ತುಳುನಾಡು ಫ್ರೆಂಡ್ಸ್‌  ಬೆಳ್ಳಿಹಬ್ಬ : ತುಳುನಾಡ ಟ್ರೋಫಿ ವಾಲಿಬಾಲ್‌


Team Udayavani, Feb 20, 2019, 1:54 PM IST

1802mum01.jpg

ಮುಂಬಯಿ: ಖೇಲೊ ಇಂಡಿಯಾ ಯೋಜನೆಯ ಅಡಿಯಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡುಲು ಗುರಿ ಹೊಂದಿರುವ ಕ್ರೀಡಾಸಕ್ತರಿಗೆ ಇದೊಂದು ವರದಾನವಾಗಿದೆ. ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಕ್ರೀಡಾ ಸವಲತ್ತುಗಳನ್ನು ಒದಗಿಸುವುದು ಖೇಲೋ ಭಾರತ ಹೆಸರಿನ ರಾಷ್ಟ್ರೀಯ ಯೋಜನೆಯ ಉದ್ದೆಶವಾಗಿದೆ. ಇದರ ಸದುಪಯೋಗವನ್ನು ಪಡೆದು ಎಲ್ಲರೂ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು ಎಂದು ಸಂಸದ ಗೋಪಾಲ್‌ ಸಿ. ಶೆಟ್ಟಿ ನುಡಿದರು.

ಫೆ. 17ರಂದು ಬೆಳಗ್ಗೆ ಮೀರಾರೋಡ್‌ ಪೂರ್ವದ ಶಾಂತಿ ನಗರ ಸೆಕ್ಟರ್‌ 5ರ ಮೈದಾನದಲ್ಲಿ ತುಳುನಾಡು ಫ್ರೆಂಡ್ಸ್‌ ಇದರ ಬೆಳ್ಳಿಹಬ್ಬ ನಿಮಿತ್ತ ಆಯೋಜಿಸಲಾಗಿದ್ದ ತುಳುನಾಡ ಟ್ರೋಫಿ-2019 ವಾಲಿಬಾಲ್‌ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರಗಳಲ್ಲೂ ಪ್ರಾಮಾಣಿಕತೆಯಿಂದ ದುಡಿ ಯುವವರಿಗೆ ಅವಕಾಶ ಖಂಡಿತ ಒದಗಿ ಬರುತ್ತದೆ. ಸಮಯ ಪ್ರಜ್ಞೆ, ಕರ್ತವ್ಯ ಪ್ರಜ್ಞೆಯನ್ನು ಮರೆಯದೆ ಸಂಘಟನೆಯನ್ನು ಯಶಸ್ವಿಗೊಳಿಸಬೇಕು. 25 ವರ್ಷಗಳ ತಮ್ಮ ಕ್ರೀಡಾ ಜೀವನ ಅನೇಕ ಕ್ರೀಡಾಪಟುಗಳಿಗೆ  ಅಸರೆಯಾಗಲಿ ಎಂದು ನುಡಿದರು.

ಶುಕ್ರವಾರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿ ನಮ್ಮನ್ನು ಅಗಲಿದ ವೀರ ಯೋಧರಿಗೆ ಭಾರತ ಮಾತೆಯ ಪುತ್ರರಿಗೆ ಪುಷ್ಪಾಂಜಲಿ ಪ್ರಾರ್ಥನೆಯೊಂದಿಗೆ ನಮನ ಸಲ್ಲಿಸಿದರು.

ಮೀರಾ-ಭಾಯಂದರ್‌ ಜಿಲ್ಲೆಯ ಬಿಜೆಪಿಯ ಕಾರ್ಯದರ್ಶಿ ಮುನ್ನಲಾಯಿಗುತ್ತು ಸಚ್ಚಿದಾನಂದ ಶೆಟ್ಟಿ ಅವರು ಮಾತನಾಡಿ, ಶಿಸ್ತು, ಕರ್ತವ್ಯ ಹಾಗೂ ಸಮಯ ಪ್ರಜ್ಞೆಯಿಂದ ಸಂಸದ ಗೋಪಾಲ್‌ ಶೆಟ್ಟಿ ಅವರು ಮಹಾರಾಷ್ಟ್ರ ಸರ್ವಶ್ರೇಷ್ಠ ಸಂಸದರಾಗಿ ಪುರಸ್ಕೃತರಾಗಿದ್ದಾರೆ. ಅವರ ಸಾಧನೆ ಸರ್ವರಿಗೂ ಅನುಕರಣೀಯವಾಗಿದೆ ಎಂದು ಕ್ರೀಡಾಪಟುಗಳಿಗೆ ಶುಭಹಾರೈಸಿದರು.

ಸಮಾರಂಭದಲ್ಲಿ ಬಂಗಾರದ ಪದಕ ವಿಜೇತೆ ರಾಜ್ಯಮಟ್ಟದ ಕಾವ್ಯಾ ಜೆ. ಕರ್ಕೇರ, ಜೂನಿಯರ್‌ ಇಂಟರ್‌ನ್ಯಾಷನಲ್‌ ಬ್ಯಾಡ್‌ಮಿಂಟನ್‌ ಪ್ಲೇಯರ್‌ ಕೃತಿ ತೆಜಾ³ಲ್‌ ಕರ್ಕೇರ ಅವರನ್ನು ವೇದಿಕೆಯ ಗಣ್ಯರು ಸಮ್ಮಾನಿಸಿದರು. ಸಮ್ಮಾನ ಪತ್ರವನ್ನು ಸದಾನಂದ ಸಾಲ್ಯಾನ್‌ ಕಾಪು ವಾಚಿಸಿದರು. ಪುರುಷರ ವಾಲಿಬಾಲ್‌ ಪಂದ್ಯಾಟವನ್ನು ಸ್ಥಳೀಯ ನಗರ ಸೇವಕ ಹಾಗೂ ಅಶ್ವಿ‌ನ್‌ ಕಸೋಡಿಯಾ, ಸಂಸದ ಗೋಪಾಲ್‌ ಶೆಟ್ಟಿ, ಮಹಿಳೆಯರ ವಾಲಿಬಾಲ್‌ ಪಂದ್ಯಾಟವನ್ನು ಹೇತಲ್‌ ಪಾರ್ಮರ್‌ ಮತ್ತು ದೀಪ್ತಿ ಭಟ್‌ ಉದ್ಘಾಟಿಸಿದರು.

ತುಳುನಾಡ ಫ್ರೆಂಡ್ಸ್‌ನ ಅಧ್ಯಕ್ಷ ಶಂಕರ್‌ ಕೋಟ್ಯಾನ್‌ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್‌ ಶೆಟ್ಟಿ ಕಾಪು ವಂದಿಸಿದರು. ರಂಗ ಸಿನೇಮಾ ನಟ ಜಿ. ಕೆ. ಕೆಂಚನಕೆರೆ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಅತಿಥಿಗಳಾಗಿ ಕಲಾ ಸಂಘಟಕರಾದ ಗುಣಪಾಲ್‌ ಶೆಟ್ಟಿ ಕರ್ಜೆ, ಚಂದ್ರಜನಾರ್ದನ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಯಾದೇಶ್‌ ಪುತ್ರನ್‌, ಉಪಾಧ್ಯಕ್ಷರುಗಳಾದ ವಿಲ್ಫೆÅಡ್‌ ಮಾರ್ಟಿಸ್‌, ಲಕ್ಷ್ಮೀಕಾಂತ್‌ ಪೂಜಾರಿ, ಜತೆ ಕಾರ್ಯದರ್ಶಿ ಕಿರಣ್‌ ಮೆಂಡನ್‌, ಕೋಶಾಧಿಕಾರಿ ದೀಪಕ್‌ ಮೆಂಡನ್‌, ಜತೆ ಕೋಶಾಧಿಕಾರಿ ರವಿ ಸುವರ್ಣ ಅವರು ಗಣ್ಯರನ್ನು ಗೌರವಿಸಿದರು.

ಸರ್ವ ಸದಸ್ಯರು ದಿನಪೂರ್ತಿ ನಡೆಯುವ ಕಾರ್ಯಕ್ರಮಕ್ಕೆ ಸಹಕರಿಸಿದರು. ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ನಗರ ಸೇವಕರು, ಕನ್ನಡೇತರರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

 ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.