ಕುಲಾಲ ಸಂಘ ಮುಂಬಯಿ ಇದರ ವಾರ್ಷಿಕ ಕ್ರೀಡೋತ್ಸವ
Team Udayavani, Feb 10, 2019, 5:12 PM IST
ಮುಂಬಯಿ: ಕುಲಾಲ ಸಂಘ ಮುಂಬಯಿ ಇದರ ವಾರ್ಷಿಕ ಕ್ರೀಡೋತ್ಸವವು ಸಂಸ್ಥೆಯ ಸಿಎಸ್ಟಿ-ಮುಲುಂಡ್-ಮಾನ್ಖುದ್ì ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಫೆ. 3ರಂದು ಚೆಂಬೂರಿನ ಆರ್ಸಿಎಫ್ ಕಾಲನಿಯಲ್ಲಿರುವ ನ್ಪೋರ್ಟ್ಸ್ ಕ್ಲಬ್ನಲ್ಲಿ ದಿನಪೂರ್ತಿ ವೈವಿಧ್ಯಮಯ ಕ್ರೀಡಾ ಸ್ಪರ್ಧೆಗಳೊಂದಿಗೆ ಜರಗಿತು.
ಬೆಳಗ್ಗೆ ಜ್ಯೋತಿಷ್ಯ, ಪುರೋಹಿತ ಡಾ| ಎಂ. ಜೆ. ಪ್ರವೀಣ್ ಭಟ್ ಇವರು ದೀಪ ಪ್ರಜ್ವಲಿಸಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಬಾರಿ ಸಂಖ್ಯೆಯಲ್ಲಿ ಸಮಾಜ ಬಾಂಧವರನ್ನು ಒಗ್ಗೂಡಿಸಿಕೊಂಡು ಕ್ರೀಡಾಕೂಟವನ್ನು ಆಯೋಜಿಸಿದ ಕುಲಾಲ ಸಂಘದಸಿಎಸ್ಟಿ-ಮುಲುಂಡ್-ಮಾನ್ಖುದ್ì ಸ್ಥಳೀಯ ಸಮಿತಿಯ ಕಾರ್ಯ ವೈಖರಿ ಅಭಿನಂದನೀಯವಾಗಿದೆ. ಆರೋಗ್ಯ ಭಾಗ್ಯವನ್ನು ಕಾಪಾಡಿಕೊಳ್ಳಲು ಎಲ್ಲರಿಗೂ ಕ್ರೀಡೆ ಅನಿವಾರ್ಯವಾಗಿದೆ. ಕ್ರೀಡೋತ್ಸವಗಳಿಂದ ಆರೋಗ್ಯ ಮತ್ತು ದೇಹ ಸಮತೋಲನದಲ್ಲಿರುತ್ತದೆ. ಕೇಂದ್ರ ಸರಕಾರವು ಕ್ರೀಡೆಗೆ ವಿಶೇಷವಾದ ಸೌಲಭ್ಯವನ್ನು ನೀಡುತ್ತಿದೆ. ಸಂಘಟನೆಯ ಬಲವೃದ್ಧಿಗಾಗಿ ಕ್ರೀಡೋತ್ಸವ ಅನಿವಾರ್ಯವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ನುಡಿದು ಶುಭ ಹಾರೈಸಿದರು.
ಕ್ರೀಡಾಕೂಟವನ್ನು ಸಾಂಕೇತಿಕವಾಗಿ ಬಲೂನ್ ಹಾರಿಸಿ ಉದ್ಘಾಟಿಸಿದ ಕುಲಾಲ ಸಂಘದ ಅಧ್ಯಕ್ಷ ದೇವದಾಸ್ ಕುಲಾಲ್ ಅವರು ಮಾತನಾಡಿ, ನಮ್ಮೊಳಗಿರುವ ಕ್ರೀಡಾ ಪ್ರತಿಭೆಯನ್ನು ಹೊರ ಹೊಮ್ಮಿಸಲು ಆಯೋಜಿಸಿದ ಈ ಕ್ರೀಡಾಕೂಟದಲ್ಲಿ ಯಾವುದೇ ರೀತಿಯ ವೈಯಕ್ತಿಕ ದ್ವೇಷಗಳು ಬಾರದಂತೆ ಸಮಾಜ ಬಾಂಧವರೆಲ್ಲರಲ್ಲಿ ಕ್ರೀಡಾ ಮನೋಭಾವನೆ ಬೆಳೆಯಬೇಕು. ಸಮಾಜ ಬಾಂಧವರು ಕ್ರೀಡೆಯು ಮೇಲೆ ಅಭಿಮಾನವನ್ನು ಹೊಂದಿರಬೇಕು. ಭಾರೀ ಸಂಖ್ಯೆಯಲ್ಲಿ ಯುವಕ-ಯುವತಿಯರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವುದು ಸಂಘದ ಅಭಿವೃದ್ಧಿಯ ದ್ಯೋತಕವಾಗಿದೆ. ದಿನಪೂರ್ತಿ ನಡೆಯುತ್ತಿರುವ ಕ್ರೀಡಾಕೂಟ ಮತ್ತು ತಾಳ್ಮೆಯೊಂದಿಗೆ ನಡೆಯಲಿ ಎಂದರು.
ವೇದಿಕೆಯಲ್ಲಿ ಜ್ಯೋತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್ ಸಾಲ್ಯಾನ್, ಕುಲಾಲ ಸಂಘದ ಉಪಾಧ್ಯಕ್ಷ ರಘು ಮೂಲ್ಯ ಪಾದೆಬೆಟ್ಟು, ಕಾರ್ಯದರ್ಶಿ ಕರುಣಾಕರ ಸಾಲ್ಯಾನ್, ಕೋಶಾಧಿಕಾರಿ ಜಯ ಅಂಚನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್. ಗುಜರನ್, ಅಮೂಲ್ಯ ಸಂಪಾದಕ ಶಂಕರ್ ವೈ. ಮೂಲ್ಯ, ಮೀರಾ-ವಿರಾರ್ ಸಮಿತಿಯ ಕಾರ್ಯಾಧ್ಯಕ್ಷ ಸುಂದರ್ ಮೂಲ್ಯ, ಚರ್ಚ್ಗೇಟ್ ಸಮಿತಿಯ ಕಾರ್ಯಾಧ್ಯಕ್ಷ ಗಣೇಶ್ ಸಾಲ್ಯಾನ್, ಥಾಣೆ-ಕರ್ಜತ್ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮಣ್ ಸಿ. ಮೂಲ್ಯ, ನವಿಮಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಾಸು ಬಂಗೇರ, ಕುಲಾಲ ಸಂಘದ ಮಂಗಳೂರು ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ಬಂಗೇರ, ಐರೋಲಿಯ ಉದ್ಯಮಿ ದಿವಾಕರ ಮೂಲ್ಯ, ಸಿಎಸ್ಟಿ ಮುಲುಂಡ್ನ ಕಾರ್ಯಾಧ್ಯಕ್ಷ ಶೇಖರ ಬಿ. ಮೂಲ್ಯ, ಉಪ ಕಾರ್ಯಾಧ್ಯಕ್ಷ ಸುಂದರ ಎನ್. ಮೂಲ್ಯ, ಕಾರ್ಯದರ್ಶಿ ಸುರೇಶ್ ಬಂಜನ್, ಕೋಶಾಧಿಕಾರಿ ರಾಜೇಶ್ ಬಂಜನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಇಂದಿರಾ ಆರ್. ಬಂಜನ್, ಕ್ರೀಡಾ ವಿಭಾಗದ ಮುಖ್ಯಸ್ಥರುಗಳಾದ ಮಹೇಶ್ ಸಾಲ್ಯಾನ್, ಸುರೇಖಾ ರತನ್, ಚೇತನ್ ಡಿ. ಬಂಗೇರ, ವಿನೀತ್ ಜಿ. ಸಾಲ್ಯಾನ್, ಸಂಜೀವ ಎನ್. ಬಂಗೇರ, ಸೂರಜ್ ಎಸ್. ಹಂಡೇಲ್, ಕವಿತಾ ಸಿ. ಹಾಂಡ, ಮಲೈಕಾ ಎಸ್. ಮೂಲ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಅರುಣಾಕ್ಷೀ ಮೂಲ್ಯ, ಸುರೇಶ್ ಬಂಜನ್ ನಿರ್ವಹಿಸಿದರು. ಕ್ರೀಡಾಕೂಟದ ಜ್ಯೋತಿಯನ್ನು ಸಿಎಸ್ಟಿ ಮುಲುಂಡ್ನ ಕಾರ್ಯಾಧ್ಯಕ್ಷ ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿದ ಬಳಿಕ ಮುಂದಿನ ವರ್ಷ ಕ್ರೀಡಾಕೂಟವನ್ನು ಆಯೋಜಿಸಲಿರುವ ನವಿಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಾಸು ಬಂಗೇರ ಅವರಿಗೆ ದೇವದಾಸ್ ಕುಲಾಲ ಹಸ್ತಾಂತರಿಸಿದರು. ಬಳಿಕ ಬಾರಿ ಸಂಖ್ಯೆಯಲ್ಲಿ ಸೇರಿದ ಕುಲಾಲ ಸಮಾಜ ಬಾಂಧವರಿಗೆ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’