ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಗೈರು: ಆಕ್ರೋಶ


Team Udayavani, Jul 24, 2017, 5:45 AM IST

akrosha.jpg

ಕಡಬ : ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ಕೆಲ ಪ್ರಮುಖ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರು ಹಾಜರಿಯಾಗಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮರ್ದಾಳ ಗ್ರಾಮಸಭೆಯಲ್ಲಿ ನಡೆದಿದೆ.
ಗ್ರಾ.ಪಂ. ಅಧ್ಯಕ್ಷೆ ಲಲಿತಾ ರೈ ಮೈಕಾಜೆ ಅವರ  ಅಧ್ಯಕ್ಷತೆಯಲ್ಲಿ  ಮರ್ದಾಳ ಅಂಬೇಡ್ಕರ್‌ ಭವನದಲ್ಲಿ ಸಭೆ ಜರಗಿತು. ತಾ.ಪಂ. ಯೋಜನಾಧಿಕಾರಿ ಗಣಪತಿ ಭಟ್‌ ಅವರು ಚರ್ಚಾ ನಿಯಂತ್ರಣಾಧಿಕಾರಿಯಾಗಿ ಭಾಗವಹಿಸಿದ್ದರು.

ಗ್ರಾಮ ಸಭೆಗೆ ಪ್ರಮುಖ ಇಲಾಖೆಯ ಅಧಿಕಾರಿಗಳು ಬಾರದೇ ಇರುವುದನ್ನು ಕಂಡ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್‌ ರೈ ನಡುಮಜಲು ಅವರು ಗ್ರಾಮಸ್ಥರಿಗೆ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಬೇಕಾದ ಪ್ರಮುಖ ಇಲಾಖೆಗಳ ಅಧಿಕಾರಿಗಳೇ ಬಾರದಿದ್ದರೆ ಗ್ರಾಮಸಭೆ ಯಾರಿಗಾಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರಮುಖ ಎಲ್ಲ ಇಲಾಖಾಧಿಕಾರಿಗಳು ಮುಂದಿನ ಗ್ರಾಮ ಸಭೆಯಲ್ಲಿ  ಕಡ್ಡಾಯವಾಗಿ ಹಾಜರಿರುವಂತೆ ನಿರ್ಣಯ ಕೈಗೊಳ್ಳಲಾಯಿತು.

ಆದರ್ಶ ಗ್ರಾಮವಾಗಿ ಬಂಟ್ರ
ಕಡಬ ಮೆಸ್ಕಾಂ ಜೆ.ಇ. ನಾಗರಾಜ್‌ ಅವರು ಇಲಾಖಾ ಮಾಹಿತಿ ನೀಡಿ, ಮರ್ದಾಳ ಗ್ರಾ.ಪಂ. ವ್ಯಾಪ್ತಿಯ ಬಂಟ್ರ ಗ್ರಾಮವನ್ನು ಆದರ್ಶ ಗ್ರಾಮ ಯೋಜನೆಯಲ್ಲಿ ಸೇರಿಸಲಾಗಿದ್ದು, ದೀನ್‌ ದಯಾಳ್‌ ಯೋಜನೆಯಲ್ಲಿ  ವಿದ್ಯುತ್‌ ಇಲ್ಲದ ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗುವುದು.  ಹಳೆಯ ದುರಸ್ತಿಯಲ್ಲಿರುವ ತಂತಿಗಳನ್ನು ತೆಗೆದು ಹೊಸ ತಂತಿಗಳನ್ನು ಅಳವಡಿಸಲಾಗುವುದು ಎಂದರು.  

ತಾ.ಪಂ. ಸದಸ್ಯ ಗಣೇಶ್‌ ಕೈಕುರೆ ಮಾತನಾಡಿ, ಮರ್ದಾಳದಲ್ಲಿ ತಿಂಗಳಲ್ಲಿ  ಒಂದು ಬಾರಿ ವಿದ್ಯುತ್‌ ಬಿಲ್‌ ಸಂಗ್ರಹಿಸಲಾಗುತ್ತಿದೆ. ಗ್ರಾಹಕರ ಅನುಕೂಲಕ್ಕಾಗಿ  ತಿಂಗಳಿಗೆ ಎರಡು ಬಾರಿ ಬಿಲ್‌ ಸಂಗ್ರಹಕ್ಕೆ  ಕ್ರಮ ಕೈಗೊಳ್ಳುವುದಾದರೆ  ತಮ್ಮ  ಕಟ್ಟಡದಲ್ಲಿ  ಉಚಿತವಾಗಿ ಒಂದು ಕೊಠಡಿಯನ್ನು ಮೆಸ್ಕಾಂ ಬಿಲ್‌ ವಸೂಲಾತಿಗೆ ನೀಡುವುದಾಗಿ ತಿಳಿಸಿದರು.

ಆರೋಪ
ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್‌ ಅವರು ಮಾಹಿತಿ ನೀಡುತ್ತಿದ್ದ ವೇಳೆ ಮಾತನಾಡಿದ ಗ್ರಾ.ಪಂ.ಸದಸ್ಯ ಹರೀಶ್‌ ಕೋಡಂದೂರು ಅವರು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಂಟ್ರ ಗ್ರಾಮದ ನೀರಾಜೆಯ ದಲಿತ ಮಹಿಳೆಯೋರ್ವರನ್ನು  ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ  ಮೂರು ದಿನ ಜನರಲ್‌ ವಾರ್ಡ್‌ನಲ್ಲಿಟ್ಟು  ಬಳಿಕ ಮಧ್ಯರಾತ್ರಿ ಬಂದು ಇಲ್ಲಿ  ತೀವ್ರ ನಿಗಾ ಘಟಕದಲ್ಲಿ ಜಾಗ ಇಲ್ಲದೇ ಇರುವುದರಿಂದ ಬೇರೆ ಆಸ್ಪತ್ರೆಗೆ ದಾಖಲಿಸಿ ಅಥವಾ ಮನೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ.  ವಿಷಯವನ್ನು  ನಾನು  ಜಿ.ಪಂ. ಮಾಜಿ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ.  ಅವರು ಫೋನಾಯಿಸಿದ ಬಳಿಕ ತುರ್ತು ನಿಗಾ ಘಟಕಕ್ಕೆ ದಾಖಲಿಸಿಕೊಂಡರು. ಸರಕಾರಿ ಆಸ್ಪತ್ರೆಯಲ್ಲಿ  ಬಡವರನ್ನು ಈ ರೀತಿ ಸತಾಯಿಸುವುದು ಸರಿಯೇ ಎಂದು ಪ್ರಶ್ನಿಸಿದರು. ಇದಕ್ಕೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮಾ ದನಿಗೂಡಿಸಿದರು. ಈ ಬಗ್ಗೆ  ಇಲಾಖೆಯ ಮೇಲಧಿಕಾರಿಗಳ  ಗಮನಕ್ಕೆ ತರಲಾಗುವುದು ಎಂದು ವೈದ್ಯಾಧಿಕಾರಿ ಅವರು ಪ್ರತಿಕ್ರಿಯಿಸಿದರು.

ಬಂಟ್ರ ಗ್ರಾಮದ ಕೃಷ್ಣನಗರದಲ್ಲಿ  ಅಂಗನವಾಡಿ ಕೇಂದ್ರ ತೆರೆಯಬೇಕು  ಎಂದು ಗ್ರಾಮ ಪಂಚಾಯತ್‌ ಸದಸ್ಯ ಹರೀಶ್‌ ಕೋಡಂದೂರು  ಅವರು ವಿಷಯ ಪ್ರಸ್ತಾಪಿಸಿದರು. 

ಈ ಕುರಿತು ಇಲಾಖಾ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮರಾಮ್‌ದಾಸ್‌ ಅವರು ತಿಳಿಸಿದರು.  ಕೆಲವು ಗ್ರಾಮ ಪಂಚಾಯತ್‌ಗಳಲ್ಲಿ  ನರೇಗಾ ಯೋಜನೆಯಲ್ಲಿ 1 ಕೋಟಿ  ರೂ.ಗೂ ಹೆಚ್ಚಿನ ಅಭಿವೃದ್ಧಿ ಕಾರ್ಯ ನಡೆದಿದೆ. ಅದರೆ ಇಲ್ಲಿ  ಕೇವಲ 6 ಲಕ್ಷ ರೂ. ಗಳ  ಕೆಲಸ ನಡೆದಿದೆ. ಉದ್ಯೋಗ ಖಾತರಿ ಕುರಿತು ಮಾಹಿತಿ ನೀಡಿ ಎಂದು ಚಂದ್ರಶೇಖರ ತುಂಬಿಮನೆ ಆಗ್ರಹಿಸಿದರು.  
ಗ್ರಾಮ  ಪಂಚಾಯತ್‌  ಉಪಾಧ್ಯಕ್ಷೆ ಲತಾ ಕೆ.ಎಸ್‌., ಸದಸ್ಯರಾದ ದಾಮೋದರ ಗೌಡ ಡೆಪ್ಪುಣೆ, ಮೀನಾಕ್ಷಿ ಆಚಾರ್ಯ, ಸುಶೀಲಾ, ಗಿರಿಜಾ ಮೊದಲಾದವರು  ಉಪಸ್ಥಿತರಿದ್ದರು. ಲೆಕ್ಕ ಸಹಾಯಕ ಭುವನೇಂದ್ರ ಕುಮಾರ್‌ ಸ್ವಾಗತಿಸಿ, ವರದಿ ವಾಚಿಸಿದರು. ಪಿ.ಡಿ.ಒ. ವೆಂಕಟರಮಣ ಗೌಡ ವಂದಿಸಿದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.