ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್: ಉಚಿತ ವೈದ್ಯಕೀಯ ಶಿಬಿರ
Team Udayavani, Feb 13, 2019, 3:46 PM IST
ಮುಂಬಯಿ: ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ವತಿಯಿಂದ ಉಚಿತ ವೈದ್ಯಕೀಯ ಶಿಬಿರ ಫೆ. 10ರಂದು ಬೆಳಗ್ಗೆಯಿಂದ ಸಂಘದ ಮಹೇಶ್ ಶೆಟ್ಟಿ ಅಡಿಟೋರಿಯಂ (ಬಾಬಾಸ್) ನಲ್ಲಿ ನಡೆಯಿತು.
ಸಂಘದ ಸದಸ್ಯ ಬಾಂಧವರಿಗೆ ಮತ್ತು ಪ ರಿಸರದ ತುಳು-ಕನ್ನಡಿಗಾಗಿ ಆಯೋಜಿಸಲಾಗಿದ್ದ ಈ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್ಕೋಪರ್ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ ಅವರು, ನಾವು ಕೇವಲ ಸಮಾಜ ಸೇವೆಯಲ್ಲಿ ಮಾತ್ರ ಸೀಮಿತವಾಗಿಸಿಕೊಳ್ಳಬಾರದು. ಅದರೊಂದಿಗೆ ಆರೋಗ್ಯದತ್ತ ಹೆಚ್ಚಿನ ಗಮನ ಹರಿಸಬೇಕು. ಈ ಉದ್ಧೇಶದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಸಂಸ್ಥೆಯು ಇತ್ತೀಚೆಗೆ ಸುವರ್ಣ ಮಹೋತ್ಸವವನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದ್ದು, ಭವಿಷ್ಯದಲ್ಲೂ ಕನ್ನಡಿಗರ ಶ್ರೇಯೋಭಿವೃದ್ಧಿಗೆ ಸಂಘವು ಸದಾ ಶ್ರಮಿಸಲಿದೆ. ಇಂದಿನ ಶಿಬಿರದಲ್ಲಿ ಹೆಚ್ಚಿನ ಸದಸ್ಯ ಬಾಂಧವರು ಪಾಲ್ಗೊಂಡಿರುವುದು ಸಂತೋಷದ ವಿಷಯ. ನಾವೆಲ್ಲರೂ ಒಂದಾಗಿ ಸಂಸ್ಥೆಯನ್ನು ಬೆಳೆಸೋಣ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರವಿರಲಿ. ಆರೋಗ್ಯದತ್ತ ಹೆಚ್ಚಿನ ಗಮನ ಹರಿಸೋಣ ಎಂದರು.
ರೆಲಿಗೇರ್ ಹೆಲ್ತ್ ಇನೊÏರೆನ್ಸ್ ಇದರ ಅನಿತಾ ಶೆಟ್ಟಿ ಕಫ್ಪರೇಡ್, ಹೆಲ್ತ್ ಸ್ಟ್ರಿಂಗ್ ಹೆಲ್ತ್ಕೇರ್ ಪ್ರೈವೇಟ್ ಲಿಮಿಟೆಡ್ನ ಸದಸ್ಯರು, ವಿಕ್ರೋಲಿಯ ವೈಭವ್ ಆಪ್ಟಿಕ್ಸ್ನ ಸದಸ್ಯರು ಈ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಆರೋಗ್ಯ ತಪಾಸಣೆ
ಶಿಬಿರದಲ್ಲಿ ಮಧುಮೇಹ ತಪಾಸಣೆ, ರಕ್ತದೊತ್ತಡ ಹಾಗೂ ಆರೋಗ್ಯ ಸಮಸ್ಯೆಗಳ ನಿವಾರಣೆಯ ಬಗ್ಗೆ ಮಾಹಿತಿ, ದೇಹದ ತೂಕ ಹೆಚ್ಚಳ, ಸಮತೋಲನೋಪಾಯ, ನೇತ್ರ ತಪಾಸಣೆ ಇನ್ನಿತರ ಆರೋಗ್ಯ ಸಂಬಂಧಿ ತಪಾಸಣೆಗಳನ್ನು ಶಿಬಿರದಲ್ಲಿ ಆಯೋಜಿಸಲಾಗಿತ್ತು.
ಸಂಸ್ಥೆಯ ಉಪಾಧ್ಯಕ್ಷ ಜಯರಾಜ್ ಜೈನ್, ಕಾರ್ಯದರ್ಶಿ ಸುಧಾಕರ ಎಲ್ಲೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ನಾರಾಯಣ ಶೆಟ್ಟಿ, ನಂದಳಿಕೆ ನಾರಾಯಣ ಶೆಟ್ಟಿ, ರಮಾನಂದ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ಎಸ್. ಎ. ಮೆಂಡನ್, ತಿಮ್ಮ ದೇವಾಡಿಗ, ವೀಣಾ ಶೆಟ್ಟಿ, ವಿಶ್ವನಾಥ ಪೂಜಾರಿ, ಹೆರಿಯಣ್ಣ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ರಂಗಕರ್ಮಿ ನಂದಳಿಕೆ ನಾರಾಯಣ ಶೆಟ್ಟಿ ಅವರು ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಅಧ್ಯಕ್ಷ ನವೀನ್ ಶೆಟ್ಟಿ ಅವರು ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ವಂದಿಸಿದರು. ಸದಸ್ಯ ಬಾಂಧವರು ಸೇರಿದಂತೆ ನೂರಾರು ಮಂದಿ ತುಳು-ಕನ್ನಡಿಗರು ಶಿಬಿರದಲ್ಲಿ ಪಾಲ್ಗೊಂಡು ಇದರ ಸದುಪಯೋಗಪಡಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ