ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಗೈರು: ಆಕ್ರೋಶ


Team Udayavani, Jul 24, 2017, 5:45 AM IST

akrosha.jpg

ಕಡಬ : ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ಕೆಲ ಪ್ರಮುಖ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರು ಹಾಜರಿಯಾಗಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮರ್ದಾಳ ಗ್ರಾಮಸಭೆಯಲ್ಲಿ ನಡೆದಿದೆ.
ಗ್ರಾ.ಪಂ. ಅಧ್ಯಕ್ಷೆ ಲಲಿತಾ ರೈ ಮೈಕಾಜೆ ಅವರ  ಅಧ್ಯಕ್ಷತೆಯಲ್ಲಿ  ಮರ್ದಾಳ ಅಂಬೇಡ್ಕರ್‌ ಭವನದಲ್ಲಿ ಸಭೆ ಜರಗಿತು. ತಾ.ಪಂ. ಯೋಜನಾಧಿಕಾರಿ ಗಣಪತಿ ಭಟ್‌ ಅವರು ಚರ್ಚಾ ನಿಯಂತ್ರಣಾಧಿಕಾರಿಯಾಗಿ ಭಾಗವಹಿಸಿದ್ದರು.

ಗ್ರಾಮ ಸಭೆಗೆ ಪ್ರಮುಖ ಇಲಾಖೆಯ ಅಧಿಕಾರಿಗಳು ಬಾರದೇ ಇರುವುದನ್ನು ಕಂಡ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್‌ ರೈ ನಡುಮಜಲು ಅವರು ಗ್ರಾಮಸ್ಥರಿಗೆ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಬೇಕಾದ ಪ್ರಮುಖ ಇಲಾಖೆಗಳ ಅಧಿಕಾರಿಗಳೇ ಬಾರದಿದ್ದರೆ ಗ್ರಾಮಸಭೆ ಯಾರಿಗಾಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರಮುಖ ಎಲ್ಲ ಇಲಾಖಾಧಿಕಾರಿಗಳು ಮುಂದಿನ ಗ್ರಾಮ ಸಭೆಯಲ್ಲಿ  ಕಡ್ಡಾಯವಾಗಿ ಹಾಜರಿರುವಂತೆ ನಿರ್ಣಯ ಕೈಗೊಳ್ಳಲಾಯಿತು.

ಆದರ್ಶ ಗ್ರಾಮವಾಗಿ ಬಂಟ್ರ
ಕಡಬ ಮೆಸ್ಕಾಂ ಜೆ.ಇ. ನಾಗರಾಜ್‌ ಅವರು ಇಲಾಖಾ ಮಾಹಿತಿ ನೀಡಿ, ಮರ್ದಾಳ ಗ್ರಾ.ಪಂ. ವ್ಯಾಪ್ತಿಯ ಬಂಟ್ರ ಗ್ರಾಮವನ್ನು ಆದರ್ಶ ಗ್ರಾಮ ಯೋಜನೆಯಲ್ಲಿ ಸೇರಿಸಲಾಗಿದ್ದು, ದೀನ್‌ ದಯಾಳ್‌ ಯೋಜನೆಯಲ್ಲಿ  ವಿದ್ಯುತ್‌ ಇಲ್ಲದ ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗುವುದು.  ಹಳೆಯ ದುರಸ್ತಿಯಲ್ಲಿರುವ ತಂತಿಗಳನ್ನು ತೆಗೆದು ಹೊಸ ತಂತಿಗಳನ್ನು ಅಳವಡಿಸಲಾಗುವುದು ಎಂದರು.  

ತಾ.ಪಂ. ಸದಸ್ಯ ಗಣೇಶ್‌ ಕೈಕುರೆ ಮಾತನಾಡಿ, ಮರ್ದಾಳದಲ್ಲಿ ತಿಂಗಳಲ್ಲಿ  ಒಂದು ಬಾರಿ ವಿದ್ಯುತ್‌ ಬಿಲ್‌ ಸಂಗ್ರಹಿಸಲಾಗುತ್ತಿದೆ. ಗ್ರಾಹಕರ ಅನುಕೂಲಕ್ಕಾಗಿ  ತಿಂಗಳಿಗೆ ಎರಡು ಬಾರಿ ಬಿಲ್‌ ಸಂಗ್ರಹಕ್ಕೆ  ಕ್ರಮ ಕೈಗೊಳ್ಳುವುದಾದರೆ  ತಮ್ಮ  ಕಟ್ಟಡದಲ್ಲಿ  ಉಚಿತವಾಗಿ ಒಂದು ಕೊಠಡಿಯನ್ನು ಮೆಸ್ಕಾಂ ಬಿಲ್‌ ವಸೂಲಾತಿಗೆ ನೀಡುವುದಾಗಿ ತಿಳಿಸಿದರು.

ಆರೋಪ
ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್‌ ಅವರು ಮಾಹಿತಿ ನೀಡುತ್ತಿದ್ದ ವೇಳೆ ಮಾತನಾಡಿದ ಗ್ರಾ.ಪಂ.ಸದಸ್ಯ ಹರೀಶ್‌ ಕೋಡಂದೂರು ಅವರು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಂಟ್ರ ಗ್ರಾಮದ ನೀರಾಜೆಯ ದಲಿತ ಮಹಿಳೆಯೋರ್ವರನ್ನು  ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ  ಮೂರು ದಿನ ಜನರಲ್‌ ವಾರ್ಡ್‌ನಲ್ಲಿಟ್ಟು  ಬಳಿಕ ಮಧ್ಯರಾತ್ರಿ ಬಂದು ಇಲ್ಲಿ  ತೀವ್ರ ನಿಗಾ ಘಟಕದಲ್ಲಿ ಜಾಗ ಇಲ್ಲದೇ ಇರುವುದರಿಂದ ಬೇರೆ ಆಸ್ಪತ್ರೆಗೆ ದಾಖಲಿಸಿ ಅಥವಾ ಮನೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ.  ವಿಷಯವನ್ನು  ನಾನು  ಜಿ.ಪಂ. ಮಾಜಿ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ.  ಅವರು ಫೋನಾಯಿಸಿದ ಬಳಿಕ ತುರ್ತು ನಿಗಾ ಘಟಕಕ್ಕೆ ದಾಖಲಿಸಿಕೊಂಡರು. ಸರಕಾರಿ ಆಸ್ಪತ್ರೆಯಲ್ಲಿ  ಬಡವರನ್ನು ಈ ರೀತಿ ಸತಾಯಿಸುವುದು ಸರಿಯೇ ಎಂದು ಪ್ರಶ್ನಿಸಿದರು. ಇದಕ್ಕೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮಾ ದನಿಗೂಡಿಸಿದರು. ಈ ಬಗ್ಗೆ  ಇಲಾಖೆಯ ಮೇಲಧಿಕಾರಿಗಳ  ಗಮನಕ್ಕೆ ತರಲಾಗುವುದು ಎಂದು ವೈದ್ಯಾಧಿಕಾರಿ ಅವರು ಪ್ರತಿಕ್ರಿಯಿಸಿದರು.

ಬಂಟ್ರ ಗ್ರಾಮದ ಕೃಷ್ಣನಗರದಲ್ಲಿ  ಅಂಗನವಾಡಿ ಕೇಂದ್ರ ತೆರೆಯಬೇಕು  ಎಂದು ಗ್ರಾಮ ಪಂಚಾಯತ್‌ ಸದಸ್ಯ ಹರೀಶ್‌ ಕೋಡಂದೂರು  ಅವರು ವಿಷಯ ಪ್ರಸ್ತಾಪಿಸಿದರು. 

ಈ ಕುರಿತು ಇಲಾಖಾ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮರಾಮ್‌ದಾಸ್‌ ಅವರು ತಿಳಿಸಿದರು.  ಕೆಲವು ಗ್ರಾಮ ಪಂಚಾಯತ್‌ಗಳಲ್ಲಿ  ನರೇಗಾ ಯೋಜನೆಯಲ್ಲಿ 1 ಕೋಟಿ  ರೂ.ಗೂ ಹೆಚ್ಚಿನ ಅಭಿವೃದ್ಧಿ ಕಾರ್ಯ ನಡೆದಿದೆ. ಅದರೆ ಇಲ್ಲಿ  ಕೇವಲ 6 ಲಕ್ಷ ರೂ. ಗಳ  ಕೆಲಸ ನಡೆದಿದೆ. ಉದ್ಯೋಗ ಖಾತರಿ ಕುರಿತು ಮಾಹಿತಿ ನೀಡಿ ಎಂದು ಚಂದ್ರಶೇಖರ ತುಂಬಿಮನೆ ಆಗ್ರಹಿಸಿದರು.  
ಗ್ರಾಮ  ಪಂಚಾಯತ್‌  ಉಪಾಧ್ಯಕ್ಷೆ ಲತಾ ಕೆ.ಎಸ್‌., ಸದಸ್ಯರಾದ ದಾಮೋದರ ಗೌಡ ಡೆಪ್ಪುಣೆ, ಮೀನಾಕ್ಷಿ ಆಚಾರ್ಯ, ಸುಶೀಲಾ, ಗಿರಿಜಾ ಮೊದಲಾದವರು  ಉಪಸ್ಥಿತರಿದ್ದರು. ಲೆಕ್ಕ ಸಹಾಯಕ ಭುವನೇಂದ್ರ ಕುಮಾರ್‌ ಸ್ವಾಗತಿಸಿ, ವರದಿ ವಾಚಿಸಿದರು. ಪಿ.ಡಿ.ಒ. ವೆಂಕಟರಮಣ ಗೌಡ ವಂದಿಸಿದರು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.