ದಪ್ಪ ಚರ್ಮದ ಸರ್ಕಾರಕ್ಕೆ ಜನರೇ ಪಾಠ ಕಲಿಸುತ್ತಾರೆ..


Team Udayavani, May 12, 2017, 11:35 PM IST

BS-Yadiyoorappa-1-600.jpg

ಸಿದ್ದರಾಮಯ್ಯ ಸರ್ಕಾರದ 4 ವರ್ಷದ ಆಡಳಿತವನ್ನು ಯಾವ ರೀತಿ ಪರಾಮರ್ಶೆ ಮಾಡುತ್ತೀರಿ?
ಸರ್ಕಾರದ ಮೊದಲ ಕೆಲಸ ಕಾನೂನು ಸುವ್ಯವಸ್ಥೆ ಕಾಪಾಡುವುದು. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ನಾಲ್ಕು ವರ್ಷಗಳಲ್ಲಿ 6521 ಕೊಲೆಗಳು ನಡೆದಿವೆ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಇಲಾಖೆಗಳಿಗೆ ನಿಗದಿಪಡಿಸಿರುವ ಅನುದಾನದ ಶೇ. 65ರಷ್ಟು ಕೂಡ ಖರ್ಚು ಮಾಡಿಲ್ಲ. ಭೀಕರ ಬರಗಾಲ ಇದ್ದರೂ ಪರಿಸ್ಥಿತಿ ನಿಭಾಯಿಸುವ ಪ್ರಯತ್ನಕ್ಕೆ ಮುಂದಾಗಿಲ್ಲ. ಜನರ ಸಂಕಷ್ಟ ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ. ಇದು ಇವರ ಸರ್ಕಾರದ ಆಡಳಿತ ವೈಖರಿ.

ಕರ್ನಾಟಕ ನಾಲ್ಕು ವರ್ಷಗಳಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರಲ್ಲಾ?
ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ನಂ. 1 ರಾಜ್ಯ ಎಂದು ಕರೆಸಿಕೊಳ್ಳುವ ಹೀನ ಸ್ಥಿತಿಗೆ ಮುಖ್ಯಮಂತ್ರಿಗಳು ತಳ್ಳಿದ್ದಾರೆ. ಈ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫ‌ಲವಾಗಿದೆ ಎಂದು ಹೇಳಲು ಇದಕ್ಕಿಂತ ಇನ್ನೇನು ಉದಾಹರಣೆ ಬೇಕು?

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ನಂ. 1 ಎಂದು ಸಿಎಂ ದೂರುತಿದ್ದಾರಲ್ಲಾ?
ಕಾಂಗ್ರೆಸ್‌ ಹೊರತುಪಡಿಸಿ ಬೇರೆ ಯಾರೂ ಬಿಜೆಪಿ ಸರ್ಕಾರವನ್ನು ಭ್ರಷ್ಟ ಸರ್ಕಾರ ಎಂದು ಹೇಳಿರಲಿಲ್ಲ. ಆದರೆ, ರಾಜ್ಯದ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ನಂ. 1 ಎಂದು ಹೇಳಿದ್ದು ಬಿಜೆಪಿಯವರಲ್ಲ, ಒಂದು ಸ್ವಯಂ ಸೇವಾ ಸಂಸ್ಥೆ. ಸಮೀಕ್ಷೆ ನಡೆಸಿದ 20 ರಾಜ್ಯಗಳ ಪೈಕಿ ಭ್ರಷ್ಟಾಚಾರದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಅಂದರೆ 77 ರೇಟಿಂಗ್‌ ನೀಡಲಾಗಿದೆ.

ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಕಾಂಗ್ರೆಸ್‌ ನಾಯಕರು ಹೇಳ್ತಾರಲ್ಲಾ?
ಭೀಕರ ಬರಗಾಲ ಇರುವಾಗ ಸಚಿವರು ಸಹಜವಾಗಿ ಪ್ರವಾಸ  ಡಬೇಕು. ಆದರೆ, ಮುಖ್ಯಮಂತ್ರಿ, ಕೃಷಿ ಸಚಿವರು ಸೇರಿದಂತೆ ಯಾವ ಸಚಿವರು ಪ್ರವಾಸ ಮಾಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ? ಯಾವ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ? ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ 1685.52 ಕೋಟಿ ರೂ. ನೀಡಿದ್ದರೂ ಇನ್ನೂ ಸಮಾರು 700-800 ಕೋಟಿ ರೂ. ರೈತರ ಖಾತೆಗಳಿಗೆ ಹಾಕಿಲ್ಲ. 

ಬರ ನಿರ್ವಹಣೆಗೆ ಸರ್ಕಾರ ಏನೂ ಮಾಡಿಯೇ ಇಲ್ಲವಾ?
ನನ್ನ ಪ್ರಕಾರ ಅಲ್ಲ, ಜನರೂ ಇದನ್ನೇ ಹೇಳುತ್ತಿದ್ದಾರೆ. ಕೆಪಿಸಿಸಿಗೆ ಮುಂದಿನ ಅಧ್ಯಕ್ಷರು ಯಾರಾಗಬೇಕು ಎಂಬ ಗೊಂದಲದಲ್ಲಿ ಆಡಳಿತ ನಡೆಸುವವರು ಮುಳುಗಿದ್ದಾರೆಯೇ ಹೊರತು ರಾಜ್ಯ ಪ್ರವಾಸ ಮಾಡಿ ಬರ ಪರಿಸ್ಥಿತಿ ತಿಳಿಯುವ ಪ್ರಯತ್ನ ಮಾಡಿಲ್ಲ. ಕುಡಿಯುವ ನೀರಿನ ಸಮಸ್ಯೆ ಕಲ್ಪನೆ ಮಾಡಿಕೊಳ್ಳಲೂ ಸಾಧ್ಯವಾಗದ ಸ್ಥಿತಿಯಲ್ಲಿದೆ. ಜನರಿಗೆ ಮಾತ್ರವಲ್ಲ, ಪಶು-ಪಕ್ಷಿಗಳಿಗೂ ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ. ಇದಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದೆ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಇದನ್ನು ಬರ ನಿರ್ವಹಣೆ ಎನ್ನಲು ಸಾಧ್ಯವೇ? ಆದರೆ, ಬಿಜೆಪಿ ಸರ್ಕಾರ ಇದ್ದಾಗ ಸಚಿವರು ಮಾತ್ರವಲ್ಲ, ಅಧಿಕಾರಿಗಳು ಕೂಡ ಜಿಲ್ಲೆಗೆ ಭೇಟಿ ನೀಡುತ್ತಿದ್ದರು.

ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿಯವರು ಹೇಳಿದ್ದರಲ್ಲಾ ?
ಅಭಿವೃದ್ಧಿಯಲ್ಲಿ ಕರ್ನಾಟಕ ನಂ.1 ಎಂದು ಹೇಳುತ್ತಿರುವುದು ಕಾಂಗ್ರೆಸ್‌ನವರು ಮಾತ್ರ. ಹಣ ಸದ್ಬಳಕೆಯಾಗುತ್ತಿಲ್ಲ ಎಂಬುದಕ್ಕೆ ಅಂಕಿ ಅಂಶಗಳ ಉತ್ತರ ನೀಡಲು ಸಿದ್ಧ. ಹಿಂದುಳಿದ ವರ್ಗದವರಿಗಾಗಿ ಇರುವ ದೇವರಾಜ ಅರಸು ಅಭಿವೃದ್ಧಿ ನಿಗಮದಲ್ಲಿ ಕಳೆದ 4 ವರ್ಷಗಳಲ್ಲಿ ಖರ್ಚಾಗಿರುವುದು ಕೇವಲ 740 ಕೋಟಿ ರೂ. ಮಾತ್ರ. ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಕೇಂದ್ರದಿಂದ 2018 ಕೋಟಿ ರೂ. ಬಂದಿದ್ದರೂ ಕೇವಲ 568 ಕೋಟಿ ರೂ. ವೆಚ್ಚವಾಗಿದೆ. ಕೇಂದ್ರದ ಹಣ ಖರ್ಚು ಮಾಡಲೂ ಸಾಧ್ಯವಾಗದ ವಿಚಿತ್ರ ಪರಿಸ್ಥಿತಿ ಇದೆ. 

ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಗಳು ಸರ್ಕಾರದ ಸಾಧನೆಯಲ್ಲವೇ?
ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ್ದು. 1.65 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿಯನ್ನು ಕಿಲೋ 32 ರೂ.ಗೆ ಖರೀದಿಸಿ 3 ರೂ.ಗೆ, 65 ಸಾವಿರ ಮೆಟ್ರಿಕ್‌ ಟನ್‌ ಗೋಧಿಯನ್ನು 22 ರೂ.ನಂತೆ ಖರೀದಿಸಿ 2 ರೂ.ಗೆ ರಾಜ್ಯ ಸರ್ಕಾರಕ್ಕೆ ಕೊಡುತ್ತಿದೆ. ಆದರೆ, ಕಾಂಗ್ರೆಸ್‌ನವರು ಅದೆಲ್ಲಾ ನಮ್ಮದೇ ಅಂತ ಬೊಬ್ಬೆ ಹೊಡೆಯುತ್ತಿದ್ದಾರೆ. 

ಜವಾಬ್ದಾರಿಯುತ ಪ್ರತಿಪಕ್ಷವಾಗಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬಹುದಿತ್ತು. ಆ ವಿಚಾರದಲ್ಲಿ ನೀವೂ ವಿಫ‌ಲರಾಗಿದ್ದೀರಾ?
ಸದನದ ಒಳಗೆ ನಮ್ಮವರು ಈ ವಿಚಾರ ಹೇಳಿದರೆ ಸ್ಪಂದಿಸುತ್ತಿಲ್ಲ. ನನ್ನ ಪ್ರವಾಸದ ವೇಳೆ ಮಾತ್ರವಲ್ಲದೆ, ಪಕ್ಷದ ಇತರೆ ಮುಖಂಡರು ಪ್ರವಾಸ ಮಾಡುವಾಗ ಅಂಕಿ ಅಂಶಗಳ ಸಹಿತ ಸರ್ಕಾರದ ವೈಫ‌ಲ್ಯಗಳನ್ನು ಬಿಚ್ಚಿಡುತ್ತಿದ್ದೇವೆ. ಆದರೆ, ದಪ್ಪ ಚರ್ಮದ ಕಾಂಗ್ರೆಸ್‌ ಸರ್ಕಾರ ಇದಾವುದಕ್ಕೂ ಕಿವಿಗೊಡುತ್ತಿಲ್ಲ. ಹೀಗಾಗಿ ಜನರೇ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ.

ಪ್ರತಿಪಕ್ಷವಾಗಿ ಬಿಜೆಪಿ ರಾಜ್ಯದಲ್ಲಿ ಮಾಡಿರುವ ಕೆಲಸ ನಿಮಗೆ ತೃಪ್ತಿ ತಂದಿದೆಯೇ?
ಖಂಡಿತ, ಸದನದ ಒಳಗೆ ಮತ್ತು ಹೊರಗೆ ಸಾಕಷ್ಟು ಹೋರಾಟ ಮಾಡುತ್ತಿರುವ ಬಗ್ಗೆ ತೃಪ್ತಿ ಇದೆ. ಆದರೆ, ಇದು ದಪ್ಪಚರ್ಮದ ಸರ್ಕಾರ ಆಗಿರುವುದರಿಂದ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಏನು ಮಾಡಿದರೂ ನಡೆಯುತ್ತದೆ ಎಂಬ ಸರ್ವಾಧಿಕಾರಿ ಧೋರಣೆ, ಹೈಕಮಾಂಡ್‌ ಸುಮ್ಮನಿರುತ್ತದೆ ಎಂದು ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಕಾಂಗ್ರೆಸ್‌ ಸರ್ಕಾರ ಸುಮ್ಮನಿದ್ದರೆ ನಾವೇನು ಮಾಡಲು ಸಾಧ್ಯ?

— ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ 
– ಸಂದರ್ಶನ: ಪ್ರದೀಪ್‌ ಕುಮಾರ್‌ ಎಂ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಳಿದ ಕಡೆ ಸಚಿವರ ಕುಟುಂಬಕ್ಕೆ ಟಿಕೆಟ್‌ ಕೊಟ್ಟರು, ಕೋಲಾರದಲ್ಲಿ ಮಾತ್ರ ಏಕೆ ಹೀಗೆ?

Kolar:ಉಳಿದ ಕಡೆ ಸಚಿವರ ಕುಟುಂಬಕ್ಕೆ ಟಿಕೆಟ್‌ ಕೊಟ್ಟರು, ಕೋಲಾರದಲ್ಲಿ ಮಾತ್ರ ಏಕೆ ಹೀಗೆ?

Elections ಹೊಸದಲ್ಲ, ಸ್ಪರ್ಧೆ ಮಾತ್ರ ಹೊಸದು: ಮೃಣಾಲ್‌ ಹೆಬ್ಬಾಳ್ಕರ್

Elections ಹೊಸದಲ್ಲ, ಸ್ಪರ್ಧೆ ಮಾತ್ರ ಹೊಸದು: ಮೃಣಾಲ್‌ ಹೆಬ್ಬಾಳ್ಕರ್

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಪ್ರತೀ ಊರಲ್ಲೂ ಗುಣಮುಖರಾದ 10ರಿಂದ 20 ಹೃದ್ರೋಗಿ ಕುಟುಂಬಗಳಿವೆ, ಅವರೇ ಕಾರ್ಯಕರ್ತರು

ಪ್ರತೀ ಊರಲ್ಲೂ ಗುಣಮುಖರಾದ 10ರಿಂದ 20 ಹೃದ್ರೋಗಿ ಕುಟುಂಬಗಳಿವೆ, ಅವರೇ ಕಾರ್ಯಕರ್ತರು

S. T. Somashekhar; ಇಷ್ಟೆಲ್ಲ ಅವಮಾನ ಆದ ಮೇಲೆ ಅಲ್ಲಿದ್ದು ಏನು ಮಾಡಲಿ?

S. T. Somashekhar; ಇಷ್ಟೆಲ್ಲ ಅವಮಾನ ಆದ ಮೇಲೆ ಅಲ್ಲಿದ್ದು ಏನು ಮಾಡಲಿ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.