ಕಾಳಾವರ ದೇವಸ್ಥಾನ ಜೀರ್ಣೋದ್ಧಾರ ಮುಂಬಯಿ ಸಮಿತಿ ಸಭೆ
Team Udayavani, Mar 12, 2019, 12:57 PM IST
ಮುಂಬಯಿ: ಕರ್ನಾಟಕದ ಕರಾವಳಿ ಪ್ರದೇಶ ದಕ್ಷಿಣ ಕನ್ನಡದ ತುಳು-ಕನ್ನಡಿಗರು ದೇವರ ಬಗ್ಗೆ ಅಪಾರ ಭಕ್ತಿ, ನಂಬಿಕೆ ಇಟ್ಟುಕೊಂಡವರು. ಹುಟ್ಟೂರಿನಲ್ಲಿರಲಿ ಅಥವಾ ಹೊರನಾಡ ಯಾವುದೇ ಮೂಲೆಯಲ್ಲಿ ವಾಸಿಸಲಿ, ಅವರು ತುಳುನಾಡ ಆಚಾರ, ವಿಚಾರ, ಸಂಸ್ಕೃತಿ, ಸಂಸ್ಕಾರಗಳನ್ನು ಎಂದಿಗೂ ಮರೆತವರಲ್ಲ. ಧಾರ್ಮಿಕ ಆಚಾರದ ಬಗ್ಗೆ ಅಪಾರ ಶ್ರದ್ಧೆಯನ್ನು ಇಟ್ಟುಕೊಂಡಿರುವ ನಮ್ಮವರು ದೇವಸ್ಥಾನ-ದೈವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ವ್ಯಯಿಸುವ ಹಣಕ್ಕೆ ಲೆಕ್ಕವಿಲ್ಲ. ಇದೆಲ್ಲವೂ ದೇವರ ಅನುಗ್ರಹದಿಂದ ಸಾಧ್ಯವಾಗಿದೆ. ಊರಲ್ಲಿರುವ ಯಾವುದೇ ದೇವಸ್ಥಾನ ಮತ್ತು ದೈವಸ್ಥಾದ ಜೀರ್ಣೋದ್ಧಾರ ಕಾರ್ಯದಲ್ಲಿ ಮುಂಬಯಿಗರ ಕೊಡುಗೆ ಅಪಾರವಾಗಿದೆ. ಹೊರನಾಡಿನಲ್ಲೂ ದೇವಸ್ಥಾನ, ದೈವಸ್ಥಾನಗಳನ್ನು ಕಟ್ಟಿರುವ ಅನೇಕ ನಿದರ್ಶನಗಳಿವೆ ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಇವರು ನುಡಿದರು.
ಮಾ. 9ರಂದು ಸಂಜೆ ವಾಶಿಯ ಹೊಟೇಲ್ ರಮಾಡ ಟೆರೇಸ್ ಗಾರ್ಡನ್ನಲ್ಲಿ ಜರಗಿದ ಕಾಳಾವರ ಶ್ರೀ ಮಹಾಲಿಂಗೇಶ್ವರ ಶ್ರೀ ಕಾಳಿಂಗ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಮುಂಬಯಿ ಇದರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ತಾನು ಕೈಲಾದಷ್ಟು ಸಹಕಾರ ನೀಡುತ್ತೇನೆ. ಎಲ್ಲರೂ ದೊಡ್ಡ ಮನಸ್ಸಿನಿಂದ ಈ ಯೋಜನೆಗೆ ಕೈಜೋಡಿಸುವಂತೆ ವಿನಂತಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ದೇವಸ್ಥಾನದ ಜೀರ್ಣೋದ್ಧಾರವೆಂದರೆ ಗ್ರಾಮದ ಜೀರ್ಣೋದ್ಧಾರವಾಗಿದೆ. ಮುಂಬಯಿಯಲ್ಲಿ ರುವ ಗ್ರಾಮಸ್ಥರು ಮನಸ್ಸು ಮಾಡಿದರೆ ಈ ಯೋಜನೆ ನಿರ್ವಿಘ್ನವಾಗಿ ನಡೆಯಲು ಸಾಧ್ಯ.
ಊರಿನ ಋಣ ತೀರಿಸಲು ಪ್ರತಿಯೊಬ್ಬರಿಗೂ ಇದೊಂದು ಸುವರ್ಣಾವಕಾಶ ಎಂಬುದನ್ನು ಮರೆಯಬಾರದು. ನಮ್ಮಲ್ಲಿ ಆತ್ಮಸ್ಥೈರ್ಯ, ದೇವರಲ್ಲಿ ಬಲವಾದ ನಂಬಿಕೆ ಇದ್ದರೆ ಖಂಡಿತ ನಮ್ಮ ಬೇಡಿಕೆ ಈಡೇರಿದಂತೆ ಎಂದರು.
ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾಳಾವರ ಇದರ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಬೆಂಗಳೂರು ಇವರು ಮಾತನಾಡಿ, ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರ್ಥಿಕವಾಗಿ ಹಾಗೂ ಮನೋಸ್ಥೈರ್ಯ ನೀಡಿ ಬೆಂಬಲಿಸಿದ್ದೇನೆ. ಭಗವಂತನ ಪ್ರೇರಣೆಯಿಂದ ಇದೆಲ್ಲವೂ ಸುಲಭಸಾಧ್ಯವಾಗಲಿದೆ ಎಂಬ ಭರವಸೆ ನನ್ನಲ್ಲಿದೆ. ಮುಂಬಯಿ ನಗರದ ಉದ್ಯಮಿಗಳು, ದೇವಸ್ಥಾನ-ದೈವಸ್ಥಾನಗಳ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ಸಲ್ಲಿಸುತ್ತಾ ಬಂದಿದ್ದಾರೆ ಎಂದು ನುಡಿದು ಎಲ್ಲರ ಸಹಕಾರ ಬಯಸಿದರು.
ಜೀರ್ಣೋದ್ಧಾರ ಮುಂಬಯಿ ಸಮಿತಿಯ ಸಂಚಾಲಕ ಉಳೂ¤ರು ಮೋಹನ್ದಾಸ್ ಶೆಟ್ಟಿ ಅವರು ಮಾತನಾಡಿ, ದೇವರ ಸೇವೆ ಮಾಡಲು ಯೋಗಾನುಯೋಗ ಬೇಕು. ಸಮಿತಿಯಲ್ಲಿ ಉದ್ಯಮಿಗಳು, ಸಹೃದಯವಂತರು, ಗಣ್ಯ
ವ್ಯಕ್ತಿಗಳು ಅನೇಕರಿದ್ದಾರೆ. ಗ್ರಾಮಕ್ಕೆ ಸಂಬಂಧಿಸಿದ ಎಲ್ಲರೂ ಸಹಕರಿಸುವ ಜತೆಗೆ ದೇಣಿಗೆ ಸಂಗ್ರಹಿಸುವ ಕಾರ್ಯದಲ್ಲಿ ಸಮಿತಿಯೊಂದಿಗೆ ಸಹಕರಿಸುವಂತೆ ವಿನಂತಿಸಿದರು.
ಸುಬ್ರಹ್ಮಣ್ಯ ಶೆಟ್ಟಿ ಅವರು ದೇವಸ್ಥಾನದ ಹಿನ್ನೆಲೆಯನ್ನು ವಿವರಿಸಿ, ದಕ್ಷಿಣ ಕನ್ನಡದ ಜನರು ದೇವರು ಮತ್ತು ದೈವದ ಮೇಲಿಟ್ಟಿರುವ ಅಪಾರ ನಂಬಿಕೆ, ಭಕ್ತಿಯಿಂದ ಪ್ರತಿಯೊಂದು ದೇವಸ್ಥಾನ ಮತ್ತು ದೈವಸ್ಥಾನಗಳ ಅಭಿವೃದ್ಧಿಯಾಗುತ್ತಿದೆ. ಈ ಶುಭ ಕಾರ್ಯಕ್ಕೆ ಸಮಿತಿಯೊಂದಿಗೆ ಎಲ್ಲರೂ ಸಹಕರಿಸಬೇಕು ಎಂದರು.
ಕೃಷ್ಣದೇವ ಕಾರಂತ ಅವರು ಮಾತನಾಡಿ, ದೇವಸ್ಥಾನವು ಸುಮಾರು 800 ವರ್ಷಗಳಿಗೂ ಮೀರಿದ ಇತಿಹಾಸವನ್ನು ಹೊಂದಿದ್ದು, ಈ ಯೋಜನೆಗೆ ಸುಮಾರು ಮೂರೂವರೆ ಕೋ. ರೂ.ಗಳು ವ್ಯಯವಾಗಬಹುದೆಂದು ಅಂದಾಜಿಸ
ಲಾಗಿದೆ. ಈ ದೇವಸ್ಥಾನವು ಭಕ್ತರಲ್ಲಿ ಭಯ ಮತ್ತು ಭಕ್ತಿ ಹುಟ್ಟಿಸುವಂತಹ ವಿಶಿಷ್ಟ ಕ್ಷೇತ್ರವಾಗಿದೆ. ಶ್ರೀ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಂತೆ ಎರಡನೇ ಖ್ಯಾತಿ ಹೊತ್ತ ಕ್ಷೇತ್ರ ಇದಾಗಿದೆ ಎಂದರು.
ಆರಂಭದಲ್ಲಿ ಜಯಲಕ್ಷ್ಮೀ ಶೆಟ್ಟಿ ಪ್ರಾರ್ಥನೆ ಗೈದರು. ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಅತಿಥಿ ಐಕಳ ಹರೀಶ್ ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಸಿಎ ಸಂಜೀವ ಶೆಟ್ಟಿ ಸ್ವಾಗತಿಸಿ ಯೋಜನೆಗೆ ಸರ್ವರ ಸಹಕಾರ ಕೋರಿದರು. ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಮಿತಿಯ ಸಂಚಾಲಕ ಉಳೂ¤ರು ಮೋಹನ್ದಾಸ್ ಶೆಟ್ಟಿ ವಂದಿಸಿದರು.
ವೇದಿಕೆಯಲ್ಲಿ ಮುಂಬಯಿ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ ಎನ್. ಶೆಟ್ಟಿ, ಅಧ್ಯಕ್ಷ ದಿನಕರ ಎನ್. ಶೆಟ್ಟಿ, ಸಂಚಾಲಕ ಉಳೂ¤ರು ಮೋಹನ್ದಾಸ್ ಶೆಟ್ಟಿ, ಉಪಾಧ್ಯಕ್ಷರಾದ ಸಿಎ ಸಂಜೀವ ಶೆಟ್ಟಿ, ಸುರೇಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಗಣೇಶ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ರಮೇಶ್ ಶೆಟ್ಟಿ, ದೇವಸ್ಥಾನ ಸಮಿತಿ ಕಾಳಾವರ ಇದರ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಮೊಕ್ತೇಸರ ರವಿರಾಜ್ ಶೆಟ್ಟಿ ಕಾಳಾವರ, ಕೃಷ್ಣದೇವ್ ಕಾರಂತ, ಸುಬ್ರಹ್ಮಣ್ಯ ಶೆಟ್ಟಿ, ಹರೀಶ್ ಎನ್. ಶೆಟ್ಟಿ, ಮುಂಬಯಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ಸುರೇಶ್ ಶೆಟ್ಟಿ ಮರಾಠ, ಆದರ್ಶ್ ಶೆಟ್ಟಿ, ಅಶೋಕ್ ಶೆಟ್ಟಿ, ಜಗದೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್