ಮಣಿಕಂಠ ಯಕ್ಷಕಲಾ ಕೇಂದ್ರ:  7ನೇ ವಾರ್ಷಿಕೋತ್ಸವ ಸಂಭ್ರಮ


Team Udayavani, Mar 17, 2019, 2:21 PM IST

1605mum03.jpg

ಮುಂಬಯಿ: ಶ್ರೀ ಮಣಿಕಂಠ ಯಕ್ಷಕಲಾ ಕೇಂದ್ರ ಮುಂಬಯಿ ಇದರ ಏಳನೇ ವಾರ್ಷಿಕೋತ್ಸವ ಸಂಭ್ರಮವು ಇತ್ತೀಚೆಗೆ ವಿಕ್ರೋಲಿ ಪೂರ್ವ ಕನ್ನಮ್‌ವಾರ್‌ ನಗರದ ಕಾಮಾYರ್‌ ಕಲ್ಯಾಣ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವ ಹಿಂದು ಪರಿಷತ್‌ ಥಾಣೆ ಇದರ ಅಧ್ಯಕ್ಷ ಪೊಲ್ಯ ಉಮೇಶ್‌ ಶೆಟ್ಟಿ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸನ್‌ಸಿಟಿ ಹೊಟೇಲ್‌ ಅಂಧೇರಿ ಇದರ ಮಾಲಕ ಶಾಂತಾರಾಮ ಶೆಟ್ಟಿ, ರವಿರಾ ಪೊಲಿಪ್ಲಾಸ್ಟ್‌ ಕಂಪೆನಿಯ ಮಾಲಕ ರತ್ನಾಕರ ಶೆಟ್ಟಿ, ಬಂಟರ ಸಂಘ ಮುಂಬಯಿ ಮಾಜಿ ಕಾರ್ಯದರ್ಶಿ ಸಿಎ ಸದಾಶಿವ ಶೆಟ್ಟಿ, ಕನಕ ಫುಡ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ನಿರ್ದೇಶಕ ಜಗದೀಶ್‌ ಶೆಟ್ಟಿ, ಕರ್ನಾಟಕ ಸಂಘ ಅಂಧೇರಿಯ ಸ್ಥಾಪಕ ಸದಸ್ಯ ಕೃಷ್ಣ ಬಿ. ಶೆಟ್ಟಿ, ನವಿಮುಂಬಯಿ ಹೊಟೇಲ್‌ ಓನರ್ ಅಸೋಸಿಯೇಶನ್‌ ಅಧ್ಯಕ್ಷ ದಯಾನಂದ ಶೆಟ್ಟಿ, ವಿಕ್ರೋಲಿ ಕನ್ನಡ ಸಂಘದ ಅಧ್ಯಕ್ಷ ಶ್ಯಾಂಸುಂದರ್‌ ಶೆಟ್ಟಿ, ಭಾರತ್‌ ಕೋಚ್‌ ಬಿಲ್ಡರ್ನ ಕಾರ್ಯಾಧ್ಯಕ್ಷ ಸದಾಶಿವ ಶೆಟ್ಟಿ, ಯಕ್ಷಗಾನ ಅರ್ಥದಾರಿ ಕೆ. ಕೆ. ಶೆಟ್ಟಿ ಹಾಗೂ ಸಂಘದ ಗೌರವಾಧ್ಯಕ್ಷ ಮರಾಠಾ ಸುರೇಶ್‌ ಶೆಟ್ಟಿ ಅವರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಯಕ್ಷಗುರು, ಭಾಗವತ ದೇವಲ್ಕುಂದ ಭಾಸ್ಕರ ಶೆಟ್ಟಿ ಅವರು ಸ್ವಾಗತಿಸಿ, ಅತಿಥಿಗಳನ್ನು  ಗೌರವಿಸಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಅತಿಥಿ-ಗಣ್ಯರು ದೀಪ ಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಗಣ್ಯರು ಸಂದಭೋìಚಿತವಾಗಿ ಮಾತನಾಡಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಊರಿನ ಹಿರಿಯ, ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ದಂಪತಿಯನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. 

ಸಮಾರಂಭದಲ್ಲಿ ಭಾಗವತ ದೇವಲ್ಕುಂದ ಭಾಸ್ಕರ ಶೆಟ್ಟಿ ಅವರ ಯಕ್ಷಗಾನದ ಆಯ್ದ ಹಾಡುಗಳ ಬಡಗುಶೈಲಿಯ ಧ್ವನಿ ಸುರುಳಿಯನ್ನು ಪ್ರಾಯೋಜಕರಾದ ಶಾಂತಾರಾಮ ಶೆಟ್ಟಿ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಸಮ್ಮಾನಿತ ಸುಬ್ರಹ್ಮಣ್ಯ ಧಾರೇಶ್ವರ ಅವರ ಅಭಿನಂದನಾ ಭಾಷಣವನ್ನು ಗೋರೆಗಾಂವ್‌ ಕರ್ನಾಟಕ ಸಂಘದ ವಿಶ್ವಸ್ತ ಜಿ. ಟಿ. ಆಚಾರ್ಯ ಮಾಡಿದರು. ಗೋರೆಗಾಂವ್‌ ಕರ್ನಾಟಕ ಸಂಘದ ವಿಶ್ವಸ್ತ ಸುರೇಂದ್ರ ಸಾಲ್ಯಾನ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಜಗಜೀವನ್‌ ಪೂಜಾರಿ ವಂದಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಮತ್ತು ಊರಿನ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ನಳ-ದಮಯಂತಿ ಯಕ್ಷಗಾನ ಬಯಲಾಟ ನಡೆಯಿತು. ಹಿಮ್ಮೇಳದಲ್ಲಿ ಭಾಗವತ ರಾಗಿ ಸುಬ್ರಹ್ಮಣ್ಯ ಧಾರೇಶ್ವರ, ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಉಡುಪಿ, ಚೆಂಡೆಯಲ್ಲಿ ಕೃಷ್ಣಾನಂದ ನಾಯಕ್‌ ಭಾಗವಹಿಸಿದರು.

ಮುಮ್ಮೇಳದಲ್ಲಿ ಯಕ್ಷಗುರು, ಭಾಗವತ ದೇವಲ್ಕುಂದ ಭಾಸ್ಕರ ಶೆಟ್ಟಿ, ಸತೀಶ್‌ ಪ್ರಭು, ವಿಘ್ನೇಶ್‌ ಭಟ್‌, ಗಣಪತಿ ಭಟ್‌, ಕಡ್ತಲ ಕೃಷ್ಣ ನಾಯಕ್‌, ಶಶಿಧರ ಹೆಗ್ಡೆ, ಗಿರೀಶ್‌ ಗೌಡ, ಸುಧಾಕರ ಶೆಟ್ಟಿ, ಮೊದಲಾದವರು ಭಾಗವಹಿಸಿದರು. ದೇವಲ್ಕುಂದ ಭಾಸ್ಕರ ಶೆಟ್ಟಿ ಇವರ ನಿರ್ದೇಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.