ಮುಲುಂಡ್‌ ಬಂಟ್ಸ್‌ ಹದಿಮೂರನೇ ವಾರ್ಷಿಕೋತ್ಸವ ಸಂಭ್ರಮಕ್ಕೆ ತೆರೆ


Team Udayavani, Dec 18, 2018, 5:09 PM IST

1712mum09a.jpg

ಮುಂಬಯಿ: ಬಂಟ ಸಮುದಾಯದ ವಿಶಾಲ  ಮನೋಧರ್ಮ ಸಮಾಜದ  ಪ್ರಗತಿಯ ಪ್ರತೀಕವಾಗಿದೆ. ಮುಂಬಯಿಯಂತಹ ಮಹಾ ನಗರದಲ್ಲಿ ನೆಲೆಸಿರುವ ಬಂಟ ಬಾಂಧವರ ಸಾಧನೆಯನ್ನು ಕಂಡಾಗ ಅಭಿಮಾನ ಉಕ್ಕಿ ಬರುತ್ತದೆ. ಇತರ ಜಾತಿ, ಧರ್ಮದವರೊಂದಿಗೆ, ಪ್ರಾಂತ್ಯದವರೊಂದಿಗೆ ಹೊಂದಿಕೊಳ್ಳುವ ಗುಣ ಬಂಟರ  ರಕ್ತದಲ್ಲಿ ಅಡಗಿದೆ. ಈ ಗುಣ ಬಂಟರನ್ನು ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಿದೆ. ಇದರೊಂದಿಗೆ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ-ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಆಧುನಿಕತೆಯನ್ನು ಸ್ವಾಗತಿಸುವ ಜೊತೆಗೆ ನಮ್ಮ ಮೂಲ ಸಂಸ್ಕೃತಿ, ನಮ್ಮ ತುಳು-ಕನ್ನಡ ಭಾಷೆ, ದೈವ ದೇವರ ಬಗೆಗಿನ ನಮ್ಮ ನಂಬಿಕೆ ಎಲ್ಲವೂ ಯುವ ಜನಾಂಗದಿಂದ  ದೂರವಾಗುತ್ತಿರುವುದು ಇದರ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಮೂಡಬಿದ್ರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ| ಮೋಹನ್‌ ಆಳ್ವ ಅಭಿಪ್ರಾಯಿಸಿದರು.

ಡಿ. 15ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆದ ಮುಲುಂಡ್‌ ಬಂಟ್ಸ್‌ ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಯುವ ಜನಾಂಗದಲ್ಲಿರುವ ಜ್ಞಾನ, ಶಕ್ತಿ, ಅವರಲ್ಲಿರುವ ಉತ್ಸಾಹ ಎಲ್ಲವನ್ನೂ ನಾವು ಸ್ವಾಗತಿಸುವುದರ ಜೊತೆಗೆ ಇಂದಿನ ಯುವ ವರ್ಗದಲ್ಲಿ ನಮ್ಮ ಮೂಲ ಆಚಾರ, ವಿಚಾರಗಳ ಬಗ್ಗೆ ಮನವರಿಕೆ ಮಾಡಬೇಕು. ಉಚ್ಚ ಶಿಕ್ಷಣ ಕೇವಲ ತರಗತಿಗೆ ಮಾತ್ರ ಸೀಮಿತವಾಗಿದ್ದು, ನಾವು ನಮ್ಮ ಆದರ್ಶಯುತ ಜೀವನ ಪದ್ಧತಿಯನ್ನು ಮೈಗೂಡಿಸಿಕೊಳ್ಳಬೇಕಾದರೆ ನಾವು ಬಯಲುಶಾಲೆಯ ವಿದ್ಯಾರ್ಥಿಗಳಾಗಬೇಕು. ನಾವೆಲ್ಲರು ನಮ್ಮ ಭಾಷೆ, ಸಂಸ್ಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಯತ್ನಶೀಲರಾಗಬೇಕು ಎಂದು ಕರೆನೀಡಿದರು.

ಬದುಕಿನ ಬಗ್ಗೆ ಜಾಗೃತರಾಗಬೇಕು
ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನಕುರ್ಕಿಲ್‌ಬೆಟ್ಟು ಸಂತೋಷ್‌ ಶೆಟ್ಟಿ ಅವರು ಮಾತನಾಡಿ, ನಮ್ಮ ಮಕ್ಕಳ ಬೆಳವಣಿಗೆ, ಅವರ ಜೀವನ ಶೈಲಿ, ನಮ್ಮ ನಾಳೆಯ ಬದುಕಿನ ಬಗ್ಗೆ ಜಾಗೃತರಾಗಬೇಕಾಗಿದೆ ಎನ್ನುವ ಮುನ್ಸೂಚನೆಯನ್ನು ನೀಡುತ್ತಿದೆ. ಹೊಟೇಲ್‌ ಉದ್ಯಮ ಬಂಟ ಸಮಾಜವನ್ನು ದೇಶ ವಿದೇಶಗಳಲ್ಲಿ ಪರಿಚಯಿಸಿದ ಹಿರಿಮೆಯನ್ನು ಹೊಂದಿದೆ. ತಂದೆಯ ಉದ್ಯಮವನ್ನು ಮಕ್ಕಳು ಮುನ್ನಡೆಸಲು ಹಿಂದೇಟು ಹಾಕುವ ಸ್ಥಿತಿಯನ್ನು ನಾವಿಂದು ಕಾಣುತ್ತಿದ್ದೇವೆ. ಮೂಢನಂಬಿಕೆಗಿಂತ ಮೂಲ ನಂಬಿಕೆಗೆ ಒತ್ತು ನೀಡುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ. ಪುಣೆಯಲ್ಲಿ ನಾವಿಂದು ಭವ್ಯ ಬಂಟರ ಭವನವನ್ನು ಕಟ್ಟು ವಲ್ಲಿ ಯಶಸ್ವಿಯಾಗಿದ್ದೇವೆ. ಇದು ಕೇವಲ ನನ್ನೊಬ್ಬನಿಂದ ಸಾಧ್ಯವಾದುದಲ್ಲ. ಇದರಲ್ಲಿ ದಾನಿಗಳ, ಸಂಘದ ಪದಾಧಿಕಾರಿಗಳು, ಸದಸ್ಯರ ಯೋಗದಾನ ಬಹಳಷ್ಟಿದೆ. ಈ ಭವನ ಕೇವಲ ಬಂಟರಿಗೆ ಮಾತ್ರವಲ್ಲ, ಎಲ್ಲಾ ಕನ್ನಡಿಗರ ಭವನವಾಗಿದೆ. ಭವನ ನಿರ್ಮಾಣಕ್ಕೆ ಸಹಕರಿಸಿದ ಎಲ್ಲರಿಗೂ ವಂದಿಸುತ್ತಿದ್ದೇನೆ ಎಂದರು.

ಸಮ್ಮಾನ
ಮುಲುಂಡ್‌ ಪರಿಸರದ ಜನಪ್ರಿಯ ವೈದ್ಯರಾದ ಡಾ| ವಿಜಯ್‌ ಶೆಟ್ಟಿ ಹಾಗೂ ಡಾ| ಮಯೂರಿ ವಿ. ಶೆಟ್ಟಿ ದಂಪತಿ ಮತ್ತು ಅಂತಾರಾಷ್ಟ್ರೀಯ ಚಿತ್ರಕಲಾವಿದ ದೇವದಾಸ್‌ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಗಣ್ಯರು ಸಮ್ಮಾನಿಸಿ ಗೌರವಿಸಿದರು. 
ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ವಸಂತ್‌ ಎನ್‌. ಶೆಟ್ಟಿ ಪಲಿಮಾರು, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವೇಣುಗೋಪಾಲ್‌ ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಉದಯ ಎನ್‌. ಶೆಟ್ಟಿ, ಗೌರವ ಕೋಶಾಧಿಕಾರಿ ಎ. ಹರ್ಷವರ್ಧನ ಶೆಟ್ಟಿ, ಜತೆ ಕಾರ್ಯದರ್ಶಿ ಸುಧಾಕರ ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಹರಿಪ್ರಸಾದ್‌ ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದ್‌ ಪಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮೋಹಿತ್‌ ಎಂ. ಶೆಟ್ಟಿ ಉಪಸ್ಥಿತರಿದ್ದರು.
ಮಹಿಳಾ ಸದಸ್ಯೆ ವಿನೋದಾ ರಾಮಕೃಷ್ಣ ಚೌಟ ಪ್ರಾರ್ಥನೆಗೈದರು. ಸಂಸ್ಥೆಯ ಮಾಜಿ ಅಧ್ಯಕ್ಷರುಗಳಾದ ಎಸ್‌. ಬಿ. ಶೆಟ್ಟಿ, ಡಾ| ಸತ್ಯಪ್ರಕಾಶ್‌ ಶೆಟ್ಟಿ, ಟ್ರಸ್ಟಿ ರಮೇಶ್‌ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಗಣ್ಯರು ಸಮಾರಂಭಕ್ಕೆ ಚಾಲನೆ ನೀಡಿದರು. 
ಉಪಾಧ್ಯಕ್ಷ ವಸಂತ್‌ ಎನ್‌. ಶೆಟ್ಟಿ ಸ್ವಾಗತಿಸಿದರು. ಜಯ ಸೂಡಾ, ಜತೆ ಕಾರ್ಯದರ್ಶಿ ಸುಧಾಕರ ಆರ್‌. ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಗಣ್ಯರನ್ನು ಅಧ್ಯಕ್ಷ ಪ್ರಕಾಶ್‌ ಶೆಟ್ಟಿ ಹುಂತ್ರಿಕೆ ಗೌರವಿಸಿದರು. ಕಾರ್ಯದರ್ಶಿ ಎನ್‌. ಉದಯ ಶೆಟ್ಟಿ ವಾರ್ಷಿಕ ವರದಿ ವಾಚಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಎಸ್‌. ಶೆಟ್ಟಿ ಅವರು ಮಹಿಳಾ ವಿಭಾಗದ ಹಾಗೂ ಯುವ ವಿಭಾಗದ ಅಧ್ಯಕ್ಷ  ಮೋಹಿತ್‌ ಶೆಟ್ಟಿ ಅವರು ಯುವ ವಿಭಾಗದ ವಾರ್ಷಿಕ ವರದಿ ವಾಚಿಸಿದರು. ಜತೆ ಕೋಶಾಧಿಕಾರಿ ಪ್ರಸಾದ್‌ ಶೆಟ್ಟಿ, ಶ್ರೀನಿವಾಸ್‌ ಶೆಟ್ಟಿ ಅವರು ಸಮ್ಮಾನ ಪತ್ರ ವಾಚಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.

ಸುವನೀತ್‌ ಶೆಟ್ಟಿ ಮತ್ತು ಲಹರಿ ಶೆಟ್ಟಿ ಅವರು ಸಂಪೂರ್ಣ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವೇಣುಗೋಪಾಲ್‌ ಶೆಟ್ಟಿ ವಂದಿಸಿದರು. ಸದಸ್ಯ-ಸದಸ್ಯೆಯರಿಂದ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು. ಮಹಿಳಾ ವಿಭಾಗದ ಸದಸ್ಯೆಯರುಗಳಾದ ರೂಪಾ ಶೆಟ್ಟಿ, ಸುಷ್ಮಾ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು. ಪ್ರಶಾಂತ್‌ ಸಿ. ಕೆ. ರಚಿಸಿ, ಕೃಷ್ಣರಾಜ್‌ ಶೆಟ್ಟಿ ನಿರ್ದೇಶನ, ವೇಣುಗೋಪಾಲ್‌ ಶೆಟ್ಟಿ ಅವರ ನಿರ್ವಹಣೆಯಲ್ಲಿ ಸದಸ್ಯ ಬಾಂಧವರಿಂದ ಮಲೆತ ಮೈಮೆ ತುಳು ಪೌರಾಣಿಕ ನಾಟಕ ಪ್ರದರ್ಶನಗೊಂಡಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

 ಮುಲುಂಡ್‌ ಪರಿಸರದ ಬಂಟ ಬಾಂಧವರ ಸರ್ವತೋಮುಖ ಅಭಿವೃದ್ಧಿಗಾಗಿ ಸ್ಥಾಪನೆಗೊಂಡ ಮುಲುಂಡ್‌ ಬಂಟ್ಸ್‌ ಇಂದು ಹದಿಮೂರು ವರ್ಷಗಳನ್ನು ಪೂರೈಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಸಂಸ್ಥೆಯ ಸಮಾಜಪರ ಯೋಜನೆಗಳನ್ನು ಸದಸ್ಯ ಬಾಂಧವರ ಮನೆ-ಮನಗಳಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದೇವೆ. ಗುತ್ತಿನ ಮನೆ ಎಂದೇ ಪ್ರಸಿದ್ಧಿಯನ್ನು ಪಡೆದ ಮುಲುಂಡ್‌ ಬಂಟ್ಸ್‌ನ ಜನಪ್ರಿಯತೆಯನ್ನು ಉಳಿಸಿ-ಬೆಳೆಸಿದ ಶ್ರೇಯಸ್ಸು ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯ ಬಾಂಧವರು, ದಾನಿಗಳಿಗೆ ಸಲ್ಲುತ್ತದೆ. ಸಂಸ್ಥೆಯು ಪ್ರಸ್ತುತ ನನ್ನ ಅಧ್ಯಕ್ಷತೆಯಲ್ಲಿ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗ, ಮಹಿಳಾ ವಿಭಾಗದೊಂದಿಗೆ ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಮುನ್ನಡೆಯುತ್ತಿದೆ ಎಂಬ ವಿಶ್ವಾಸ ನನಗಿದೆ.   ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಎಲ್ಲಾ ರೀತಿಯ ಸಮಾಜಪರ ಕಾರ್ಯಗಳಿಗೆ ಸರ್ವ ಸಹಕಾರ, ಪ್ರೋತ್ಸಾಹ ಸದಾಯಿರಲಿ.
   – ಪ್ರಕಾಶ್‌ ಶೆಟ್ಟಿ ಹುಂತ್ರಿಕೆ, ಅಧ್ಯಕ್ಷರು, ಮುಲುಂಡ್‌ ಬಂಟ್ಸ್‌ 

 ಕೇವಲ ಎಪ್ಪತ್ತೆ$çದು ಸದಸ್ಯರಿಂದ ಸ್ಥಾಪನೆಗೊಂಡ ಮುಲುಂಡ್‌ ಬಂಟ್ಸ್‌  ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಜಾತಿ, ಮತ, ಭೇದವಿಲ್ಲದೆ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಇನ್ನಿತರ ಕ್ಷೇತ್ರಗಳಲ್ಲಿ ಅಪಾರ ಸೇವೆಗೈದು ಬಂಟ ಬಾಂಧವರ ಪ್ರೀತ್ಯಾದರಗಳಿಗೆ ಪಾತ್ರವಾಗಿದೆ. ಸಂಸ್ಥೆಯ ಸಿದ್ಧಿ-ಸಾಧನೆಗಳು ಅಪಾರವಾಗಿದ್ದು, ನಮ್ಮ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ .

 ವಸಂತ  ಎನ್‌. ಶೆಟ್ಟಿ ಪಲಿಮಾರು, ಉಪಾಧ್ಯಕ್ಷರು, ಮುಲುಂಡ್‌ ಬಂಟ್ಸ್‌

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.