ಶ್ರೀ ಕ್ಷೇತ್ರ ಒಡಿಯೂರು:ಉದ್ಯಮಿ ವಾಮಯ್ಯ ಶೆಟ್ಟಿ ದಂಪತಿಗೆ ಸಮ್ಮಾನ
Team Udayavani, Feb 19, 2019, 3:46 PM IST
ಪುಣೆ: ಶ್ರೀ ಕ್ಷೇತ್ರ ಕಟೀಲು ಮತ್ತು ಶ್ರೀ ಕ್ಷೇತ್ರ ಒಡಿಯೂರಿನ ಗುರುದೇವದತ್ತ ಸಂಸ್ಥಾನದ ಪರಮಭಕ್ತರಲ್ಲಿ ಒಬ್ಬರಾದ, ಒಡಿಯೂರು ಗ್ರಾಮೋತ್ಸವ ಸಮಿತಿ ಮುಂಬಯಿ ಘಟಕದ ಅಧ್ಯಕ್ಷ, ಮುಂಬಯಿ ಉದ್ಯಮಿ ವಾಮಯ್ಯ ಶೆಟ್ಟಿ ಮತ್ತು ರೇವತಿ ವಾಮಯ್ಯ ಶೆಟ್ಟಿ ದಂಪತಿಯನ್ನು ಗೌರವಿಸಲಾಯಿತು.
ಶ್ರೀ ಕ್ಷೇತ್ರ ಒಡಿಯೂರಿನಲ್ಲಿ ಪರಮ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವದಿಸಿ ಸಮ್ಮಾನಿಸಿದರು. ವಾಮಯ್ಯ ಶೆಟ್ಟಿ ದಂಪತಿ ಶ್ರೀ ಕ್ಷೇತ್ರ ಒಡಿಯೂರಿನಲ್ಲಿ ಶ್ರೀ ದತ್ತಾಂಜನೇಯ ದೇವರ ಪೂಜೆ ನೆರವೇರಿಸಿದರು. ಕ್ಷೇತ್ರದ ವಾರ್ಷಿಕೋತ್ಸವದ ಈ ಸಂದರ್ಭದಲ್ಲಿ ಪೂಜ್ಯ ಶ್ರೀಗಳು ವಾಮಯ್ಯ ಶೆಟ್ಟಿ ದಂಪತಿ ಮಂತ್ರಾಕ್ಷತೆ ನೀಡಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಾಧ್ವಿ ಶ್ರೀ ಮಾತಾನಂದಮಯಿ, ಶ್ರೀಗಳ ಮಾತೃಶ್ರೀಯವರು, ವಾಮಯ್ಯ ಶೆಟ್ಟಿ ದಂಪತಿ, ವಾಮನ್ ಶೆಟ್ಟಿ ಅವರ ಪುತ್ರಿ ವಂದನಾ ಆರ್. ಶೆಟ್ಟಿ, ಅಳಿಯ ರವಿ ಶೆಟ್ಟಿ, ಮುಂಬಯಿ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ದಂಪತಿ, ಗೌರವ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪೇಟೆಮನೆ, ಪುಣೆ ಶ್ರೀ ಗುರುದೇವ ಸೇವಾ ಬಳಗದ ಗೌರವ ಕಾರ್ಯದರ್ಶಿ ರೋಹಿತ್ ಶೆಟ್ಟಿ ನಗ್ರಿಗುತ್ತು, ಡಾ| ಆದಿಪ್ ಶೆಟ್ಟಿ ಮುಂಬಯಿ ಉಪಸ್ಥಿತರಿದ್ದರು.
ವರದಿ : ಹರೀಶ್ ಮೂಡಬಿದ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ