ಜೋಡಿ ಕೊಲೆ: ಆರೋಪಿಗಳಿಗೆ ಜೀವಾವಧಿ ಸಜೆ
Team Udayavani, Feb 26, 2017, 12:11 PM IST
ಪುತ್ತೂರು: ನಾಲ್ಕೂವರೆ ವರ್ಷಗಳ ಹಿಂದೆ ಕೋಡಿಂಬಾಳ ಉಂಡಿಲ ನಿವಾಸಿಗಳಾದ ಬೇಬಿ ಥಾಮಸ್ ಮತ್ತು ಅವರ ಪತ್ನಿ ಮೇರಿ ಥಾಮಸ್ ದಂಪತಿಯನ್ನು ಬರ್ಬರವಾಗಿ ಕೊಲೆಗೈದ ಪ್ರಕರಣದ ಇಬ್ಬರು ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಪೀಠ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಸೋಮವಾರಪೇಟೆ ತಾಲೂಕಿನ ಮಹಮ್ಮದ್ ರಫೀಕ್ ಅಲಿಯಾಸ್ ರಫೀಕ್ ಮತ್ತು ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ನುರಿಯಾಳು ನಿವಾಸಿ ಮಹಮ್ಮದ್ ಕಮಲುದ್ದೀನ್ ಯಾನೆ ಸೈದು ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು.
2012ರ ಸೆ. 25ರಂದು ರಾತ್ರಿ ಆರೋಪಿಗಳು ಉಂಡಿಲದ ಬೇಬಿ ಥಾಮಸ್ ಅವರ ಮನೆ ಮುಂಭಾಗಕ್ಕೆ ಬಂದು ಬೈಕ್ ಹಾಳಾಗಿದ್ದು, ಪತ್ನಿಯ ಮನೆಗೆ ಹೋಗಬೇಕಾಗಿರುವುದಾಗಿ ಹೇಳಿದ್ದರು. ಬೇಬಿ ಥಾಮಸ್ ಅವರು ತನ್ನ ಇಂಡಿಕಾ ಕಾರಿನಲ್ಲಿ ಈ ಇಬ್ಬರನ್ನು ಕರೆದುಕೊಂಡು ಹೋಗಿದ್ದರು. ಬೊಳ್ಳೂರು ಕ್ರಾಸ್ ಸಮೀಪ ಕಾರಿನೊಳಗೆ ಬೇಬಿ ಥಾಮಸ್ ಅವರನ್ನು ಮತ್ತು ಉಂಡಿಲದ ಮನೆಯಲ್ಲಿ ಬೇಬಿ ಥಾಮಸ್ ಅವರ ಪತ್ನಿ ಮೇರಿ ಥಾಮಸ್ ಅವರ ಕುತ್ತಿಗೆ ಇರಿದು ಕೊಲೆ ಮಾಡಿದ್ದರು.
ಅನಂತರ ಆರೋಪಿಗಳು 90,800 ರೂ. ಮೌಲ್ಯದ ಚೈನ್, ಬೆಂಡೋಲೆ ಮನೆಯ ಕಪಾಟಿ ನಲ್ಲಿದ್ದ ನಗದು, ಮೊಬೈಲ್ ಅನ್ನು ಎಗರಿಸಿ ಪರಾರಿ ಆಗಿದ್ದರು. ಒಂದು ತಿಂಗಳ ಅನಂತರ ಆರೋಪಿಗಳು ಕೊಲೆಯಾದ ಮನೆಯಿಂದ ಕದ್ದೊಯ್ದ ಮೊಬೈಲ್ ಸಂಖ್ಯೆಯ ಜಾಡು ಹಿಡಿದು ಬಂಧಿಸಲಾಗಿತ್ತು. ಫೆ. .22 ರಂದು ಆರೋಪಿಗಳಿಬ್ಬರು ಅಪರಾಧಿಗಳು ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಫೆ. 25ರಂದು ಶಿಕ್ಷೆ ಪ್ರಕಟಿಸಿದೆ.
ಶಿಕ್ಷೆಯ ಪ್ರಮಾಣ
ದರೋಡೆ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ದಂಡ ಸಂಹಿತೆ 302 ರ ಪ್ರಕಾರ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
3,000 ರೂ. ದಂಡ, ದಂಡ ಪಾವತಿಗೆ ವಿಳಂಬವಾದರೆ 3 ತಿಂಗಳು ಹೆಚ್ಚುವರಿ ಜೈಲು, 449 ಕಲಂ ಅಡಿ 10 ವರ್ಷ ಕಠಿನ ಶಿಕ್ಷೆ, 5 ಸಾವಿರ ದಂಡ, ದಂಡ ಪಾವತಿಸಿಸಲು ವಿಳಂಬವಾದರೆ 5 ತಿಂಗಳು ಹೆಚ್ಚುವರಿ ಜೈಲುವಾಸ, 392 ಕಲಂ ಅಡಿ 10 ವರ್ಷ ಕಠಿನ ಶಿಕ್ಷೆ, 5 ಸಾವಿರ ರೂ. ದಂಡ, ದಂಡ ಪಾವತಿಗೆ ವಿಳಂಬವಾದರೆ 5 ತಿಂಗಳು ಹೆಚ್ಚುವರಿ ಜೈಲು
ಶಿಕ್ಷೆ ವಿಧಿಸಿದೆ. ಸರಕಾರದ ಪರ ಸರಕಾರಿ ಅಭಿಯೋಜಕ ಎಂ. ಉದಯಕುಮಾರ್ ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು