ಶ್ರೀ ಅಷ್ಟವಿನಾಯಕ ಅಯ್ಯಪ್ಪ ಭಕ್ತವೃಂದ ಮಹಾಪೂಜೆ, ಧಾರ್ಮಿಕ ಮಹಾಸಭೆ


Team Udayavani, Dec 8, 2018, 4:11 PM IST

0712mum03.jpg

ಮುಂಬಯಿ: ಯಾವುದೇ ವ್ರತ, ನಿಯಮಗಳನ್ನು ಸೀಮಿತ ಅವಧಿಗೆ ಕೊನೆ ಗೊಳಿಸದೆ ಜೀವನ ಪರ್ಯಂತ ಪಾಲಿಸಬೇಕು. ಇದರಿಂದ ಮಾನವ ದೇವತ್ವವನ್ನು ಹೊಂದಲು ಸಾಧ್ಯವಾಗುತ್ತದೆ. ಪ್ರಕೃತಿಯಲ್ಲಿ ಗೋಚರಿಸುವ ಪ್ರತಿಯೊಂದು ಜೀವಿಯಲ್ಲೂ ಪರಮಾತ್ಮನನ್ನು ಕಾಣಬೇಕು. ಭಗವಂತನ ಸಾಮೀಪ್ಯ ಹೊಂದಲು, ಜೀವನದಲ್ಲಿ ಮುಕ್ತಿ ಪಡೆಯಲು ಸ್ವಾರ್ಥ ರಹಿತ ವೃತ, ನಿರ್ಮಲ ಮನಸ್ಸಿನ ಭಕ್ತಿ ಬೇಕಾಗಿದೆ. ಸನ್ನಡತೆ, ಸಚ್ಚಾರಿತ್ರÂ, ಮಾನವೀಯ ಮೌಲ್ಯ ಬೊಧಿಸುವ ಅಯ್ಯಪ್ಪ ವೃತಧಾರಿಗಳು ಸಮಾಜ ಸುಧಾರಣೆಯ ಮಾರ್ಗದರ್ಶಕರು ಎಂದು ಸಂಸದ ಗೋಪಾಲ್‌ ಶೆಟ್ಟಿ ಅವರು ನುಡಿದರು.

ಡಿ. 2 ರಂದು ಬೊರಿವಲಿ ಪಶ್ಚಿಮದ ಗೊರೈರೋಡ್‌ ಎಂಎಚ್‌ಬಿ ಕಾಲನಿ ಮೈದಾನದಲ್ಲಿ ಶ್ರೀ ಅಷ್ಟವಿನಾಯಕ ಅಯ್ಯಪ್ಪ ಭಕ್ತವೃಂದದ 23 ನೇ ವಾರ್ಷಿಕ ಮಹಾಪೂಜೆಯ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸಮುದಾಯ ಸಂಘಟನೆಗಳು, ಸಾಮಾಜಿಕ ಸಂಘ-ಸಂಸ್ಥೆಗಳು ಜಾತೀಯ ಅಡ್ಡಗೋಡೆ ತೊರೆದು ಸಮಾಜಮುಖೀ ಚಿಂತನೆಯಲ್ಲಿ ತೊಡಗಬೇಕು. ಇದರಿಂದ ಸರಕಾರದ ಪ್ರತಿಯೊಂದು ಯೋಜನೆಗಳು ಫಲಾನುಭವಿಗಳಿಗೆ ತಲುಪಲು ಸಾಧ್ಯವಾಗುತ್ತದೆ. ಯುವ ಶಕ್ತಿಯ ಸದ್ಭಳಕೆ, ಸ್ತ್ರೀ ಶಕ್ತಿಯ ಸ್ವಾವಲಂಬಿ ಬದುಕಿಗೆ ಪ್ರಮುಖ ಆದ‌Âತೆ ನೀಡುವ ಅಯ್ಯಪ್ಪ ಭಕ್ತವೃಂದ ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ಸ್ಥಳೀಯ ಹಿರಿಯ ರಾಜಕೀಯ ಧುರೀಣ ಅಶೋಕ್‌ ಸುತ್ತಾಲೆ ಅವರು ಮಾತನಾಡಿ, ಭಾಷೆ ಹಾಗೂ ಸಂಸ್ಕೃತಿಯ ಆರಾಧಕರಾಗಿರುವ ತುಳುನಾಡಿನ ಜನತೆಯಿಂದ ಮಹಾರಾಷ್ಟ್ರದಲ್ಲಿ ಆಧ್ಯಾತ್ಮಿಕತೆ ಬೆಳವಣಿಗೆ ಕಂಡಿದೆ. ನಿಮ್ಮೆಲ್ಲರ ಶ್ರದ್ಧ, ಭಕ್ತಿ ಮನುಷ್ಯತ್ವವನ್ನು ರೂಪಿಸುವ ಸಾಧನಗಳಾಗಿವೆ. ಸಮವಸ್ತ್ರ, ಸಾಮೂಹಿಕ ಭೋಜನ, ಸ್ವಾಮಿ ಶರಣಂ ಶರಣು ಘೋಷ, ಒಬ್ಬರಿಗೊಬ್ಬರು ಕಾಲಿಗೆರಗುವ ಪರಿ ವಿವಿಧ‌ತೆಯಲ್ಲಿ ಏಕತೆಯನ್ನು ಸೂಚಿಸಿ, ಸ್ನೇಹ- ಸೌಹಾದ‌ìತೆಯನ್ನು ಹೆಚ್ಚಿಸುತ್ತದೆ ಎಂದರು.

ಸಂಘಟಕ ಪ್ರವೀಣ್‌ ಶೆಟ್ಟಿ ಶಿಮಂತೂರು ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರ್ವಹಿ ಸಿದರು. ಅಯ್ಯಪ್ಪ ವ್ರತಧಾರಿ ಸುರೇಂದ್ರ ಗುರುಸ್ವಾಮಿ, ಸಕ್ರಿಯ ಕಾರ್ಯಕರ್ತ ಅಜಿತ್‌ ಸಾಲ್ಯಾನ್‌ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರ ಯಾದಿಯನ್ನು ಪ್ರಶಾಂತ್‌ ಆಚಾರ್ಯ ಅವರು ವಾಚಿಸಿದರು.

ವೇದಿಕೆಯಲ್ಲಿ ನಿಕಟಪೂರ್ವ ನಗರ ಸೇವಕ ಶಿವ ಶೆಟ್ಟಿ, ಸಮಾಜ ಸೇವಕ ನಿಲೇಶ್‌ ಶೆಟ್ಟಿ, ಡಾ| ವಾಡಿವಾಲ, ಬಂಟರ ಸಂಘ ಮುಂಬ ಯಿ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಕೋಶಾಧಿಕಾರಿ ಗಂಗಾಧರ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ವಾಗಿ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಕಲಾವಿದರಿಂದ ಚಕ್ರವ್ಯೂಹ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಸಮಿತಿಯ ಅಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸದಸ್ಯರು, ಇತರ ಪದಾಧಿಕಾರಿಗಳು, ಶಿಬಿರದ ಅಯ್ಯಪ್ಪ ಭಕ್ತರು, ಮಹಿಳಾ ಸದಸ್ಯೆಯರು, ಯುವ ವಿಭಾಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.