ಸಿರಿನಾಡ ವೆಲ್ಫೇರ್‌ ಅಸೋಸಿಯೇಶನ್‌: ಉಚಿತ ವೈದ್ಯಕೀಯ ಶಿಬಿರ


Team Udayavani, Feb 10, 2019, 5:17 PM IST

0802mum08.jpg

ಡೊಂಬಿವಲಿ: ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ಜನರ ಆರೋಗ್ಯದತ್ತ ಗಮನ ಹರಿಸಿ ಪ್ರಧಾನ ಸಮಿತಿಯ ಸಹಕಾರ ದೊಂದಿಗೆ ಯುವ ವಿಭಾಗವು ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿರುವುದು ಅಭಿನಂದನೀಯ.

ಇಂದಿನ ಈ ವೈದ್ಯ ಕೀಯ ಶಿಬಿರದಲ್ಲಿ ನನ್ನ ಒಡ ನಾಟದಲ್ಲಿರುವ ವೈದ್ಯರು ರವಿ ವಾರದ ರಜೆಯನ್ನು ಲೆಕ್ಕಿಸದೆ ಸೇವಾ ಮನಮನೋಭಾವದಿಂದ ಶಿಬಿರದಲ್ಲಿ ಪಾಲ್ಗೊಂಡಿದ್ದು, ಎಲ್ಲಾ ವೈದ್ಯರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ. ಜನರನ್ನು ಕಾಡುವ ಸಿಹಿ ಮೂತ್ರ ಕಾಯಿಲೆಯಲ್ಲದೆ ಇನ್ನಿತರ ಖಾಯಿಲೆಯಿಂದ ಬಳಲುತ್ತಿರುವವರು ಇಂದು ಉಪಸ್ಥಿತರಿರುವ ವೈದ್ಯರ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆಯನ್ನು ಪಡೆಯಲು ಮುಂದಾದರೆ ಅವರಿಗೆ ಸಹಕರಿಸಲು ನಾವು ಸಿದ್ಧರಿದ್ದೇವೆ. ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ನಲ್ಲಿ ಉತ್ಸಾಹಿ ತರುಣ-ತರುಣಿಯರ ದಂಡೆ ಇರು ವುದರಿಂದ ಇಂತಹ ಶಿಬಿರಗಳನ್ನು ಆಯೋಜಿಸಲು ಸಮಸ್ಯೆಗಳು ಎದುರಾಗದು. ದಿನನಿತ್ಯದ ಜಂಜಾಟದ ಮಧ್ಯೆ ಆರೋಗ್ಯ ಭಾಗ್ಯದೆಡೆಗೆ ಹೆಚ್ಚಿನ ನಿಗಾ ವಹಿಸುವುದು ಪ್ರತಿ ಯೊಬ್ಬರ ಕರ್ತವ್ಯವಾಗಬೇಕು. ಎಂದು ಡೊಂಬಿವಲಿ ಸಿಟಿ ಆಸ್ಪತ್ರೆಯ ಪ್ರಸಿದ್ಧ ಮೂಳೆತಜ್ಞ ಡಾ| ವಿ. ಎಂ. ಶೆಟ್ಟಿ ಅವರು ನುಡಿದರು.

ಫೆ. 3ರಂದು ಡೊಂಬಿವಲಿ ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಯುವ ವಿಭಾಗದ ವತಿಯಿಂದ ಸಂಸ್ಥೆಯ ಕಚೇರಿ ಯಲ್ಲಿ ನಡೆದ ಉಚಿತ ವೈದ್ಯಕೀಯ ಶಿಬಿರಕ್ಕೆ ಚಾಲನೆ ನೀಡಿ ಮಾತ ನಾಡಿದ ಅವರು,  ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ನ ಸಮಾಜ ಪರ ಕಾರ್ಯಗಳನ್ನು ಕಂಡಾಗ ಸಂತೋಷವಾಗುತ್ತಿದೆ. ಸಂಸ್ಥೆಯ ಇಂತಹ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಸದಾಯಿರಲಿ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಕರ್ನಾಟಕ ಸಂಘ ಡೊಂಬಿವಲಿ ಇದರ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ ಇವರು ಮಾತನಾಡಿ, ಯುವಕರು ಸಮಾಜದ ಮುಖ್ಯವಾಹಿನಿಯಲ್ಲಿ  ಸಕ್ರಿಯವಾಗಬೇಕು. ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ನ ಯುವ ವಿಭಾಗವು ಸಾಂಸ್ಕೃತಿಕ,  ಕ್ರೀಡಾ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆ ಅಪಾರವಾಗಿದೆ. ಜನರ ಆರೋಗ್ಯದ ಕಡೆಗೆ ಗಮನ ಹರಿಸಿ ಪ್ರಧಾನ ಸಮಿತಿಯ ಸಹಕಾರ ದೊಂದಿಗೆ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿ ಕಾರ್ಯ ಪ್ರವೃತ್ತರಾಗಿರುವ ಕಾರ್ಯವೈಖರಿ ಅಭಿ ನಂದನೀಯವಾಗಿದೆ. ಇಂಥ ಜನಪರ ಕಾರ್ಯಗಳನ್ನು ಪ್ರತಿ ವರ್ಷ ನಡೆಯುತ್ತಿರಬೇಕು ಎಂದರು.

ಪ್ರಾರಂಭದಲ್ಲಿ ಅತಿಥಿ-ಗಣ್ಯರು ದೀಪ ಪ್ರಜ್ವಲಿಸಿ ವೈದ್ಯಕೀಯ ಶಿಬಿರಕ್ಕೆ ಚಾಲನೆ ನೀಡಿದರು. ವಸಂತ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಯುವ ವಿಭಾಗದ ಜತೆ ಕಾರ್ಯದರ್ಶಿ ಅರ್ಚನಾ ಜೆ. ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಸಂಘದ ಪದಾಧಿಕಾರಿಗಳು ಅತಿಥಿಗಳನ್ನು ಗೌರವಿಸಿದರು. ಸಂಘದ ಅಧ್ಯಕ್ಷ ಆರ್‌. ಕೆ. ಸುವರ್ಣ, ಡಾ| ಪ್ರಸಾದ್‌ ಗಾಂಗುರ್ಡೆ, ಡಾ| ನೀರನ್‌ ಪಗಾರೆ, ಡಾ| ಪ್ರಶಾಂತ್‌ ದೇಶ್‌ಪಾಂಡೆ, ಡಾ| ಅಜಿತ್‌ ಕೋಜ್‌, ಕರ್ನಾಟಕ ಸಂಘ ಡೊಂಬಿವಲಿ ಲಲಿತ ಕಲಾ ವಿಭಾಗದ ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ, ಸಮಾಜ ಸೇವಕ ವೇಣುಗೋಪಾಲ್‌ ರೈ, ಸಂಘದ ಉಪಾಧ್ಯಕ್ಷ ಅಜೆಕಾರು ಜಯ ಶೆಟ್ಟಿ, ಕೋಶಾಧಿಕಾರಿ ಸದಾಶಿವ ಸಾಲ್ಯಾನ್‌, ಕಾರ್ಯದರ್ಶಿ ದಾಮೋದರ ಸುವರ್ಣ, ಸಲಹೆ ಗಾರರಾದ ರಮೇಶ್‌ ಕುಕ್ಯಾನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉದಯಾ ಜೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿನೋದ್‌ ಕರ್ಕೇರ ಉಪಸ್ಥಿತರಿದ್ದರು. ಶಿಬಿರದಲ್ಲಿ ಡಾ| ವಿ. ಎಂ. ಶೆಟ್ಟಿ, ಡಾ| ಪ್ರಸಾದ್‌ ಗಾಂಗುರ್ಡೆ, ಡಾ| ನೀರನ್‌ ಪಗಾರೆ, ಡಾ| ಪ್ರಶಾಂತ್‌ ದೇಶ್‌ಪಾಂಡೆ, ಡಾ| ಅಜಿತ್‌ ಕೋಟ್‌, ಡಾ| ವೈಶಾಲಿ ಪಗಾರೆ, ಡಾ| ರಾಹುಲ್‌ ಜಲ್ಗಾಂವ್ಕರ್‌, ಡಾ| ಲಾಡ್‌ ಶಿಬಿರವನ್ನು ಯಶಸ್ವಿಗೊಳಿಸಿದರು. ಶಿಬಿರವನ್ನು ಯಶಸ್ವಿಗೊಳಿಸಲು ಯುವ ವಿಭಾಗದ ಪದಾಧಿಕಾರಿಗಳು ಶ್ರಮಿಸಿದರು. ಶಿಬಿರದಲ್ಲಿ ತುಳು-ಕನ್ನಡಿಗರಲ್ಲದೆ ಸ್ಥಾನೀಯ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಯುವ ವಿಭಾಗದ ಉಪಾಧ್ಯಕ್ಷ ಗುರುರಾಜ ಸುವರ್ಣ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.