ಚೆಂಬೂರು ಬಿಲ್ಲವರ ಅಸೋಸಿಯೇಶನ್ : ಗುರುಮೂರ್ತಿ ಪ್ರತಿಷ್ಠಾಪನೆ, ಪೂಜೆ
Team Udayavani, Feb 24, 2019, 4:11 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಚೆಂಬೂರು ಸ್ಥಳೀಯ ಕಚೇರಿ ಯಲ್ಲಿ 23ನೇ ವಾರ್ಷಿಕ ಗುರು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವು ಫೆ. 4ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಉಮೇಶ್ ಕೆ. ಕೋಟ್ಯಾನ್ ಮತ್ತು ಕಾರ್ತಿಕ್ ಬಿ. ಪೂಜಾರಿ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗ್ಗೆ 7ರಿಂದ ಗುರುಮೂರ್ತಿಗೆ ಪಂಚಾಮೃತ ಅಭಿಷೇಕ, ಸಂಜೆ 6.30ರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ಸಂಜೀವ ಎಸ್. ಬಂಗೇರ, ಕಾರ್ಯಾಧ್ಯಕ್ಷ ನಿತ್ಯಾನಂದ ಎ. ಪೂಜಾರಿ, ಕೇಂದ್ರ ಕಚೇರಿಯ ಪ್ರತಿನಿಧಿ ಉಮೇಶ್ ಎನ್. ಕೋಟ್ಯಾನ್, ಉಪ ಕಾರ್ಯಾಧ್ಯಕ್ಷ ವೇಣುಗೋಪಾಲ್ ಯು. ಕಾಪು, ಮೋಹನ್ ಕೆ. ಸಾಲ್ಯಾನ್ ಮತ್ತು ಗೌರವ ಕಾರ್ಯದರ್ಶಿ ನಾಗೇಶ್ ಎಸ್. ಕೋಟ್ಯಾನ್, ಗೌರವ ಕೋಶಾಧಿಕಾರಿ ಜಯ ಸಿ. ಪೂಜಾರಿ, ಗುರುಮೂರ್ತಿಯ ದಾನಿಗಳಾದ ದಿ| ಮಹಾಬಲ ಅಮೀನ್ ಅವರ ಪರಿವಾರದವರು ಉಪಸ್ಥಿತರಿದ್ದು ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತ ರಣೆ ನಡೆಯಿತು. ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ