ಪುಣೆ ತುಳುಕೂಟ ನೂತನ ಅಧ್ಯಕ್ಷ ಮೋಹನ್ ಶೆಟ್ಟಿಗೆ ಅಭಿನಂದನೆ
Team Udayavani, Dec 6, 2018, 5:23 PM IST
ಪುಣೆ: ಪುಣೆ ತುಳುಕೂಟದ ವಾರ್ಷಿಕ ಮಹಾಸಭೆಯು ಡಿ. 2ರಂದು ವಾರ್ಜೆಯ ಹೊಟೇಲ್ ನ್ಯೂ ಸಾಗರ್ ಸಭಾಂಗಣದಲ್ಲಿ ಪುಣೆ ತುಳುಕೂಟದ ಅಧ್ಯಕ್ಷ ತಾರಾನಾಥ ಕೆ. ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಂಘದ ನೂತನ ಅಧ್ಯಕ್ಷರನ್ನಾಗಿ ಮೋಹನ್ ಶೆಟ್ಟಿ ಎಣ್ಣೆಹೊಳೆ ಇವರನ್ನು ಆಯ್ಕೆಗೊಳಿ ಸಲಾಯಿತು. ತುಳುಕೂಟದ ಅಧ್ಯಕ್ಷರಾ ಗಿ ಆಯ್ಕೆಗೊಂಡ ಮೋಹನ್ ಶೆಟ್ಟಿ ಎಣ್ಣೆಹೊಳೆ ಇವರಿಗೆ ತುಳುಕೂಟ ಪಿಂಪ್ರಿ-ಚಿಂಚಾÌಡ್ ಇದರ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕುರ್ಕಾಲ್, ಉಪಾಧ್ಯಕ್ಷ ದಿನೇಶ್ ಶೆಟ್ಟಿ ಉಜಿರೆ, ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ನಿತಿನ್ ಶೆಟ್ಟಿ ನಿಟ್ಟೆ ಅವರು ಪುಷ್ಪಗುತ್ಛ ವನ್ನಿತ್ತು ಅಭಿನಂದಿಸಿದರು.
ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೋ ದ್ಧಾರ ಸಮಿತಿಯ ಪುಣೆ ಘಟಕದ ಅಧ್ಯಕ್ಷರಾಗಿದ್ದ ಹರಿಪ್ರಸಾದ್ ಶೆಟ್ಟಿ ಅಂಜಾರುಬೀಡು ಇವರು ಮೋಹನ್ ಶೆಟ್ಟಿ ಅವರನ್ನು ಪುಷ್ಪಗುತ್ಛ ನೀಡಿ ಅಭಿನಂದಿಸಿದರು. ಅದೇ ರೀತಿ ಸ್ವತಂತ್ರ ಸಮಿತಿಯಾಗಿ ಆಯ್ಕೆಗೊಂಡ ತುಳುಕೂಟ ಪಿಂಪ್ರಿ ಚಿಂಚಾÌಡ್ ಇದರ ಅಧ್ಯಕ್ಷ ಹರೀಶ್ ಶೆಟ್ಟಿ ಕುರ್ಕಾಲ್ ಇವರನ್ನು ಪುಣೆ ತುಳುಕೂಟದ ವತಿಯಿಂದ ಗೌರವಾಧ್ಯಕ್ಷರಾದ ತಾರಾ ನಾಥ ಕೆ. ರೈ ಮೇಗಿನಗುತ್ತು ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು.ಸಭೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಮಾಜಿ ಅಧ್ಯಕ್ಷರಾದ ಮಿಯ್ನಾರು ರಾಜ್ ಕುಮಾರ್ ಎಂ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರೋಹನ್ ಪಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಾತಾ ಪಿ. ಶೆಟ್ಟಿ, ಸಲಹಾ ಸಮಿತಿ ಸದಸ್ಯರಾದ ಮದಂಗಲ್ಲು ಆನಂದ ಭಟ್, ಪಾಂಗಾಳ ವಿಶ್ವನಾಥ ಶೆಟ್ಟಿ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.
ಚಿತ್ರ -ವರದಿ : ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್