ಶ್ರೀ ಶಾಸ್ತ ಸೇವಾ ಸಮಿತಿ: ವಾರ್ಷಿಕ ಮಹಾಮಂಡಲ ಪೂಜೆ, ಅನ್ನಸಂತರ್ಪಣೆ


Team Udayavani, Dec 14, 2018, 3:25 PM IST

1212mum03.jpg

ಮುಂಬಯಿ: ವಿದ್ಯಾ ವಿಹಾರ್‌ ಪೂರ್ವದ ಸ್ಟೇಷನ್‌ ರೋಡ್‌ ನಲ್ಲಿರುವ ಶ್ರೀ ಶಾಸ್ತ ಸೇವಾ ಸಮಿತಿಯ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಮಂಡಲ ಸೇವಾ ಪೂಜೆಯು ಡಿ. 9ರಂದು ಮುಂಜಾನೆ 5 ರಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ತಿಲಕ್‌ ನಗರ ರೈಲು ನಿಲ್ದಾಣ ಸಮೀಪದ ನ್ಯೂ ತಿಲಕ್‌ ನಗರದ ಗ್ರೌಂಡ್‌ನ‌ ಸಾಯಿನಾಥ್‌ಕ್ರೀಡಾ ಮಂಡಳದ ಸಂಕುಲದಲ್ಲಿ  ನಡೆಯಿತು.

ದಿ| ಪಿ. ಆರ್‌. ಸೂರ್ಯ ನಾರಾಯಣ ಮೂರ್ತಿ ಗುರುಸ್ವಾಮಿ ಅವರ ಆಶೀರ್ವಾದಗಳೊಂದಿಗೆ ಮಣಿ ಕಂಠ ಗುರುಸ್ವಾಮಿ ಮುಲುಂಡ್‌, ಡೊಂಬಿವಲಿ ಆಜೆªಪಾಡಾದ ಹೆಬ್ರಿ ನಾರಾಯಣ ಗುರುಸ್ವಾಮಿ ಅವರ ನೇತೃತ್ವದಲ್ಲಿ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅರ್ಚಕ ಗುರುಪ್ರಸಾದ್‌ ಭಟ್‌ ಅವರ ಮುಂದಾಳತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.

ಧಾರ್ಮಿಕ ಕಾರ್ಯಕ್ರಮವಾಗಿ ಮುಂಜಾನೆ 5ರಿಂದ ನಾರಿಕೇಳ ಗಣ ಹೋಮ, ಶರಣು ಘೋಷ, ಬೆಳಗ್ಗೆ 6 ರಿಂದ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಬೆಳಗ್ಗೆ 7 ರಿಂದ ಐರೋಲಿಯ ಭಕ್ತವೃಂದದವರಿಂದ ವಿಷ್ಣು ಸಹಸ್ರನಾಮ, ಬೆಳಗ್ಗೆ 9 ರಿಂದ ದೀಪಾರಾಧನೆ, ಅಯ್ಯಪ್ಪ ಸಹಸ್ರನಾಮ, ಪೂರ್ವಾಹ್ನ 10.30 ರಿಂದ ಥಾಣೆಯ ಚಂದ್ರಶೇಖರ ಅವರಿಂದ ಸ್ಯಾಕೊÕಫೋನ್‌ ವಾದ್ಯ ಸಂಗೀತ, ಮಧ್ಯಾಹ್ನ 12.45 ರಿಂದ ನೈವೇದ್ಯಾಭಿಷೇಕ, ಮಹಾಪೂಜೆ, ಮಹಾ ಆರತಿ, ಮಧ್ಯಾಹ್ನ 1ರಿಂದ ಪಲ್ಲಪೂಜೆ ನಡೆಯಿತು.

ಮಧ್ಯಾಹ್ನ 1.15 ರಿಂದ ಮಹಾ ಅನ್ನಸಂತರ್ಪಣೆಯನ್ನು ಆಯೋಜಿಸಲಾ ಗಿದ್ದು, ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಅಪರಾಹ್ನ 2 ರಿಂದ ಶ್ರೀ ಮೂಕಾಂಬಿಕಾ ಭಜನಾ ಮಂಡಳಿ ಘನ್ಸೋಲಿ ಇವರಿಂದ ಗಾನಾಮೃತ, ಅಪರಾಹ್ನ 3 ರಿಂದ ಶ್ರೀ ಮಣಿಕಂಠ ಭಜನಾ ಮಂಡಳಿಯವರಿಂದ ಭಜನಾಮೃತವು ಸಂತದಾಸ ಶಿಬರೂರು ಸುರೇಶ್‌ ಎಲ್‌. ಶೆಟ್ಟಿ ಮತ್ತು ತಂಡದವರಿಂದ ನಡೆಯಿತು.

ಸಂಜೆ 4.30 ರಿಂದ ನೆರೂಲ್‌ ಶ್ರೀ ಮಹಾಕಾಳೇಶ್ವರ ಭಜನಾ ಮಂಡಳಿಯವರಿಂದ ಕೀರ್ತನಾ ಮೃತ, ಸಂಜೆ 6ರಿಂದ ಧಾರ್ಮಿಕ ಸಭೆ ಮತ್ತು ಗುರುವಂದನ ಕಾರ್ಯಕ್ರಮ ನೆರವೇರಿತು. ಸಂಜೆ 7 ರಿಂದ ಶ್ರಿ ಶಾಸ್ತ ಸೇವಾ ಸಮಿತಿ ಭಜನಾ ಮಂಡಳಿ ವಿದ್ಯಾವಿಹಾರ್‌ ಇದರ ಸತೀಶ್‌ ಸ್ವಾಮಿ ಇರ್ವತ್ತೂರು ಇವರಿಂದ ಹರಿನಾಮ ಸಂಕೀರ್ತನೆ, ರಾತ್ರಿ 8.30 ರಿಂದ ಅಯ್ಯಪ್ಪ ಅಲಂಕಾರ ಪೂಜೆ, ಡೊಂಬಿವಲಿ ಆಜೆªಪಾಡಾ ಶ್ರೀ ಅಯ್ಯಪ್ಪ ಮಂದಿರದ ನಾರಾಯಣ ಗುರುಸ್ವಾಮಿ ಇವರಿಂದ ಮಹಾಮಂಗಳಾರತಿ, ರಾತ್ರಿ 9 ರಿಂದ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಿತು.  ಈ ಎಲ್ಲಾ ಧಾರ್ಮಿಕ   ಕಾರ್ಯಕ್ರಮಗಳಲ್ಲಿ ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ದಾನಿಗಳು ಹಾಗೂ  ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸಮಿತಿಯ ಗೌರವಾಧ್ಯಕ್ಷ ಅಡ್ವೆ ದಿವಾಕರ ಶೆಟ್ಟಿ ಗುರುಸ್ವಾಮಿ, ಅಧ್ಯಕ್ಷ ಬೆಳ್ಮಣ್‌ ಪಾಂಡು ಶೆಟ್ಟಿ, ಉಪಾಧ್ಯಕ್ಷ ಪುತ್ತೂರು ಚಂದ್ರಶೇಖರ ರೈ, ಕಾರ್ಯದರ್ಶಿ ಗಿರೀಶ್‌ ಆರ್‌. ಶೆಟ್ಟಿ, ಕೋಶಾಧಿಕಾರಿ ಮರವೂರು ಸುದೇಶ ಶೆಟ್ಟಿ, ಜತೆ ಕೋಶಾಧಿಕಾರಿ ಎಲ್ಲೂರು ಶೇಖರ ಸಾಲ್ಯಾನ್‌, ಜತೆ ಕಾರ್ಯದರ್ಶಿ ಮಲ್ಲಿಕಾರ್ಜುನ ಗೌಡ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಅನೆಲಾ ಮಂಟಮೆ  ಸದಾಶಿವ ಶೆಟ್ಟಿ,  ಪೆರ್ಡೂರು ಸದಾನಂದ ಕುಲಾಲ್‌, ಕೊಲ್ಲೂರು ವೆಂಕಟೇಶ್‌ ಶೆಟ್ಟಿ, ಬೋಳ ಸಂತೋಷ್‌ ಸಾಲ್ಯಾನ್‌, ಎಳತ್ತೂರು ಪ್ರಸಾದ್‌ ಶೆಟ್ಟಿ, ಪುರುಷೋತ್ತಮ ಆಚಾರ್ಯ ಮೈಸೂರು, ಸಂತೆಕಟ್ಟೆ ನಿತ್ಯಾನಂದ ಶೆಟ್ಟಿ, ಕುಂಬ್ಳೆ ವಿಶ್ವನಾಥ ರೈ, ಗಣೇಶ್‌ ಶೆಟ್ಟಿ ಅನೆಲಾ ಮಂಟಮೇ, ಹರೀಶ್‌ ಕುರ್ಕಾಲ್‌, ಸಂಜೀವ ಸಾಲ್ಯಾನ್‌ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.