ಥಾಣೆ ಬಂಟ್ಸ್ ಅಸೋಸಿಯೇಶನ್ ಕ್ರೀಡಾ ಸಮಿತಿಯಿಂದ ಕ್ರಿಕೆಟ್ ಪಂದ್ಯಾಟ
Team Udayavani, Mar 6, 2019, 2:45 PM IST
ಥಾಣೆ: ಥಾಣೆ ಬಂಟ್ಸ್ ಅಸೋಸಿಯೇಶನ್ ಇದರ ಕ್ರೀಡಾ ಸಮಿತಿ ಮತ್ತು ಯುವ ವಿಭಾಗದ ಆಶ್ರಯದಲ್ಲಿ ಫೆ. 24ರಂದು ಬೆಳಗ್ಗೆ 9 ರಿಂದ ರಾತ್ರಿ 8 ರವರೆಗೆ ಥಾಣೆ ಪಶ್ಚಿಮದ ಯೆವೂರು ಹಿಲ್ಸ್ ಬೆಂಡಿಪಾಡಾದ ಪಿಚ್ಟರ್ಫ್ ಮೈದಾನದಲ್ಲಿ ಬಂಟ ಸಮಾಜ ಬಾಂಧವರಿಗಾಗಿ ಜರಗಿದ ನಾಲ್ಕು ಓವರ್ಗಳ ಕ್ರಿಕೆಟ್ ಪಂದ್ಯಾಟದಲ್ಲಿ ಬಂಟರ ಸಂಘ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಬಂಟರ ಸಂಘ ವಸಾಯಿ ಡಹಾಣೂ ಪ್ರಾದೇಶಿಕ ಸಮಿತಿಯು ಫೈನಲ್ನಲ್ಲಿ ಮುಲುಂಡ್ ಬಂಟ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಜಯಿಸಿತು. ಮುಲುಂಡ್ ಬಂಟ್ಸ್ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆಯಿತು. ಭಾಗವಹಿಸಿದ್ದ ಹನ್ನೊಂದು ತಂಡಗಳಲ್ಲಿ ಕೊನೆಯ ಹಂತದವರೆಗೂ ಶಿಸ್ತುಬದ್ಧವಾಗಿ, ಕ್ರೀಡಾಸ್ಪೂರ್ತಿಯನ್ನು ಮೆರೆದ ಬೋಂಬೆ ಬಂಟ್ಸ್ ಅಸೋಸಿಯೇಶನ್ ತಂಡವು ಶಿಸ್ತುಬದ್ಧ ತಂಡ ಪುರಸ್ಕಾರವನ್ನು ಪಡೆಯಿತು.
ವಿಜೇತ ಬಂಟರ ಸಂಘ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿ ತಂಡವು 25 ಸಾವಿರ ರೂ. ನಗದು ಮತ್ತು ಟ್ರೋಫಿ ಹಾಗೂ ರನ್ನರ್ ಅಪ್ ತಂಡ ಮುಲುಂಡ್ ಬಂಟ್ಸ್ 15 ಸಾವಿರ ರೂ. ನಗದು ಮತ್ತು ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಬಂಟರ ಸಂಘ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ನಿಕಿತ್ ಶೆಟ್ಟಿ ಅವರು ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಪಡೆದರು. ಮುಲುಂಡ್ ಬಂಟ್ಸ್ನ ಅನಿಷಿತ್ ಶೆಟ್ಟಿ ಇವರು ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.
ಸಂಜೆ ಥಾಣೆ ಬಂಟ್ಸ್ನ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ಸ್ಪರ್ಧಿಗಳಿಗೆ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಮುಲುಂಡ್ ಬಂಟ್ಸ್ನ ಉಪಾಧ್ಯಕ್ಷ ವಸಂತ್ ಶೆಟ್ಟಿ ಪಲಿಮಾರು, ಗೋಲ್ಡನ್ ಫೂÅಕ್ ಹಾಸ್ಪಿಟಾಲಿಟಿಯ ಕಾರ್ಯಕಾರಿ ಆಡಳಿತ ನಿರ್ದೇಶಕ ಆದರ್ಶ್ ಶೆಟ್ಟಿ ಹಾಗೂ ಯುನಿಕ್ ಏರ್ಪ್ರೈಟ್ಸ್ನ
ಆಡಳಿತ ನಿರ್ದೇಶಕ ಸುನೀಲ್ ಆಳ್ವ, ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿದ ಥಾಣೆ ಬಂಟ್ಸ್ನ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೇಶ್ ಶೆಟ್ಟಿ, ಪುಷ್ಪರಾಜ್ ಎಲ್. ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರಂಜನ್ ಆರ್. ಶೆಟ್ಟಿ, ಯುವ ವಿಭಾಗದ ಸುಶಾಂತ್ ಶೆಟ್ಟಿ ಅವರು ವಿಜೇತ ತಂಡಗಳನ್ನು ಅಭಿನಂದಿಸಿದರು.
ಥಾಣೆ ಬಂಟ್ಸ್ನ ಉಪಾಧ್ಯಕ್ಷ ವೇಣು ಗೋಪಾಲ್ ಎಲ್. ಶೆಟ್ಟಿ ಅವರು ಪ್ರಥಮ
ಬಹುಮಾನದ 25,000 ರೂ. ನಗದು ಮತ್ತು ಮಾಜಿವಾಡಾದ ಅಪೋಲೋ ಹೊಟೇಲ್ ಇದರ ಸಂತೋಷ್ ಶೆಟ್ಟಿ ಅವರು ರನ್ನರ್ ಅಪ್ ತಂಡದ 15,000 ರೂ. ನಗದು ಬಹುಮಾನವನ್ನು ಪ್ರಾಯೋಜಿಸಿದ್ದರು. ಪಂದ್ಯಾ ವಳಿಯ ತೀರ್ಪುಗಾರರಾಗಿ ನಿಖೀಲ್, ಗಣೇಶ್ ಮತ್ತು ಸ್ಕೋರರ್ ಆಗಿ ಪ್ರಥಮೇಶ್ ಅವರು ಸಹಕರಿಸಿದರು. ಮನೀಷ್ ಶೆಟ್ಟಿ ಇವರು ದಿನಪೂರ್ತಿ ಕನ್ನಡ, ತುಳು, ಹಿಂದಿ, ಇಂಗ್ಲಿಷ್ನಲ್ಲಿ ಪಂದ್ಯದ ವೀಕ್ಷಕ ವಿವರಣೆ ನೀಡಿದರು.
ವಿವಿಧ ಪ್ರಾಯೋಜಕರನ್ನು ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರು ಗೌರವಿಸಿದರು. ಪಂದ್ಯಾಟ ವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೇಶ್ ಶೆಟ್ಟಿ, ಪುಷ್ಪರಾಜ್ ಎಲ್. ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ, ಯುವ ವಿಭಾಗದ ರಂಜನ್ ಆರ್. ಶೆಟ್ಟಿ, ಸುಶಾಂತ್ ಶೆಟ್ಟಿ ಇವರನ್ನು ಥಾಣೆ ಬಂಟ್ಸ್ನ
ಅಧ್ಯಕ್ಷ ಕುಶಲ್ ಸಿ. ಭಂಡಾರಿ ಮತ್ತು ಸಂಸ್ಥೆಯ ಪದಾಧಿಕಾರಿಗಳು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಗೌರವಿಸಿದರು.
ಸಮಾರಂಭದ ವೇದಿಕೆಯಲ್ಲಿ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರು, ಯುವ ವಿಭಾಗದ ಕಾರ್ಯಾಧ್ಯಕ್ಷರಲ್ಲದೆ ಥಾಣೆ ಬಂಟ್ಸ್ನ ಉಪಾಧ್ಯಕ್ಷ ವೇಣುಗೋಪಾಲ್ ಎಲ್. ಶೆಟ್ಟಿ, ಕಾರ್ಯದರ್ಶಿ ಸುನೀಲ್ ಜೆ. ಶೆಟ್ಟಿ, ಕೋಶಾಧಿಕಾರಿ ಭಾಸ್ಕರ ಎನ್. ಶೆಟ್ಟಿ, ಜತೆ ಕಾರ್ಯದರ್ಶಿ ಅಶೋಕ್ ಎಂ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ, ಪ್ರಾಯೋಜಕರಾದ ಸಂತೋಷ್ ಶೆಟ್ಟಿ, ಡಾಕ್ಟರ್ ಪ್ಲೆನೆಟ್ ಇತರ ಆಡಳಿತ ನಿರ್ದೇಶಕ ರತ್ನಾಕರ ಶೆಟ್ಟಿ, ಥಾಣೆ ಬಂಟ್ಸ್ ಕಾರ್ಯಕಾರಿ ಸಮಿತಿಯ ಸದಸ್ಯ ರಘುನಾಥ್ ರೈ, ಉದ್ಯಮಿ ವಿವೇಕ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಮನೀಷ್ ಶೆಟ್ಟಿ ಕಾಂತಾವರ ಇವರು ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಥಾಣೆ ಬಂಟ್ಸ್ನ ಸ್ನೇಹ ಸೌರಭ ಪತ್ರಿಕೆಯ ಸಂಪಾದಕ ನಿತ್ಯಾನಂದ ಶೆಟ್ಟಿ ಇವರು ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಯೋಗೇಶ್ ಶೆಟ್ಟಿ ವಂದಿಸಿದರು. ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ