ಬಿಲ್ಲವರ ಅಸೋಸಿಯೇಶನ್‌ ಗೋರೆಗಾಂವ್‌ : ಅರಸಿನ ಕುಂಕುಮ


Team Udayavani, Feb 23, 2019, 3:22 PM IST

17.jpg

ಮುಂಬಯಿ: ಮಹಿಳಾ ಸಂಘಟನೆ ಒಂದೇ ಛತ್ರದಡಿಯಲ್ಲಿ ಬೆಳೆದು ಸಮಾಜಕ್ಕೆ ಸ್ಪಂದಿಸುತ್ತಿರುವುದು ತಿಳಿದ ವಿಷಯವಾಗಿದೆ. ಅರಸಿನ ಕುಂಕುಮದಂತಹ ಮಹಿಳಾ ಕಾರ್ಯಕ್ರಮ ಗಳಿಂದಾಗಿ ಸಂಘಟನೆ ಮತ್ತಷ್ಟು ಬೆಳೆಯುತ್ತದೆ. ಮಹಿಳೆಯರು ಇಂತಹ ಕಾರ್ಯಕ್ರಮಗಳಿಗೆ ಮಾನಸಿಕವಾಗಿ ಬಲಾಡ್ಯಗೊಳ್ಳುತ್ತಿದ್ದು, ಜೀವನ ವಿಕಸನಗೊಳ್ಳುತ್ತಿದೆ. ಮುಖ್ಯವಾಗಿ ಇಂತಹ ಕಾರ್ಯಕ್ರಮಗಳಿಂದಾಗಿ ಮಹಿಳೆಯರ ಆಚಾರ, ವಿಚಾರಗಳಿಗೆ ಮಹತ್ವ ಲಭಿಸುತ್ತಿದೆ ಎಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌ ನುಡಿದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಗೋರೆಗಾಂವ್‌ ಸ್ಥಳೀಯ ಕಚೇರಿಯ  ಮಹಿಳಾ ವಿಭಾಗದ ವತಿಯಿಂದ ಗೋರೆಗಾಂವ್‌ ಲಲಿತ್‌ ಹೊಟೇಲ್‌ನ ಕ್ರಿಸ್ಟಲ್‌ ಸಭಾಗೃಹದಲ್ಲಿ ನಡೆದ ಅರಸಿನ ಕುಂಕುಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮ ಸಹಕಾರ ಸದಾಯಿದೆ ಎಂದು ನುಡಿದು ಶುಭಹಾರೈಸಿದರು.

ಗೋರೆಗಾಂವ್‌ ಕರ್ನಾಟಕ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮಿತ್ರಾ ಗುಜರನ್‌ ಅವರು ಮಾತನಾಡಿ, ಇಂದಿನ ಮಹಿಳೆಯರು ಆಡಂಬರದ ಜೀವನಕ್ಕೆ ಮಾರು ಹೋಗದೆ, ಉತ್ತಮ ಆಚಾರ, ಸಂಸ್ಕಾರಗಳನ್ನು ಜೀವನದಲ್ಲಿ ಬೆಳೆಸಿಕೊಳ್ಳಬೇಕು. ಇಂದಿನ ಮಹಿಳೆಯರಿಗೆ ಯುವತಿಯರನ್ನು ಸರಿಯಾದ ಮಾರ್ಗದಲ್ಲಿ ಕರೆದುಕೊಂಡು ಹೋಗುವ ಜವಾಬ್ದಾರಿಯಿದೆ. ಮರಾಠಿ ಮಣ್ಣಿನಲ್ಲಿ ಅರಸಿನ ಕುಂಕುಮ ಕಾರ್ಯಕ್ರಮವನ್ನು ಮಾಡಿ ಮಹಿಳಾ ಸಂಘಟನೆಗಳು ಶಕ್ತಿಪಡೆಯುತ್ತಿರುವುದು ಅಭಿನಂದನೀಯವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಸುಕೇಶಿನಿ ಯಶವಂತ್‌ ಪೂಜಾರಿ ಇವರು ಮಾತನಾಡಿ, ಮಹಿಳೆಯರು ಧರಿಸುವ ಹಾಗೂ ಹಚ್ಚುವ ಪ್ರತಿಯೊಂದು ವಸ್ತುವೂ ಅದರದೆ ಆದ ಮಹತ್ವವನ್ನು ಪಡೆದಿದೆ. ಕಾಲ ಬದಲಾಗುತ್ತಿದ್ದರೂ ಮಹಿಳೆಯರಾದ ನಾವು ಇದಕ್ಕೆಲ್ಲಾ ಮಹತ್ವ ನೀಡಿ ಸಂಸ್ಕಾರಯುತವಾಗಿ ಬಾಳಿ ಇಂದಿನ ಹಾಗೂ ಮುಂದಿನ ಯುವತಿಯವರಿಗೆ ಮಾರ್ಗದರ್ಶಕರಾಗಿ ಇರಬೇಕು. ಈಗಿನ ಕಾಲದಲ್ಲಿ ಮಹಿಳೆಯರು ಹೆಚ್ಚಾಗಿ ಆರೋಗ್ಯದ ಕಾಳಜಿಯನ್ನು ವಹಿಸದೆ ಇರುವುದು ವಿಷಾಧನೀಯ. ಆದ್ದರಿಂದ ನಾವು ಸಮಾಜ ಸೇವೆಯೊಂದಿಗೆ ಆರೋಗ್ಯದತ್ತು ಗಮನ ಹರಿಸಬೇಕು ಎಂದು ಕರೆ ನೀಡಿದರು.

ಸಿಟಿ ಬ್ಯಾಂಕಿನ ಉಪಾಧ್ಯಕ್ಷೆ ಜಯಶ್ರೀ ಮೋಹನ್‌ ಅವರು ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ, ಹಿಂದು ಶಾಸ್ತ್ರ ಹೇಳುವಂತೆ ಸೌಭಾಗ್ಯ ಮತ್ತು ಅದೃಷ್ಟದ ಸಂಕೇತವಾಗಿ ಕುಂಕುಮವನ್ನು ಗೌರವಿಸಲಾಗುತ್ತದೆ. ಈ ಕುಂಕುಮವು ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ವಿವಾಹಿತ ಸ್ತಿÅàಯರು ಇದನ್ನು ಧರಿಸಿದರೆ ಅದೃಷ್ಟವನ್ನು ತರುತ್ತದೆ ಹಾಗೂ ಇದು ಕೇವಲ ಆಚಾರವಲ್ಲದೆ, ಅಲಂಕಾರಗೊಸ್ಕರ ಹಚ್ಚಿಕೊಳ್ಳುತ್ತಾರೆ ಎಂದು ನುಡಿದು ಶುಭಹಾರೈಸಿದರು.

ಬಿಲ್ಲವರ ಅಸೋಸಿಯೇಶನ್‌ ಕೇಂದ್ರ ಕಚೇರಿಯ ಸದಸ್ಯೆ ಸಬಿತಾ ಪೂಜಾರಿ, ಗೋರೆಗಾಂವ್‌ ಕೇಂದ್ರ ಕಚೇರಿಯ ಪ್ರತಿನಿಧಿಗಳಾದ ಪುಷ್ಪಾ ಅಮೀನ್‌, ಬಬಿತಾ ಜನಾರ್ಧನ್‌ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬಿಲ್ಲವರ ಅಸೋಸಿಯೇಶನ್‌ ಉಪಾಧ್ಯಕ್ಷ ಶಂಕರ ಬಿ. ಪೂಜಾರಿ, ಗೋರೆಗಾಂವ್‌ ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ ಜೆ. ವಿ. ಕೋಟ್ಯಾನ್‌, ಕಾರ್ಯಾಧ್ಯಕ್ಷ ಸಚ್ಚೀಂದ್ರ ಕೆ. ಕೋಟ್ಯಾನ್‌, ಉಪ ಕಾರ್ಯಾಧ್ಯಕ್ಷ ಮೋಹನ್‌ದಾಸ್‌ ಹೆಜ್ಮಾಡಿ ಉಪಸ್ಥಿತರಿದ್ದರು.

ಸ್ಥಳೀಯ ಕಚೇರಿಯ ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನೆ, ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಿತು. ಪೂಜೆಯಲ್ಲಿ ಸಮಿತಿಯ ಕೋಶಾಧಿಕಾರಿ ಮೋಹನ್‌ ಬಿ. ಅಮೀನ್‌ ಮತ್ತು ನಯನಾ ಮೋಹನ್‌ ಅಮೀನ್‌ ಅವರು ಸಹಕರಿಸಿದರು. ಮಮತಾ, ವಿನೋದಾ, ಸುನೀತಾ ಅವರು ಪ್ರಾರ್ಥನೆಗೈದರು.  ಪದ್ಮಾವತಿ ಪೂಜಾರಿ ಅವರ ನೇತೃತ್ವದಲ್ಲಿ ಕಾರ್ಯಕ್ರಮವು ನೆರವೇರಿತು.

ಮಹಿಳೆಯರಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ಸುಚಲತಾ ಸಚಿನ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. ಜೆ. ವಿ. ಕೋಟ್ಯಾನ್‌ ಮತ್ತು ಸೂರ್ಯಕಾಂತ್‌ ಜೆ. ಸುವರ್ಣ ಅವರ ಸಹಕಾರದಿಂದ ಕೊನೆಯಲ್ಲಿ ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆಯರು, ಸಮಾಜದ ಮಹಿಳೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.