ತುಳು ಸಂಘ ಬೊರಿವಲಿಯ ವತಿಯಿಂದ ವೃದ್ಧಾಶ್ರಮಕ್ಕೆ ಭೇಟಿ


Team Udayavani, Mar 20, 2019, 4:38 PM IST

1903mum10.jpg

ಮುಂಬಯಿ: ತುಳು ಸಂಘ ಬೊರಿವಲಿಯ ಇದರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ವಸಾಯಿ ಪಶ್ಚಿಮದ ಗ್ರಾಮಾಂತರ ಪ್ರದೇಶದಲ್ಲಿರುವ ಶ್ರದ್ಧಾನಂದ ಮಹಿಳಾ ವೃದ್ದಾಶ್ರಮಕ್ಕೆ ಮಾ. 17ರಂದು ಭೇಟಿ ನೀಡಿದರು. ವೃದ್ಧಾಶ್ರಮದ ಸುಮಾರು 70 ಮಂದಿ ವೃದ್ಧರಿಗೆ ಮಧ್ಯಾಹ್ನದ ಭೋಜನ ಮತ್ತು ಹಣ್ಣು ಹಂಪಲುಗಳನ್ನು ವಿತರಿಸಿ ಅವರೊಡನೆ ಬೆರೆತು ಮಾತುಕತೆ ನಡೆಸಿದರು.

ತುಳು ಸಂಘ ಬೊರಿವಲಿಯ ಅಧ್ಯಕ್ಷ ವಾಸು ಪುತ್ರನ್‌, ಗೌರವ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ್‌ ಸುವರ್ಣ, ಜತೆ ಕಾರ್ಯದರ್ಶಿ ದಿವಾಕರ ಕರ್ಕೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸವಿತಾ ಸಿ. ಶೆಟ್ಟಿ ಹಾಗೂ ಸಂಘದ ಧನ ಸಂಗ್ರಹ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್‌ ಎ. ಶೆಟ್ಟಿ ಅವರ ಮುಂದಾಳತ್ವದಲ್ಲಿ ನಡೆದ  ಈ ಜನಸೇವಾ ಕಾರ್ಯಕ್ರಮದಲ್ಲಿ ರಾಜೇಶ್ವರಿ ಜಿ. ಸುವರ್ಣ, ಕುಸುಮಾ ಬಿ. ಶೆಟ್ಟಿ, ವತ್ಸಲಾ ಕೆ. ಪೂಜಾರಿ, ಲಕ್ಷ್ಮೀ ಜಿ. ದೇವಾಡಿಗ, ಕಸ್ತೂರಿ ಶೆಟ್ಟಿ, ನಳಿನಿ ಅಶೋಕ್‌, ಶೋಭಾ ಪೂಜಾರಿ, ಸುನೀತಾ ಕೆ. ಶೆಟ್ಟಿ, ಸುನಂದಾ ಕೆ. ಶೆಟ್ಟಿ, ಅಶೋಕ್‌ ನಿಂಜೂರು, ವಿಜಯಕುಮಾರ್‌ ಮೂಲ್ಕಿ, ಶೇಖರ ಶೆಟ್ಟಿ, ಸುನಂದಾ ಎಸ್‌. ಶೆಟ್ಟಿ, ಅಶೋಕ್‌ ಸುವರ್ಣ ಅವರು ಉಪಸ್ಥಿತರಿದ್ದರು.

ಬೊರಿವಲಿ ಜಯರಾಜ್‌ ನಗರದಿಂದ ಬಸ್‌ನಲ್ಲಿ ಹೊರಟ ಈ ತಂಡವನ್ನು ಶ್ರದ್ಧಾನಂದ ಮಹಿಳಾ ವೃದ್ಧಾಶ್ರಮದ ಕಾರ್ಯದರ್ಶಿ ಜಗದೀಶ್‌ ಶೆಟ್ಟಿ ಅವರು ಸ್ವಾಗತಿಸಿ, ಆಶ್ರಮದ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಆಶ್ರಮದಲ್ಲಿದ್ದ ವೃದ್ಧರು ಜೀವನ ವೃತ್ತಾಂತ ಮತ್ತು ಅವರು ಎದುರಿಸಿದ ಅನಿರೀಕ್ಷಿತ ಸಮಸ್ಯೆ ಹಾಗೂ ಪ್ರಸ್ತುತ ಆಶ್ರಮದಲ್ಲಿ ಅವರಿಗೆ ಸಿಗುತ್ತಿರುವ ಆರೈಕೆ, ಸಾಂತ್ವನ ಹಾಗೂ ಪ್ರೀತಿ ಗೌರವದ ಬಗ್ಗೆ ವಿವರಿಸಿದರು. ತುಳು ಸಂಘದ ಮಹಿಳಾ ಕಾರ್ಯಕರ್ತೆಯರು  ಬೆರೆತು ಭಜನೆ, ಕುಣಿತದಲ್ಲಿ ಭಾಗವಹಿಸಿ ವೃದ್ಧರಿಗೆ ಸ್ಫೂರ್ತಿ, ನೈತಿಕ ಬೆಂಬಲ ಹಾಗೂ ಆನಂದದ ಕ್ಷಣಗಳನ್ನು ನೀಡಿದರು. ಆಶ್ರಮವಾಸಿಗಳಿಗೆ ಸಂಘದ ಮಹಿಳೆಯರು ಭೋಜನವನ್ನು ಬಡಿಸಿ ಅವರ ಸೇವೆಗೈದರು.

ಸಂಘದ ಅಧ್ಯಕ್ಷ ವಾಸು ಪುತ್ರನ್‌ ಅವರು ಮಾತನಾಡಿ, ಸಂಘದ ಸಾಧನೆಗಳನ್ನು ವಿವರಿಸಿ, ಇಲ್ಲಿಗೆ ಭೇಟಿ ನೀಡುವುದರೊಂದಿಗೆ ಸಂಘದ ಕಾರ್ಯಕರ್ತರು ಹೊಸ ವಿಚಾರದಿಂದ ಸಮಾಜ ಸೇವೆಗೆ ಮತ್ತಷ್ಟು ಉತ್ತೇಜನ ದೊರೆತಂತಾಯಿತು ಎಂದು ಹೇಳಿದರು. ಈ ಅವಕಾಶ ನೀಡಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.