ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಗೈರು: ಆಕ್ರೋಶ


Team Udayavani, Jul 24, 2017, 5:45 AM IST

akrosha.jpg

ಕಡಬ : ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ಕೆಲ ಪ್ರಮುಖ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರು ಹಾಜರಿಯಾಗಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮರ್ದಾಳ ಗ್ರಾಮಸಭೆಯಲ್ಲಿ ನಡೆದಿದೆ.
ಗ್ರಾ.ಪಂ. ಅಧ್ಯಕ್ಷೆ ಲಲಿತಾ ರೈ ಮೈಕಾಜೆ ಅವರ  ಅಧ್ಯಕ್ಷತೆಯಲ್ಲಿ  ಮರ್ದಾಳ ಅಂಬೇಡ್ಕರ್‌ ಭವನದಲ್ಲಿ ಸಭೆ ಜರಗಿತು. ತಾ.ಪಂ. ಯೋಜನಾಧಿಕಾರಿ ಗಣಪತಿ ಭಟ್‌ ಅವರು ಚರ್ಚಾ ನಿಯಂತ್ರಣಾಧಿಕಾರಿಯಾಗಿ ಭಾಗವಹಿಸಿದ್ದರು.

ಗ್ರಾಮ ಸಭೆಗೆ ಪ್ರಮುಖ ಇಲಾಖೆಯ ಅಧಿಕಾರಿಗಳು ಬಾರದೇ ಇರುವುದನ್ನು ಕಂಡ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್‌ ರೈ ನಡುಮಜಲು ಅವರು ಗ್ರಾಮಸ್ಥರಿಗೆ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಬೇಕಾದ ಪ್ರಮುಖ ಇಲಾಖೆಗಳ ಅಧಿಕಾರಿಗಳೇ ಬಾರದಿದ್ದರೆ ಗ್ರಾಮಸಭೆ ಯಾರಿಗಾಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರಮುಖ ಎಲ್ಲ ಇಲಾಖಾಧಿಕಾರಿಗಳು ಮುಂದಿನ ಗ್ರಾಮ ಸಭೆಯಲ್ಲಿ  ಕಡ್ಡಾಯವಾಗಿ ಹಾಜರಿರುವಂತೆ ನಿರ್ಣಯ ಕೈಗೊಳ್ಳಲಾಯಿತು.

ಆದರ್ಶ ಗ್ರಾಮವಾಗಿ ಬಂಟ್ರ
ಕಡಬ ಮೆಸ್ಕಾಂ ಜೆ.ಇ. ನಾಗರಾಜ್‌ ಅವರು ಇಲಾಖಾ ಮಾಹಿತಿ ನೀಡಿ, ಮರ್ದಾಳ ಗ್ರಾ.ಪಂ. ವ್ಯಾಪ್ತಿಯ ಬಂಟ್ರ ಗ್ರಾಮವನ್ನು ಆದರ್ಶ ಗ್ರಾಮ ಯೋಜನೆಯಲ್ಲಿ ಸೇರಿಸಲಾಗಿದ್ದು, ದೀನ್‌ ದಯಾಳ್‌ ಯೋಜನೆಯಲ್ಲಿ  ವಿದ್ಯುತ್‌ ಇಲ್ಲದ ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗುವುದು.  ಹಳೆಯ ದುರಸ್ತಿಯಲ್ಲಿರುವ ತಂತಿಗಳನ್ನು ತೆಗೆದು ಹೊಸ ತಂತಿಗಳನ್ನು ಅಳವಡಿಸಲಾಗುವುದು ಎಂದರು.  

ತಾ.ಪಂ. ಸದಸ್ಯ ಗಣೇಶ್‌ ಕೈಕುರೆ ಮಾತನಾಡಿ, ಮರ್ದಾಳದಲ್ಲಿ ತಿಂಗಳಲ್ಲಿ  ಒಂದು ಬಾರಿ ವಿದ್ಯುತ್‌ ಬಿಲ್‌ ಸಂಗ್ರಹಿಸಲಾಗುತ್ತಿದೆ. ಗ್ರಾಹಕರ ಅನುಕೂಲಕ್ಕಾಗಿ  ತಿಂಗಳಿಗೆ ಎರಡು ಬಾರಿ ಬಿಲ್‌ ಸಂಗ್ರಹಕ್ಕೆ  ಕ್ರಮ ಕೈಗೊಳ್ಳುವುದಾದರೆ  ತಮ್ಮ  ಕಟ್ಟಡದಲ್ಲಿ  ಉಚಿತವಾಗಿ ಒಂದು ಕೊಠಡಿಯನ್ನು ಮೆಸ್ಕಾಂ ಬಿಲ್‌ ವಸೂಲಾತಿಗೆ ನೀಡುವುದಾಗಿ ತಿಳಿಸಿದರು.

ಆರೋಪ
ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್‌ ಅವರು ಮಾಹಿತಿ ನೀಡುತ್ತಿದ್ದ ವೇಳೆ ಮಾತನಾಡಿದ ಗ್ರಾ.ಪಂ.ಸದಸ್ಯ ಹರೀಶ್‌ ಕೋಡಂದೂರು ಅವರು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಂಟ್ರ ಗ್ರಾಮದ ನೀರಾಜೆಯ ದಲಿತ ಮಹಿಳೆಯೋರ್ವರನ್ನು  ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ  ಮೂರು ದಿನ ಜನರಲ್‌ ವಾರ್ಡ್‌ನಲ್ಲಿಟ್ಟು  ಬಳಿಕ ಮಧ್ಯರಾತ್ರಿ ಬಂದು ಇಲ್ಲಿ  ತೀವ್ರ ನಿಗಾ ಘಟಕದಲ್ಲಿ ಜಾಗ ಇಲ್ಲದೇ ಇರುವುದರಿಂದ ಬೇರೆ ಆಸ್ಪತ್ರೆಗೆ ದಾಖಲಿಸಿ ಅಥವಾ ಮನೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ.  ವಿಷಯವನ್ನು  ನಾನು  ಜಿ.ಪಂ. ಮಾಜಿ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ.  ಅವರು ಫೋನಾಯಿಸಿದ ಬಳಿಕ ತುರ್ತು ನಿಗಾ ಘಟಕಕ್ಕೆ ದಾಖಲಿಸಿಕೊಂಡರು. ಸರಕಾರಿ ಆಸ್ಪತ್ರೆಯಲ್ಲಿ  ಬಡವರನ್ನು ಈ ರೀತಿ ಸತಾಯಿಸುವುದು ಸರಿಯೇ ಎಂದು ಪ್ರಶ್ನಿಸಿದರು. ಇದಕ್ಕೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮಾ ದನಿಗೂಡಿಸಿದರು. ಈ ಬಗ್ಗೆ  ಇಲಾಖೆಯ ಮೇಲಧಿಕಾರಿಗಳ  ಗಮನಕ್ಕೆ ತರಲಾಗುವುದು ಎಂದು ವೈದ್ಯಾಧಿಕಾರಿ ಅವರು ಪ್ರತಿಕ್ರಿಯಿಸಿದರು.

ಬಂಟ್ರ ಗ್ರಾಮದ ಕೃಷ್ಣನಗರದಲ್ಲಿ  ಅಂಗನವಾಡಿ ಕೇಂದ್ರ ತೆರೆಯಬೇಕು  ಎಂದು ಗ್ರಾಮ ಪಂಚಾಯತ್‌ ಸದಸ್ಯ ಹರೀಶ್‌ ಕೋಡಂದೂರು  ಅವರು ವಿಷಯ ಪ್ರಸ್ತಾಪಿಸಿದರು. 

ಈ ಕುರಿತು ಇಲಾಖಾ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮರಾಮ್‌ದಾಸ್‌ ಅವರು ತಿಳಿಸಿದರು.  ಕೆಲವು ಗ್ರಾಮ ಪಂಚಾಯತ್‌ಗಳಲ್ಲಿ  ನರೇಗಾ ಯೋಜನೆಯಲ್ಲಿ 1 ಕೋಟಿ  ರೂ.ಗೂ ಹೆಚ್ಚಿನ ಅಭಿವೃದ್ಧಿ ಕಾರ್ಯ ನಡೆದಿದೆ. ಅದರೆ ಇಲ್ಲಿ  ಕೇವಲ 6 ಲಕ್ಷ ರೂ. ಗಳ  ಕೆಲಸ ನಡೆದಿದೆ. ಉದ್ಯೋಗ ಖಾತರಿ ಕುರಿತು ಮಾಹಿತಿ ನೀಡಿ ಎಂದು ಚಂದ್ರಶೇಖರ ತುಂಬಿಮನೆ ಆಗ್ರಹಿಸಿದರು.  
ಗ್ರಾಮ  ಪಂಚಾಯತ್‌  ಉಪಾಧ್ಯಕ್ಷೆ ಲತಾ ಕೆ.ಎಸ್‌., ಸದಸ್ಯರಾದ ದಾಮೋದರ ಗೌಡ ಡೆಪ್ಪುಣೆ, ಮೀನಾಕ್ಷಿ ಆಚಾರ್ಯ, ಸುಶೀಲಾ, ಗಿರಿಜಾ ಮೊದಲಾದವರು  ಉಪಸ್ಥಿತರಿದ್ದರು. ಲೆಕ್ಕ ಸಹಾಯಕ ಭುವನೇಂದ್ರ ಕುಮಾರ್‌ ಸ್ವಾಗತಿಸಿ, ವರದಿ ವಾಚಿಸಿದರು. ಪಿ.ಡಿ.ಒ. ವೆಂಕಟರಮಣ ಗೌಡ ವಂದಿಸಿದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.