಗುರುಸ್ವಾಮಿ ಬೆಳಗಾವಿ, ಮೋಹನ್‌ ರೈ ಗುರುಸ್ವಾಮಿ ಹಾಗೂ ರಘುರಾಮ ಹೆಗ್ಡೆ ಅವರ ನೇತೃತ್ವದಲ್ಲಿ ವಿವಿಧ ಪೂಜೆಗಳು ನೆರವೇರಿತು.

ಅನ್ನದಾನ ಸೇವಾರ್ಥಿಗಳಾದ ಉದ್ಯಮಿ ದಯಾನಂದ ಶೆಟ್ಟಿ ಮತ್ತು ಸದಾನಂದ ಶೆಟ್ಟಿ ದಹಿಸರ್‌, ಯಕ್ಷಗಾನ ಪ್ರಾಯೋಜಕ, ಕಲಾಪೋಷಕರಾದ ಶ್ರೀಧರ ಕೆ. ಪೂಜಾರಿ, ರಾಮಚಂದ್ರ ಎಸ್‌. ಶೆಟ್ಟಿ, ಮಹಾದಾನಿಗಳಾದ ರವೀಂದ್ರ ಸಾಧು ಶೆಟ್ಟಿ, ಕರುಣಾಕರ ವಿ. ಶೆಟ್ಟಿ ಬೋಳಿದಗುತ್ತು, ಸುನಂದಾ ಶೇಖರ ಶೆಟ್ಟಿ, ಮೋಹಿನಿ ಮನ್ಮಥ ಹೆಗ್ಡೆ, ಗೋಪಾಲ್‌ ಸಾಲ್ಯಾನ್‌ ಮತ್ತಿತರರನ್ನು ಗೌರವಿಸಲಾಯಿತು.

ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದದ ಅಧ್ಯಕ್ಷ ಮನ್ಮಥ ಆರ್‌. ಹೆಗ್ಡೆ, ಶ್ರೀ ಅಯ್ಯಪ್ಪ ಭಕ್ತವೃಂದದ ಕೋಶಾಧಿಕಾರಿ ಕೃಷ್ಣ ಎಂ. ಶೆಟ್ಟಿ, ಗೌರವಾಧ್ಯಕ್ಷ ಮರ್ದ ಕೆ. ಶೆಟ್ಟಿ, ಗೌರವ ಕಾರ್ಯದರ್ಶಿ ಟಿ. ಕೆ. ಕೋಟ್ಯಾನ್‌, ಮಹಿಳಾ ವಿಭಾಗದ ಅಧ್ಯಕ್ಷೆ ಸುನಂದಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಸದಾನಂದ ಕೆ. ಶೆಟ್ಟಿ, ಪ್ರಭಾಕರ ಎಂ. ಶೆಟ್ಟಿ, ಲಕ್ಷ್ಮಣ್‌ ಪೂಜಾರಿ, ಪರಮೇಶ್ವರ ಪೂಜಾರಿ, ಲಕ್ಷ್ಮಣ್‌ ಕೋಟ್ಯಾನ್‌, ಎಚ್‌. ಎಂ. ಶೆಟ್ಟಿ, ವಾಸುದೇವ ಕೋಟ್ಯಾನ್‌, ಸಲಹೆಗಾರರುಗಳಾದ ಎಸ್‌. ಕೆ. ಪೂಜಾರಿ, ಗೋಪಾಲ್‌ ಡಿ. ಸಾಲ್ಯಾನ್‌, ಉಡುಪಿ ಗುಣಪಾಲ್‌, ರಾಘವ ಬಿ. ಹೆಗ್ಡೆ, ರುಕ್ಕಯ್ಯ ಎಚ್‌. ಶೆಟ್ಟಿಗಾರ್‌, ರವೀಂದ್ರ ಭಟ್‌, ಮಹಿಳಾ ವಿಭಾಗದ ಸುನಂದಾ ಶೆಟ್ಟಿ, ರಜನಿ ಪಿ. ರಾವ್‌, ವಸಂತಿ ಪಿ. ಶೆಟ್ಟಿ, ಜಯಂತಿ ಕೆ. ಶೆಟ್ಟಿ, ಮೋಹಿನಿ ಎಂ. ಹೆಗ್ಡೆ, ಲಕ್ಷ್ಮೀ ಕೆ. ಪ್ರಭು, ಲಲಿತಾ ಎನ್‌. ಶೆಟ್ಟಿ, ರತ್ನಾ ಕೆ. ಶೆಟ್ಟಿ ಅವರು ಸಹಕರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸ್ಥಳೀಯ ಪ್ರತಿಭೆಗ ಳಿಂದ ನೃತ್ಯ ವೈವಿಧ್ಯ, ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿ ಸಾಂತಾಕ್ರೂಜ್‌ ಇದರ ಕಲಾವಿದರುಗಳಿಂದ ಶಬರಿ ಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. 

ನಗರ ಹಾಗೂ ಉಪನಗರಗಳ ಅಯ್ಯಪ್ಪ ವ್ರತಧಾರಿಗಳು, ರಾಜಕೀಯ ನೇತಾರರು, ತುಳು-ಕನ್ನಡಿಗರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.