ರಾತ್ರಿ ಲಭ್ಯವಿಲ್ಲದ 108 ಆ್ಯಂಬುಲೆನ್ಸ್ ಸೇವೆ
Team Udayavani, Aug 11, 2017, 8:30 AM IST
ಬೆಳ್ಳಾರೆ : ಇಲ್ಲಿ 108 ಆ್ಯಂಬುಲೆನ್ಸ್ ವಾಹನ ಇದ್ದರೂ ರಾತ್ರಿ ವೇಳೆ ಅಲಭ್ಯವಾಗುವುದರಿಂದ ರೋಗಿಗಳಿಗೆ ಸಮಸ್ಯೆಯಾಗಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆ ಕಟ್ಟಡದಲ್ಲಿ 108 ವಾಹನದ ಸಿಬಂದಿಗೆ ಉಳಿಯಲು ವ್ಯವಸ್ಥೆ ಮಾಡಲಾಗಿತ್ತು. ಕೆಲವು ತಿಂಗಳುಗಳ ಕಾಲ ಅವರು ಅಲ್ಲಿ ವಾಸಿಸಿದ್ದರು. ಆದರೆ ಈಗ ಅವರು ಬೆಳ್ಳಾರೆಯಲ್ಲಿ ವಾಹನವನ್ನು ನಿಲ್ಲಿಸಿ, ಬೇರೆಡೆಗೆ ಮಲಗಲು ಹೋಗು ತ್ತಾರೆ. ಇದರಿಂದ ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್ ರೋಗಿಗಳಿಗೆ ಅಲಭ್ಯ ವಾಗಿದೆ. ಇದರಿಂದ ಸ್ಥಳೀಯರು ಸಂಕಷ್ಟ ಪಡುವಂತಾಗಿದೆ ಎಂಬುದು ನಾಗರಿಕರ ಆಕ್ರೋಶ.
ರಾತ್ರಿ ಸುಳ್ಯದ 108 ವಾಹನ
ಈಗ ರಾತ್ರಿ ತುರ್ತುಗಾಗಿ ಆ್ಯಂಬುಲೆನ್ಸ್ ಬೇಕಾದರೆ ಸುಳ್ಯವನ್ನೇ ಆಶ್ರಯಿಸಬೇಕಿದೆ. ಕೆಲವೊಮ್ಮೆ ತುರ್ತು ಚಿಕಿತ್ಸೆ ಅಗತ್ಯ ವಿರುವವರಿಗೆ ಕಷ್ಟವಾಗುತ್ತಿದೆ. ಜತೆಗೆ ವಾಹನದ ಇಂಧನ, ಸಮಯವೂ ಹಾಳಾ ಗುತ್ತಿದೆ.
ಹೋರಟಕ್ಕೆ ಸಂದ ಜಯ
ಬೆಳ್ಳಾರೆಗೆ 108 ಆ್ಯಂಬುಲೆನ್ಸ್ ಬೇಕೆಂದು ಸ್ಥಳೀಯರು ಹಲವು ಬಾರಿ ಆಗಿನ ಆರೋಗ್ಯ ಮಂತ್ರಿಗೆ, ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡಿದ್ದರು. ಆ್ಯಂಬುಲೆನ್ಸ್ ಸೇವೆ ಬೇಕೆಂದು ಸಣ್ಣ ಮಟ್ಟಿನ ಹೋರಾಟವೇ ನಡೆದಿತ್ತು. ಇದರ ಫಲವಾಗಿ ಆ್ಯಂಬು ಲೆನ್ಸ್ ಸೇವೆ ದೊರೆಯಿತು. ಆದರೆ ಈಗ ಆ ಸೇವೆ ಕೆಲವೇ ಗಂಟೆಗಳಿಗೆ ಸೀಮಿತವಾಗಿರುವುದು ಸ್ಥಳೀಯರಿಗೆ ನಿರಾಶೆಯನ್ನುಂಟು ಮಾಡಿದೆ.
ವಿದ್ಯುತ್ ಸಂಪರ್ಕ ಕಡಿತ
ಸಿಬಂದಿ ಉಳಿಯುತ್ತಿದ್ದ ಕಟ್ಟಡದ ನೀರು ಮತ್ತು ವಿದ್ಯುತ್ ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಸಂಪರ್ಕ ಕಡಿತ ಗೊಂಡಿದೆ. ಈ ಬಗೆY ಕೂಡಲೇ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹ.
ಖಾಸಗಿ ನಿರ್ವಹಣೆ
108 ಆ್ಯಂಬುಲೆನ್ಸ್ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಲಾಗಿದೆ. ಅವರಿಗೆ ಬೆಳ್ಳಾಯ ಆರೋಗ್ಯ ಕೇಂದ್ರಕ್ಕೆ ಸೇರಿದ ಕಟ್ಟದಲ್ಲಿ ಉಳಿಯುವ ವ್ಯವಸ್ಥೆ ಮಾಡಲಾಗಿತ್ತು. ಸಂಬಂಧಪಟ್ಟವರಿಗೆ ನಾನು ಮನವರಿಕೆ ಮಾಡುತ್ತೇನೆ.
– ಡಾ| ಸುಬ್ರಹ್ಮಣ್ಯ ತಾಲೂಕು ವೈದ್ಯಾಧಿಕಾರಿ, ಸುಳ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ