ಚಾರ್‌ಕೋಪ್‌ ಕನ್ನಡಿಗರ ಬಳಗದ 15 ನೇ ವಾರ್ಷಿಕ ಮಹಾಸಭೆ


Team Udayavani, Dec 19, 2018, 4:14 PM IST

1812mum01.jpg

ಮುಂಬಯಿ: ಸಂಸ್ಥೆ ಬೆಳೆಯುತ್ತಿದ್ದಂತೆ ಸಂಸ್ಥೆಯ ಕಾರ್ಯ ಕರ್ತರ ಜವಾಬ್ದಾರಿ ಹೆಚ್ಚಾಗುತ್ತದೆ. ಸಂಘಟನೆಯ ಮೂಲಕ ಸಂಸ್ಥೆಯನ್ನು ಭವಿಷ್ಯತ್ತಿನೆಡೆಗೆ ಕೊಂಡೊ ಯ್ಯಲು ಪದಾಧಿಕಾರಿಗಳು, ಸದಸ್ಯರು ಉತ್ಸುಕತೆಯಿಂದ ಕ್ರಿಯಾ ಶೀಲರಾಗಬೇಕು. ಆಗ ಮಾತ್ರ ಸಂಸ್ಥೆ ಗುಣಮಟ್ಟದ ಸಂಸ್ಥೆಯಾಗಿ ಬೆಳೆಯಲು ಸಾಧ್ಯ ಎಂದು ಚಾರ್‌ಕೋಪ್‌ ಕನ್ನಡಿಗರ ಬಳಗದ ಗೌರವಾಧ್ಯಕ್ಷ, ಸಂಸದ ಗೋಪಾಲ್‌ ಸಿ. ಶೆಟ್ಟಿ ಅವರು ನುಡಿದರು.

ಡಿ. 15ರಂದು ಪೊಯಿಸರ್‌ ಜಿಮಾVನದ ಸಭಾಗೃಹದಲ್ಲಿ ನಡೆದ ಚಾರ್‌ಕೋಪ್‌ ಕನ್ನಡಿಗರ ಬಳಗದ 15ನೇ ವಾರ್ಷಿಕ ಮಹಾ ಸಭೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದ ಅವರು, ಸಂಸ್ಥೆಯನ್ನು ಬೆಳವಣಿಗೆಯತ್ತ ಕೊಂಡೊಯ್ಯುವಾಗ ಸಂಸ್ಥೆಯಲ್ಲಿ ಕೆಲವು ಬದಲಾವಣೆಗಳು ಅನಿವಾರ್ಯ. ಆ ದೃಷ್ಟಿಯಿಂದ ಬಳಗದಲ್ಲಿ ಮಹಿಳಾ ವಿಭಾಗ, ಯುವ ವಿಭಾಗವನ್ನು ಸ್ಥಾಪಿಸಿ ಹೆಚ್ಚಿನ ಕಾರ್ಯಕ್ರಮಗಳಿಗೆ ಅನುವು ಮಾಡಿಕೊಡಬೇಕು. ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಅಭಿಮಾನ ಪ್ರತಿಯೊಬ್ಬರಿಗೂ ಇರಬೇಕು. ಜತೆಗೆ ಸಂಘದ ಕಾರ್ಯಕ್ರಮಗಳನ್ನು ನಿರ್ದಿಷ್ಟ ಸಮಯದೊಳಗೆ ಮುಗಿಸುವ ಮನೋಭಾವ ಕಾರ್ಯಕರ್ತರು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.

ಬಳಗದ ವಿಶ್ವಸ್ತರಾದ ಭಾಸ್ಕರ ಸರಪಾಡಿ ಅವರು ಮಾತನಾಡಿ, ಕಾರ್ಯಕಾರಿ ಸಮಿತಿಯ ಸದಸ್ಯರು ಪದವಿಗೆ ಗೌರವ ನೀಡಿ, ನಿಗದಿತ ಸಮಯದಲ್ಲಿ ಜರಗುವ ಸಭೆ, ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬದ್ಧರಾಗಿರಬೇಕು. ಬರೇ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಲ್ಲದೆ, ಸಾಹಿತ್ಯಕವಾಗಿಯೂ ನಾವು ಬೆಳೆಯಬೇಕು. ಈ ಮೊದಲು ಅಧ್ಯಕ್ಷ ರಾಗಿದ್ದ ಮಂಜುನಾಥ ಬನ್ನೂರು ಅವರು ಬಳಗಕ್ಕಾಗಿ ನೀಡಿದ ಸೇವೆ ಅಪಾರವಾಗಿದೆ ಎಂದರು.

ವಿಶ್ವಸ್ಥರಾದ ಎಂ. ಎಸ್‌. ರಾವ್‌, ಜಯ ಸಿ. ಶೆಟ್ಟಿ ಅವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಬಳಗವನ್ನು ಯಾವ ರೀತಿಯಲ್ಲಿ ಸುದೃಢಗೊಳಿಸಬಹುದು ಎಂಬುವು ದರ ಬಗ್ಗೆ ವಿವರ ನೀಡಿದರು. ಸಭಿಕರ ಪರವಾಗಿ ನಾರಾಯಣ ರಾವ್‌, ಉಮೇಶ್‌ ಸಾಲ್ಯಾನ್‌, ಎಂ. ಜಿ. ಭಟ್‌, ಮನೋಜ್‌ ಸಾಲ್ಯಾನ್‌, ಪ್ರವೀಣ್‌ ಶೆಟ್ಟಿ ಶಿಮಂತೂರು, ವಿಜಯ ಡಿ. ಪೂಜಾರಿ, ಯಶೋದಾ ಶೆಟ್ಟಿ, ಮಹೇಂದ್ರ ಕಾಂಚನ್‌ ಅವರು ಸಲಹೆ ಸೂಚನೆಗಳನ್ನು ನೀಡಿದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ಅಲ್ಲದೆ ಸಂಘದ ವಿವಿಧ ಸ್ಪರ್ಧೆಗಳ ವಿಜೇತರನ್ನು ಬಹು ಮಾನವನ್ನಿತ್ತು ಅಭಿನಂದಿ ಸಲಾಯಿತು. ಪುರೋಹಿತ ನಾಗೇಶ್‌ ಭಟ್‌ ಅವರು ದೀಪಪ್ರಜ್ವಲಿಸಿ ಮಹಾಸಭೆಗೆ ಚಾಲನೆ ನೀಡಿದರು. ವಾರ್ಷಿಕ ವರದಿಯನ್ನು ಸಭೆಯಲ್ಲಿ ಅನುಮೋದಿಸ ಲಾಯಿತು. ಗೌರವ ಕೋಶಾಧಿಕಾರಿ ಗೌರಿ ಡಿ. ಪಣಿಯಾಡಿ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಆಂತರಿಕ ಲೆಕ್ಕಪರಿಶೋಧಕರಾಗಿ ಸದಾಶಿವ ಸಿ. ಪೂಜಾರಿ ಮತ್ತು ಲೆಕ್ಕ ಪರಿಶೋಧಕರಾಗಿ ವಿನಯ ಸಂಜಯ್‌ ಅಸೋಸಿಯೇಟ್ಸ್‌ ಅವರನ್ನು ನೇಮಿಸಲಾಯಿತು.

ಜತೆ ಕೋಶಾಧಿಕಾರಿ ಲತಾ ಬಂಗೇರ ಅವರು ಪ್ರತಿಭಾವಂತ ವಿದ್ಯಾರ್ಥಿಗಳ ಯಾದಿಯನ್ನು ಓದಿದರು. ಮಹಿಳಾ ವಿಭಾಗದ ಶಾಂತಾ ಭಟ್‌ ಬಳಗದ ವತಿಯಿಂದ ನಡೆದ ವಿವಿಧ ಸ್ಪರ್ಧೆಗಳ ವಿಜೇತರ ಹೆಸರನ್ನು ಘೋಷಿಸಿದರು. ಬಳಗದ ಗೌರವ ಕಾರ್ಯದರ್ಶಿ ರಘುನಾಥ ಎನ್‌. ಶೆಟ್ಟಿ ಅವರು ವಾರ್ಷಿಕ ವರದಿ ಮಂಡಿಸಿ ಕಾರ್ಯಕ್ರಮ ನಿರ್ವಹಿಸಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿ ವಂದಿಸಿದರು. ಬಳಗದ ಉಪಾಧ್ಯಕ್ಷ ಕೃಷ್ಣ ಟಿ. ಅಮೀನ್‌  ಉಪಸ್ಥಿತರಿದ್ದರು. ಸದಸ್ಯರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. 

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.