ಮೋದಿ ಅಮೆರಿಕ ಭೇಟಿ ಅನುಕೂಲಕರ ಫ‌ಲಿತವಿರಲಿ


Team Udayavani, Jun 24, 2017, 7:09 AM IST

24-ankana-3.jpg

ಮೋದಿ-ಟ್ರಂಪ್‌ ಭೇಟಿಯನ್ನು ಪಾಕ್‌ ಆತಂಕದಿಂದಲೇ ಗಮನಿಸುತ್ತದೆ. ಭಾರತ ಮತ್ತು ಅಮೆರಿಕ ನಿಕಟ
ವಾದಷ್ಟೂ ತನಗೆ ಗಂಡಾಂತರ ಎನ್ನುವುದು ಚೆನ್ನಾಗಿ ಅರ್ಥವಾಗಿದೆ.

ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳಲಿರುವ ಅಮೆರಿಕ ಪ್ರವಾಸ ಬಹಳಷ್ಟು ಕುತೂಹಲ ಕೆರಳಿಸಿದೆ. ಜೂ.26ರಂದು ಶ್ವೇತ ಭವನದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜತೆಗೆ ಮೋದಿ ನಡೆಸಲಿರುವ ಮಾತುಕತೆಯ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಪ್ರಧಾನಿಯಾದ ಬಳಿಕ ಮೋದಿ ಕೈಗೊಳ್ಳುತ್ತಿರುವ ಐದನೇ ಅಮೆರಿಕ ಪ್ರವಾಸವಿದು. ಅಂತೆಯೇ ಮೋದಿ ಮತ್ತು ಟ್ರಂಪ್‌ ನಡುವಿನ ಮೊದಲ ದ್ವಿಪಕ್ಷೀಯ ಮಾತುಕತೆಯೂ ಹೌದು. 2014ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ನೀಡಿದ ಭೇಟಿಯಲ್ಲಿ ದ್ವಿಪಕ್ಷೀಯ ಸಂಬಂಧ ವರ್ಧನೆಯ ಜತೆಗೆ ಅಮೆರಿಕದಲ್ಲಿರುವ ಭಾರತೀಯ ಮೂಲದವರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶ ಇತ್ತು. ಮ್ಯಾಡಿಸನ್‌ ಸ್ಕ್ವೇರ್‌ನಲ್ಲಿ ಈ ಉದ್ದೇಶಕ್ಕಾಗಿಯೇ ಅನಿವಾಸಿ ಭಾರತೀಯರ ಸಮಾವೇಶನ್ನು ಏರ್ಪಡಿಸಲಾಗಿತ್ತು. ಎರಡನೇ ಭೇಟಿಯಲ್ಲಿ ಆ್ಯಪಲ್‌, ಮೈಕ್ರೋಸಾಫ್ಟ್, ಫೇಸ್‌ಬುಕ್‌, ಗೂಗಲ್‌, ಕ್ವಾಲ್ಕಮ್‌, ಸಿಸ್ಕೊ, ಅಡೋಬ್‌, ಟೆಸ್ಲಾ ಮತ್ತಿತರ ಜಾಗತಿಕ ಸಂಸ್ಥೆಗಳ ಸಿಇಒಗಳನ್ನು ಭೇಟಿ ಮಾಡುವ ಮೂಲಕ ಡಿಜಿಟಲ್‌ ವಾಣಿಜ್ಯ ವ್ಯವಹಾರಗಳ ಉತ್ತೇಜನಕ್ಕೆ ಪ್ರಯತ್ನ ನಡೆಯಿತು. ಕಳೆದ ವರ್ಷ ಮಾರ್ಚ್‌ನಲ್ಲಿ ಪರಮಾಣು ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸುವ ಸಲುವಾಗಿ ಮೋದಿ ಅಮೆರಿಕಕ್ಕೆ ಹೋಗಿದ್ದರು. ನಾಲ್ಕನೇ ಭೇಟಿಯಲ್ಲಿ ಪೂರ್ಣ ಪ್ರಮಾಣದ ದ್ವಿಪಕ್ಷೀಯ ಮಾತುಕತೆ ನಡೆಸಲಾಯಿತು. ಈ ಎಲ್ಲ ಭೇಟಿಯ ಸಂದರ್ಭದಲ್ಲಿ ಅಧ್ಯಕ್ಷರಾಗಿದ್ದವರು ಬರಾಕ್‌ ಒಬಾಮಾ. ಆದರೆ ಈ ಐದನೇ ಭೇಟಿಯ ಸಂದರ್ಭದಲ್ಲಿ ಅಮೆರಿಕದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ ಹಾಗೂ ಈ ಬದಲಾವಣೆ ಜಾಗತಿಕ ಪರಿಣಾಮಗಳನ್ನು ಬೀರಿದೆ. ಹೀಗಾಗಿ ಟ್ರಂಪ್‌ ಮತ್ತು ಮೋದಿ ಭೇಟಿಯನ್ನು ಇಡೀ ವಿಶ್ವ ಎದುರು ನೋಡುತ್ತಿದೆ. 

ಟ್ರಂಪ್‌-ಮೋದಿ ಮಾತುಕತೆಯ ಅಜೆಂಡಾ ಏನು ಎನ್ನುವುದು ಇನ್ನೂ ಬಹಿರಂಗವಾಗಿಲ್ಲ. ಇದು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಆಯಾಮಗಳಿರುವ ಭೇಟಿ ಎನ್ನಲಾಗುತ್ತಿದೆ. ಹೂಡಿಕೆಯ ಹರಿವು, ತಂತ್ರಜ್ಞಾನ ಮತ್ತು ಅನ್ವೇಷಣೆಗಳ ಸಹಭಾಗಿತ್ವ, ಭಯೋತ್ಪಾದನೆ ನಿಗ್ರಹ, ಸೈಬರ್‌ ಭದ್ರತೆ ಸಹಕಾರ, ರಕ್ಷಣಾ ಸಹಕಾರ ಇತ್ಯಾದಿ ಮಾಮೂಲು ದ್ವಿಪಕ್ಷೀಯ ವಿಚಾರಗಳು ಚರ್ಚೆಗೆ ಬರಲಿವೆ. ಪಾಕಿಸ್ತಾ ನಕ್ಕೆ ಸಂಬಂಧಿಸಿದಂತೆ ಟ್ರಂಪ್‌ ಸರಕಾರ ಬಿಗಿ ನಿಲುವು ತಳೆದಿದೆ. ಪಾಕ್‌ಗೆ ನೀಡುವ ನೆರವನ್ನು ಕಡಿತಗೊಳಿಸುವ ಪ್ರಸ್ತಾವವೂ ಅವರ ಬಳಿಯಿದೆ. ಜತೆಗೆ ಪಾಕ್‌ನ ಉಗ್ರರ ಅಡಗುತಾಣಗಳಿಗೆ ಡ್ರೋನ್‌ ದಾಳಿ ಮಾಡುವ ಸಾಧ್ಯತೆಯನ್ನೂ ಅಮೆರಿಕ ಪರಿಶೀಲಿಸುತ್ತಿದೆ. ಭಯೋತ್ಪಾದನೆ ವಿಚಾರದಲ್ಲಿ ಅಮೆರಿಕ ಕೈಗೊಳ್ಳುವ ಯಾವುದೇ ನಿರ್ಧಾರ ಭಾರತಕ್ಕೆ ಅನುಕೂಲಕರವಾಗಿರುತ್ತದೆ ಎಂದು ನಿರೀಕ್ಷಿಸಬಹುದು. ಭಾರತ ಬಹುಕಾಲದಿಂದ ನಿರೀಕ್ಷಿಸುತ್ತಿದ್ದ 22 ಗಾರ್ಡಿಯನ್‌ ಡ್ರೋನ್‌ಗಳನ್ನು ನೀಡಲು ಅಮೆರಿಕ ಒಪ್ಪಿಕೊಂಡಿರುವುದು ಸಕಾರಾತ್ಮಕವಾದ ಬೆಳವಣಿಗೆ. 

ಇದೇ ವೇಳೆ ಚೀನಕ್ಕೆ ಮೋದಿ-ಟ್ರಂಪ್‌ ಮಾತುಕತೆ ಮೇಲೆ ಮಿತಿಮೀರಿದ ಕುತೂಹಲ ಇರುವಂತೆ ಕಾಣಿಸುತ್ತದೆ. ಏಶ್ಯಾ ಫೆಸಿಫಿಕ್‌ ವಲಯದಲ್ಲಿ ಸೇನಾ ಸಂಬಂಧವನ್ನು ಗಟ್ಟಿಗೊಳಿಸುವ ಯಾವುದೇ ಕ್ರಮ ದಕ್ಷಿಣ ಚೀನ ಸಾಗರದ ಮೇಲಿನ ಶಾಂತಿಯನ್ನು ಕದಡುವ ಸಾಧ್ಯತೆಯಿದೆ ಎಂದು ಚೀನ ಬಹಿರಂಗವಾಗಿ ಎಚ್ಚರಿಸಿದೆ. ದಕ್ಷಿಣ ಚೀನ ಸಮುದ್ರದ ಮೇಲಿನ ತನ್ನ ಸಾರ್ವಭೌಮತ್ವಕ್ಕೆ ಎದುರಾಗುವ ಯಾವ ಸವಾಲನ್ನು ಕೂಡ ಸಹಿಸಲು ಚೀನ ತಯಾರಿಲ್ಲ. ತನ್ನದೇ ಪ್ರಯತ್ನದಿಂದ ಇಲ್ಲಿ ಶಾಂತಿ ನೆಲೆಯಾಗಿದೆ ಎಂದು ಹೇಳಿಕೊಳ್ಳುತ್ತಿರುವ ಚೀನ, ಭಾರತ ಮತ್ತು ಅಮೆರಿಕ ಶಾಂತಿಗೆ ಅಪಾಯಕಾರಿ ಎಂದು ಭಾವಿಸಿದೆ. 

ಇದೇ ವೇಳೆ ಟ್ರಂಪ್‌ ಸರಕಾರದ ಎಚ್‌1ಬಿ ವೀಸಾ ನೀತಿಯ ಕುರಿತು ಮೋದಿ ನಡೆಸಬಹುದಾದ ಮಾತುಕತೆಯ ಮೇಲೂ ಚೀನಕ್ಕೆ ಆಸಕ್ತಿಯಿದೆ. ಏಕೆಂದರೆ ಟ್ರಂಪ್‌ ವೀಸಾ ನೀತಿಯಿಂದ ಹೆಚ್ಚು ನಷ್ಟವಾಗಿರುವುದು ಚೀನ ಮತ್ತು ಭಾರತಕ್ಕೆ. ಮೋದಿ ಭೇಟಿಯಿಂದ ವೀಸಾ ವಿಚಾರದಲ್ಲಿ ಟ್ರಂಪ್‌ ಮೆದುವಾದರೆ ಅದರ ಲಾಭ ತನಗೂ ಸಿಗಬಹುದು ಎನ್ನುವುದು ಚೀನದ ಲೆಕ್ಕಾಚಾರ. ಪಾಕ್‌ ಈ ಭೇಟಿಯನ್ನು ಆತಂಕದಿಂದಲೇ ಗಮನಿಸುತ್ತದೆ. ಭಾರತ ಮತ್ತು ಅಮೆರಿಕ ನಿಕಟವಾದಷ್ಟೂ ತನಗೆ ಗಂಡಾಂತರ ಎನ್ನುವುದು ಅದಕ್ಕೆ  ಚೆನ್ನಾಗಿ ಅರ್ಥವಾಗಿದೆ. ಪ್ರಧಾನಿ ಮೋದಿಯವರ ಅಮೆರಿಕ ಭೇಟಿ, ಟ್ರಂಪ್‌ ಅವರ ಕೆಲವು ಕಠಿಣ, ಹಠಮಾರಿ ಧೋರಣೆ  ಹೊರತಾಗಿ  ಭಾರತಕ್ಕೆ ಅನುಕೂಲವಾಗಲಿ ಎಂಬುದೇ ಹಾರೈಕೆ. 

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.