ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 32ನೇ ಕೃತಿ ಬಿಡುಗಡೆ


Team Udayavani, Mar 19, 2019, 2:21 PM IST

1802mum04.jpg

ಮುಂಬಯಿ: ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ  32ನೇ ಕೃತಿ  ಮಂಗಳೂರು ಪತ್ರ ಅಂಕಣ ಬರಹಗಳ ಕೃತಿಯನ್ನು ಮಾ. 13ರಂದು ಮಂಗಳೂರಿನ ಶ್ರೀನಿವಾಸ್‌ ಹೊಟೇಲ್‌ ಕಿರು ಸಭಾಗೃಹದಲ್ಲಿ ಹಿರಿಯ ಲೇಖಕಿ, ಗಣಪತಿ ಜೂನಿಯರ್‌ ಕಾಲೇಜ್‌ನಮಾಜಿ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಅವರು ಬಿಡುಗಡೆಗೊಳಿಸಿದರು.

ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಚಂದ್ರಕಲಾ ನಂದಾವರ ಅವರು , ಮುಂಬಯಿಗೆ ಹಲವು ಬಾರಿ ನಾನು ಕಾರ್ಯಕ್ರಮಗಳಿಗೆ ಹೋಗಿದ್ದೆ. ಮುಂಬಯಿಯ ಬಗ್ಗೆ ನಮಗೆ ಹಲವು ರೀತಿಯ ಭಯ ತರುವ ಕಲ್ಪನೆಗಳಿದ್ದುವು. ಅಂತಹ ಕಲ್ಪನೆಗಳನ್ನು ನನ್ನ ಶಿಷ್ಯ ಶ್ರೀನಿವಾಸ ಜೋಕಟ್ಟೆ ತನ್ನ ವಿಶಿಷ್ಟ ಶೈಲಿಯ ಲೇಖನಿಯ ಮೂಲಕ ದೂರ ಮಾಡಿದ್ದಾರೆ. ಜೋಕಟ್ಟೆಯವರ ಬರಹಗಳು ಸಮಾಜ ಮುಖೀಯಾಗಿದ್ದು ಜೀವನ ಪ್ರೀತಿಯಿಂದ ಕೂಡಿರುತ್ತದೆ. ಇಂತಹ ಶಿಷ್ಯನನ್ನು ಪಡೆದಿರುವ ನನಗೆ ತುಂಬಾ ಹೆಮ್ಮೆ ಅನಿಸುತ್ತಿದೆ. ಆಶಾವಾದದ ಹಣತೆಯಂತೆ ಗೋಚರಿಸುವ ಶ್ರೀನಿವಾಸ ಮುಂದೆಯೂ ಈ ಕ್ಷೇತ್ರದಲ್ಲಿ ಮತ್ತಷ್ಟು ಮಿಂಚಲಿ ಎಂದು ನುಡಿದು ಶುಭ ಹಾರೈಸಿದರು.

ಕೃತಿಯನ್ನು ಲೇಖಕಿ, ಉಪನ್ಯಾಸಕಿ ಡಾ| ನಾಗವೇಣಿ ಮಂಚಿ ಅವರು ಪರಿಚಯಿಸಿ, ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುವ ಶ್ರೀನಿವಾಸ ಜೋಕಟ್ಟೆ ಪ್ರವಾಸ ಸಾಹಿತ್ಯದ ಜತೆ ಕತೆ, ಕವನ, ಲೇಖನಗಳನ್ನು ಬರೆಯುತ್ತಾ ತನ್ನದೇ ಆದ ಛಾಪು ಮೂಡಿಸಿದ್ದಾರೆ. ವರದಿಯೊಂದಿಗೆ ನೀಡುವ ಅವರ ವಿವರಣೆಯಲ್ಲಿ ಪ್ರೀತಿ ತುಂಬಿರುತ್ತದೆ. ಸೌಂದರ್ಯ ಅಡಗಿದೆ. ವರದಿಗೆ ಪ್ರತಿಕ್ರಿಯಿಸುವ ಮತ್ತು ಪ್ರಶ್ನಿಸುವ ಗುಣ ಅವರ ಮಂಗಳೂರು ಪತ್ರ ಅಂಕಣ ಸಂಕಲನದ ಉದ್ದಕ್ಕೂ ಕಾಣಬಹುದಾಗಿದೆ. ಅಂದು ಜೋಕಟ್ಟೆಯವರು ಮಂಗಳೂರಲ್ಲಿದ್ದು ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಗೆ ಬರೆದ ಈ ಅಂಕಣದ ಬಹುತೇಕ ಲೇಖನಗಳು ಅಭಿವೃದ್ಧಿ ಕುರಿತಾದ ಅಧ್ಯಯನಕ್ಕೆ ಯೋಗ್ಯವಾದುದು. ಆಕರ ಗ್ರಂಥವಾಗಿಯೂ ಈ ಕೃತಿ ಬಳಸಬಹುದಾಗಿದೆ. ಮಂಗಳೂರಿನ ಆರ್ಥಿಕ ಪಲ್ಲಟ ಮತ್ತು ಸಾಮಾಜಿಕ ಹೋರಾಟದ ಚಿತ್ರಣ ಈ ಕೃತಿಯಲ್ಲಿ ಅಡಕವಾಗಿದೆ ಎಂದು ನುಡಿದರು.

ವಿಜಯ ಕರ್ನಾಟಕದ ಸ್ಥಾನೀಯ ಸಂಪಾದಕ ಯು. ಕೆ. ಕುಮಾರನಾಥ್‌ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂಬಯಿಯಲ್ಲಿ ತಾನಿದ್ದ  ಆ ದಿನ
ಗಳನ್ನು ನೆನೆಪಿಸಿಕೊಂಡರು. 

1992ರ ಕೋಮುಗಲಭೆ, 1993ರ ಸರಣಿ ಬಾಂಬ್‌ ನ್ಪೋಟದ ದಿನಗಳಲ್ಲಿ ತಾನೂ ಮುಂಬಯಿಯಲ್ಲಿ ಪತ್ರಕರ್ತ ನಾಗಿದ್ದೆ. ಅಂದಿನಿಂದಲೂ ಶ್ರೀನಿವಾಸ ಜೋಕಟ್ಟೆ ನನ್ನ ಜತೆ ಚರ್ಚಿಸುತ್ತಾ ಬಂದವರು. ಕತೆ, ಪ್ರವಾಸ ಬರಹಗಳನ್ನು ಪರಿಣಾಮಕಾರಿಯಾಗಿ ಅವರು ಬರೆಯುತ್ತಾರೆ. ಅವರ ಈ ಅಂಕಣ ಕೃತಿಯೂ ಗಮನ ಸೆಳೆಯುತ್ತದೆ. ಈಗ ಪತ್ರಕರ್ತರು ಈವೆಂಟ್‌ ಮ್ಯಾನೇಜ್‌ಮೆಂಟ್‌ ಮಾಡಬೇಕಾಗುತ್ತದೆ. ಆದರೆ ಇಂದಿಗೂ ಜೋಕಟ್ಟೆ ಅತ್ಛ ಪತ್ರಕರ್ತರಾಗಿಯೇ ಉಳಿದಿದ್ದಾರೆ ಎಂದರು.

ಕೃತಿಕಾರ ಶ್ರೀನಿವಾಸ ಜೋಕಟ್ಟೆ ಎಲ್ಲರನ್ನೂ ಸ್ವಾಗತಿಸಿ ಮಾತನಾಡಿ, ತಾನು 2000 – 2004ರಲ್ಲಿ ಅನಿವಾರ್ಯವಾಗಿ ಮುಂಬಯಿ ತ್ಯಜಿಸಿ ಮಂಗಳೂರಲ್ಲಿದ್ದಾಗ ಕರ್ನಾಟಕ ಮಲ್ಲದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿಯವರು ಮಂಗಳೂರು ಪತ್ರ ಎಂಬ ಅಂಕಣ ಬರೆಸಿದ್ದಾರೆ. ವರದಿ ಆಧಾರಿತ ಈ ಬರಹಗಳು ಆ 
ಕಾಲದ ಮಂಗಳೂರು – ಉಡುಪಿ  ಕರಾವಳಿ ಜಿಲ್ಲೆಗಳ ಅಂದಿನ ದೃಶ್ಯ
ಗಳನ್ನು ತೆರೆದಿಡುತ್ತದೆ. ಇನ್ನೂರಕ್ಕೂ ಹೆಚ್ಚಿನ ಬರಹಗಳಲ್ಲಿ ಐವತ್ತೆರಡನ್ನು ಆಯ್ಕೆ ಮಾಡಿರುವೆ ಎಂದರು.

ಹಿರಿಯ ಪತ್ರಕರ್ತ ಚಿದಂಬರ ಬೆ„ಕಂಪಾಡಿ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ,  ತಾನು ಜೋಕಟ್ಟೆಯವರ ಕಥಾ ಸಂಕಲನವನ್ನು 2003ರಲ್ಲಿ ಬಿಡುಗಡೆಗೊಳಿಸಿದ್ದನ್ನು ನೆನಪಿಸಿಕೊಂಡರು. ಅಂದಿನಿಂದಲೂ ಅವರ ಆತ್ಮೀಯ ಬರಹಗಳನ್ನು ನಿರಂತರವಾಗಿ ಗಮನಿಸುತ್ತಿದ್ದೇನೆ ಎಂದರು.

ಸಭಾ ಕಾರ್ಯಕ್ರಮವನ್ನು ಲೇಖಕಿ, ಸಂಘಟಕಿ ರೇಶ್ಮಾ ಉಳ್ಳಾಲ್‌ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಡಾ| ವಾಮನ ನಂದಾವರ, ಪೇಜಾವರ ಹರಿಯಪ್ಪ, ವಾರ್ತಾ ಭಾರತಿಯ ಹಂಝ ಮಲ್ಹಾರ್‌, ಜಯ ಕಿರಣದ ಜಗನ್ನಾಥ ಶೆಟ್ಟಿ ಬಾಳ, ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ, ಮಂಗಳ ಪತ್ರಿಕೆಯ ಟಿ.ಕೆ. ಸುನೀಲ್‌ ಕುಮಾರ್‌, ಸಂಯುಕ್ತ ಕರ್ನಾಟಕದ ಆರ್‌. ರಾಮಕೃಷ್ಟ, ವಿಶ್ವವಾಣಿಯ ಜಿತೇಂದ್ರ ಕುಂದೇಶ್ವರ ಮೊದಲಾದವರು ಉಪಸ್ಥಿತರಿದ್ದರು. ಎಸ್‌. ಜಯರಾಮ್‌ ಮತ್ತು ರಾಮಕೃಷ್ಣ ಆರ್‌.  ಕಾರ್ಯಕ್ರಮ ಆಯೋಜಿಸಿದ್ದರು.

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.