ಮೀರಾರೋಡ್‌ ಶ್ರೀ ಬಾಲಾಜಿ ಸನ್ನಿಧಿ: ವರ್ಧಂತಿ ಉತ್ಸವ


Team Udayavani, Jan 23, 2019, 5:51 PM IST

2201mum10b.jpg

ಮುಂಬಯಿ: ಮೀರಾ ರೋಡ್‌ ಪೂರ್ವದ ಶ್ರೀ ಬಾಲಾಜಿ ಸನ್ನಿಧಿ ಪಲಿಮಾರು ಮಠದ ಏಳನೇ ವಾರ್ಷಿಕ ವರ್ಧಂತಿ ಉತ್ಸವವು ಜ. 21 ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. 

ಶ್ರೀ ವಿದ್ಯಾಧೀಶ ಶ್ರೀಪಾದಂಗಳವರ ದಿವ್ಯ ಪ್ರೇರಣೆ ಮತ್ತು ಶುಭಾಶೀರ್ವಾದಗಳೊಂದಿಗೆ  ಜರಗಿದ ಶ್ರೀ ದೇವರ ಉತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಮಹಾನಾ ರಾಯಣ ಅಷ್ಟಾಕ್ಷರ, ಮಂತ್ರ ಹವನ, ಬ್ರಹ್ಮ ಕಲಶ ಪ್ರತಿಷ್ಠಾಪೂಜೆ, ಬ್ರಹ್ಮಕಲಶಾ ಭಿಷೇಕ ನೆರವೇರಿತು.

ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಅದಮಾರು ಮಠದ ಕಿರಿಯ ಶ್ರೀಪಾಂದಗಳವರು ಪ್ರವಚನ ನೀಡಿ ಆಶೀರ್ವದಿಸಿದರು. ಅನಂತರ ಶ್ರೀಗಳಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಪ್ರಸಾದ ನಡೆಯಿತು.

ಸಂಜೆ 5ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ, ಶ್ರೀ ದುರ್ಗಾಪೂಜೆ, ಶ್ರೀದೇವರಿಗೆ ಪಲ್ಲಕ್ಕಿ ಉತ್ಸವದೊಂದಿಗೆ ರಥೋತ್ಸವ ಆರಂಭಗೊಂಡಿತು. ಆನಂತರ ಬಾಲಾಜಿ ಸನ್ನಿಧಿಯಿಂದ ಬ್ರಹ್ಮ ಮಂದಿರ ಹಾಗೂ ಅಲ್ಲಿಂದ ಮತ್ತೆ ಬಾಲಾಜಿ ಮಂದಿರವರೆಗೆ ರಥೋತ್ಸವವು ಜರಗಿತು. ಆನಂತರ ಬಲಿಪೂಜೆ, ಶ್ರೀ ರಂಗಪೂಜೆ, ಅಷ್ಠಾವಧಾ ನದೊಂದಿಗೆ ಅನ್ನದಾನ ಇನ್ನಿತರ ಸತ್ಕರ್ಮಗಳು ನಡೆಯಿತು.

ಆಶೀರ್ವಚನ
ಇದೇ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಠದ ವಿದ್ವಾನ್‌ ರಾಧಾಕೃಷ್ಣ ಭಟ್‌ ಬೆಳಗ್ಗೆಯ ಮಹಾನಾರಾಯಣ ಅಷ್ಠಾಕ್ಷರ ಮಂತ್ರ ಹವನದೊಂದಿಗೆ ಪ್ರಾರಂಭಗೊಂಡ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪರಿಪೂರ್ಣಗೊಂಡಿತು.

ಬಾಲಾಜಿ ಸನ್ನಿಧಿಯಲ್ಲಿ ಜರಗಿದ ವರ್ಧಂತಿ ಮಹೋತ್ಸವದಲ್ಲಿ ಶ್ರೀ ದೇವರ ಅನುಗ್ರಹದಿಂದ ಸಮಸ್ತ ಭಕ್ತರ ಆರೋಗ್ಯ ಶಾಂತಿ, ಉದ್ಯೋಗ, ಶಿಕ್ಷಣ, ಸುಖಶಾಂತಿ ನೆಲೆಸುವಂತಾಗಲಿ. ಭಕ್ತರ ಭಕ್ತಿಯು ಪರಿಪೂರ್ಣಗೊಂಡಾಗ ಭಗವಂತನಿಗೂ ನೆಮ್ಮದಿಯಾಗುವುದು ಎಂದು ನುಡಿದು ಸನ್ನಿಧಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು.

ವರ್ಧಂತಿ ಉತ್ಸವದ ಸೇವೆಯಲ್ಲಿ ಸಚ್ಚಿದಾನಂದ ದಂಪತಿ, ವಿಷ್ಣು ಪ್ರಸಾದ್‌ ಭಟ್‌, ಕಾರ್ತಿಕ್‌ ಭಟ್‌, ರಾಘವೇಂದ್ರ ನಕ್ಷತ್ರಿ, ಉದಯ ಶಂಕರ ಭಟ್‌, ಯತಿರಾಜ ಉಪಾಧ್ಯಾಯ, ವೆಂಕಟರಮಣ ಭಟ್‌, ಸುಬ್ರಹ್ಮಣ್ಯ ಭಟ್‌ ಹಾಗೂ ಪರಿವಾರ ಮತ್ತು ಜಗದೀಶ್‌ ಭಟ್‌ ಇವರುಗಳ ಸಹಯೋಗದೊಂದಿಗೆ ಕಾರ್ಯಕ್ರಮ ನಡೆದವು ವಿಷೇಶವಾಗಿ ರಥದ ಅಲಂಕಾರ ಸೇವೆಗೆ ಸುರೇಶ್‌ ಪೂಜಾರಿ, ಕರಮಚಂದ ಗೌಡ ಮೊದಲಾದವರು ಸಹಕರಿಸಿದರು. ಸ್ಥಳೀಯ ಅಸಂಖ್ಯಾತ ತುಳು-ಕನ್ನಡಿಗರ ಭಕ್ತರು ದಿನಪೂರ್ತಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಬಾಲಾಜಿಯ ದರ್ಶನ ಪಡೆದರು. 

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.