ಸಂಚಾರಕ್ಕೆ ಅಯೋಗ್ಯ ಭಕ್ತಕೋಡಿ-ರೆಂಜಲಾಡಿ ರಸ್ತೆ


Team Udayavani, Jul 2, 2017, 3:45 AM IST

3006svnr2ph.jpg

ನರಿಮೊಗರು : ಸರ್ವೆ ಗ್ರಾಮಕ್ಕೊಳಪಟ್ಟ ಭಕ್ತಕೋಡಿ-ರೆಂಜಲಾಡಿ ರಸ್ತೆಯ ಡಾಮರು ಸಂಪೂರ್ಣ ಹದಗೆಟ್ಟು ಹಲವಾರು ವರ್ಷಗಳು ಕಳೆದಿದ್ದು, ಪ್ರದೇಶದ ನಾಗರಿಕರು, ವಾಹನ ಚಾಲಕರು ಹಾಗೂ ವಿದ್ಯಾರ್ಥಿಗಳು ಅತೀವ ತೊಂದರೆ ಅನುಭವಿ ಸುತ್ತಿದ್ದಾರೆ. 
 
ಈ ರಸ್ತೆಯು ಮುಂಡೂರು ಹಾಗೂ ತಿಂಗಳಾಡಿ ಸಂಪರ್ಕ ರಸ್ತೆಯೂ ಆಗಿದ್ದು ದಿನಂಪ್ರತಿ ನೂರಾರು ವಾಹನಗಳು ಓಡಾಡುತ್ತಿರುತ್ತವೆ. ಭಕ್ತ ಕೋಡಿಯಿಂದ ರೆಂಜಲಾಡಿ ಮಧ್ಯದ ಎರಡೂವರೆ ಕಿ.ಮೀ. ರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಅದೆಷ್ಟೋ ವರ್ಷಗಳು ಕಳೆದಿವೆ. ಪರಿಣಾಮ ರಸ್ತೆಯ ಮಧ್ಯೆಯೇ ಹಲವಾರು ಹೊಂಡಗಳು ನಿರ್ಮಾಣವಾಗಿವೆ. ಈಗ ಮಳೆಗಾಲ ವಾಗಿರುವುದರಿಂದ ರಸ್ತೆಯ ಪರಿಸ್ಥಿತಿ ಯನ್ನು ಹೇಳತೀರದು. ಕೆಲವು ಕಡೆ ದೊಡ್ಡ ಹೊಂಡಗಳಲ್ಲಿ ನೀರು ತುಂಬಿಕೊಂಡು ಕೃತಕ ಕೊಳವೂ ನಿರ್ಮಾಣವಾಗಿವೆ.

ವಾಹನ  ಚಾಲಕರು ಈ ಹೊಂಡಮಯ ರಸ್ತೆಯಲ್ಲಿ ಸಂಚರಿಸುತ್ತಾ ಸಂಕಷ್ಟ ಅನುಭವಿ ಸುತ್ತಿದ್ದಾರೆ. ಹಲವರು ಮುಂಡೂರು ಹಾಗೂ ಸರ್ವೆ ರಸ್ತೆ ಮೂಲಕ ಸುತ್ತುಬಳಸಿ ಪ್ರಯಾಣ ಮಾಡುತ್ತಿದ್ದಾರೆ. ಕಳೆದ ಬಾರಿಯ ಮಳೆಗಾಲದಲ್ಲಿ ಈ ಭಾಗದ ಜನರು ಬಹಳ ಕಷ್ಟಪಟ್ಟು ಈ ರಸ್ತೆಯಾಗಿ ಸಂಚರಿಸಿದ್ದಲ್ಲದೇ ಈ ವರ್ಷವಾದರೂ ರಸ್ತೆ ಮರುಡಾಮರು ಹಾಕಬಹುದು ಎಂಬ ಕನಸು ಕಂಡಿದ್ದರು. ಆದರೆ ಕನಸು ನನಸಾಗಲೇ ಇಲ್ಲ.

ತೊಂದರೆ
ಭಕ್ತಕೋಡಿ ಪರಿಸರದ ಜನರು ಪಡಿತರಕ್ಕಾಗಿ ಕಲ್ಪನೆಗೆ ಬರಬೇಕಾಗಿರುವುದರಿಂದ ಈ ರಸ್ತೆ ಯನ್ನು ಅವಲಂಬಿಸಬೇಕಾಗಿದೆ. ಅದೇ ರೀತಿ ರೆಂಜಲಾಡಿ, ಕೂಡುರಸ್ತೆ ಮೊದಲಾದ ಕಡೆಗಳಿಂದ ಭಕ್ತಕೋಡಿಯಲ್ಲಿರುವ ಸರಕಾರಿ ಆಸ್ಪತ್ರೆಗೆ ಸಾಕಷ್ಟು ಜನರು ಬರುತ್ತಿದ್ದು ಬಹಳಷ್ಟು ತೊಂದರೆ ಅನುಭವಿಸಿತ್ತಿದ್ದಾರೆ.
 
ಇಲ್ಲಿನ ನಾಗರಿಕರು ಅನಾರೋಗ್ಯಕ್ಕೀಡಾ ದವರಿಗೆ, ಗರ್ಭಿಣಿಯರಿಗೆ ರಸ್ತೆಯ ಪರಿಸ್ಥಿತಿ  ಯಿಂದಾಗಿ ತೀವ್ರ ತೊಂದರೆಯಾಗಿದೆ. ಕಲ್ಪಣೆ ಯಲ್ಲಿ ಡಿ. ದೇವರಾಜ್‌ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವಿದ್ದು, ಅಲ್ಲಿನ ವಿದ್ಯಾರ್ಥಿಗಳು ಹಾಗೂ ಅಲ್ಲಿಗೆ ಬರುವ ವಿದ್ಯಾರ್ಥಿಗಳ ಹೆತ್ತವರು ಬಹಳ ಪ್ರಯಾಸ ಪಡುತ್ತಿದ್ದು, ಕಲ್ಪಣೆಯಲ್ಲಿ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿದ್ದು ಅಲ್ಲಿಗೆ ಬರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ. 

ರೆಂಜಲಾಡಿ, ಕಲ್ಪಣೆ ಈ ಭಾಗದಿಂದ ಪುತ್ತೂರಿನ ಶಾಲಾ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳೂ ತೊಂದರೆ ಅನುಭವಿಸುತ್ತಿದ್ದು ಭಕ್ತಕೋಡಿ, ತೌಡಿಂಜ, ಕಲ್ಲಗುಡ್ಡೆ ಮತ್ತಿತರ ಕಡೆಗಳಿಂದ ಮುಂಡೂರು ಗ್ರಾಮ ಪಂಚಾಯತ್‌ಗಾಗಲೀ, ಸಹಕಾರಿ ಬ್ಯಾಂಕ್‌ಗಾಗಲೀ ಹೋಗಬೇಕಾದರೆ ಇದೇ ರಸ್ತೆಯನ್ನು ಅವಲಂಬಿಸಬೇಕಾಗುತ್ತದೆ.

ಇನ್ನೂ ಈಡೇರದ ಭರವಸೆ!
ಶಾಸಕಿ, ರಾಜ್ಯ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ. ಶೆಟ್ಟಿ ಅವರು ಭಕ್ತಕೋಡಿ ರೆಂಜಲಾಡಿ ರಸ್ತೆಯನ್ನು “ಒನ್‌ ಟೈಮ್‌ ಯೋಜನೆ’ಯಲ್ಲಿ ಡಾಮರು ಹಾಕಲು ಈ ಹಿಂದೆ ಪತ್ರ ಬರೆದಿದ್ದು, ಮುಂದಿನ ದಿನಗಳಲ್ಲಿ ದುರಸ್ತಿಯಾಗಲಿದೆ ಎಂದು ಹಲವು ಬಾರಿ ಭರವಸೆ ನೀಡಿದ್ದರು. ಆದರೆ ಒನ್‌ಟೈಮ್‌ ಯೋಜನೆಯಲ್ಲಿ ಈ ರಸ್ತೆ ಡಾಮರು ಹಾಕುವುದಕ್ಕೆ ಯಾವುದೇ ಅನುದಾನ ಇದುವರೆಗೂ ಬಿಡುಗಡೆಗೊಳ್ಳದ ಕಾರಣ ದುರಸ್ತಿ ಮರೀಚಿಕೆಯಾಗಿಯೇ ಉಳಿಯುವಂತಾಗಿದೆ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡುವರವರೂ ಈ ರಸ್ತೆಯನ್ನು ಹಿಂದೆಯೇ ವೀಕ್ಷಿಸಿದ್ದು, ದುರಸ್ತಿ ವಿಚಾರವಾಗಿ ಭರವಸೆಯನ್ನು ನೀಡಿದ್ದರು. ಪತ್ರಿಕೆಗಳಲ್ಲೂ ಹಲವು ಬಾರಿ ಈ ರಸ್ತೆ ಕುರಿತು ವರದಿ ಪ್ರಕಟಗೊಂಡಿತ್ತು. ಒಟ್ಟಿನಲ್ಲಿ ಗ್ರಾಮಸ್ಥರ ಬಹುಕಾಲದ ಬೇಡಿಕೆ ಇನ್ನಾದರೂ ಈಡೇರುತ್ತಾ ಕಾದುನೋಡಬೇಕಿದೆ. ಶಕುಂತಳಾ ಶೆಟ್ಟಿ ಅವರು ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ರೂ. 75 ಲಕ್ಷ ಅನುದಾನವನ್ನು ಸರ್ವೆ ಗ್ರಾಮಕ್ಕೆ ನೀಡಿದ್ದು, ಗ್ರಾಮದ ಹಲವು ಕಡೆ ಅಭಿವೃದ್ಧಿ ಕೆಲಸ ನಡೆದಿದೆ. ಆದರೆ ಬಹುಕಾಲದ ಬೇಡಿಕೆಯಾಗಿರುವ ಭಕ್ತಕೋಡಿ-ರೆಂಜಲಾಡಿ ರಸ್ತೆ ಮಾತ್ರ ಅಭಿವೃದ್ಧಿ ಕಾಣದಿರುವುದರಿಂದ ಇತರ ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆಯಾಗಿದೆ.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.