ಕುಲಾಲ ಸಂಘ ಮುಂಬಯಿ ಇದರ ವಾರ್ಷಿಕ ಕ್ರೀಡೋತ್ಸವ 


Team Udayavani, Feb 10, 2019, 5:12 PM IST

0902mum05.jpg

ಮುಂಬಯಿ: ಕುಲಾಲ ಸಂಘ ಮುಂಬಯಿ ಇದರ ವಾರ್ಷಿಕ ಕ್ರೀಡೋತ್ಸವವು ಸಂಸ್ಥೆಯ ಸಿಎಸ್‌ಟಿ-ಮುಲುಂಡ್‌-ಮಾನ್‌ಖುದ್‌ì ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಫೆ. 3ರಂದು ಚೆಂಬೂರಿನ ಆರ್‌ಸಿಎಫ್‌ ಕಾಲನಿಯಲ್ಲಿರುವ ನ್ಪೋರ್ಟ್ಸ್ ಕ್ಲಬ್‌ನಲ್ಲಿ ದಿನಪೂರ್ತಿ ವೈವಿಧ್ಯಮಯ ಕ್ರೀಡಾ ಸ್ಪರ್ಧೆಗಳೊಂದಿಗೆ ಜರಗಿತು.

ಬೆಳಗ್ಗೆ ಜ್ಯೋತಿಷ್ಯ, ಪುರೋಹಿತ ಡಾ| ಎಂ. ಜೆ. ಪ್ರವೀಣ್‌ ಭಟ್‌ ಇವರು ದೀಪ ಪ್ರಜ್ವಲಿಸಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಬಾರಿ ಸಂಖ್ಯೆಯಲ್ಲಿ ಸಮಾಜ ಬಾಂಧವರನ್ನು ಒಗ್ಗೂಡಿಸಿಕೊಂಡು ಕ್ರೀಡಾಕೂಟವನ್ನು ಆಯೋಜಿಸಿದ ಕುಲಾಲ ಸಂಘದಸಿಎಸ್‌ಟಿ-ಮುಲುಂಡ್‌-ಮಾನ್‌ಖುದ್‌ì ಸ್ಥಳೀಯ ಸಮಿತಿಯ ಕಾರ್ಯ ವೈಖರಿ ಅಭಿನಂದನೀಯವಾಗಿದೆ. ಆರೋಗ್ಯ ಭಾಗ್ಯವನ್ನು ಕಾಪಾಡಿಕೊಳ್ಳಲು ಎಲ್ಲರಿಗೂ ಕ್ರೀಡೆ ಅನಿವಾರ್ಯವಾಗಿದೆ. ಕ್ರೀಡೋತ್ಸವಗಳಿಂದ ಆರೋಗ್ಯ ಮತ್ತು ದೇಹ ಸಮತೋಲನದಲ್ಲಿರುತ್ತದೆ. ಕೇಂದ್ರ ಸರಕಾರವು ಕ್ರೀಡೆಗೆ ವಿಶೇಷವಾದ ಸೌಲಭ್ಯವನ್ನು ನೀಡುತ್ತಿದೆ. ಸಂಘಟನೆಯ ಬಲವೃದ್ಧಿಗಾಗಿ ಕ್ರೀಡೋತ್ಸವ ಅನಿವಾರ್ಯವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ನುಡಿದು ಶುಭ ಹಾರೈಸಿದರು.

ಕ್ರೀಡಾಕೂಟವನ್ನು ಸಾಂಕೇತಿಕವಾಗಿ ಬಲೂನ್‌ ಹಾರಿಸಿ ಉದ್ಘಾಟಿಸಿದ ಕುಲಾಲ ಸಂಘದ ಅಧ್ಯಕ್ಷ ದೇವದಾಸ್‌ ಕುಲಾಲ್‌ ಅವರು ಮಾತನಾಡಿ, ನಮ್ಮೊಳಗಿರುವ ಕ್ರೀಡಾ ಪ್ರತಿಭೆಯನ್ನು ಹೊರ ಹೊಮ್ಮಿಸಲು ಆಯೋಜಿಸಿದ ಈ ಕ್ರೀಡಾಕೂಟದಲ್ಲಿ ಯಾವುದೇ ರೀತಿಯ ವೈಯಕ್ತಿಕ ದ್ವೇಷಗಳು ಬಾರದಂತೆ ಸಮಾಜ ಬಾಂಧವರೆಲ್ಲರಲ್ಲಿ ಕ್ರೀಡಾ  ಮನೋಭಾವನೆ ಬೆಳೆಯಬೇಕು. ಸಮಾಜ ಬಾಂಧವರು ಕ್ರೀಡೆಯು ಮೇಲೆ ಅಭಿಮಾನವನ್ನು ಹೊಂದಿರಬೇಕು. ಭಾರೀ ಸಂಖ್ಯೆಯಲ್ಲಿ ಯುವಕ-ಯುವತಿಯರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವುದು ಸಂಘದ ಅಭಿವೃದ್ಧಿಯ ದ್ಯೋತಕವಾಗಿದೆ. ದಿನಪೂರ್ತಿ ನಡೆಯುತ್ತಿರುವ ಕ್ರೀಡಾಕೂಟ ಮತ್ತು ತಾಳ್ಮೆಯೊಂದಿಗೆ ನಡೆಯಲಿ ಎಂದರು.

ವೇದಿಕೆಯಲ್ಲಿ ಜ್ಯೋತಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್‌ ಸಾಲ್ಯಾನ್‌, ಕುಲಾಲ ಸಂಘದ ಉಪಾಧ್ಯಕ್ಷ ರಘು ಮೂಲ್ಯ ಪಾದೆಬೆಟ್ಟು, ಕಾರ್ಯದರ್ಶಿ ಕರುಣಾಕರ ಸಾಲ್ಯಾನ್‌, ಕೋಶಾಧಿಕಾರಿ ಜಯ ಅಂಚನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್‌. ಗುಜರನ್‌, ಅಮೂಲ್ಯ ಸಂಪಾದಕ ಶಂಕರ್‌ ವೈ. ಮೂಲ್ಯ, ಮೀರಾ-ವಿರಾರ್‌ ಸಮಿತಿಯ ಕಾರ್ಯಾಧ್ಯಕ್ಷ ಸುಂದರ್‌ ಮೂಲ್ಯ,  ಚರ್ಚ್‌ಗೇಟ್‌ ಸಮಿತಿಯ ಕಾರ್ಯಾಧ್ಯಕ್ಷ ಗಣೇಶ್‌ ಸಾಲ್ಯಾನ್‌, ಥಾಣೆ-ಕರ್ಜತ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮಣ್‌ ಸಿ. ಮೂಲ್ಯ, ನವಿಮಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಾಸು ಬಂಗೇರ, ಕುಲಾಲ ಸಂಘದ ಮಂಗಳೂರು ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ಬಂಗೇರ, ಐರೋಲಿಯ ಉದ್ಯಮಿ ದಿವಾಕರ ಮೂಲ್ಯ, ಸಿಎಸ್‌ಟಿ ಮುಲುಂಡ್‌ನ‌ ಕಾರ್ಯಾಧ್ಯಕ್ಷ ಶೇಖರ ಬಿ. ಮೂಲ್ಯ, ಉಪ ಕಾರ್ಯಾಧ್ಯಕ್ಷ ಸುಂದರ ಎನ್‌. ಮೂಲ್ಯ, ಕಾರ್ಯದರ್ಶಿ ಸುರೇಶ್‌ ಬಂಜನ್‌, ಕೋಶಾಧಿಕಾರಿ ರಾಜೇಶ್‌ ಬಂಜನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಇಂದಿರಾ ಆರ್‌. ಬಂಜನ್‌, ಕ್ರೀಡಾ ವಿಭಾಗದ ಮುಖ್ಯಸ್ಥರುಗಳಾದ ಮಹೇಶ್‌ ಸಾಲ್ಯಾನ್‌, ಸುರೇಖಾ ರತನ್‌, ಚೇತನ್‌ ಡಿ. ಬಂಗೇರ, ವಿನೀತ್‌ ಜಿ. ಸಾಲ್ಯಾನ್‌, ಸಂಜೀವ ಎನ್‌. ಬಂಗೇರ, ಸೂರಜ್‌ ಎಸ್‌. ಹಂಡೇಲ್‌, ಕವಿತಾ ಸಿ. ಹಾಂಡ, ಮಲೈಕಾ ಎಸ್‌. ಮೂಲ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅರುಣಾಕ್ಷೀ ಮೂಲ್ಯ, ಸುರೇಶ್‌ ಬಂಜನ್‌ ನಿರ್ವಹಿಸಿದರು. ಕ್ರೀಡಾಕೂಟದ ಜ್ಯೋತಿಯನ್ನು ಸಿಎಸ್‌ಟಿ ಮುಲುಂಡ್‌ನ‌ ಕಾರ್ಯಾಧ್ಯಕ್ಷ ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿದ ಬಳಿಕ ಮುಂದಿನ ವರ್ಷ ಕ್ರೀಡಾಕೂಟವನ್ನು ಆಯೋಜಿಸಲಿರುವ ನವಿಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಾಸು ಬಂಗೇರ ಅವರಿಗೆ ದೇವದಾಸ್‌ ಕುಲಾಲ ಹಸ್ತಾಂತರಿಸಿದರು. ಬಳಿಕ ಬಾರಿ ಸಂಖ್ಯೆಯಲ್ಲಿ ಸೇರಿದ ಕುಲಾಲ ಸಮಾಜ ಬಾಂಧವರಿಗೆ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳು ನಡೆದವು.
 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.