ನಲಸೋಪರ  ಶ್ರೀ ಶನೀಶ್ವರ ಮಂದಿರ:ಅಷ್ಟಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ


Team Udayavani, Feb 9, 2019, 5:16 PM IST

77.jpg

ಮುಂಬಯಿ: ಶತಮಾನಗಳ ಹಿಂದಿನ ಏಕಾಂಗಿತಕ್ಕೆ ಸಂಘಟನೆಯ ಸ್ವರೂಪ ನೀಡಿದ ಭಜನೆ ಇಂದು ದೇವಸ್ಥಾನಗಳಾಗಿ ಪ್ರಕಟವಾಗಿದೆ. 75 ವರ್ಷಗಳ ಇತಿಹಾಸ ಹೊಂದಿದ ಶ್ರೀ ಶನಿಮಹಾತ್ಮ ಪೂಜಾ ಸಮಿತಿ ಫೋರ್ಟ್‌ ಮುಂಬಯಿ ಇವರು ಶ್ರೀ ಗಣಪತಿ, ಶ್ರೀ ದುರ್ಗಾ, ನವಗ್ರಹ, ಶ್ರೀ ಶನೈಶ್ಚರ ಮತ್ತು ಶ್ರೀ ನಾಗದೇವರ ಆಕರ್ಷಕ ಶಿಲ್ಪಾ ಕೆತ್ತನೆಯೊಂದಿಗೆ ಶಿಲಾಮಯ ಗರ್ಭಗಡಿ, ಧ್ವಜಸ್ತಂಭ ಪ್ರತಿಷ್ಠೆಯ ಮೂಲಕ ಕರ್ನಾಟಕದ ಜನತೆ ಮಹಾರಾಷ್ಟ್ರದ ಮಣ್ಣಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ನಲಸೋಪರದ ಪರಿಸರ ಪವಿತ್ರ ಆಧ್ಯಾತ್ಮಿಕ ಕ್ಷೇತ್ರವಾಯಿತು. ನಿಮ್ಮ ಸಾಧನೆ ಸನಾತನ ಧರ್ಮದ ಪ್ರತಿಬಿಂಬವಾಯಿತು ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಕ್ಷೇತ್ರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಅಭಿಪ್ರಾಯಿಸಿದರು.

ಫೆ. 6 ರಂದು  ನಲಸೋಪರ ಪಶ್ಚಿಮದ ಶ್ರೀ ಶನಿಮಹಾತ್ಮ ಪೂಜಾ ಸಮಿತಿ ಫೋರ್ಟ್‌ ಮುಂಬಯಿ ಇದರ ಅಷ್ಟಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಐದನೇ ದಿನದ ಧ್ವಜಸ್ತಂಭ ಪ್ರತಿಷ್ಠೆ, ಧ್ವಜಾರೋಹಣ ಮೊದಲಾದ ಪೂಜಾ ಕೈಂಕರ್ಯದ ಧಾರ್ಮಿಕ ಸಭೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದ ಅವರು, ಹೊಟೇಲ್‌, ಕ್ಯಾಂಟೀನ್‌ಗಳಲ್ಲಿ ದುಡಿದು ಹಲವಾರು ಜವಾಬ್ದಾರಿಗಳ ನಡುವೆಯೂ ಬೆರಳೆಣಿಕೆಯ ಮಂದಿ ಸ್ಥಾಪಿಸಿದ ಈ ಸಂಸ್ಥೆ ಇಂದು ಧರ್ಮ ಸಂಸ್ಥಾಪನೆಗೆ ಭದ್ರ ತಳಹದಿ ನಿರ್ಮಿಸಿ, ಗಳಿಸಿದ ಸಂಪಾದನೆಯಲ್ಲಿ ಕಿಂಚಿತ್ತು ಕಾಣಿಕೆ ನೀಡಿದ ಪೂರ್ವಪರ ತ್ಯಾಗಮಯ ಜೀವನ, ನಿಸ್ವಾರ್ಥ ಸೇವೆ ಸಮಸ್ತ ಜನಾಂಗಕ್ಕೆ ಮಾರ್ಗದರ್ಶಕವಾಗಲಿ ಎಂದು ನುಡಿದರು.

ಪೊವಾಯಿ ಶ್ರೀ ರುಂಡಮಾಲಿನಿ ದೇವಸ್ಥಾನದ ಧರ್ಮದರ್ಶಿ ಸುವರ್ಣಬಾಬಾ ಅವರು ಮಾತನಾಡಿ, ಶ್ರೀ ಶನಿದೇವರ ಮತ್ತು ನಾಗದೇವರನ್ನು ಸ್ಥಾಪಿಸಿ ಬಂಧುತ್ವದ ಮೂಲಕ ಕೌಟುಂಬಿಕ ವಾತಾವರಣ ಪುನ:ಶ್ಚೇತನಗೊಂಡಿದೆ. ಪ್ರತಿ ಗ್ರಾಮಗಳ ಒಗ್ಗಟ್ಟು ದೇವಸ್ಥಾನಗಳ ಅಭಿವೃದ್ಧಿಯನ್ನು ಪ್ರತಿಬಿಂಬಿಸುತ್ತದೆ ಎಂದರು.

ಬ್ರಹ್ಮಕಲಶೋತ್ಸವ ಸಮಿತಿಯ  ಅಧ್ಯಕ್ಷ ಡಾ| ವಿರಾರ್‌ ಶಂಕರ್‌ ಶೆಟ್ಟಿ ಸಂಸ್ಥೆಯು ನಡೆದು ಬಂದ ಹಾದಿ, ಧ್ಯೇಯೋದ್ಧೇಶಗಳನ್ನು ವಿವರಿಸಿದರು. ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಸುಪ್ರೀಮ್‌ ಹೆರಿಟೇಜ್‌ನ ಸಿಎಂಡಿ ಶಿವರಾಮ ಶೆಟ್ಟಿ ಅಜೆಕಾರು, ನೆರೂಲ್‌ ಶನಿಮಂದಿರದ ಧರ್ಮದರ್ಶಿ ರಮೇಶ್‌ ಪೂಜಾರಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ ಶ್ಯಾಮ್‌ ಶೆಟ್ಟಿ, ಬಂಟ್ಸ್‌ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್‌ ಶೆಟ್ಟಿ ತೆಳ್ಳಾರ್‌, ಬಂಟರ ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಲತಾ ಜಯರಾಮ್‌ ಶೆಟ್ಟಿ, ಕುಲಾಲ ಸಂಘ ಮುಂಬಯಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಮಮತಾ ಎಸ್‌. ಗುಜರನ್‌, ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು, ಭವಾನಿ ಫೌಂಡೇಷನ್‌ ಸಂಸ್ಥಾಪಕ ಕೆ. ಡಿ. ಶೆಟ್ಟಿ, ಬಳ್ಳಾರಿ ಬಂಟರ ಸಂಘದ ಅಧ್ಯಕ್ಷ ಸುರೇಶ್‌ ಶೆಟ್ಟಿ ಗುರ್ಮೆ, ಶ್ರೀನಿಧಿ ಆಚಾರ್ಯ, ಇಂದ್ರಜಿತ್‌ ಸಿಂಗ್‌ ಅವರು ಮಾತನಾಡಿ ಶುಭಹಾರೈಸಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಉಪಾಧ್ಯಕ್ಷರುಗಳಾದ ಪಾಂಡು ಎಲ್‌. ಶೆಟ್ಟಿ, ಹರೀಶ್‌ ಶೆಟ್ಟಿ ಗುರ್ಮೆ, ಶಶಿಧರ ಶೆಟ್ಟಿ, ರಮೇಶ್‌ ಕೊಠಾರಿ, ಶ್ರೀಧರ ಪೂಜಾರಿ, ನಂದಕುಮಾರ್‌ ಕುಂಬ್ಳೆ, ಕಾರ್ಯದರ್ಶಿ ವಸಂತ ಶೆಟ್ಟಿ, ಕೋಶಾಧಿಕಾರಿ ಸುಂದರ ಬೆಳ್ಚಡ, ಪದಾಧಿಕಾರಿಗಳಾದ ಜಗನ್ನಾಥ್‌ ರೈ, ಜಯಂತ್‌ ಪಕ್ಕಳ, ಶಂಕರ್‌ ಆಳ್ವ, ಶ್ರೀನಿವಾಸ ಆಳ್ವ, ಸದಾಶಿವ ಕರ್ಕೇರ, ಮೋಹನ್‌ ಬಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬೆಳಗ್ಗೆ ಶ್ರೀ ಶನಿಕ್ಷೇತ್ರದಲ್ಲಿ ಕೊಯ್ಯೂರು ನಂದಕುಮಾರ್‌ ತಂತ್ರಿ ಅವರ ಪೌರೋಹಿತ್ಯದಲ್ಲಿ ಶ್ರೀ ಶನಿದೇವರ, ಶ್ರೀ ಗಣಪತಿ, ಶ್ರೀ ದುರ್ಗಾ ನವಗ್ರಹ ಪ್ರತಿಷ್ಠೆ, ಅಷ್ಟಬಂಧ ಲೇಪನ, ಜೀವ ಕಲಶಾಭಿಷೇಕ, ಧ್ವಜಸ್ತಂಭ ಪ್ರತಿಷ್ಠೆ, ಧ್ವಜಾರೋಹಣ, ಸಂಜೆ ವೇದಮೂರ್ತಿ ಶ್ರೀಕಾಂತ ಸಾಮಗರು ಬಡಗು ಪೇಟೆ ಇವರ ನೇತೃತ್ವದಲ್ಲಿ ದೇವರ ಉತ್ಸವ, ಸಹಸ್ರಕುಂಭ, ಸಹಿತ ಬ್ರಹ್ಮಕಲಶಾಧಿವಾಸ, ಅಧಿವಾಸ ಹೋಮಗಳು ಜರಗಿತು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೀರಾ  -ಡಹಾಣೂ ಬಂಟ್ಸ್‌ ಇದರ ನಾಯಾYಂವ್‌-ವಿರಾರ್‌ ವಲಯದ ಪ್ರಾಯೋಜಕತ್ವದಲ್ಲಿ ಕಾರ್ನಿಕದ ವೈಭವ ಪ್ರದರ್ಶನಗೊಂಡಿತು. ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಕಣಂಜಾರು, ವಿಜಯ ಶೆಟ್ಟಿ ಕುತ್ತೆತ್ತೂರು ಕಾರ್ಯಕ್ರಮ ನಿರ್ವಹಿಸಿದರು. ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.