ಪುಣೆ ಬಿಲ್ಲವ ಸಮಾಜ ಸೇವಾ ಸಂಘ:ವಾರ್ಷಿಕ ಬೈದಶ್ರೀ ಕ್ರೀಡಾಕೂಟ ಉದ್ಘಾಟನೆ


Team Udayavani, Feb 19, 2019, 6:03 PM IST

1802mum08.jpg

ಪುಣೆ: ಮನುಷ್ಯ ಮನುಷ್ಯರ ನಡುವಿನ ಸುಮಧುರ   ಸಂಬಂಧಗಳಿಗೆ ಇರುವ ಮಹತ್ವವನ್ನು ನಾವೆಲ್ಲರೂ ತಿಳಿದಿದ್ದೇವೆ. ಬೇರೆ ಬೇರೆ ಘಟ್ಟಗಳಲ್ಲಿ ಇತರರೊಂದಿಗೆ ಬೆರೆತಾಗ ನಮ್ಮ ಜೀವನ ಶೈಲಿ ಸುಧಾರಣೆಯಾಗಿ ಸ್ನೇಹ ಗಟ್ಟಿಯಾಗುತ್ತದೆ. ಯಾವುದೇ ಭಾಷೆ, ಧರ್ಮ, ಜಾತಿ,   ಸಂಘಟನೆಗಳು ಇರಲಿ ಕೆಲವೊಮ್ಮೆ ಇಂತಹ  ಸ್ನೇಹ ಬೆಸೆಯುವ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಇದರಲ್ಲಿ ಕ್ರೀಡಾಕೂಟವು ಒಂದಾಗಿದೆ. ಪ್ರತಿಭೆಗಳು ಬೆಳಕಿಗೆ ಬರಲು ಅದಕ್ಕೆ ಸೂಕ್ತವಾದ ವೇದಿಕೆ ಕೂಡ ಸಿಗಬೇಕು. ಇಂತಹ ಕಾರ್ಯವನ್ನು ಸಂಘವು ಮಾಡುತ್ತಿದ್ದು, ಪ್ರತಿಭಾವಂತರಿಗೆ ನಮ್ಮವರ  ಮುಂದೆ ಅಭಿಮಾನವು ದೊರೆಯುತ್ತದೆ. ಇದರಲ್ಲಿ ಕ್ರೀಡಾ ಕ್ಷೇತ್ರದಲ್ಲಿಯ ಸಾಧನೆ ವಿಶ್ವ ಮಟ್ಟದಲ್ಲೂ ಎತ್ತಿ ತೋರಬಹುದು. ಅಂತಹ ಛಲ ಸಾಧನೆಯನ್ನು ನಮ್ಮವರು ಮಾಡಿ ಸಮಾಜದಲ್ಲಿ ಅಭಿಮಾನ ಗೌರವದೊಂದಿಗೆ ಬದುಕಬೇಕು ಎಂದು ಪುಣೆ ಬಿಲ್ಲವ ಸಮಾಜ  ಸೇವಾ ಸಂಘದ ಅಧ್ಯಕ್ಷರಾದ ವಿಶ್ವನಾಥ್‌ ಪೂಜಾರಿ ಕಡ್ತಲ ಹೇಳಿದರು.

ಫೆ. 17 ರಂದು ನಗರದ ಸ್ವಾರ್‌ ಗೇಟ್‌ ಹತ್ತಿರದ ಮುಕುಂದ್‌ ನಗರದ ಚಂದ್ರ ಶೇಖರ್‌ ಅಗಸ್ಯೆ ಕಟಾರಿಯ ಕಾಲೇಜು ಮೈದಾನದಲ್ಲಿ ನಡೆದ ಬಿಲ್ಲವ ಸಮಾಜ ಸೇವಾ ಸಂಘ ಪುಣೆ ಇದರ  ವಾರ್ಷಿಕ ಬೈದಶ್ರೀ ಕ್ರೀಡಾಕೂಟವನ್ನು ಸಂಘದ ಬಾವುಟ ಹಾರಿಸಿ ಉದ್ಘಾಟಿಸಿ  ಮಾತನಾಡಿದ ಅವರು,  ಕ್ರೀಡಾ ಕ್ಷೇತ್ರವೆಂಬುದು ಒಂದು ಸ್ಪರ್ಧಾತ್ಮಕ ಕಣ. ಈ ಸ್ಪರ್ಧೆಯನ್ನು ಗೆಲ್ಲುವ ಪಣವನ್ನು ತೊಟ್ಟು  ಯುವಕ ಯುವತಿಯರು ಭಾಗವಹಿಸಬೇಕು. ಇದಕ್ಕಾಗಿ ನಮ್ಮ ಸಮಾಜವು ಇಂತಹ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ. ಇಂದು ಇಲ್ಲಿ ಅಪಾರ ಸಂಖ್ಯೆಯಲ್ಲಿ   ಸೇರಿದ ಸಮಾಜ ಬಾಂಧವರು ಸೇರಿ ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಶಿಸ್ತು ಬದ್ಧವಾಗಿ, ಯಾವುದೇ ಲೋಪ ಬಾರದಂತೆ ನಡೆಸಿಕೊಡುವಂತೆ ವಿನಂತಿಸಿದರು.

ಪುಣೆ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರಾದ ಸುಂದರ್‌  ಪೂಜಾರಿ ಅವರ   ಸಭಾಧ್ಯಕ್ಷತೆಯಲ್ಲಿ ಜರಗಿದ ಈ ವೇದಿಕೆಯಲ್ಲಿ  ಅಧ್ಯಕ್ಷ‌ ವಿಶ್ವನಾಥ್‌ ಪೂಜಾರಿ, ಉಪಾಧ್ಯಕ್ಷ‌  ಸಂದೇಶ್‌ ಪೂಜಾರಿ, ರವಿಜಾ ಪೂಜಾರಿ, ಮಾಜಿ ಅಧ್ಯಕ್ಷರುಗಳಾದ ಶೇಖರ್‌  ಪೂಜಾರಿ, ಸದಾಶಿವ ಎಸ್‌. ಸಾಲ್ಯಾನ್‌, ಸದಾನಂದ ಪೂಜಾರಿ, ಕಾರ್ಯದರ್ಶಿ  ಸದಾನಂದ ಬಂಗೇರ, ಕೋಶಾಧಿಕಾರಿ ಹರೀಶ್‌ ಪೂಜಾರಿ, ಕ್ರೀಡಾ ಕಾರ್ಯಾಧ್ಯಕ್ಷ ರಾಜೇಶ್‌ ಪೂಜಾರಿ, ಮಹಿಳಾ ವಿಭಾಗದ ಅಧ್ಯಕ್ಷೆ ಉಮಾ ಪೂಜಾರಿ ಉಪಸ್ಥಿತರಿದ್ದರು.

ಅಧ್ಯಕ್ಷ ವಿಶ್ವನಾಥ್‌ ಪೂಜಾರಿ  ಮತ್ತು   ಗಣ್ಯರು  ಕೋಟಿ-ಚೆನ್ನಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಫೋಟೋಗೆ ದೀಪ ಬೆಳಗಿಸಿ ಪ್ರಾರ್ಥಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.  ಕಾರ್ಯದರ್ಶಿ ಸದಾನಂದ ಬಂಗೇರ ಸ್ವಾಗತಿಸಿದರು .ಕೋಶಾಧಿಕಾರಿ ಹರೀಶ್‌ ಪೂಜಾರಿ ಅವರು ಬೈದಶ್ರೀ ಕ್ರೀಡಾಕೂಟ ನಡೆದು ಬಂದ ಬಗ್ಗೆಯನ್ನು ಪ್ರಾಸ್ತಾವಿಕವಾಗಿ  ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ  ವಿಶೇಷವಾಗಿ  ಕಾಶ್ಮೀರದ ಪುಲ್ವಾಮದಲ್ಲಿ ಉಗ್ರಗಾಮಿಗಳ ಕುತಂತ್ರಕ್ಕೆ ಬಲಿಯಾದ  ಭಾರತೀಯ ಸೇನೆಯ ಸೈನಿಕರಿಗೆ ವಿಶ್ವನಾಥ್‌ ಪೂಜಾರಿ ಅವರ ನುಡಿ ನಮನದೊಂದಿಗೆ ಎಲ್ಲರು ಸೇರಿ ಶ್ರ¨ªಾಂಜಲಿ ಸಲ್ಲಿಸಿದರು.

ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ  ಕ್ರೀಡಾಪಟುಗಳಾದ ರಾಜೇಶ್‌ ಪೂಜಾರಿ, ವಾಲಿಬಾಲ್‌ ಪ್ರತಿಭೆ ಪ್ರಕಾಶ್‌ ಪೂಜಾರಿ ವಾಲಿಬಾಲ್‌, ಅಥ್ಲೆಟಿಕ್‌ಪಟು ದೀಪಿಕಾ ಪೂಜಾರಿ, ಕರಾಟೆಪಟು ಸುಜಿತ್‌ ಪೂಜಾರಿ, ವೇಟ್‌ಲಿಫ್ಟರ್‌ ನಿಶ್ಮಿತಾ ಪೂಜಾರಿ, ವೇದಿಕಾ ಪೂಜಾರಿ ಟೇಕ್ವಾಂಡೋ  ಅವರು  ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕ್ರೀಡಾಂಗಣಕ್ಕೆ ಪ್ರದಕ್ಷಿಣೆಗೈದು   ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಸಭಾ ವೇದಿಕೆಯಲ್ಲಿದ ಗಣ್ಯರನ್ನು ವಿಶ್ವನಾಥ್‌ ಪೂಜಾರಿ  ಗೌರವಿಸಿದರು.  ನಂತರ ಸಮಾಜ ಬಾಂಧವರ ವಯೋಮಿತಿಗೆ  ಅನುಗುಣವಾಗಿ  ಕ್ರೀಡಾ ಸ್ಪರ್ಧೆಗಳು ನಡೆದವು. ಸದಾನಂದ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಸುದೀಪ್‌ ಪೂಜಾರಿ ಮುನಿಯಾಲ್‌ ವಂದಿಸಿದರು. 

ಚಿತ್ರ-ವರದಿ : ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.