ವಿದ್ಯಾಭಿಮಾನಿಗಳ  ಸ್ನೇಹ ಸಮ್ಮಿಲನ, ಆಟಿಡೊಂಜಿ ದಿನ


Team Udayavani, Jul 23, 2017, 7:30 AM IST

atidonji-dina.jpg

ಸವಣೂರು : ಆಧುನಿಕ ಕಾಲದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ನಾವು ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಮರೆಯಬಾರದು ಎಂದು ಸವಣೂರು ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಬಿ.ವಿ. ಸೂರ್ಯನಾರಾಯಣ ಅವರು ಹೇಳಿದರು.

ಗ್ರಾಮೀಣ ಭಾಗದ ಆಟಿಕಳೆಂಜ, ಕರಂಗೋಲು ಮೊದಲಾದ ಜನಪದ ಸಂಸ್ಕೃತಿಗಳು ದೂರವಾಗುತ್ತಿದ್ದು ಕೇವಲ ವೇದಿಕೆಯಲ್ಲಿ ಕಾಣುವಂತಾಗಿದೆ. ಇಂತಹ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಆಟಿದ ಪರ್ಬ ಆಚರಣೆಗಳು ನಡೆಯಬೇಕು ಎಂದರು.

ಅವರು ಜು. 22ರಂದು  ಸವಣೂರು ಉ.ಹಿ.ಪ್ರಾ.ಶಾಲೆ ಇದರ ಶತಮಾನೋತ್ಸವ ಸಮಿತಿ ಇದರ ಆಶ್ರಯದಲ್ಲಿ ಹಿರಿಯ ವಿದ್ಯಾರ್ಥಿಗಳ  ಹಾಗೂ ವಿದ್ಯಾಭಿಮಾನಿಗಳ  ಸ್ನೇಹ ಸಮ್ಮಿಲನ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದರು.

ಕಾರ್ಯಕ್ರಮವನ್ನು ವಿಜಯ ಬ್ಯಾಂಕ್‌ನ‌ ಪ್ರಬಂಧಕ ಸುಂದರ ಗೌಡ ಸವಣೂರು ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ರೋಟರಿಕ್ಲಬ್‌ಪುತ್ತೂರು ಇದರ  ಪೂರ್ವಾಧ್ಯಕ್ಷ ಕೃಷ್ಣ ಕುಮಾರ್‌ ರೈ ದೇವಸ್ಯ ವಹಿಸಿದ್ದರು.
ಅತಿಥಿಗಳಾಗಿ ನಿವೃತ್ತ ಅಂಚೆ ಪಾಲಕ ನಾರಾಯಣ ಕನಡ ಬಸ್ತಿ, ಸವಣೂರು ಗ್ರಾ.ಪಂ. ಸದಸ್ಯ ಸತೀಶ್‌ ಬಲ್ಯಾಯ, ಪ್ರಕಾಶ್‌ ಕುದ್ಮನಮಜಲು, ರಾಜೀವಿ ಶೆಟ್ಟಿ ಕೆಡೆಂಜಿ, ಗಾಯತ್ರಿ ಬರೆಮೇಲು, ಉದ್ಯಮಿ ಸುಜಿತ್‌ ಕುಮಾರ್‌ ಶೆಟ್ಟಿ ನಡುಬೈಲು , ಶತಮಾನೋತ್ಸವ ಸಮಿತಿ ಉಪಾಧ್ಯಕ್ಷರಾದ ಮಹಮ್ಮದ್‌ ಕಣಿಮಜಲು, ಶಿವರಾಮ ಗೌಡ ಮೆದು, ಸವಣೂರು ಕ್ಲಸ್ಟರ್‌ ಸಿಆರ್‌ಪಿ ವೆಂಕಟೇಶ್‌ ಅನಂತಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಚಂದ್ರಶೇಖರ್‌ ಮೆದು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಕಾರ್ಯದರ್ಶಿ ಪ್ರಕಾಶ್‌ ರೈ ಸಾರಕರೆ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪುಷ್ಪಾವತಿ, ಶತಮಾನೋತ್ಸವ ಸಮಿತಿ ಕಾರ್ಯಕ್ರಮ ಸಂಯೋಜಕ ಗಿರಿಶಂಕರ್‌ ಸುಲಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಗನ್ನಾಥ ರೈ ನಡುಬೈಲು, ವಿಶ್ವನಾಥ ಪೂವ, ಬಾಬು ಎನ್‌., ಸುಪ್ರಿತ್‌ ರೈ ಖಂಡಿಗ , ಗಂಗಾಧರ ಸುಣ್ಣಾಜೆ, ಶಿಕ್ಷಕರಾದ ಕುಶಾಲಪ್ಪ ಟಿ. ಮೆಬಲ್‌ ರೋಡ್ರಿಗಸ್‌, ಸರೋಜ, ಆಶಾಲತಾ, ವೇದಾವತಿ ದಯಾನಂದ, ಪಿ.ಡಿ. ಗಂಗಾಧರ ರೈ, ಸುಬ್ಬಣ್ಣ ರೈ ಖಂಡಿಗ ಅತಿಥಿಗಳನ್ನು ಗೌರವಿಸಿದರು.

ದೇಣಿಗೆ ಘೋಷಣೆ
ಈ ಸಂದರ್ಭದಲ್ಲಿ  ಸುಜಿತ್‌ ಕುಮಾರ್‌ ಶೆಟ್ಟಿ  ನಡುಬೈಲು ಅವರು ಶಾಲಾ ನೂತನ ಕಟ್ಟಡ ರಚನೆಗಾಗಿ 2.5 ಲಕ್ಷ ರೂ., ನಾರಾಯಣ ಕನಡ ಬಸ್ತಿ 50,000 ರೂ., ಮಹಮ್ಮದ್‌ ಕಣಿಮಜಲು 25,000 ರೂ., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್‌ ಮೆದು 25,000 ರೂ., ಪ್ರಗತಿಪರ ಕೃಷಿಕ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು 25,000 ರೂ., ಸುಬ್ಬಣ್ಣ ರೈ ಖಂಡಿಗ 15,000, ಶಿವರಾಮ ಗೌಡ ಮೆದು 10,000 ರೂ., ಮುಖ್ಯ ಶಿಕ್ಷಕ ಹರಿಶಂಕರ್‌ ಭಟ್‌ 10,000 ನೀಡುವುದಾಗಿ ಘೋಷಿಸಿದರು. 

ವಿಜಯ ಬ್ಯಾಂಕ್‌ನ‌ ಪ್ರಬಂಧಕ ಸುಂದರ ಗೌಡ ಸವಣೂರು, ರೋಟರಿ ಕ್ಲಬ್‌ ಪುತ್ತೂರು ಇದರ  ಪೂರ್ವಾಧ್ಯಕ್ಷ ಕೃಷ್ಣ ಕುಮಾರ್‌ ರೈ ದೇವಸ್ಯ ಅವರು ಗರಿಷ್ಠ ಮಟ್ಟದ ದೇಣಿಗೆ ನೀಡುತ್ತೇವೆ ಎಂದರು.

ವಿಶೇಷತೆ
ಕಾರ್ಯಕ್ರಮದಲ್ಲಿ ಆಟಿ ತಿಂಡಿ ತಿನಿಸುಗಳ ಪ್ರದರ್ಶನ , ಸ್ಪರ್ಧೆ, ಪುರಾತನ ವಸ್ತುಗಳ ಪ್ರದರ್ಶನ ನಡೆಯಿತು.
ಶತಮಾನೋತ್ಸವ ಸಮಿತಿ ಅಧ್ಯಕ್ಷ  ದಿನೇಶ್‌ ಮೆದು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ತಾರಾನಾಥ ಸವಣೂರು ಪ್ರಸ್ತಾವನೆಗೈದರು. ಶಾಲಾ ಮುಖ್ಯಗುರು ಹರಿಶಂಕರ್‌ ಭಟ್‌ ವಂದಿಸಿದರು. ರಾಕೇಶ್‌ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.