ಅವಧಿಗೆ ಮುಂಚೆ ನ.ಪಂ. ತಯಾರಿ; ಎದುರಾಗಲಿದೆ ಕುಡಿಯುವ ನೀರಿನ ಸಮಸ್ಯೆ


Team Udayavani, Feb 22, 2017, 2:26 PM IST

2102SLE-7.jpg

ಸುಳ್ಯ :  ಕಳೆದ ಬೇಸಿಗೆಯಲ್ಲಿ ನ.ಪಂ. ನೀರಿನ ಪಾಠ ಕಲಿತಿರುವಂತೆ ತೋರುತ್ತಿದೆ. ಹಾಗಾಗಿ ಈ ಬಾರಿ ಬಲು ಬೇಗ ಎಚ್ಚರಗೊಂಡಿದೆ.

ಪಯಸ್ವಿನಿ ನದಿಗೆ ಮರಳಿನ ಒಡ್ಡು ಕಟ್ಟಿ ನೀರಿನ ಸಂಗ್ರಹಕ್ಕೆ ಫೆಬ್ರವರಿಯಲ್ಲೇ  ಮುಂದಾ ಗಿದೆ. ಪ್ರತೀ ವರ್ಷ ಒಂದೆ ರಡು ಲಕ್ಷ ರೂ. ವೆಚ್ಚದಲ್ಲಿ  ನಿರ್ಮಿಸುತ್ತಿದ್ದ ಮರಳಿನ ಒಡ್ಡು ಈ ಬಾರಿ 5 ಲಕ್ಷ ರೂ.  ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ನೀರು ಸಂಗ್ರಹಣಾ ಸ್ಥಳದ ವಿಸ್ತರಣೆ ಜತೆಗೆ ಬಳಿಯ ಹೊಳೆಯ ಹೂಳನ್ನೂ ಎತ್ತಲಾಗಿದೆ.

ಕಳೆದ ವರ್ಷ ಮಳೆ ಕೊರತೆಯಿಂದ ಪಯಸ್ವಿನಿ ಬಹು ಬೇಗನೆ ಬತ್ತಿತ್ತು. ಇದ ರಿಂದಾಗಿ ಕುಡಿಯುವ ನೀರಿಗೆ ಹಾಹಾ ಕಾರವೆದ್ದಿತ್ತು. ನೀರಿನ ಸಮಸ್ಯೆಯನ್ನು ಎದುರಿಸಲು 11 ಹೊಸ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. 
 
ಕಿಂಡಿ ಅಣೆಕಟ್ಟು ಯೋಜನೆ ದೂರ
ನ.ಪಂ. ಆಡಳಿತಾತ್ಮಕವಾಗಿ 20 ಸಾವಿರ ಜನಸಂಖ್ಯೆಯನ್ನು ಹೊಂದಿದೆ. ಆದರೆ ಇಲ್ಲಿ ವ್ಯಾಪಾರ ವಹಿವಾಟು, ಶಿಕ್ಷಣಕ್ಕಾಗಿ ಬರುವವರ ಸಂಖ್ಯೆ ದಿನಕ್ಕೆ 15 ಸಾವಿರ ಮಂದಿ ಪ್ರತ್ಯೇಕ. ಇವರಿಗೂ ಕುಡಿಯುವ ನೀರು ಪೂರೈಸುವ ಹೊಣೆ ಆಡಳಿತದ್ದು. ಒಟ್ಟು 18 ವಾರ್ಡುಗಳಿದ್ದು, ದುಗ್ಗಲಡ್ಕ ವ್ಯಾಪ್ತಿಯ 2 ವಾರ್ಡು ಬಿಟ್ಟು ಉಳಿದೆಲ್ಲ ಜನವಸತಿ ಪ್ರದೇಶಗಳಿಗೆ ನದಿ ನೀರನ್ನೇ ಶುದ್ಧೀಕರಿಸಿ ಪೂರೈಸಲಾಗುತ್ತಿದೆ.

ಯೋಜನೆ ನನೆಗುದಿಗೆ
2 ವರ್ಷದ ಹಿಂದೆ ರೂಪಿಸಲಾದ 67 ಕೋಟಿ ರೂ. ವೆಚ್ಚದ ಸುಳ್ಯ ನಗರ ಸಮಗ್ರ ಕುಡಿಯುವ ನೀರು ಪೂರೈ ಸುವ ಯೋಜನೆಗೆ ಅನುದಾನ ಬಿಡುಗಡೆ ಯಾಗದ ಕಾರಣ ಯೋಜನೆ ನನೆಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಮಣ್ಣಿನ ಒಡ್ಡೇ ಗತಿಯಾಗಿದೆ. 

50 ವರ್ಷಗಳ ಹಿಂದೆ ನಿರ್ಮಿಸಲಾದ ಕಲ್ಲುಮುಟಿನ ಪಂಪ್‌ ಹೌಸ್‌ ಶಿಥಿಲ ಗೊಂಡು ಕುಸಿಯುವ ಸ್ಥಿತಿ ತಲುಪಿದೆ. ಮಳೆಗಾಲದಲ್ಲಿ ಒಳಗೆಲ್ಲ ಸೋರುತ್ತಿದ್ದು, ಟೆರೆಸ್‌ಗೆ ಪ್ಲಾಸ್ಟಿಕ್‌ ಹೊದಿಸ ಲಾಗಿದೆ. ಆದರೂ ಮಳೆ ನೀರು ಒಳಗೆ ಜಿನುಗು ತ್ತಿದೆ. ವಿದ್ಯುತ್‌ ಗೋಡೆಯಲ್ಲಿ ಪ್ರವ ಹಿಸಿ ಪ್ರಾಣ ಭೀತಿ ಒಡ್ಡುತ್ತಿದೆ. ಈ ಕಾರಣದಿಂದ ಪಂಪ್‌ಹೌಸ್‌ನಲ್ಲಿರುವ ಸಿಬಂದಿ ಇದರೊಳಗೆ ತಂಗಲು ಭಯ ಪಡುತ್ತಿ ದ್ದಾರೆ. ನಗರಾಡಳಿತ ಕೂಡಲೇ ನೂತನ ಪಂಪ್‌ ಹೌಸ್‌ನ್ನು ನಿರ್ಮಿಸಬೇಕಾಗಿದೆ.

ಬೇರೇನೆ ಪ್ರಸ್ತಾವನೆ
ಎರಡು ವರ್ಷಗಳ ಹಿಂದೆ ರೂಪಿಸಲಾದ 67 ಕೋಟಿ ರೂ. ವೆಚ್ಚದ ಸುಳ್ಯನಗರ ಸಮಗ್ರ ಕುಡಿಯುವ ನೀರು ಪೂರೈಸುವ ಯೋಜನೆ ಪ್ರಸ್ತಾವನೆಯಲ್ಲೇ ಇದೆ. ಈ ಯೋಜನೆಗೆ ಬೃಹತ್‌ ಪ್ರಮಾಣದಲ್ಲಿ ಅನುದಾನ ಬೇಕಾಗಿದ್ದು, ಅನುಮೋದನೆ ಸಿಗುವಲ್ಲಿ ವಿಳಂಬವಾಗುತ್ತದೆ. ಈಗ ಕಿಂಡಿ ಅಣೆಕಟ್ಟು ಯೋಜನೆಗೆ ಬೇರೇನೇ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ. ಅದರಂತೆ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಗೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲಿದ್ದೇವೆ. ನೂತನ ಪಂಪ್‌ ಹೌಸ್‌ ನಿರ್ಮಾಣಕ್ಕೆ  ಯೋಜನೆ ರೂಪಿಸಲಾಗುತ್ತಿದ್ದು, ನಗರೋತ್ಥಾನ ಯೋಜನೆಯ ಅನುದಾನವನ್ನು  ಬಳಸಿಕೊಳ್ಳುವ ಚಿಂತನೆ ಇದೆ.

– ಚಂದ್ರಕುಮಾರ್‌, ಮುಖ್ಯಾಧಿಕಾರಿ, 
ನಗರ ಪಂಚಾಯತ್‌ ಸುಳ್ಯ

ಟಾಪ್ ನ್ಯೂಸ್

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.