ಸಂಚಾರ ದಟ್ಟಣೆ ನಿಯಂತ್ರಿಸಿದ ಠಾಣಾ ಪ್ರಭಾರ ಎಸ್ಐ
Team Udayavani, Sep 5, 2017, 8:25 AM IST
ಉಪ್ಪಿನಂಗಡಿ : ಇಲ್ಲಿನ ಬಸ್ ನಿಲ್ದಾಣ ವೃತ್ತದಲ್ಲಿ ಎಂದಿನಂತೆ ಸೋಮವಾರ ಬೆಳಗ್ಗೆ ಟ್ರಾಫಿಕ್ ಜಾಮ್ ಉಂಟಾದಾಗ ಸ್ಥಳದಲ್ಲಿ ಗೃಹರಕ್ಷಕ ದಳದ ಸಿಬಂದಿ, ಪೊಲೀಸರ್ಯಾರೂ ಇರದಿದ್ದರಿಂದ ಎಲ್ಲಿಗೋ ಹೋಗುತ್ತಿದ್ದ ಉಪ್ಪಿನಂಗಡಿ ಠಾಣಾ ಪ್ರಭಾರ ಎಸ್ಐ ಅವರೇ ಬಂದು ಸಂಚಾರ ದಟ್ಟಣೆ ನಿಯಂತ್ರಿಸಿದ ಘಟನೆ ಸಂಭವಿಸಿತು.
ಬೆಳಗ್ಗೆ 9:30ರ ಸುಮಾರಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಿಂದ ಕೂಗಳತೆಯ ದೂರದಲ್ಲಿರುವ ಬಸ್ನಿಲ್ದಾಣ ವೃತ್ತದ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು. ಈ ಸಂದರ್ಭ ಸ್ಥಳದಲ್ಲಿ ಪೊಲೀಸರಾಗಲೀ, ಗೃಹ ರಕ್ಷಕ ದಳದ ಸಿಬಂದಿಯಾಗಲೀ ಇರಲಿಲ್ಲ. ಇದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಮತ್ತಷ್ಟು ಮುಂದುವರಿಯಿತು. ಆಗ ಬೈಕ್ನಲ್ಲಿ ಪೊಲೀಸ್ ಠಾಣೆ ಕಡೆ ತೆರಳುತ್ತಿದ್ದ ಉಪ್ಪಿನಂಗಡಿ ಠಾಣಾ ಪ್ರಭಾರ ಎಸ್ಐ ಅವಿನಾಶ್ ಅವರು ಬೈಕ್ ನಿಲ್ಲಿಸಿ ಬಂದು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾದರು. ಕೆಲಕಾಲದ ಪ್ರಯತ್ನದ ಬಳಿಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕಿಷ್ಕಿಂದೆಯಂತಹ ಉಪ್ಪಿನಂಗಡಿ ಪಟ್ಟಣದಲ್ಲಿ ಸಂಚಾರ ದಟ್ಟಣೆಯ ಸಮಸ್ಯೆ ಇಂದು ನಿನ್ನೆಯದ್ದಲ್ಲ. ಇದಕ್ಕೊಂದು ಪರಿಹಾರ ಕಂಡು ಹಿಡಿಯಲು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡು ಬಂದ ಎಸ್ಐ ನಂದಕುಮಾರ್ ಅವರು ಪ್ರಯತ್ನಿಸಿದ್ದರು. ಆದರೆ ಬಳಿಕದ ದಿನಗಳಲ್ಲಿ ನಂದಕುಮಾರ್ ಅವರನ್ನು ಕೆಲವು ವಿಶೇಷ ಪ್ರಕರಣಗಳ ತನಿಖೆಗಾಗಿ ನಿಯೋಜಿಸಿದ್ದರಿಂದ ಅವರ ಕನಸು ನನಸಾಗಿಲ್ಲ ಎನ್ನುತ್ತಾರೆ ಸ್ಥಳೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ