ಧರ್ಮಸ್ಥಳ, ಉಜಿರೆಗೆ ಭೇಟಿ ನೀಡಿದ ಪ್ರಥಮ ಪ್ರಧಾನಿ
Team Udayavani, Oct 30, 2017, 10:08 AM IST
ಬೆಳ್ತಂಗಡಿ: ಪ್ರಧಾನಿ ಮೋದಿ ಅವರು ಧರ್ಮಸ್ಥಳ ಅಥವಾ ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿದ ಪ್ರಥಮ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೊದಲು ಇಂದಿರಾಗಾಂಧಿ ಅವರು 1977 ಹಾಗೂ 1980ರಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ್ದರೂ ಮಾಜಿಯಾಗಿದ್ದರು. 1991ರಲ್ಲಿ ರಾಜೀವ್ ಗಾಂಧಿ ಅವರು ಕೂಡ ಮಾಜಿ ಪ್ರಧಾನಿಯಾಗಿದ್ದಾಗಲೇ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಎಚ್.ಡಿ. ದೇವೇಗೌಡ ಅವರು ಕೂಡ ಮಾಜಿಯಾಗಿ ದ್ದಾಗಲೇ ಭೇಟಿ ನೀಡಿದವರು. ಅಧಿಕಾರದಲ್ಲಿರುವಾಗ ಬಂದ ಮೊದಲ ಪ್ರಧಾನಿ ಮೋದಿ ಮಾತ್ರ.
ರಾಷ್ಟ್ರಪತಿಗಳ ಪೈಕಿ 1993ರಲ್ಲಿ ಶಂಕರ್ ದಯಾಳ್ ಶರ್ಮಾ ಅವರು ಅಧಿಕಾರದಲ್ಲಿದ್ದಾಗ ಭೇಟಿ ನೀಡಿ ಹೆಗ್ಗಡೆಯವರಿಗೆ ರಾಜರ್ಷಿ ಉಪಾಧಿಯನ್ನು ಪ್ರದಾನ ಮಾಡಿದ್ದರು. ಅನಂತರ 2003ರಲ್ಲಿ ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. 2008ರಲ್ಲಿ ಉಪರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ಅವರು ಯೋಜನೆಯ ಬೆಳ್ಳಿಹಬ್ಬಕ್ಕೆ ಆಗಮಿಸಿದ್ದರು. ಮಾಜಿಯಾದ ಬಳಿಕವೂ ಡಾ| ಕಲಾಂ ಅವರು ಲಕ್ಷದೀಪೋತ್ಸವ ಸಮ್ಮೇಳನಕ್ಕೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್